<p><strong>ಬೆಂಗಳೂರು:</strong> ಪಶ್ಚಿಮ ಕಾರ್ಡ್ ರಸ್ತೆಯಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ರಮೇಶ್ಬಾಬು (46) ಎಂಬುವರು ಸಾವನ್ನಪ್ಪಿದ್ದಾರೆ.<br /> <br /> ಕುರುಬರಹಳ್ಳಿ ನಿವಾಸಿಯಾದ ರಮೇಶ್ಬಾಬು, ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದರು. ಬೈಕ್ನಲ್ಲಿ ರಾತ್ರಿ ಮನೆಗೆ ಬರುತ್ತಿದ್ದ ಅವರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ವಾಹನ ಗುದ್ದಿಸಿದ್ದಾರೆ. ಈ ವೇಳೆ ಬೈಕ್ನಿಂದ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಜಯನಗರ ಸಂಚಾರ ಠಾಣೆಯಲ್ಲಿ ದೂರು ದಾಖಲಾಗಿದೆ.<br /> <br /> <strong>ಅನುಮಾನಾಸ್ಪದ ಸಾವು</strong><br /> ಬಸವೇಶ್ವರನಗರ ಸಮೀಪದ ಶಿವನಗರದಲ್ಲಿ ವ್ಯಕ್ತಿಯೊಬ್ಬರು ಸೋಮವಾರ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ಶಿವನಗರ ಸರ್ವಿಸ್ ರಸ್ತೆಯ ಪಾದಚಾರಿ ಮಾರ್ಗದಲ್ಲಿ ಅವರ ಶವ ಪತ್ತೆಯಾಗಿದೆ. ಮೃತ ವ್ಯಕ್ತಿಯ ವಯಸ್ಸು ಸುಮಾರು 30 ವರ್ಷ. ಆದರೆ, ಅವರ ಗುರುತು ಪತ್ತೆಯಾಗಿಲ್ಲ. ಆ ವ್ಯಕ್ತಿಯ ಗಲ್ಲದ ಭಾಗದಲ್ಲಿ ಗಾಯದ ಗುರುತು ಇದ್ದು, ಕಿವಿಯಿಂದ ರಕ್ತಸ್ರಾವವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಆ ವ್ಯಕ್ತಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆಯೇ ಅಥವಾ ಅವರನ್ನು ಕೊಲೆ ಮಾಡಲಾಗಿದೆಯೇ ಎಂಬುದು ಗೊತ್ತಾಗಿಲ್ಲ. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಆ ಬಗ್ಗೆ ಹೆಚ್ಚಿನ ಮಾಹಿತಿ ಸಿಗಲಿದೆ ಎಂದು ಪೊಲೀಸರು ಹೇಳಿದ್ದಾರೆ. ಬಸವೇಶ್ವರನಗರ ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.<br /> <br /> <strong>ಬಂಧನ</strong><br /> ಕಂಪ್ಯೂಟರ್ಗಳನ್ನು ಬಾಡಿಗೆಗೆ ಪಡೆದು ಬೇರೆಯವರಿಗೆ ಮಾರಾಟ ಮಾಡಿ ವಂಚಿಸುತ್ತಿದ್ದ ಆರೋಪದ ಮೇಲೆ ಕಮ್ಮನಹಳ್ಳಿಯ ಜೋಸೆಫ್ ಎಂ.ಆಲ್ಫೋನ್ಸ್ (36) ಎಂಬಾತನನ್ನು ಬಂಧಿಸಿರುವ ಮಡಿವಾಳ ಪೊಲೀಸರು ್ಙ 27 ಲಕ್ಷ ಮೌಲ್ಯದ ಕಂಪ್ಯೂಟರ್ ಮತ್ತು ಲ್ಯಾಪ್ಟಾಪ್ಗಳನ್ನು ವಶಪಡಿಸಿಕೊಂಡಿದ್ದಾರೆ.<br /> <br /> ಕೇರಳ ಮೂಲದ ಜೋಸೆಫ್, ಫ್ರೇಜರ್ಟೌನ್ನಲ್ಲಿ `ಜೆ.ಎಂ.ಜೆ.ಇನ್ಫೋಟೆಕ್' ಮತ್ತು `ಜೆ.ಎಂ.ಜೆ.ಎನ್ವಿರಾನ್ಮೆಂಟ್ ಸರ್ವಿಸಸ್' ಹೆಸರಿನ ಕಚೇರಿಗಳನ್ನು ನಡೆಸುತ್ತಿದ್ದ. ಬಿ.ಇ ಓದಿದ್ದ ಆತ ಸಾಫ್ಟ್ವೇರ್ ಕಂಪೆನಿಗಳಿಗೆ ಲ್ಯಾಪ್ಟಾಪ್, ಕಂಪ್ಯೂಟರ್ ಹಾಗೂ ಸರ್ವರ್ಗಳನ್ನು ಬಾಡಿಗೆಗೆ ಕೊಡಿಸುವ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಬೊಮ್ಮನಹಳ್ಳಿಯ ಕೆ.ಆರ್.ಲೇಔಟ್ನಲ್ಲಿರುವ ಕೌಂಟರ್ ಪಾಯಿಂಟ್ ಪ್ರೈವೇಟ್ ಲಿಮಿಟೆಡ್ನಿಂದ ಕಂಪ್ಯೂಟರ್ ಹಾಗೂ ಲ್ಯಾಪ್ಟಾಪ್ಗಳನ್ನು ಬಾಡಿಗೆಗೆ ಪಡೆದುಕೊಂಡಿದ್ದ ಆತ ಅವುಗಳನ್ನು ಹಿಂದಿರುಗಿಸದೆ ಬೇರೆಯವರಿಗೆ ಮಾರಾಟ ಮಾಡಿದ್ದ.<br /> ಈ ಸಂಬಂಧ ಕೌಂಟರ್ ಪಾಯಿಂಟ್ ಪ್ರೈವೇಟ್ ಲಿಮಿಟೆಡ್ನ ಜೋಬಿ ಕುರಿಯನ್ ಅವರು ದೂರು ಕೊಟ್ಟಿದ್ದರು. ಈ ದೂರು ಆಧರಿಸಿ ಆತನನ್ನು ಬಂಧಿಸಿ 39 ಕಂಪ್ಯೂಟರ್, 23 ಲ್ಯಾಪ್ಟಾಪ್ ಹಾಗೂ 8 ಸರ್ವರ್ಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.<br /> <br /> ಆರೋಪಿಯು ಫ್ರೇಜರ್ಟೌನ್, ಬಸವನಗುಡಿ ಠಾಣೆ ವ್ಯಾಪ್ತಿಯ 19ಕ್ಕೂ ಹೆಚ್ಚು ಕಂಪೆನಿಗಳಿಗೆ ಇದೇ ರೀತಿ ವಂಚಿಸಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪಶ್ಚಿಮ ಕಾರ್ಡ್ ರಸ್ತೆಯಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ರಮೇಶ್ಬಾಬು (46) ಎಂಬುವರು ಸಾವನ್ನಪ್ಪಿದ್ದಾರೆ.<br /> <br /> ಕುರುಬರಹಳ್ಳಿ ನಿವಾಸಿಯಾದ ರಮೇಶ್ಬಾಬು, ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದರು. ಬೈಕ್ನಲ್ಲಿ ರಾತ್ರಿ ಮನೆಗೆ ಬರುತ್ತಿದ್ದ ಅವರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ವಾಹನ ಗುದ್ದಿಸಿದ್ದಾರೆ. ಈ ವೇಳೆ ಬೈಕ್ನಿಂದ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಜಯನಗರ ಸಂಚಾರ ಠಾಣೆಯಲ್ಲಿ ದೂರು ದಾಖಲಾಗಿದೆ.<br /> <br /> <strong>ಅನುಮಾನಾಸ್ಪದ ಸಾವು</strong><br /> ಬಸವೇಶ್ವರನಗರ ಸಮೀಪದ ಶಿವನಗರದಲ್ಲಿ ವ್ಯಕ್ತಿಯೊಬ್ಬರು ಸೋಮವಾರ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ಶಿವನಗರ ಸರ್ವಿಸ್ ರಸ್ತೆಯ ಪಾದಚಾರಿ ಮಾರ್ಗದಲ್ಲಿ ಅವರ ಶವ ಪತ್ತೆಯಾಗಿದೆ. ಮೃತ ವ್ಯಕ್ತಿಯ ವಯಸ್ಸು ಸುಮಾರು 30 ವರ್ಷ. ಆದರೆ, ಅವರ ಗುರುತು ಪತ್ತೆಯಾಗಿಲ್ಲ. ಆ ವ್ಯಕ್ತಿಯ ಗಲ್ಲದ ಭಾಗದಲ್ಲಿ ಗಾಯದ ಗುರುತು ಇದ್ದು, ಕಿವಿಯಿಂದ ರಕ್ತಸ್ರಾವವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಆ ವ್ಯಕ್ತಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆಯೇ ಅಥವಾ ಅವರನ್ನು ಕೊಲೆ ಮಾಡಲಾಗಿದೆಯೇ ಎಂಬುದು ಗೊತ್ತಾಗಿಲ್ಲ. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಆ ಬಗ್ಗೆ ಹೆಚ್ಚಿನ ಮಾಹಿತಿ ಸಿಗಲಿದೆ ಎಂದು ಪೊಲೀಸರು ಹೇಳಿದ್ದಾರೆ. ಬಸವೇಶ್ವರನಗರ ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.<br /> <br /> <strong>ಬಂಧನ</strong><br /> ಕಂಪ್ಯೂಟರ್ಗಳನ್ನು ಬಾಡಿಗೆಗೆ ಪಡೆದು ಬೇರೆಯವರಿಗೆ ಮಾರಾಟ ಮಾಡಿ ವಂಚಿಸುತ್ತಿದ್ದ ಆರೋಪದ ಮೇಲೆ ಕಮ್ಮನಹಳ್ಳಿಯ ಜೋಸೆಫ್ ಎಂ.ಆಲ್ಫೋನ್ಸ್ (36) ಎಂಬಾತನನ್ನು ಬಂಧಿಸಿರುವ ಮಡಿವಾಳ ಪೊಲೀಸರು ್ಙ 27 ಲಕ್ಷ ಮೌಲ್ಯದ ಕಂಪ್ಯೂಟರ್ ಮತ್ತು ಲ್ಯಾಪ್ಟಾಪ್ಗಳನ್ನು ವಶಪಡಿಸಿಕೊಂಡಿದ್ದಾರೆ.<br /> <br /> ಕೇರಳ ಮೂಲದ ಜೋಸೆಫ್, ಫ್ರೇಜರ್ಟೌನ್ನಲ್ಲಿ `ಜೆ.ಎಂ.ಜೆ.ಇನ್ಫೋಟೆಕ್' ಮತ್ತು `ಜೆ.ಎಂ.ಜೆ.ಎನ್ವಿರಾನ್ಮೆಂಟ್ ಸರ್ವಿಸಸ್' ಹೆಸರಿನ ಕಚೇರಿಗಳನ್ನು ನಡೆಸುತ್ತಿದ್ದ. ಬಿ.ಇ ಓದಿದ್ದ ಆತ ಸಾಫ್ಟ್ವೇರ್ ಕಂಪೆನಿಗಳಿಗೆ ಲ್ಯಾಪ್ಟಾಪ್, ಕಂಪ್ಯೂಟರ್ ಹಾಗೂ ಸರ್ವರ್ಗಳನ್ನು ಬಾಡಿಗೆಗೆ ಕೊಡಿಸುವ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಬೊಮ್ಮನಹಳ್ಳಿಯ ಕೆ.ಆರ್.ಲೇಔಟ್ನಲ್ಲಿರುವ ಕೌಂಟರ್ ಪಾಯಿಂಟ್ ಪ್ರೈವೇಟ್ ಲಿಮಿಟೆಡ್ನಿಂದ ಕಂಪ್ಯೂಟರ್ ಹಾಗೂ ಲ್ಯಾಪ್ಟಾಪ್ಗಳನ್ನು ಬಾಡಿಗೆಗೆ ಪಡೆದುಕೊಂಡಿದ್ದ ಆತ ಅವುಗಳನ್ನು ಹಿಂದಿರುಗಿಸದೆ ಬೇರೆಯವರಿಗೆ ಮಾರಾಟ ಮಾಡಿದ್ದ.<br /> ಈ ಸಂಬಂಧ ಕೌಂಟರ್ ಪಾಯಿಂಟ್ ಪ್ರೈವೇಟ್ ಲಿಮಿಟೆಡ್ನ ಜೋಬಿ ಕುರಿಯನ್ ಅವರು ದೂರು ಕೊಟ್ಟಿದ್ದರು. ಈ ದೂರು ಆಧರಿಸಿ ಆತನನ್ನು ಬಂಧಿಸಿ 39 ಕಂಪ್ಯೂಟರ್, 23 ಲ್ಯಾಪ್ಟಾಪ್ ಹಾಗೂ 8 ಸರ್ವರ್ಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.<br /> <br /> ಆರೋಪಿಯು ಫ್ರೇಜರ್ಟೌನ್, ಬಸವನಗುಡಿ ಠಾಣೆ ವ್ಯಾಪ್ತಿಯ 19ಕ್ಕೂ ಹೆಚ್ಚು ಕಂಪೆನಿಗಳಿಗೆ ಇದೇ ರೀತಿ ವಂಚಿಸಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>