<p><strong>ಬೆಂಗಳೂರು: </strong>ದೇವನಹಳ್ಳಿಯಲ್ಲಿರುವ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಡಪ್ರಭು ಕೆಂಪೇಗೌಡ ಹೆಸರಿಡಲು ವಿಮಾನಯಾನ ಸಚಿವ ಅಜಿತ್ ಸಿಂಗ್ ಸಮ್ಮತಿ ಸೂಚಿಸಿದ್ದು, ಈ ಕುರಿತ ಪ್ರಸ್ತಾವನೆಯನ್ನು ಕೇಂದ್ರ ಸಚಿವ ಸಂಪುಟದ ಮುಂದೆ ಶೀಘ್ರವೇ ಮಂಡಿಸಲಾಗುವುದು ಎಂದು ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣ ತಿಳಿಸಿದ್ದಾರೆ.<br /> <br /> `ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರಿಡಬೇಕು ಎಂಬುದು ರಾಜ್ಯದ ಬಹುಜನರ ಅಪೇಕ್ಷೆಯಾಗಿತ್ತು. ಈ ವಿಚಾರವನ್ನು ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಪತ್ರ ಬರೆದು ತಿಳಿಸಿದ್ದೆ.<br /> <br /> ಇದಕ್ಕೆ ಸ್ಪಂದಿಸಿದ ಪ್ರಧಾನ ಮಂತ್ರಿಗಳು, ವಿಮಾನಯಾನ ಸಚಿವಾಲಯಕ್ಕೆ ಪತ್ರ ಬರೆದಿದ್ದರು. ಕೆಂಪೇಗೌಡರ ಹೆಸರಿಡಲು ಸಚಿವಾಲಯದ ಸಮ್ಮತಿ ದೊರೆತಿದೆ~ ಎಂದು ಕೃಷ್ಣ ಹೇಳಿದ್ದಾರೆ.<br /> ಈ ಕುರಿತ ಪ್ರಸ್ತಾವನೆ ಕೇಂದ್ರ ಸಚಿವ ಸಂಪುಟದ ಮುಂದೆ ಬಂದಾಗ, ಅದಕ್ಕೆ ಅನುಮತಿ ದೊರಕಿಸಲು ಸರ್ವ ಪ್ರಯತ್ನ ನಡೆಸುವುದಾಗಿ ಅವರು ಹೇಳಿದ್ದಾರೆ.<br /> <br /> <strong>ಸಿಎಂ ವಿಶ್ವಾಸ: </strong>`ಕೆಂಪೇಗೌಡರ ಹೆಸರು ಇಡುವ ಸಂಬಂಧ ಕೇಂದ್ರ ಸರ್ಕಾರಕ್ಕೆ ರಾಜ್ಯದಿಂದಲೂ ಪ್ರಸ್ತಾವನೆ ಸಲ್ಲಿಸಿದ್ದು, ಶೀಘ್ರ ಒಪ್ಪಿಗೆ ಸಿಗುವ ನಿರೀಕ್ಷೆ ಇದೆ~ ಎಂದು ಸಿ.ಎಂ ಡಿ.ವಿ.ಸದಾನಂದ ಗೌಡ ತಿಳಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ದೇವನಹಳ್ಳಿಯಲ್ಲಿರುವ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಡಪ್ರಭು ಕೆಂಪೇಗೌಡ ಹೆಸರಿಡಲು ವಿಮಾನಯಾನ ಸಚಿವ ಅಜಿತ್ ಸಿಂಗ್ ಸಮ್ಮತಿ ಸೂಚಿಸಿದ್ದು, ಈ ಕುರಿತ ಪ್ರಸ್ತಾವನೆಯನ್ನು ಕೇಂದ್ರ ಸಚಿವ ಸಂಪುಟದ ಮುಂದೆ ಶೀಘ್ರವೇ ಮಂಡಿಸಲಾಗುವುದು ಎಂದು ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣ ತಿಳಿಸಿದ್ದಾರೆ.<br /> <br /> `ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರಿಡಬೇಕು ಎಂಬುದು ರಾಜ್ಯದ ಬಹುಜನರ ಅಪೇಕ್ಷೆಯಾಗಿತ್ತು. ಈ ವಿಚಾರವನ್ನು ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಪತ್ರ ಬರೆದು ತಿಳಿಸಿದ್ದೆ.<br /> <br /> ಇದಕ್ಕೆ ಸ್ಪಂದಿಸಿದ ಪ್ರಧಾನ ಮಂತ್ರಿಗಳು, ವಿಮಾನಯಾನ ಸಚಿವಾಲಯಕ್ಕೆ ಪತ್ರ ಬರೆದಿದ್ದರು. ಕೆಂಪೇಗೌಡರ ಹೆಸರಿಡಲು ಸಚಿವಾಲಯದ ಸಮ್ಮತಿ ದೊರೆತಿದೆ~ ಎಂದು ಕೃಷ್ಣ ಹೇಳಿದ್ದಾರೆ.<br /> ಈ ಕುರಿತ ಪ್ರಸ್ತಾವನೆ ಕೇಂದ್ರ ಸಚಿವ ಸಂಪುಟದ ಮುಂದೆ ಬಂದಾಗ, ಅದಕ್ಕೆ ಅನುಮತಿ ದೊರಕಿಸಲು ಸರ್ವ ಪ್ರಯತ್ನ ನಡೆಸುವುದಾಗಿ ಅವರು ಹೇಳಿದ್ದಾರೆ.<br /> <br /> <strong>ಸಿಎಂ ವಿಶ್ವಾಸ: </strong>`ಕೆಂಪೇಗೌಡರ ಹೆಸರು ಇಡುವ ಸಂಬಂಧ ಕೇಂದ್ರ ಸರ್ಕಾರಕ್ಕೆ ರಾಜ್ಯದಿಂದಲೂ ಪ್ರಸ್ತಾವನೆ ಸಲ್ಲಿಸಿದ್ದು, ಶೀಘ್ರ ಒಪ್ಪಿಗೆ ಸಿಗುವ ನಿರೀಕ್ಷೆ ಇದೆ~ ಎಂದು ಸಿ.ಎಂ ಡಿ.ವಿ.ಸದಾನಂದ ಗೌಡ ತಿಳಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>