<p><strong>ಬಳ್ಳಾರಿ</strong>: ತಾಲ್ಲೂಕಿನ ಸಿರಿವಾರ ಮತ್ತು ಚಾಗನೂರು ಗ್ರಾಮಗಳ ಬಳಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ತೀವ್ರ ವಿರೋಧ ವ್ಯಕ್ತಪಡಿಸಿ ರೈತರು ಸಲ್ಲಿಸಿರುವ ಅರ್ಜಿಯ ವಿಚಾರಣೆಗಾಗಿ ಬುಧವಾರ ಆಗಮಿಸಿರುವ ವಿಧಾನ ಪರಿಷತ್ನ ಅರ್ಜಿಗಳ ಸಮಿತಿ ರೈತರಿಂದ ಅಹವಾಲು ಸ್ವೀಕರಿಸಿತು.<br /> <br /> ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ಮಧ್ಯಾಹ್ನ ಸಭೆ ನಡೆಸಿದ ಸಮಿತಿಯು, ವಿಮಾನ ನಿಲ್ದಾಣಕ್ಕಾಗಿ ಭೂಮಿ ಕಳೆದುಕೊಂಡಿರುವ ರೈತರ ಅಭಿಪ್ರಾಯ ಸಂಗ್ರಹಿಸಿತಲ್ಲದೆ, ವಿಮಾನ ನಿಲ್ದಾ-ಣದ ನಿಯೋಜಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.<br /> <br /> ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭೂಮಿ ವಶಪಡಿಸಿಕೊಳ್ಳಲು ಹೊರಡಿಸಲಾದ ಅಧಿಸೂಚನೆ ರದ್ದುಗೊಳಿಸಿ, ರೈತರೊಂದಿಗೆ ಮತ್ತೆ ಚರ್ಚೆ ನಡೆಸಿ, ಹೊಸದಾಗಿ ಅಧಿಸೂಚನೆ ಹೊರಡಿಸುವಂತೆ ಹೈಕೋರ್ಟ್ ಆದೇಶ ನೀಡಿರುವುದರಿಂದ ಅರ್ಜಿಯ ವಿಚಾರಣೆ ವಿಳಂಬವಾಗಿದೆ. ಸಮಿತಿಯು ರೈತರ ಅಭಿಪ್ರಾಯ ಸಂಗ್ರಹಿಸಿ, ವಿಧಾನ ಪರಿಷತ್ಗೆ ವರದಿ ಸಲ್ಲಿಸಲಿದೆ. ನಂತರ ಆ ವರದಿ ವಿಧಾನಸಭೆಗೆ ಸಲ್ಲಿಕೆಯಾಗಲಿದ್ದು, ತದನಂತರ ಸರ್ಕಾರ ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಸಮಿತಿಯ ಅಧ್ಯಕ್ಷರಾಗಿರುವ ವಿಧಾನ ಪರಿಷತ್ನ ಉಪ ಸಭಾಪತಿ ವಿಮಲಾ ಗೌಡ ತಿಳಿಸಿದರು.<br /> <br /> ಬರಡು ಭೂಮಿಯನ್ನು ವಶಕ್ಕೆ ಪಡೆಯಲಾಗುತ್ತಿದೆ ಎಂಬ ತಪು ಮಾಹಿತಿ ನೀಡಿರುವ ಸರ್ಕಾರ, ಅಧಿಸೂಚನೆ ಹೊರಡಿಸಿ, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಮೂಲಕ ವಿಮಾನ ನಿಲ್ದಾಣಕ್ಕೆ ಫಲವತ್ತಾದ ನೀರಾವರಿ ಭೂಮಿ ಪಡಯುತ್ತಿದೆ ಎಂದು ತಿಳಿಸಿ, ಅನೇಕ ರೈತರು ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ. ಈ ಹಿನ್ನೆಲೆಯಲ್ಲಿ ರೈತರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಕೆಲವು ರೈತರು ಪರವಾಗಿ ಇನ್ನು ಕೆಲವು ರೈತರು ವಿರೋಧವಾದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ, ಸಾಧಕ- ಬಾಧಕಗಳು ಕುರಿತು ಪರಾಮರ್ಶೆ ನಡೆಸಿ ಸಮಗ್ರ ವರದಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.<br /> <br /> 2010ರಲ್ಲೇ ರೈತರಿಂದ ಅರ್ಜಿ ಸಲ್ಲಿಕೆಯಾಗಿದ್ದು, ಈಗಾಗಲೇ ಸಮಿತಿಯು ರೈತರು ಮತ್ತು ಅಧಿಕಾರಿಗಳೊಂದಿಗೆ ಬೆಂಗಳೂರಿನಲ್ಲಿ 4 ಸಭೆಗಳನ್ನು ನಡೆಸಿದೆ. ಇದೀಗ ಸ್ಥಳ ಪರಿಶೀಲನೆ ನಡೆಸಿ ಅಂತಿಮ ವರದಿ ಸಲ್ಲಿಸಲೆಂದೇ ಆಗಮಿಸಿದೆ ಎಂದು ಅವರು ಸ್ಪಷ್ಟಪಡಿಸಿದರು.<br /> <br /> ಸಮಿತಿ ಸದಸ್ಯರಾದ ವೀರಕುಮಾರ್ ಪಾಟೀಲ, ಕೆ.ಪ್ರತಾಪಚಂದ್ರ ಶೆಟ್ಟಿ, ಪುಟ್ಟಣ್ಣ, ಕೆ.ಬಿ. ಶಾಣಪ್ಪ, ಮರಿತಿಬ್ಬೇಗೌಡ, ವೈ.ಎ. ನಾರಾಯಣಸ್ವಾಮಿ, ಅಶ್ವತ್ಥನಾರಾಯಣ ಹಾಗೂ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.<br /> <br /> ಸಭೆಯ ನಂತರ ಸಮಿತಿಯ ಸದಸ್ಯರು ಚಾಗನೂರು ಮತ್ತು ಸಿರಿವಾರ ಗ್ರಾಮಗಳ ಬಳಿ ವಿಮಾನ ನಿಲ್ದಾಣಕ್ಕಾಗಿ ನಿಯೋಜಿಸಲಾಗಿರುವ ಸ್ಥಳಕ್ಕೆ ತೆರಳಿ, ಸ್ಥಳ ಪರಿಶೀಲನೆ ನಡೆಸಿದರಲ್ಲದೆ ಗ್ರಾಮಸ್ಥರಿಂದಲೂ ಅಭಿಪ್ರಾಯ ಸಂಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ತಾಲ್ಲೂಕಿನ ಸಿರಿವಾರ ಮತ್ತು ಚಾಗನೂರು ಗ್ರಾಮಗಳ ಬಳಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ತೀವ್ರ ವಿರೋಧ ವ್ಯಕ್ತಪಡಿಸಿ ರೈತರು ಸಲ್ಲಿಸಿರುವ ಅರ್ಜಿಯ ವಿಚಾರಣೆಗಾಗಿ ಬುಧವಾರ ಆಗಮಿಸಿರುವ ವಿಧಾನ ಪರಿಷತ್ನ ಅರ್ಜಿಗಳ ಸಮಿತಿ ರೈತರಿಂದ ಅಹವಾಲು ಸ್ವೀಕರಿಸಿತು.<br /> <br /> ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ಮಧ್ಯಾಹ್ನ ಸಭೆ ನಡೆಸಿದ ಸಮಿತಿಯು, ವಿಮಾನ ನಿಲ್ದಾಣಕ್ಕಾಗಿ ಭೂಮಿ ಕಳೆದುಕೊಂಡಿರುವ ರೈತರ ಅಭಿಪ್ರಾಯ ಸಂಗ್ರಹಿಸಿತಲ್ಲದೆ, ವಿಮಾನ ನಿಲ್ದಾ-ಣದ ನಿಯೋಜಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.<br /> <br /> ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭೂಮಿ ವಶಪಡಿಸಿಕೊಳ್ಳಲು ಹೊರಡಿಸಲಾದ ಅಧಿಸೂಚನೆ ರದ್ದುಗೊಳಿಸಿ, ರೈತರೊಂದಿಗೆ ಮತ್ತೆ ಚರ್ಚೆ ನಡೆಸಿ, ಹೊಸದಾಗಿ ಅಧಿಸೂಚನೆ ಹೊರಡಿಸುವಂತೆ ಹೈಕೋರ್ಟ್ ಆದೇಶ ನೀಡಿರುವುದರಿಂದ ಅರ್ಜಿಯ ವಿಚಾರಣೆ ವಿಳಂಬವಾಗಿದೆ. ಸಮಿತಿಯು ರೈತರ ಅಭಿಪ್ರಾಯ ಸಂಗ್ರಹಿಸಿ, ವಿಧಾನ ಪರಿಷತ್ಗೆ ವರದಿ ಸಲ್ಲಿಸಲಿದೆ. ನಂತರ ಆ ವರದಿ ವಿಧಾನಸಭೆಗೆ ಸಲ್ಲಿಕೆಯಾಗಲಿದ್ದು, ತದನಂತರ ಸರ್ಕಾರ ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಸಮಿತಿಯ ಅಧ್ಯಕ್ಷರಾಗಿರುವ ವಿಧಾನ ಪರಿಷತ್ನ ಉಪ ಸಭಾಪತಿ ವಿಮಲಾ ಗೌಡ ತಿಳಿಸಿದರು.<br /> <br /> ಬರಡು ಭೂಮಿಯನ್ನು ವಶಕ್ಕೆ ಪಡೆಯಲಾಗುತ್ತಿದೆ ಎಂಬ ತಪು ಮಾಹಿತಿ ನೀಡಿರುವ ಸರ್ಕಾರ, ಅಧಿಸೂಚನೆ ಹೊರಡಿಸಿ, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಮೂಲಕ ವಿಮಾನ ನಿಲ್ದಾಣಕ್ಕೆ ಫಲವತ್ತಾದ ನೀರಾವರಿ ಭೂಮಿ ಪಡಯುತ್ತಿದೆ ಎಂದು ತಿಳಿಸಿ, ಅನೇಕ ರೈತರು ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ. ಈ ಹಿನ್ನೆಲೆಯಲ್ಲಿ ರೈತರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಕೆಲವು ರೈತರು ಪರವಾಗಿ ಇನ್ನು ಕೆಲವು ರೈತರು ವಿರೋಧವಾದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ, ಸಾಧಕ- ಬಾಧಕಗಳು ಕುರಿತು ಪರಾಮರ್ಶೆ ನಡೆಸಿ ಸಮಗ್ರ ವರದಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.<br /> <br /> 2010ರಲ್ಲೇ ರೈತರಿಂದ ಅರ್ಜಿ ಸಲ್ಲಿಕೆಯಾಗಿದ್ದು, ಈಗಾಗಲೇ ಸಮಿತಿಯು ರೈತರು ಮತ್ತು ಅಧಿಕಾರಿಗಳೊಂದಿಗೆ ಬೆಂಗಳೂರಿನಲ್ಲಿ 4 ಸಭೆಗಳನ್ನು ನಡೆಸಿದೆ. ಇದೀಗ ಸ್ಥಳ ಪರಿಶೀಲನೆ ನಡೆಸಿ ಅಂತಿಮ ವರದಿ ಸಲ್ಲಿಸಲೆಂದೇ ಆಗಮಿಸಿದೆ ಎಂದು ಅವರು ಸ್ಪಷ್ಟಪಡಿಸಿದರು.<br /> <br /> ಸಮಿತಿ ಸದಸ್ಯರಾದ ವೀರಕುಮಾರ್ ಪಾಟೀಲ, ಕೆ.ಪ್ರತಾಪಚಂದ್ರ ಶೆಟ್ಟಿ, ಪುಟ್ಟಣ್ಣ, ಕೆ.ಬಿ. ಶಾಣಪ್ಪ, ಮರಿತಿಬ್ಬೇಗೌಡ, ವೈ.ಎ. ನಾರಾಯಣಸ್ವಾಮಿ, ಅಶ್ವತ್ಥನಾರಾಯಣ ಹಾಗೂ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.<br /> <br /> ಸಭೆಯ ನಂತರ ಸಮಿತಿಯ ಸದಸ್ಯರು ಚಾಗನೂರು ಮತ್ತು ಸಿರಿವಾರ ಗ್ರಾಮಗಳ ಬಳಿ ವಿಮಾನ ನಿಲ್ದಾಣಕ್ಕಾಗಿ ನಿಯೋಜಿಸಲಾಗಿರುವ ಸ್ಥಳಕ್ಕೆ ತೆರಳಿ, ಸ್ಥಳ ಪರಿಶೀಲನೆ ನಡೆಸಿದರಲ್ಲದೆ ಗ್ರಾಮಸ್ಥರಿಂದಲೂ ಅಭಿಪ್ರಾಯ ಸಂಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>