<p>ಮಹದೇವಪುರ: ಕವಿತೆಗಳನ್ನು ಪ್ರೀತಿಸುವ ಮತ್ತು ಆಸ್ವಾದಿಸುವ ಜನರು ಕಡಿಮೆಯಾದಂತೆ ಕವನ ಬರೆಯುವ ಕವಿಗಳ ಸಂಖ್ಯೆಯೂ ಕಡಿಮೆಯಾಗುತ್ತಿದೆ ಎಂದು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪುಂಡಲೀಕ ಹಾಲಂಬಿ ವಿಷಾದಿಸಿದರು.<br /> <br /> ವಿಶ್ವ ಕಾರ್ಮಿಕರ ದಿನಾಚರಣೆಯ ನಿಮಿತ್ತ ವಿಮಾನಪುರದಲ್ಲಿ ಏರ್ಪಡಿಸಿದ್ದ ಕವಿಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ವಿಮಾನಪುರದಲ್ಲಿನ ಕಾರ್ಖಾನೆಯಲ್ಲಿ ಸಾವಿರಾರು ಮಂದಿ ಕೆಲಸಗಾರರಿದ್ದಾರೆ. ಆದರೆ ಕವಿಗೋಷ್ಠಿಯಲ್ಲಿ ಕೇವಲ ಬೆರಳೆಣಿಕೆಯಷ್ಟು ಮಂದಿ ಮಾತ್ರ ಪಾಲ್ಗೊಂಡಿರುವುದು ಬೇಸರದ ಸಂಗತಿ. ಕನ್ನಡದ ಕಾರ್ಯಕ್ರಮಗಳನ್ನು ಒಗ್ಗಟ್ಟಿನಿಂದ ಹಾಗೂ ಆಸಕ್ತಿಯಿಂದ ಸಂಘಟಿಸಬೇಕು. ಕಾಟಾಚಾರಕ್ಕೆ ಕಾರ್ಯಕ್ರಮವಾಗಬಾರದು ಎಂದರು.<br /> <br /> ಸಾಹಿತಿ ಡಾ. ಎಲ್.ಹನುಮಂತಯ್ಯ, ಕವಿ ಸವಿರಾಜು, ಡಾ. ಕೋ.ವೆಂ.ರಾಮಕೃಷ್ಣ ಗೌಡ ಹಾಗೂ ತಾ.ಸಿ.ತಿಮ್ಮಯ್ಯ ಕ್ರಾಂತಿಗೀತೆಗಳನ್ನು ಹಾಡಿದರು. ಎ.ಶ್ರೀಲತಾ, ವಿಶಾಲ ಆರಾಧ್ಯ, ಬನ್ನಪ್ಪ, ಮಹೇಶ ಊಗಿನಹಳ್ಳಿ ಹಾಗೂ ಬಿ.ಎಸ್.ಶ್ರೀನಿವಾಸ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಹದೇವಪುರ: ಕವಿತೆಗಳನ್ನು ಪ್ರೀತಿಸುವ ಮತ್ತು ಆಸ್ವಾದಿಸುವ ಜನರು ಕಡಿಮೆಯಾದಂತೆ ಕವನ ಬರೆಯುವ ಕವಿಗಳ ಸಂಖ್ಯೆಯೂ ಕಡಿಮೆಯಾಗುತ್ತಿದೆ ಎಂದು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪುಂಡಲೀಕ ಹಾಲಂಬಿ ವಿಷಾದಿಸಿದರು.<br /> <br /> ವಿಶ್ವ ಕಾರ್ಮಿಕರ ದಿನಾಚರಣೆಯ ನಿಮಿತ್ತ ವಿಮಾನಪುರದಲ್ಲಿ ಏರ್ಪಡಿಸಿದ್ದ ಕವಿಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ವಿಮಾನಪುರದಲ್ಲಿನ ಕಾರ್ಖಾನೆಯಲ್ಲಿ ಸಾವಿರಾರು ಮಂದಿ ಕೆಲಸಗಾರರಿದ್ದಾರೆ. ಆದರೆ ಕವಿಗೋಷ್ಠಿಯಲ್ಲಿ ಕೇವಲ ಬೆರಳೆಣಿಕೆಯಷ್ಟು ಮಂದಿ ಮಾತ್ರ ಪಾಲ್ಗೊಂಡಿರುವುದು ಬೇಸರದ ಸಂಗತಿ. ಕನ್ನಡದ ಕಾರ್ಯಕ್ರಮಗಳನ್ನು ಒಗ್ಗಟ್ಟಿನಿಂದ ಹಾಗೂ ಆಸಕ್ತಿಯಿಂದ ಸಂಘಟಿಸಬೇಕು. ಕಾಟಾಚಾರಕ್ಕೆ ಕಾರ್ಯಕ್ರಮವಾಗಬಾರದು ಎಂದರು.<br /> <br /> ಸಾಹಿತಿ ಡಾ. ಎಲ್.ಹನುಮಂತಯ್ಯ, ಕವಿ ಸವಿರಾಜು, ಡಾ. ಕೋ.ವೆಂ.ರಾಮಕೃಷ್ಣ ಗೌಡ ಹಾಗೂ ತಾ.ಸಿ.ತಿಮ್ಮಯ್ಯ ಕ್ರಾಂತಿಗೀತೆಗಳನ್ನು ಹಾಡಿದರು. ಎ.ಶ್ರೀಲತಾ, ವಿಶಾಲ ಆರಾಧ್ಯ, ಬನ್ನಪ್ಪ, ಮಹೇಶ ಊಗಿನಹಳ್ಳಿ ಹಾಗೂ ಬಿ.ಎಸ್.ಶ್ರೀನಿವಾಸ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>