<p><strong>ಚನ್ನೈ (ಪಿಟಿಐ): </strong>ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ, ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ವಿಲಾಸ್ರಾವ್ ದೇಶ್ಮುಖ್ (67) ಮಂಗಳವಾರ ಮಧ್ಯಾಹ್ನ ಗ್ಲೋಬಲ್ ಆಸ್ಪತ್ರೆಯಲ್ಲಿ ನಿಧನರಾದರು. ಯಕೃತ್ತಿನ ತೀವ್ರ ತೊಂದರೆಗೆ ಒಳಗಾಗಿದ್ದ ಅವರನ್ನು ಕಳೆದೊಂದು ವಾರದಿಂದ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು. <br /> <br /> ಮೆದುಳು ನಿಷ್ಕ್ರಿಯಗೊಂಡಿದ್ದ ವ್ಯಕ್ತಿಯೊಬ್ಬರಿಂದ ಯಕೃತ್ ಪಡೆದು ಅದನ್ನು ದೇಶ್ಮುಖ್ರಿಗೆ ಕಸಿ ಮಾಡಲು ಪ್ರಯತ್ನ ನಡೆಸಿರುವ ಸಂದರ್ಭದಲ್ಲೇ ಆ ವ್ಯಕ್ತಿ ಮೃತಪಟ್ಟ ಕಾರಣ ವೈದ್ಯರ ಈ ಪ್ರಯತ್ನ ಸಫಲವಾಗಲಿಲ್ಲ. ಮತ್ತೊಬ್ಬ ವ್ಯಕ್ತಿಯ ಯಕೃತ್ಗೆ ವೈದ್ಯರು ಅನ್ವೇಷಣೆ ನಡೆಸುತ್ತಿದ್ದ ಸಂದರ್ಭದಲ್ಲೇ ದೇಶ್ಮುಖ್ ಉಸಿರು ನಿಂತು ಹೋಯಿತು. <br /> <br /> ಪತ್ನಿ ವೈಶಾಲಿ, ಪುತ್ರರಾದ ಬಾಲಿವುಡ್ ನಟ ರಿತೇಶ್, ಶಾಸಕ ಅಮಿತ್ ಹಾಗೂ ಧೀರಜ್ ಅವರನ್ನು ದೇಶಮುಖ ಅಗಲಿದ್ದಾರೆ. ಯಕೃತ್ ವೈಫಲ್ಯದಿಂದ ಗಂಭೀರ ಸ್ಥಿತಿಗೆ ತಲುಪಿದ್ದ ದೇಶಮುಖ್ ಅವರನ್ನು ಈ ತಿಂಗಳ 6 ರಂದು ಮುಂಬೈಯಿಂದ ಕರೆತಂದು ಇಲ್ಲಿಯ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. <br /> <br /> ಯಕೃತ್, ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅವರಿಗೆ ಕೃತಕ ಉಸಿರಾಟ ಕಲ್ಪಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೆಲ ಸಮಯ ಚಿಕಿತ್ಸೆಗೆ ಸ್ಪಂದಿಸಿದರಾದರೂ ಅವರ ಹೃದಯದ ಬಡಿತ ಮಂಗಳವಾರ ಮಧ್ಯಾಹ್ನ 1.40ಕ್ಕೆ ನಿಂತುಹೋಯಿತು ಎಂದು ಆಸ್ಪತ್ರೆ ಅಧ್ಯಕ್ಷ ಕೆ. ರವೀಂದ್ರನಾಥ ಸುದ್ದಿಗಾರರಿಗೆ ತಿಳಿಸಿದರು. <br /> <br /> ದೇಶ್ಮುಖ್ ಮೃತರಾದ ಸುದ್ದಿಯನ್ನು ಗೃಹ ಸಚಿವ ಸುಶೀಲ್ಕುಮಾರ್ ಶಿಂಧೆ ಲೋಕಸಭೆಯಲ್ಲಿ ಪ್ರಕಟಿಸುತ್ತಿದ್ದಂತೆಯೇ ಮೃತರ ಗೌರವಾರ್ಥ ಉಭಯ ಸದನಗಳ ಕಲಾಪವನ್ನು ಒಂದು ದಿನದ ಮಟ್ಟಿಗೆ ಮುಂದೂಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನೈ (ಪಿಟಿಐ): </strong>ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ, ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ವಿಲಾಸ್ರಾವ್ ದೇಶ್ಮುಖ್ (67) ಮಂಗಳವಾರ ಮಧ್ಯಾಹ್ನ ಗ್ಲೋಬಲ್ ಆಸ್ಪತ್ರೆಯಲ್ಲಿ ನಿಧನರಾದರು. ಯಕೃತ್ತಿನ ತೀವ್ರ ತೊಂದರೆಗೆ ಒಳಗಾಗಿದ್ದ ಅವರನ್ನು ಕಳೆದೊಂದು ವಾರದಿಂದ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು. <br /> <br /> ಮೆದುಳು ನಿಷ್ಕ್ರಿಯಗೊಂಡಿದ್ದ ವ್ಯಕ್ತಿಯೊಬ್ಬರಿಂದ ಯಕೃತ್ ಪಡೆದು ಅದನ್ನು ದೇಶ್ಮುಖ್ರಿಗೆ ಕಸಿ ಮಾಡಲು ಪ್ರಯತ್ನ ನಡೆಸಿರುವ ಸಂದರ್ಭದಲ್ಲೇ ಆ ವ್ಯಕ್ತಿ ಮೃತಪಟ್ಟ ಕಾರಣ ವೈದ್ಯರ ಈ ಪ್ರಯತ್ನ ಸಫಲವಾಗಲಿಲ್ಲ. ಮತ್ತೊಬ್ಬ ವ್ಯಕ್ತಿಯ ಯಕೃತ್ಗೆ ವೈದ್ಯರು ಅನ್ವೇಷಣೆ ನಡೆಸುತ್ತಿದ್ದ ಸಂದರ್ಭದಲ್ಲೇ ದೇಶ್ಮುಖ್ ಉಸಿರು ನಿಂತು ಹೋಯಿತು. <br /> <br /> ಪತ್ನಿ ವೈಶಾಲಿ, ಪುತ್ರರಾದ ಬಾಲಿವುಡ್ ನಟ ರಿತೇಶ್, ಶಾಸಕ ಅಮಿತ್ ಹಾಗೂ ಧೀರಜ್ ಅವರನ್ನು ದೇಶಮುಖ ಅಗಲಿದ್ದಾರೆ. ಯಕೃತ್ ವೈಫಲ್ಯದಿಂದ ಗಂಭೀರ ಸ್ಥಿತಿಗೆ ತಲುಪಿದ್ದ ದೇಶಮುಖ್ ಅವರನ್ನು ಈ ತಿಂಗಳ 6 ರಂದು ಮುಂಬೈಯಿಂದ ಕರೆತಂದು ಇಲ್ಲಿಯ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. <br /> <br /> ಯಕೃತ್, ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅವರಿಗೆ ಕೃತಕ ಉಸಿರಾಟ ಕಲ್ಪಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೆಲ ಸಮಯ ಚಿಕಿತ್ಸೆಗೆ ಸ್ಪಂದಿಸಿದರಾದರೂ ಅವರ ಹೃದಯದ ಬಡಿತ ಮಂಗಳವಾರ ಮಧ್ಯಾಹ್ನ 1.40ಕ್ಕೆ ನಿಂತುಹೋಯಿತು ಎಂದು ಆಸ್ಪತ್ರೆ ಅಧ್ಯಕ್ಷ ಕೆ. ರವೀಂದ್ರನಾಥ ಸುದ್ದಿಗಾರರಿಗೆ ತಿಳಿಸಿದರು. <br /> <br /> ದೇಶ್ಮುಖ್ ಮೃತರಾದ ಸುದ್ದಿಯನ್ನು ಗೃಹ ಸಚಿವ ಸುಶೀಲ್ಕುಮಾರ್ ಶಿಂಧೆ ಲೋಕಸಭೆಯಲ್ಲಿ ಪ್ರಕಟಿಸುತ್ತಿದ್ದಂತೆಯೇ ಮೃತರ ಗೌರವಾರ್ಥ ಉಭಯ ಸದನಗಳ ಕಲಾಪವನ್ನು ಒಂದು ದಿನದ ಮಟ್ಟಿಗೆ ಮುಂದೂಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>