<p><strong>ಆಲಮಟ್ಟಿ: </strong>ಮಗ ಮಾಡಿದ ತಪ್ಪಿಗೆ ತಾಯಿಗೆ ಅಮಾನವೀಯ ಶಿಕ್ಷೆ ನೀಡಿರುವ ಘಟನೆ ಇಲ್ಲಿಗೆ ಸಮೀಪದ ಗಣಿ ಪುನರ್ವಸತಿ ಕೇಂದ್ರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.</p>.<p>`ಮುತ್ತಪ್ಪ ಕುರಿ ಹಾಗೂ ಆತನ ಮನೆಯವರಾದ ನಿಂಗಪ್ಪ ಕುರಿ, ಹನುಮಂತಪ್ಪ ಕುರಿ, ಸೋಮನಿಂಗಪ್ಪ ಕುರಿ, ಶೇಖಪ್ಪ ಕುರಿ, ನಾಗವ್ವ ಕುರಿ, ಕಾಶಿಬಾಯಿ ಹಾಗೂ ತಂಗೆವ್ವ ಸೇರಿಕೊಂಡು ನನ್ನನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದಾರೆ~ ಎಂದು ಶಿವಬಾಯಿ ರುದ್ರಪ್ಪ ಪೂಜಾರಿ (45) ಪೊಲೀಸರಿಗೆ ದೂರು ನೀಡಿದ್ದಾರೆ. <br /> <br /> `ನನ್ನ ಮಗ ಅನ್ಯ ಜಾತಿಯ ಹುಡುಗಿಯೊಬ್ಬಳನ್ನು ಕರೆದುಕೊಂಡು ಓಡಿ ಹೋಗಿದ್ದಾನೆ ಎಂದು ಆರೋಪಿಸಿ ಹುಡುಗಿಯ ಪಾಲಕರು ನಮ್ಮ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಮನೆಯಲ್ಲಿದ್ದ ನನ್ನನ್ನು ಹೊರಗೆಳೆದು ತಂದು ಅರೆ ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹೊಡೆದಿದ್ದಾರೆ~ ಎಂದು ನಿಡಗುಂದಿ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ಅವರು ತಿಳಿಸಿದ್ದಾರೆ.<br /> <br /> ಶಿವಬಾಯಿ ಪೂಜಾರಿ ಮಗ ತಮ್ಮ ಮಗಳನ್ನು ಅಪಹರಿಸಿದ್ದಾನೆ ಎಂದು ಕುರಿ ಎಂಬುವವರು ಈ ಹಿಂದೆಯೇ ಪೊಲೀಸರಿಗೆ ದೂರು ನೀಡಿದ್ದಾರೆ. ನವೆಂಬರ್ 6ರಂದೇ ಈ ಘಟನೆ ನಡೆದಿದ್ದು, ಭಾನುವಾರ ಪ್ರಕರಣ ದಾಖಲಾಗಿದೆ. ಬಸವನ ಬಾಗೇವಾಡಿ ಡಿ.ವೈ.ಎಸ್.ಪಿ. ಬಾಲಬಂಡಿ, ಪಿಎಸೈ ಆನಂದ ವಾಘಮೋಡೆ ಮೊದಲಾದವರು ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.<br /> <br /> <strong>ವಿಜಾಪುರ ವರದಿ</strong>:`ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಲಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು~ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಹಿಲೋರಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಲಮಟ್ಟಿ: </strong>ಮಗ ಮಾಡಿದ ತಪ್ಪಿಗೆ ತಾಯಿಗೆ ಅಮಾನವೀಯ ಶಿಕ್ಷೆ ನೀಡಿರುವ ಘಟನೆ ಇಲ್ಲಿಗೆ ಸಮೀಪದ ಗಣಿ ಪುನರ್ವಸತಿ ಕೇಂದ್ರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.</p>.<p>`ಮುತ್ತಪ್ಪ ಕುರಿ ಹಾಗೂ ಆತನ ಮನೆಯವರಾದ ನಿಂಗಪ್ಪ ಕುರಿ, ಹನುಮಂತಪ್ಪ ಕುರಿ, ಸೋಮನಿಂಗಪ್ಪ ಕುರಿ, ಶೇಖಪ್ಪ ಕುರಿ, ನಾಗವ್ವ ಕುರಿ, ಕಾಶಿಬಾಯಿ ಹಾಗೂ ತಂಗೆವ್ವ ಸೇರಿಕೊಂಡು ನನ್ನನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದಾರೆ~ ಎಂದು ಶಿವಬಾಯಿ ರುದ್ರಪ್ಪ ಪೂಜಾರಿ (45) ಪೊಲೀಸರಿಗೆ ದೂರು ನೀಡಿದ್ದಾರೆ. <br /> <br /> `ನನ್ನ ಮಗ ಅನ್ಯ ಜಾತಿಯ ಹುಡುಗಿಯೊಬ್ಬಳನ್ನು ಕರೆದುಕೊಂಡು ಓಡಿ ಹೋಗಿದ್ದಾನೆ ಎಂದು ಆರೋಪಿಸಿ ಹುಡುಗಿಯ ಪಾಲಕರು ನಮ್ಮ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಮನೆಯಲ್ಲಿದ್ದ ನನ್ನನ್ನು ಹೊರಗೆಳೆದು ತಂದು ಅರೆ ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹೊಡೆದಿದ್ದಾರೆ~ ಎಂದು ನಿಡಗುಂದಿ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ಅವರು ತಿಳಿಸಿದ್ದಾರೆ.<br /> <br /> ಶಿವಬಾಯಿ ಪೂಜಾರಿ ಮಗ ತಮ್ಮ ಮಗಳನ್ನು ಅಪಹರಿಸಿದ್ದಾನೆ ಎಂದು ಕುರಿ ಎಂಬುವವರು ಈ ಹಿಂದೆಯೇ ಪೊಲೀಸರಿಗೆ ದೂರು ನೀಡಿದ್ದಾರೆ. ನವೆಂಬರ್ 6ರಂದೇ ಈ ಘಟನೆ ನಡೆದಿದ್ದು, ಭಾನುವಾರ ಪ್ರಕರಣ ದಾಖಲಾಗಿದೆ. ಬಸವನ ಬಾಗೇವಾಡಿ ಡಿ.ವೈ.ಎಸ್.ಪಿ. ಬಾಲಬಂಡಿ, ಪಿಎಸೈ ಆನಂದ ವಾಘಮೋಡೆ ಮೊದಲಾದವರು ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.<br /> <br /> <strong>ವಿಜಾಪುರ ವರದಿ</strong>:`ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಲಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು~ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಹಿಲೋರಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>