<p><strong>ವಿಜಾಪುರ</strong>: ಬಸವನ ಬಾಗೇವಾಡಿ ತಾಲ್ಲೂಕು ಗಣಿ ಪುನರ್ವಸತಿ ಕೇಂದ್ರದಲ್ಲಿ ಶಿವಮ್ಮ (ಶಿವಬಾಯಿ) ಪೂಜಾರ ಎಂಬ ದಲಿತ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.<br /> <br /> `ಈ ಪ್ರಕರಣ ಕುರಿತು ಸಚಿವ ರಾಜೂಗೌಡ, ವಾಲ್ಮೀಕಿ ಗುರುಪೀಠದ ಸ್ವಾಮೀಜಿ ನನ್ನೊಂದಿಗೆ ಚರ್ಚಿಸಿದ್ದಾರೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ' ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.<br /> `ಪ್ರಕರಣ ದಾಖಲಿಸಿಕೊಳ್ಳುವಲ್ಲಿ ವಿಳಂಬ ಮಾಡಿದ್ದರಿಂದ ಹಿಡಿದು ಯಾವ್ಯಾವ ಅಧಿಕಾರಿಗಳು ಕರ್ತವ್ಯಲೋಪ ಎಸಗಿದ್ದಾರೆ ಎಂಬ ಬಗ್ಗೆಯೂ ಸಮಗ್ರ ತನಿಖೆ ನಡೆಯಲಿದೆ' ಎಂದು ಪ್ರತಿಕ್ರಿಯಿಸಿದರು.<br /> <br /> ಈ ಮಹಿಳೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ರೂ 1.20 ಲಕ್ಷ ನೆರವು ನೀಡಲಾಗುವುದು. ಈಗ ಮೊದಲ ಕಂತಿನಲ್ಲಿ ರೂ 60,000 ನೀಡಲಾಗಿದೆ ಎಂದರು.<br /> <br /> `ಈ ಪ್ರಕರಣದಲ್ಲಿ ನನ್ನ ಕೈವಾಡ ಇಲ್ಲ. ನಾನು ಆರೋಪಿಗಳ ರಕ್ಷಣೆ ಮಾಡುತ್ತಿಲ್ಲ. ದೌರ್ಜನ್ಯಕ್ಕೊಳಗಾದ ಮಹಿಳೆಯ ಭೇಟಿಗೆ ಗ್ರಾಮಕ್ಕೆ ತೆರಳಿದ್ದೆ. ಆ ಮಹಿಳೆ ಗ್ರಾಮದಲ್ಲಿ ಇರದ ಕಾರಣ ಆಕೆಯ ಭೇಟಿ ಸಾಧ್ಯವಾಗಿಲ್ಲ' ಎಂದು ಈ ಕ್ಷೇತ್ರದ ಶಾಸಕರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಪತ್ರಿಕಾಗೋಷ್ಠಿಯಲ್ಲಿ ಸಮಜಾಯಿಷಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಾಪುರ</strong>: ಬಸವನ ಬಾಗೇವಾಡಿ ತಾಲ್ಲೂಕು ಗಣಿ ಪುನರ್ವಸತಿ ಕೇಂದ್ರದಲ್ಲಿ ಶಿವಮ್ಮ (ಶಿವಬಾಯಿ) ಪೂಜಾರ ಎಂಬ ದಲಿತ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.<br /> <br /> `ಈ ಪ್ರಕರಣ ಕುರಿತು ಸಚಿವ ರಾಜೂಗೌಡ, ವಾಲ್ಮೀಕಿ ಗುರುಪೀಠದ ಸ್ವಾಮೀಜಿ ನನ್ನೊಂದಿಗೆ ಚರ್ಚಿಸಿದ್ದಾರೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ' ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.<br /> `ಪ್ರಕರಣ ದಾಖಲಿಸಿಕೊಳ್ಳುವಲ್ಲಿ ವಿಳಂಬ ಮಾಡಿದ್ದರಿಂದ ಹಿಡಿದು ಯಾವ್ಯಾವ ಅಧಿಕಾರಿಗಳು ಕರ್ತವ್ಯಲೋಪ ಎಸಗಿದ್ದಾರೆ ಎಂಬ ಬಗ್ಗೆಯೂ ಸಮಗ್ರ ತನಿಖೆ ನಡೆಯಲಿದೆ' ಎಂದು ಪ್ರತಿಕ್ರಿಯಿಸಿದರು.<br /> <br /> ಈ ಮಹಿಳೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ರೂ 1.20 ಲಕ್ಷ ನೆರವು ನೀಡಲಾಗುವುದು. ಈಗ ಮೊದಲ ಕಂತಿನಲ್ಲಿ ರೂ 60,000 ನೀಡಲಾಗಿದೆ ಎಂದರು.<br /> <br /> `ಈ ಪ್ರಕರಣದಲ್ಲಿ ನನ್ನ ಕೈವಾಡ ಇಲ್ಲ. ನಾನು ಆರೋಪಿಗಳ ರಕ್ಷಣೆ ಮಾಡುತ್ತಿಲ್ಲ. ದೌರ್ಜನ್ಯಕ್ಕೊಳಗಾದ ಮಹಿಳೆಯ ಭೇಟಿಗೆ ಗ್ರಾಮಕ್ಕೆ ತೆರಳಿದ್ದೆ. ಆ ಮಹಿಳೆ ಗ್ರಾಮದಲ್ಲಿ ಇರದ ಕಾರಣ ಆಕೆಯ ಭೇಟಿ ಸಾಧ್ಯವಾಗಿಲ್ಲ' ಎಂದು ಈ ಕ್ಷೇತ್ರದ ಶಾಸಕರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಪತ್ರಿಕಾಗೋಷ್ಠಿಯಲ್ಲಿ ಸಮಜಾಯಿಷಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>