<p>ಕುಶಾಲನಗರ: ಪಟ್ಟಣದ ಜಾಮೀಯಾ ಮಸೀದಿಗೆ ಸೇರಿದೆ ಎನ್ನಲಾಗುತ್ತಿರುವ ವಿವಾದಿತ 1 ಎಕರೆ 12 ಸೆಂಟ್ ಜಾಗವನ್ನು ತಹಶೀಲ್ದಾರ್ ಚಂದ್ರಪ್ಪ ಗುರುವಾರ ಪರಿಶೀಲನೆ ನಡೆಸಿದರು.<br /> <br /> ಪಟ್ಟಣದ ಬಿ.ಎಂ. ರಸ್ತೆಯಲ್ಲಿರುವ ಜಾಮೀಯಾ ಮಸೀದಿಗೆ ಸೇರಿದೆ ಎನ್ನಲಾಗುತ್ತಿರುವ ಜಾಗದಲ್ಲಿ ಹಳೆ ಕಟ್ಟಡವೊಂದಿದ್ದು ಸಂಪೂರ್ಣ ಶಿಥಿಲಗೊಂಡಿದೆ. ಹೀಗಾಗಿ ಕಳೆದ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಸಾರ್ವಜನಿಕರು ಮತ್ತು ವ್ಯಾಪಾರಸ್ಥರಿಗೆ ಯಾವುದೇ ತೊಂದರೆ ಸಂಭವಿಸಬಾರರು ಎಂಬ ದೃಷ್ಟಿಯಿಂದ ಈ ಕಟ್ಟಡವನ್ನು ನೆಲಸಮ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿತ್ತು.<br /> <br /> ಆದರೆ 2008ರಲ್ಲಿ ಈ ಕುರಿತು ಮೈಸೂರು ವಕ್ಫ್ ಮಂಡಳಿ ಕೋರ್ಟ್ನಲ್ಲಿ ಪ್ರಕರಣ ದಾಖಲಾಗಿರುವುದರಿಂದ ಕಟ್ಟಡವನ್ನು ತೆರವುಗೊಳಿಸಲು ಸಾಧ್ಯವಾಗಿರಲಿಲ್ಲ.<br /> <br /> ಮತ್ತೊಂದೆಡೆ ಪಟ್ಟಣ ಪಂಚಾಯಿತಿಯು ಈ ಆಸ್ತಿಯು ತನ್ನದೆಂದು ವಾದಿಸುತ್ತಿರುವುದರಿಂದ ಪ್ರಕರಣವು ಇತ್ಯರ್ಥವಾಗದೇ ಕಟ್ಟಡವನ್ನು ತೆರವುಗೊಳಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ತಹಶೀಲ್ದಾರ್ ಚಂದ್ರಪ್ಪ ಗುರುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.<br /> <br /> ಪಟ್ಟಣ ಪಂಚಾಯಿತಿ ಅಧ್ಯಕ್ಷ ಡಿ.ಕೆ. ತಿಮ್ಮಪ್ಪ ಮಾತನಾಡಿ, ಈ ಹಿಂದೆ ಕಂದಾಯ ಇಲಾಖೆಯು ಇದನ್ನು ಸರ್ವೆ ನಂ 135 ಎಂದು ಗುರುತಿಸಿದ್ದರೆ ಪಟ್ಟಣ ಪಂಚಾಯಿತಿಯು 96 ಎಂದು ಗುರುತ್ತಿಸಿ ಗೊಂದಲಕ್ಕೆ ಕಾರಣವಾಗಿತ್ತು. ಆದರೆ ಈ ತಹಶೀಲ್ದಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಎರಡು ಒಂದೇ ಸರ್ವೆ ನಂಬರ್ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದರು.<br /> <br /> ಪಟ್ಟಣ ಪಂಚಾಯಿತಿ ಸದಸ್ಯರಾದ ಮಧುಸೂದನ್, ಸುರೇಯಾಬಾನು, ಎಂಜಿನಿಯರ್ ಶ್ಯಾಮ್ ಮತ್ತು ಜಾಮಿಯಾ ಮಸೀದಿ ಕಾರ್ಯದರ್ಶಿ ತನ್ವೀರ್ ಅಹಮ್ಮದ್, ಖಜಾಂಚಿ ರಫೀಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಶಾಲನಗರ: ಪಟ್ಟಣದ ಜಾಮೀಯಾ ಮಸೀದಿಗೆ ಸೇರಿದೆ ಎನ್ನಲಾಗುತ್ತಿರುವ ವಿವಾದಿತ 1 ಎಕರೆ 12 ಸೆಂಟ್ ಜಾಗವನ್ನು ತಹಶೀಲ್ದಾರ್ ಚಂದ್ರಪ್ಪ ಗುರುವಾರ ಪರಿಶೀಲನೆ ನಡೆಸಿದರು.<br /> <br /> ಪಟ್ಟಣದ ಬಿ.ಎಂ. ರಸ್ತೆಯಲ್ಲಿರುವ ಜಾಮೀಯಾ ಮಸೀದಿಗೆ ಸೇರಿದೆ ಎನ್ನಲಾಗುತ್ತಿರುವ ಜಾಗದಲ್ಲಿ ಹಳೆ ಕಟ್ಟಡವೊಂದಿದ್ದು ಸಂಪೂರ್ಣ ಶಿಥಿಲಗೊಂಡಿದೆ. ಹೀಗಾಗಿ ಕಳೆದ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಸಾರ್ವಜನಿಕರು ಮತ್ತು ವ್ಯಾಪಾರಸ್ಥರಿಗೆ ಯಾವುದೇ ತೊಂದರೆ ಸಂಭವಿಸಬಾರರು ಎಂಬ ದೃಷ್ಟಿಯಿಂದ ಈ ಕಟ್ಟಡವನ್ನು ನೆಲಸಮ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿತ್ತು.<br /> <br /> ಆದರೆ 2008ರಲ್ಲಿ ಈ ಕುರಿತು ಮೈಸೂರು ವಕ್ಫ್ ಮಂಡಳಿ ಕೋರ್ಟ್ನಲ್ಲಿ ಪ್ರಕರಣ ದಾಖಲಾಗಿರುವುದರಿಂದ ಕಟ್ಟಡವನ್ನು ತೆರವುಗೊಳಿಸಲು ಸಾಧ್ಯವಾಗಿರಲಿಲ್ಲ.<br /> <br /> ಮತ್ತೊಂದೆಡೆ ಪಟ್ಟಣ ಪಂಚಾಯಿತಿಯು ಈ ಆಸ್ತಿಯು ತನ್ನದೆಂದು ವಾದಿಸುತ್ತಿರುವುದರಿಂದ ಪ್ರಕರಣವು ಇತ್ಯರ್ಥವಾಗದೇ ಕಟ್ಟಡವನ್ನು ತೆರವುಗೊಳಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ತಹಶೀಲ್ದಾರ್ ಚಂದ್ರಪ್ಪ ಗುರುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.<br /> <br /> ಪಟ್ಟಣ ಪಂಚಾಯಿತಿ ಅಧ್ಯಕ್ಷ ಡಿ.ಕೆ. ತಿಮ್ಮಪ್ಪ ಮಾತನಾಡಿ, ಈ ಹಿಂದೆ ಕಂದಾಯ ಇಲಾಖೆಯು ಇದನ್ನು ಸರ್ವೆ ನಂ 135 ಎಂದು ಗುರುತಿಸಿದ್ದರೆ ಪಟ್ಟಣ ಪಂಚಾಯಿತಿಯು 96 ಎಂದು ಗುರುತ್ತಿಸಿ ಗೊಂದಲಕ್ಕೆ ಕಾರಣವಾಗಿತ್ತು. ಆದರೆ ಈ ತಹಶೀಲ್ದಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಎರಡು ಒಂದೇ ಸರ್ವೆ ನಂಬರ್ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದರು.<br /> <br /> ಪಟ್ಟಣ ಪಂಚಾಯಿತಿ ಸದಸ್ಯರಾದ ಮಧುಸೂದನ್, ಸುರೇಯಾಬಾನು, ಎಂಜಿನಿಯರ್ ಶ್ಯಾಮ್ ಮತ್ತು ಜಾಮಿಯಾ ಮಸೀದಿ ಕಾರ್ಯದರ್ಶಿ ತನ್ವೀರ್ ಅಹಮ್ಮದ್, ಖಜಾಂಚಿ ರಫೀಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>