<p><strong>ಮೈಸೂರು:</strong> `ರಾಜ್ಯದಲ್ಲಿರುವ 27 ವಿಶ್ವವಿದ್ಯಾನಿಲಯಗಳು ಪರಸ್ಪರ ಕೊಡು, ಕೊಳ್ಳುವ ಮೂಲಕ ಸಮನ್ವಯ ಸಾಧಿಸಬೇಕು~ ಎಂದು ರಾಜ್ಯಪಾಲ ಹಂಸರಾಜ ಭಾರದ್ವಾಜ್ ಬುಧವಾರ ಹೇಳಿದರು.<br /> <br /> ಮಾನಸಗಂಗೋತ್ರಿಯ ಸೆನೆಟ್ ಭವನದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಮೂರು ದಿನಗಳ ಕಾಲ ಆಯೋಜಿಸಿರುವ `ಜಾಗತಿಕ ಪರಿಸರದಲ್ಲಿ ಮುಕ್ತ ಮತ್ತು ದೂರ ಶಿಕ್ಷಣ ಕಲಿಕೆ: ವಿಷಯ ಮತ್ತು ಸವಾಲುಗಳು~ ಕುರಿತಾದ ಅಂತರರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು `ರಾಜ್ಯದ ಎಲ್ಲ ವಿಶ್ವವಿದ್ಯಾನಿಲಯಗಳು ತಂತ್ರಜ್ಞಾನವನ್ನು ಬಳಸಿಕೊಂಡು ಇ-ಕಲಿಕೆಗೆ ಒತ್ತು ಕೊಡಬೇಕು.<br /> <br /> ಪ್ರತಿ ವಿಶ್ವವಿದ್ಯಾನಿಲಯ ಸಮ್ಮೇಳನ ಕೊಠಡಿಯನ್ನು ಹೊಂದಿರಬೇಕು. ಇವುಗಳ ಮೂಲಕ ಪರಸ್ಪರ ವಿಚಾರ ವಿನಿಮಯ ಮಾಡಿಕೊಳ್ಳುವ ಮೂಲಕ ಹೆಚ್ಚು ಕಲಿಯಲು ಮುಂದಾಗಬೇಕು~ ಎಂದು ತಿಳಿಸಿದರು.<br /> <br /> ಸಮ್ಮೇಳನವನ್ನು ನವದೆಹಲಿಯ ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ವಿ.ಎನ್.ಪಿಳೈ ಉದ್ಘಾಟಿಸಿದರು. ಕೆನಡಾದ ಕಾಮನ್ ವೆಲ್ತ್ ಆಫ್ ಲರ್ನಿಂಗ್ನ ಅಧ್ಯಕ್ಷ ಜಾನ್ ಡೇನಿಯಲ್ ಸಮ್ಮೇಳನದ ಪ್ರಧಾನ ಭಾಷಣ ಮಾಡಿದರು. <br /> <br /> ಪ್ಯಾರಿಸ್ನ ಯುನೆಸ್ಕೊದ ಮುಖ್ಯಸ್ಥೆ ಸ್ಟಮೆಂಕಾ ಟ್ರಂಬೆಕ್ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿದರು. ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮ್ಮೇಳನದಲ್ಲಿ ರಾಜ್ಯ, ದೇಶ ಹಾಗೂ ವಿದೇಶಗಳ ಮುಕ್ತ ವಿಶ್ವವಿದ್ಯಾನಿಲಯಗಳ ಕುಲಪತಿಗಳು ಸೇರಿದಂತೆ 500 ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದಾರೆ. <br /> <br /> ವಿಶ್ವದ ವಿವಿಧ ಭಾಗದಲ್ಲಿನ ದೂರ ಮತ್ತು ಮುಕ್ತ ಶಿಕ್ಷಣ ರಂಗದಲ್ಲಿನ ಆಡಳಿತಗಾರರು, ಶಿಕ್ಷಣ ತಜ್ಞರು, ಶಿಕ್ಷಣ ರಂಗದ ನೀತಿ ನಿರೂಪಕರು ಮತ್ತು ಸಂಶೋಧಕರು ಸಮ್ಮೇಳನದಲ್ಲಿ ಪಾಲ್ಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> `ರಾಜ್ಯದಲ್ಲಿರುವ 27 ವಿಶ್ವವಿದ್ಯಾನಿಲಯಗಳು ಪರಸ್ಪರ ಕೊಡು, ಕೊಳ್ಳುವ ಮೂಲಕ ಸಮನ್ವಯ ಸಾಧಿಸಬೇಕು~ ಎಂದು ರಾಜ್ಯಪಾಲ ಹಂಸರಾಜ ಭಾರದ್ವಾಜ್ ಬುಧವಾರ ಹೇಳಿದರು.<br /> <br /> ಮಾನಸಗಂಗೋತ್ರಿಯ ಸೆನೆಟ್ ಭವನದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಮೂರು ದಿನಗಳ ಕಾಲ ಆಯೋಜಿಸಿರುವ `ಜಾಗತಿಕ ಪರಿಸರದಲ್ಲಿ ಮುಕ್ತ ಮತ್ತು ದೂರ ಶಿಕ್ಷಣ ಕಲಿಕೆ: ವಿಷಯ ಮತ್ತು ಸವಾಲುಗಳು~ ಕುರಿತಾದ ಅಂತರರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು `ರಾಜ್ಯದ ಎಲ್ಲ ವಿಶ್ವವಿದ್ಯಾನಿಲಯಗಳು ತಂತ್ರಜ್ಞಾನವನ್ನು ಬಳಸಿಕೊಂಡು ಇ-ಕಲಿಕೆಗೆ ಒತ್ತು ಕೊಡಬೇಕು.<br /> <br /> ಪ್ರತಿ ವಿಶ್ವವಿದ್ಯಾನಿಲಯ ಸಮ್ಮೇಳನ ಕೊಠಡಿಯನ್ನು ಹೊಂದಿರಬೇಕು. ಇವುಗಳ ಮೂಲಕ ಪರಸ್ಪರ ವಿಚಾರ ವಿನಿಮಯ ಮಾಡಿಕೊಳ್ಳುವ ಮೂಲಕ ಹೆಚ್ಚು ಕಲಿಯಲು ಮುಂದಾಗಬೇಕು~ ಎಂದು ತಿಳಿಸಿದರು.<br /> <br /> ಸಮ್ಮೇಳನವನ್ನು ನವದೆಹಲಿಯ ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ವಿ.ಎನ್.ಪಿಳೈ ಉದ್ಘಾಟಿಸಿದರು. ಕೆನಡಾದ ಕಾಮನ್ ವೆಲ್ತ್ ಆಫ್ ಲರ್ನಿಂಗ್ನ ಅಧ್ಯಕ್ಷ ಜಾನ್ ಡೇನಿಯಲ್ ಸಮ್ಮೇಳನದ ಪ್ರಧಾನ ಭಾಷಣ ಮಾಡಿದರು. <br /> <br /> ಪ್ಯಾರಿಸ್ನ ಯುನೆಸ್ಕೊದ ಮುಖ್ಯಸ್ಥೆ ಸ್ಟಮೆಂಕಾ ಟ್ರಂಬೆಕ್ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿದರು. ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮ್ಮೇಳನದಲ್ಲಿ ರಾಜ್ಯ, ದೇಶ ಹಾಗೂ ವಿದೇಶಗಳ ಮುಕ್ತ ವಿಶ್ವವಿದ್ಯಾನಿಲಯಗಳ ಕುಲಪತಿಗಳು ಸೇರಿದಂತೆ 500 ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದಾರೆ. <br /> <br /> ವಿಶ್ವದ ವಿವಿಧ ಭಾಗದಲ್ಲಿನ ದೂರ ಮತ್ತು ಮುಕ್ತ ಶಿಕ್ಷಣ ರಂಗದಲ್ಲಿನ ಆಡಳಿತಗಾರರು, ಶಿಕ್ಷಣ ತಜ್ಞರು, ಶಿಕ್ಷಣ ರಂಗದ ನೀತಿ ನಿರೂಪಕರು ಮತ್ತು ಸಂಶೋಧಕರು ಸಮ್ಮೇಳನದಲ್ಲಿ ಪಾಲ್ಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>