<p>ಬೆಂಗಳೂರು: ‘ದೇಶದ ವಿಶ್ವವಿದ್ಯಾಲಯಗಳಿಗೆ ದೊಡ್ಡ ಮಟ್ಟದಲ್ಲಿ ಉತ್ತೇಜನ ನೀಡುತ್ತಿಲ್ಲ. ವಿವಿಗಳಲ್ಲಿ ಸಂಶೋಧನಾ ಹಾಗೂ ಅಭಿವೃದ್ಧಿ ಚಟುವಟಿಕೆಗಳಿಗೆ ಒತ್ತು ನೀಡುತ್ತಿಲ್ಲ’ ಎಂದು ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಬೇಸರ ವ್ಯಕ್ತಪಡಿಸಿದರು.<br /> <br /> ಜಯನಗರ ನ್ಯಾಷನಲ್ ಕಾಲೇಜಿನ ಎಚ್.ಎನ್.ಕಲಾಕ್ಷೇತ್ರದಲ್ಲಿ ಭಾನುವಾರ ನಡೆದ ‘ವಿಮೆನ್ಸ್ ಪೀಸ್ ಲೀಗ್’ ನ ವಜ್ರಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.‘ಅಮೆರಿಕ ಮತ್ತಿತರ ರಾಷ್ಟ್ರಗಳಲ್ಲಿ ವಿಶ್ವವಿದ್ಯಾಲಯಗಳಿಗೆ ಹೆಚ್ಚಿನ ಉತ್ತೇನ ನೀಡಲಾಗುತ್ತಿದೆ. ಹೀಗಾಗಿ ಆ ರಾಷ್ಟ್ರಗಳು ತ್ವರಿತಗತಿಯಲ್ಲಿ ಅಭಿವೃದ್ಧಿ<br /> ಸಾಧಿಸುತ್ತಿವೆ’ ಎಂದು ಅವರುಅಭಿಪ್ರಾಯಪಟ್ಟರು.<br /> <br /> ‘2007ರಲ್ಲೇ ಸಂಸತ್ನಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿದ್ದೆ. ಆದರೆ, ಈ ಮಸೂದೆಗೆ ಈ ವರೆಗೆ ಒಪ್ಪಿಗೆ ಸಿಕ್ಕಿಲ್ಲ. ಪೂರ್ವಗ್ರಹಪೀಡಿತ ಮನೋಭಾವದ ಕಾರಣದಿಂದ ಒಪ್ಪಿಗೆ ಸಿಗುವುದು ವಿಳಂಬ ಆಗುತ್ತಿದೆ. ಮಹಿಳೆಯರು ಸಂಸತ್ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಇದ್ದರೆ ಕಲಾಪ ಸುಗಮವಾಗಿ ಸಾಗುತ್ತದೆ’ ಎಂದು ಅವರು ತಿಳಿಸಿದರು.<br /> ನಿವೃತ್ತ ನ್ಯಾಯಮೂರ್ತಿ ವಿ.ಜಗನ್ನಾಥ್, ‘ಆಧುನಿಕ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಮನೋಭಾವ ಮೂಡಿಸುವ ಶಿಕ್ಷಣ ನೀಡಬೇಕು’ ಎಂದರು.<br /> <br /> ಸಂಸ್ಥೆಯ ಅಧ್ಯಕ್ಷೆ ವಿಶಾಲಾಕ್ಷಿ ಎಸ್.ರಾವ್ ಅಧ್ಯಕ್ಷತೆ ವಹಿಸಿ, ‘ಮೌಲ್ಯಾಧಾರಿತ ಶಿಕ್ಷಣ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವುದು ಸಂಸ್ಥೆಯ ಗುರಿ’ ಎಂದರು. ಇದೇ ಸಂದರ್ಭದಲ್ಲಿ ಪ್ರಫುಲ್ಲತಾ ಭಾರದ್ವಾಜ್ ಅವರು ಸಂಸ್ಥೆಯ ಸ್ಮರಣ ಸಂಚಿಕೆ ‘ನೈದಿಲೆ’ಯನ್ನು ಬಿಡುಗಡೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ದೇಶದ ವಿಶ್ವವಿದ್ಯಾಲಯಗಳಿಗೆ ದೊಡ್ಡ ಮಟ್ಟದಲ್ಲಿ ಉತ್ತೇಜನ ನೀಡುತ್ತಿಲ್ಲ. ವಿವಿಗಳಲ್ಲಿ ಸಂಶೋಧನಾ ಹಾಗೂ ಅಭಿವೃದ್ಧಿ ಚಟುವಟಿಕೆಗಳಿಗೆ ಒತ್ತು ನೀಡುತ್ತಿಲ್ಲ’ ಎಂದು ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಬೇಸರ ವ್ಯಕ್ತಪಡಿಸಿದರು.<br /> <br /> ಜಯನಗರ ನ್ಯಾಷನಲ್ ಕಾಲೇಜಿನ ಎಚ್.ಎನ್.ಕಲಾಕ್ಷೇತ್ರದಲ್ಲಿ ಭಾನುವಾರ ನಡೆದ ‘ವಿಮೆನ್ಸ್ ಪೀಸ್ ಲೀಗ್’ ನ ವಜ್ರಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.‘ಅಮೆರಿಕ ಮತ್ತಿತರ ರಾಷ್ಟ್ರಗಳಲ್ಲಿ ವಿಶ್ವವಿದ್ಯಾಲಯಗಳಿಗೆ ಹೆಚ್ಚಿನ ಉತ್ತೇನ ನೀಡಲಾಗುತ್ತಿದೆ. ಹೀಗಾಗಿ ಆ ರಾಷ್ಟ್ರಗಳು ತ್ವರಿತಗತಿಯಲ್ಲಿ ಅಭಿವೃದ್ಧಿ<br /> ಸಾಧಿಸುತ್ತಿವೆ’ ಎಂದು ಅವರುಅಭಿಪ್ರಾಯಪಟ್ಟರು.<br /> <br /> ‘2007ರಲ್ಲೇ ಸಂಸತ್ನಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿದ್ದೆ. ಆದರೆ, ಈ ಮಸೂದೆಗೆ ಈ ವರೆಗೆ ಒಪ್ಪಿಗೆ ಸಿಕ್ಕಿಲ್ಲ. ಪೂರ್ವಗ್ರಹಪೀಡಿತ ಮನೋಭಾವದ ಕಾರಣದಿಂದ ಒಪ್ಪಿಗೆ ಸಿಗುವುದು ವಿಳಂಬ ಆಗುತ್ತಿದೆ. ಮಹಿಳೆಯರು ಸಂಸತ್ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಇದ್ದರೆ ಕಲಾಪ ಸುಗಮವಾಗಿ ಸಾಗುತ್ತದೆ’ ಎಂದು ಅವರು ತಿಳಿಸಿದರು.<br /> ನಿವೃತ್ತ ನ್ಯಾಯಮೂರ್ತಿ ವಿ.ಜಗನ್ನಾಥ್, ‘ಆಧುನಿಕ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಮನೋಭಾವ ಮೂಡಿಸುವ ಶಿಕ್ಷಣ ನೀಡಬೇಕು’ ಎಂದರು.<br /> <br /> ಸಂಸ್ಥೆಯ ಅಧ್ಯಕ್ಷೆ ವಿಶಾಲಾಕ್ಷಿ ಎಸ್.ರಾವ್ ಅಧ್ಯಕ್ಷತೆ ವಹಿಸಿ, ‘ಮೌಲ್ಯಾಧಾರಿತ ಶಿಕ್ಷಣ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವುದು ಸಂಸ್ಥೆಯ ಗುರಿ’ ಎಂದರು. ಇದೇ ಸಂದರ್ಭದಲ್ಲಿ ಪ್ರಫುಲ್ಲತಾ ಭಾರದ್ವಾಜ್ ಅವರು ಸಂಸ್ಥೆಯ ಸ್ಮರಣ ಸಂಚಿಕೆ ‘ನೈದಿಲೆ’ಯನ್ನು ಬಿಡುಗಡೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>