<p><strong>ದಾವಣಗೆರೆ: </strong>ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಕೊರತೆ ಇರುವ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯನ್ನು ಹಂತ ಹಂತವಾಗಿ ನೇಮಕ ಮಾಡಿಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ಭರವಸೆ ನೀಡಿದರು.<br /> <br /> ಸಮೀಪದ ತೊಳಹುಣಿಸೆಯ ದಾವಣಗೆರೆ ವಿ.ವಿ. ಕ್ಯಾಂಪಸ್ನಲ್ಲಿ ಬುಧವಾರ ವಿ.ವಿ.ಯ ಹೊಸ ಕಟ್ಟಡಗಳನ್ನು ಉದ್ಘಾಟನೆ ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, `ಒಂದೇ ಬಾರಿಗೆ ಸಿಬ್ಬಂದಿ ನೇಮಕ ಮಾಡಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಜತೆ ಗುರುವಾರ ಬೆಂಗಳೂರಿನಲ್ಲಿ ಬಜೆಟ್ ಪೂರ್ವ ಚರ್ಚೆ ಇದ್ದು, ನೇಮಕಾತಿ ವಿಷಯ ಪ್ರಸ್ತಾಪಿಸಿ ಅನುಮತಿ ಪಡೆಯಲು ಪ್ರಯತ್ನಿಸುತ್ತೇನೆ' ಎಂದು ಹೇಳಿದರು.<br /> <br /> ವಿವಿಗಳಿಗೆ ಇಷ್ಟು ಕೋಟಿ, ಅಷ್ಟು ಕೋಟಿ ನೀಡಲಾಗುವುದು ಎಂದು ಭರವಸೆ ನೀಡುವುದಿಲ್ಲ. ಹಿಂದಿನ ಸರ್ಕಾರದಂತೆ ಆರ್ಥಿಕ ಶಿಸ್ತು ಮುರಿಯಲು ಮುಂದಾಗುವುದಿಲ್ಲ. ಆದರೆ, ಕ್ರಮೇಣ ಆರ್ಥಿಕ ನೆರವನ್ನು ನೀಡಲಾಗುವುದು ಎಂದು ಹೇಳಿದರು.<br /> <br /> ಕುವೆಂಪು ವಿಶ್ವವಿದ್ಯಾಲಯ ಮತ್ತು ದಾವಣಗೆರೆ ವಿಶ್ವವಿದ್ಯಾಲಯ ನಡುವೆ ಉಳಿದುಕೊಂಡಿರುವ ಕೆಲವು ಆಡಳಿತಾತ್ಮಕ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಎರಡೂ ವಿ.ವಿ.ಗಳ ಕುಲಪತಿಗಳನ್ನು ಕರೆಸಿ ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳಲಾಗುವುದು ಎಂದು ದೇಶಪಾಂಡೆ ತಿಳಿಸಿದರು.<br /> <br /> ಇತ್ತೀಚಿನ ದಿನಗಳಲ್ಲಿ ರಾಜ್ಯದ ಎಲ್ಲ ಕಡೆ ವಾಣಿಜ್ಯ ವಿಷಯದ ಕೋರ್ಸ್ಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ, ದಾವಣಗೆರೆಯಲ್ಲಿ ಸರ್ಕಾರಿ ವಾಣಿಜ್ಯ ಕಾಲೇಜು ಆರಂಭಿಸುವ ಬದಲಿಗೆ ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರ ಹೆಚ್ಚುವರಿಯಾಗಿ ಪ್ರತ್ಯೇಕ ತರಗತಿ ಮಂಜೂರು ಮಾಡಲಾಗುವುದು ಎಂದು ದೇಶಪಾಂಡೆ ಭರವಸೆ ನೀಡಿದರು.ನಿವೃತ್ತ ಕುಲಪತಿಗಳು, ಶಿಕ್ಷಣ ತಜ್ಞರ ಸೇವೆಯನ್ನು ಸರ್ಕಾರ ಬಳಸಿಕೊಳ್ಳಲಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಕೊರತೆ ಇರುವ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯನ್ನು ಹಂತ ಹಂತವಾಗಿ ನೇಮಕ ಮಾಡಿಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ಭರವಸೆ ನೀಡಿದರು.<br /> <br /> ಸಮೀಪದ ತೊಳಹುಣಿಸೆಯ ದಾವಣಗೆರೆ ವಿ.ವಿ. ಕ್ಯಾಂಪಸ್ನಲ್ಲಿ ಬುಧವಾರ ವಿ.ವಿ.ಯ ಹೊಸ ಕಟ್ಟಡಗಳನ್ನು ಉದ್ಘಾಟನೆ ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, `ಒಂದೇ ಬಾರಿಗೆ ಸಿಬ್ಬಂದಿ ನೇಮಕ ಮಾಡಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಜತೆ ಗುರುವಾರ ಬೆಂಗಳೂರಿನಲ್ಲಿ ಬಜೆಟ್ ಪೂರ್ವ ಚರ್ಚೆ ಇದ್ದು, ನೇಮಕಾತಿ ವಿಷಯ ಪ್ರಸ್ತಾಪಿಸಿ ಅನುಮತಿ ಪಡೆಯಲು ಪ್ರಯತ್ನಿಸುತ್ತೇನೆ' ಎಂದು ಹೇಳಿದರು.<br /> <br /> ವಿವಿಗಳಿಗೆ ಇಷ್ಟು ಕೋಟಿ, ಅಷ್ಟು ಕೋಟಿ ನೀಡಲಾಗುವುದು ಎಂದು ಭರವಸೆ ನೀಡುವುದಿಲ್ಲ. ಹಿಂದಿನ ಸರ್ಕಾರದಂತೆ ಆರ್ಥಿಕ ಶಿಸ್ತು ಮುರಿಯಲು ಮುಂದಾಗುವುದಿಲ್ಲ. ಆದರೆ, ಕ್ರಮೇಣ ಆರ್ಥಿಕ ನೆರವನ್ನು ನೀಡಲಾಗುವುದು ಎಂದು ಹೇಳಿದರು.<br /> <br /> ಕುವೆಂಪು ವಿಶ್ವವಿದ್ಯಾಲಯ ಮತ್ತು ದಾವಣಗೆರೆ ವಿಶ್ವವಿದ್ಯಾಲಯ ನಡುವೆ ಉಳಿದುಕೊಂಡಿರುವ ಕೆಲವು ಆಡಳಿತಾತ್ಮಕ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಎರಡೂ ವಿ.ವಿ.ಗಳ ಕುಲಪತಿಗಳನ್ನು ಕರೆಸಿ ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳಲಾಗುವುದು ಎಂದು ದೇಶಪಾಂಡೆ ತಿಳಿಸಿದರು.<br /> <br /> ಇತ್ತೀಚಿನ ದಿನಗಳಲ್ಲಿ ರಾಜ್ಯದ ಎಲ್ಲ ಕಡೆ ವಾಣಿಜ್ಯ ವಿಷಯದ ಕೋರ್ಸ್ಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ, ದಾವಣಗೆರೆಯಲ್ಲಿ ಸರ್ಕಾರಿ ವಾಣಿಜ್ಯ ಕಾಲೇಜು ಆರಂಭಿಸುವ ಬದಲಿಗೆ ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರ ಹೆಚ್ಚುವರಿಯಾಗಿ ಪ್ರತ್ಯೇಕ ತರಗತಿ ಮಂಜೂರು ಮಾಡಲಾಗುವುದು ಎಂದು ದೇಶಪಾಂಡೆ ಭರವಸೆ ನೀಡಿದರು.ನಿವೃತ್ತ ಕುಲಪತಿಗಳು, ಶಿಕ್ಷಣ ತಜ್ಞರ ಸೇವೆಯನ್ನು ಸರ್ಕಾರ ಬಳಸಿಕೊಳ್ಳಲಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>