<p><strong>ಹೊನ್ನಾಳಿ: </strong>ವಿವಿಧತೆಯಲ್ಲಿ ಏಕತೆ ಸಾಧಿಸಿದ ಭಾರತ ಇಡೀ ಜಗತ್ತಿಗೇ ಮಾದರಿಯಾಗಿ ಮುನ್ನಡೆಯುತ್ತಿರುವುದಕ್ಕೆ ನಾವೆಲ್ಲಾ ಹೆಮ್ಮೆಪಡಬೇಕು ಎಂದು ತಹಶೀಲ್ದಾರ್ ಎ.ಎಂ. ಶೈಲಜಾ ಪ್ರಿಯದರ್ಶಿನಿ ಹೇಳಿದರು. <br /> ಇಲ್ಲಿನ ತಾಲ್ಲೂಕು ಕ್ರೀಡಾಂಗಣದಲ್ಲಿ ಗುರುವಾರ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಅವರು ಧ್ವಜವಂದನೆ ಸ್ವೀಕರಿಸಿ ಮಾತನಾಡಿದರು. <br /> <br /> ಅಬಕಾರಿ ಸಚಿವ ಎಂ.ಪಿ. ರೇಣುಕಾಚಾರ್ಯ ಕಳುಹಿಸಿದ ಸಂದೇಶ ವನ್ನು ಬಿಇಒ ಕೆ.ಸಿ. ಮಲ್ಲಿಕಾರ್ಜುನ್ ವಾಚಿಸಿದರು.<br /> ತಾ.ಪಂ. ಅಧ್ಯಕ್ಷೆ ವಿಶಾಲಾಕ್ಷಿ ಆಲ್ಬರ್ಟ್ ಮಾತನಾಡಿ, ನಾಡಿನ ಏಕತೆ ಮತ್ತು ಸಮಗ್ರತೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆಯಿತ್ತರು.<br /> <br /> ಪ.ಪಂ. ಅಧ್ಯಕ್ಷ ಚಾಟಿ ಶೇಖರಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾರತ ಜಾತ್ಯತೀತ ರಾಷ್ಟ್ರವಾದರೂ ಕೂಡ ಇತ್ತೀಚಿನ ದಿನಗಳಲ್ಲಿ ಜಾತೀಯತೆಯ ಭೂತ ನಮ್ಮನ್ನೆಲ್ಲಾ ಆವರಿಸಿಕೊಂಡಿದೆ. ಜಾತೀಯತೆ ತೊಲಗಬೇಕಾದರೆ ರಾಜಕಾರಣಿಗಳು ಜಾತಿ ರಾಜಕಾರಣಕ್ಕೆ ಇತಿಶ್ರಿ ಹಾಡಬೇಕು ಎಂದರು. <br /> ಸಿಪಿಐ ಎಂ.ಎನ್. ರುದ್ರಪ್ಪ ಇತರರು ಮಾತನಾಡಿದರು. ತಾ.ಪಂ. ಸದಸ್ಯೆ ಪ್ರಭಾವತಿ ಜುಂಜಾನಾಯ್ಕ, ಪ.ಪಂ. ಸದಸ್ಯೆ ಮಂಜುಳಾ ಮಂಜಪ್ಪ, ತಾಲ್ಲೂಕುಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. <br /> <br /> ಮೊರಾರ್ಜಿ ದೇಸಾಯಿ ವಸತಿಶಾಲೆಯ ಮಕ್ಕಳು ಪ್ರಾರ್ಥಿಸಿದರು. ಕೆ.ಸಿ. ಮಲ್ಲಿಕಾರ್ಜುನ್ ಸ್ವಾಗತಿಸಿದರು. ಶಂಕರಪ್ಪ ಮತ್ತು ರವಿ ಗಾಳಿ ಕಾರ್ಯಕ್ರಮ ನಿರೂಪಿಸಿದರು. <br /> <strong>ಜಗಳೂರು ವರದಿ</strong><br /> ವಿಧಾನಸಭಾ ಕ್ಷೇತ್ರದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಪ್ರಸಕ್ತ ವರ್ಷ ನೂರು ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ಹಟ್ಟಿ ಚಿನ್ನದ ಗಣಿ ಅಧ್ಯಕ್ಷ ಹಾಗೂ ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು.<br /> <br /> ಪಟ್ಟಣದಲ್ಲಿ ಗುರುವಾರ ನಡೆದ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.<br /> ಭದ್ರಾ ಮೇಲ್ದಂಡೆ ಯೋಜನೆಯಡಿ ತಾಲ್ಲೂಕಿನ 18 ಸಾವಿರ ಎಕರೆಗೆ ನೀರು ಹರಿದುಬರಲಿದ್ದು, ಸಮಗ್ರ ನೀರಾವರಿಗೆ ಒತ್ತಾಯಿಸಲಾಗಿದೆ. ಈ ಮಧ್ಯೆ ಜ. 30ರಂದು `ಪಟ್ಟಣ ಬಂದ್~ಗೆ ಕರೆ ನೀಡಿರುವುದು ಸರಿಯಲ್ಲ. ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರು ಫೆಬ್ರುವರಿ ತಿಂಗಳಲ್ಲಿ ತಾಲ್ಲೂಕಿಗೆ ಭೇಟಿ ನೀಡುತ್ತಿದ್ದು, ಭದ್ರಾ ಮೇಲ್ದಂಡೆ ಯೋಜನೆ ಜಾರಿ ಬಗ್ಗೆ ಘೋಷಣೆಯನ್ನೂ ಮಾಡುವ ಭರವಸೆ ನೀಡಿದ್ದಾರೆ ಎಂದು ರಾಮಚಂದ್ರ ಸ್ಪಷ್ಟಪಡಿಸಿದರು.<br /> <br /> ಮೈಸೂರು ಎಲೆಕ್ಟ್ರಿಕಲ್ಸ್ ಇಂಡಸ್ಟ್ರೀಸ್ ನಿಗಮದ ಅಧ್ಯಕ್ಷ ಟಿ. ಗುರುಸಿದ್ದನಗೌಡ ಅವರು ಮಾತನಾಡಿದರು.<br /> ತಹಶೀಲ್ದಾರ್ ಎಚ್.ಪಿ. ನಾಗರಾಜ್ ಅವರು ರಾಜಕೀಯ ಭಾಷಣ ಮಾಡುತ್ತಾ, ತಾವು ಅಧಿಕಾರಿ ಎನ್ನುವುದನ್ನೇ ಮರೆತಿದ್ದಾರೆ ಎಂದು ಜಿ.ಪಂ. ಸದಸ್ಯ ಕೆ.ಪಿ. ಪಾಲಯ್ಯ ಆಕ್ಷೇಪ ವ್ಯಕ್ತಪಡಿಸಿದರು.<br /> <br /> ಜಿ.ಪಂ. ಸದಸ್ಯ ಎಚ್. ನಾಗರಾಜ್, ಪ.ಪಂ. ಅಧ್ಯಕ್ಷೆ ನಾಗರತ್ನಮ್ಮ, ತಾ.ಪಂ. ಅಧ್ಯಕ್ಷ ಶಾಂತವೀರಪ್ಪ, ಸದಸ್ಯರಾದ ಬಿ.ಆರ್. ಅಂಜಿನಪ್ಪ, ಶ್ರೀನಿವಾಸ್, ಎಪಿಎಂಸಿ ಅಧ್ಯಕ್ಷ ರೇವಣಸಿದ್ದಪ್ಪ, ಜೆಡಿಎಸ್ ಮುಖಂಡ ಕೆ.ಬಿ. ಕಲ್ಲೇರುದ್ರೇಶ್, ಬಿಜೆಪಿ ಅಧ್ಯಕ್ಷ ಎಸ್.ಕೆ. ಮಂಜುನಾಥ್ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ: </strong>ವಿವಿಧತೆಯಲ್ಲಿ ಏಕತೆ ಸಾಧಿಸಿದ ಭಾರತ ಇಡೀ ಜಗತ್ತಿಗೇ ಮಾದರಿಯಾಗಿ ಮುನ್ನಡೆಯುತ್ತಿರುವುದಕ್ಕೆ ನಾವೆಲ್ಲಾ ಹೆಮ್ಮೆಪಡಬೇಕು ಎಂದು ತಹಶೀಲ್ದಾರ್ ಎ.ಎಂ. ಶೈಲಜಾ ಪ್ರಿಯದರ್ಶಿನಿ ಹೇಳಿದರು. <br /> ಇಲ್ಲಿನ ತಾಲ್ಲೂಕು ಕ್ರೀಡಾಂಗಣದಲ್ಲಿ ಗುರುವಾರ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಅವರು ಧ್ವಜವಂದನೆ ಸ್ವೀಕರಿಸಿ ಮಾತನಾಡಿದರು. <br /> <br /> ಅಬಕಾರಿ ಸಚಿವ ಎಂ.ಪಿ. ರೇಣುಕಾಚಾರ್ಯ ಕಳುಹಿಸಿದ ಸಂದೇಶ ವನ್ನು ಬಿಇಒ ಕೆ.ಸಿ. ಮಲ್ಲಿಕಾರ್ಜುನ್ ವಾಚಿಸಿದರು.<br /> ತಾ.ಪಂ. ಅಧ್ಯಕ್ಷೆ ವಿಶಾಲಾಕ್ಷಿ ಆಲ್ಬರ್ಟ್ ಮಾತನಾಡಿ, ನಾಡಿನ ಏಕತೆ ಮತ್ತು ಸಮಗ್ರತೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆಯಿತ್ತರು.<br /> <br /> ಪ.ಪಂ. ಅಧ್ಯಕ್ಷ ಚಾಟಿ ಶೇಖರಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾರತ ಜಾತ್ಯತೀತ ರಾಷ್ಟ್ರವಾದರೂ ಕೂಡ ಇತ್ತೀಚಿನ ದಿನಗಳಲ್ಲಿ ಜಾತೀಯತೆಯ ಭೂತ ನಮ್ಮನ್ನೆಲ್ಲಾ ಆವರಿಸಿಕೊಂಡಿದೆ. ಜಾತೀಯತೆ ತೊಲಗಬೇಕಾದರೆ ರಾಜಕಾರಣಿಗಳು ಜಾತಿ ರಾಜಕಾರಣಕ್ಕೆ ಇತಿಶ್ರಿ ಹಾಡಬೇಕು ಎಂದರು. <br /> ಸಿಪಿಐ ಎಂ.ಎನ್. ರುದ್ರಪ್ಪ ಇತರರು ಮಾತನಾಡಿದರು. ತಾ.ಪಂ. ಸದಸ್ಯೆ ಪ್ರಭಾವತಿ ಜುಂಜಾನಾಯ್ಕ, ಪ.ಪಂ. ಸದಸ್ಯೆ ಮಂಜುಳಾ ಮಂಜಪ್ಪ, ತಾಲ್ಲೂಕುಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. <br /> <br /> ಮೊರಾರ್ಜಿ ದೇಸಾಯಿ ವಸತಿಶಾಲೆಯ ಮಕ್ಕಳು ಪ್ರಾರ್ಥಿಸಿದರು. ಕೆ.ಸಿ. ಮಲ್ಲಿಕಾರ್ಜುನ್ ಸ್ವಾಗತಿಸಿದರು. ಶಂಕರಪ್ಪ ಮತ್ತು ರವಿ ಗಾಳಿ ಕಾರ್ಯಕ್ರಮ ನಿರೂಪಿಸಿದರು. <br /> <strong>ಜಗಳೂರು ವರದಿ</strong><br /> ವಿಧಾನಸಭಾ ಕ್ಷೇತ್ರದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಪ್ರಸಕ್ತ ವರ್ಷ ನೂರು ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ಹಟ್ಟಿ ಚಿನ್ನದ ಗಣಿ ಅಧ್ಯಕ್ಷ ಹಾಗೂ ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು.<br /> <br /> ಪಟ್ಟಣದಲ್ಲಿ ಗುರುವಾರ ನಡೆದ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.<br /> ಭದ್ರಾ ಮೇಲ್ದಂಡೆ ಯೋಜನೆಯಡಿ ತಾಲ್ಲೂಕಿನ 18 ಸಾವಿರ ಎಕರೆಗೆ ನೀರು ಹರಿದುಬರಲಿದ್ದು, ಸಮಗ್ರ ನೀರಾವರಿಗೆ ಒತ್ತಾಯಿಸಲಾಗಿದೆ. ಈ ಮಧ್ಯೆ ಜ. 30ರಂದು `ಪಟ್ಟಣ ಬಂದ್~ಗೆ ಕರೆ ನೀಡಿರುವುದು ಸರಿಯಲ್ಲ. ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರು ಫೆಬ್ರುವರಿ ತಿಂಗಳಲ್ಲಿ ತಾಲ್ಲೂಕಿಗೆ ಭೇಟಿ ನೀಡುತ್ತಿದ್ದು, ಭದ್ರಾ ಮೇಲ್ದಂಡೆ ಯೋಜನೆ ಜಾರಿ ಬಗ್ಗೆ ಘೋಷಣೆಯನ್ನೂ ಮಾಡುವ ಭರವಸೆ ನೀಡಿದ್ದಾರೆ ಎಂದು ರಾಮಚಂದ್ರ ಸ್ಪಷ್ಟಪಡಿಸಿದರು.<br /> <br /> ಮೈಸೂರು ಎಲೆಕ್ಟ್ರಿಕಲ್ಸ್ ಇಂಡಸ್ಟ್ರೀಸ್ ನಿಗಮದ ಅಧ್ಯಕ್ಷ ಟಿ. ಗುರುಸಿದ್ದನಗೌಡ ಅವರು ಮಾತನಾಡಿದರು.<br /> ತಹಶೀಲ್ದಾರ್ ಎಚ್.ಪಿ. ನಾಗರಾಜ್ ಅವರು ರಾಜಕೀಯ ಭಾಷಣ ಮಾಡುತ್ತಾ, ತಾವು ಅಧಿಕಾರಿ ಎನ್ನುವುದನ್ನೇ ಮರೆತಿದ್ದಾರೆ ಎಂದು ಜಿ.ಪಂ. ಸದಸ್ಯ ಕೆ.ಪಿ. ಪಾಲಯ್ಯ ಆಕ್ಷೇಪ ವ್ಯಕ್ತಪಡಿಸಿದರು.<br /> <br /> ಜಿ.ಪಂ. ಸದಸ್ಯ ಎಚ್. ನಾಗರಾಜ್, ಪ.ಪಂ. ಅಧ್ಯಕ್ಷೆ ನಾಗರತ್ನಮ್ಮ, ತಾ.ಪಂ. ಅಧ್ಯಕ್ಷ ಶಾಂತವೀರಪ್ಪ, ಸದಸ್ಯರಾದ ಬಿ.ಆರ್. ಅಂಜಿನಪ್ಪ, ಶ್ರೀನಿವಾಸ್, ಎಪಿಎಂಸಿ ಅಧ್ಯಕ್ಷ ರೇವಣಸಿದ್ದಪ್ಪ, ಜೆಡಿಎಸ್ ಮುಖಂಡ ಕೆ.ಬಿ. ಕಲ್ಲೇರುದ್ರೇಶ್, ಬಿಜೆಪಿ ಅಧ್ಯಕ್ಷ ಎಸ್.ಕೆ. ಮಂಜುನಾಥ್ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>