<p><strong>ಬೆಂಗಳೂರು: </strong>ನಗರದ ಮಡಿವಾಳ ಮತ್ತು ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ನಡೆದ ಪ್ರತ್ಯೇಕ ಘಟನೆಗಳಲ್ಲಿ ದುಷ್ಕರ್ಮಿಗಳು ಮೂರು ಮಂದಿ ಮಹಿಳೆಯರ ಚಿನ್ನದ ಸರ ದೋಚಿ ಪರಾರಿಯಾಗಿದ್ದಾರೆ.<br /> <br /> ಜ್ಞಾನಭಾರತಿಯ ಅಂಬೇಡ್ಕರ್ ಕಾಲೇಜಿನ ಸಮೀಪ ನಡೆದು ಹೋಗುತ್ತಿದ್ದ ಶಶಿಕಲಾ ಎಂಬುವರನ್ನು ದುಷ್ಕರ್ಮಿಗಳು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿ ಬಂದು ಅವರ ಸರ ಕಿತ್ತುಕೊಂಡು ಪರಾರಿಯಾದ ಘಟನೆ ಹಾಡಹಗಲೇ ನಡೆದಿದೆ. ದುಷ್ಕರ್ಮಿಗಳು ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಈ ೃತ್ಯ ಎಸಗಿದ್ದಾರೆ. ಸರ 40 ಗ್ರಾಂ ತೂಕದ್ದು ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಇದೇ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಯಾಣನಗರದಲ್ಲಿ ಮಧ್ಯಾಹ್ನ ಹನ್ನೆರಡು ಗಂಟೆ ಸುಮಾರಿಗೆ ವನಜಾ ಎಂಬುವರ ಸರವನ್ನು ದೋಚಲಾಗಿದೆ. ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಸರ ಕಿತ್ತುಕೊಂಡು ಹೋಗಿದ್ದಾರೆ. ಸರ 90 ಗ್ರಾಂ ತೂಕದ್ದು ಎಂದು ಪೊಲೀಸರು ಹೇಳಿದ್ದಾರೆ.<br /> <br /> ಎರಡೂ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಜ್ಞಾನಭಾರತಿ ಪೊಲೀಸರು ಮಾಹಿತಿ ನೀಡಿದ್ದಾರೆ.<br /> <br /> <strong>ಮತ್ತೊಂದು ಪ್ರಕರಣ:</strong> ವೃದ್ಧೆಯ ಗಮನ ಬೇರೆಡೆ ಸೆಳೆದು 72 ಗ್ರಾಂ ತೂಕದ ಚಿನ್ನದ ಸರ ದೋಚಿರುವ ಘಟನೆ ಎಚ್ಎಸ್ಆರ್ ಲೇಔಟ್ನ ಏಳನೇ ಸೆಕ್ಟರ್ನಲ್ಲಿ ನಡೆದಿದೆ.ಎಚ್ಎಸ್ಆರ್ ಲೇಔಟ್ ನಿವಾಸಿ ಮೋಹನ ಸುಂದರಿ ಸರ ಕಳೆದುಕೊಂಡವರು.<br /> <br /> ಅವರು ಬೆಳಿಗ್ಗೆ ಎಂಟು ಗಂಟೆ ಸುಮಾರಿಗೆ ವಾಯುವಿಹಾರ ಮಾಡುತ್ತಿದ್ದ ವೇಳೆ ಇಬ್ಬರು ಅಪರಿಚಿತರು ಪೊಲೀಸರೆಂದು ಪರಿಚಯಿಸಿಕೊಂಡು `ಸರಗಳ್ಳರ ಹಾವಳಿ ಹೆಚ್ಚಾಗಿದೆ ಸರ ಬಿಚ್ಚಿಟ್ಟುಕೊಳ್ಳಿ~ ಎಂದಿದ್ದಾರೆ. ಅವರು ಸರ ಬಿಚ್ಚಿದಾಗ ಕಿಡಿಗೇಡಿಗಳು ಅದನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಡಿವಾಳ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.<br /> <br /> <strong>ಕಳವು: </strong>ಮನೆಯ ಬಾಗಿಲು ಮುರಿದು ಒಳ ನುಗ್ಗಿದ ದುಷ್ಕರ್ಮಿಗಳು ಚಿನ್ನಾಭರಣ, ನಗದು ಮತ್ತು ಲ್ಯಾಪ್ಟಾಪ್ ಕಳವು ಮಾಡಿರುವ ಘಟನೆ ಬಸವನಗುಡಿಯ ಚರ್ಚ್ ರಸ್ತೆಯಲ್ಲಿ ಮಂಗಳವಾರ ನಡೆದಿದೆ.ಮನೆಯ ಮಾಲೀಕ ಸುಹೇಲ್ ಸಮೀವುಲ್ಲಾ ಎಂಬುವರು ಈ ಸಂಬಂಧ ದೂರು ನೀಡಿದ್ದಾರೆ. ಆಸ್ಪತ್ರೆಗೆ ದಾಖಲಾಗಿದ್ದ ಸಂಬಂಧಿಕರನ್ನು ನೋಡಿಕೊಂಡು ಬರಲು ಅವರು ಆಸ್ಪತ್ರೆಗೆ ಹೋಗಿದ್ದಾಗ ದುಷ್ಕರ್ಮಿಗಳು ಬಾಗಿಲು ಒಡೆದು ಒಳ ನುಗ್ಗಿದ ಅಲ್ಮೇರಾದಲ್ಲಿದ್ದ ಆಭರಣ, 1,500 ರೂಪಾಯಿ ಹಣ ಮತ್ತು ಲ್ಯಾಪ್ಟಾಪ್ ಕಳವು ಮಾಡಿದ್ದಾರೆ. <br /> <br /> ಸುಹೇಲ್ ಅವರು ರಾತ್ರಿ ಮನೆಗೆ ವಾಪಸ್ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಆಭರಣಗಳ ಮೌಲ್ಯ ಸುಮಾರು 24 ಸಾವಿರ ರೂಪಾಯಿ ಎಂದು ಪೊಲೀಸರು ತಿಳಿಸಿದ್ದಾರೆ. ಬಸನವಗುಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.<br /> <br /> <strong>ಅಪಘಾತ- ಸಾವು: </strong>ಬೈಕ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಹೆಸರುಘಟ್ಟ ರಸ್ತೆಯ ಬೋನ್ಮಿಲ್ ಸಮೀಪ ಮಂಗಳವಾರ ರಾತ್ರಿ ನಡೆದಿದೆ.ಚಂದ್ರಪ್ಪ (52) ಮೃತಪಟ್ಟವರು. ತಳ್ಳು ಗಾಡಿಯಲ್ಲಿ ಚಹಾ ಮಾಡುತ್ತಿದ್ದ ಅವರು ಬೋನ್ಮಿಲ್ ಸಮೀಪವೇ ಬಾಡಿಗೆ ಮನೆಯಲ್ಲಿ ವಾಸವಿದ್ದರು. <br /> <br /> ರಾತ್ರಿ ವ್ಯಾಪಾರ ಮುಗಿಸಿ ಗಾಡಿ ತಳ್ಳಿಕೊಂಡು ಮನೆಗೆ ಹೋಗುತ್ತಿದ್ದ ವೇಳೆ ವೇಗವಾಗಿ ಬಂದ ಬೈಕ್ ಚಾಲಕ ಹಿಂದಿನಿಂದ ಅವರಿಗೆ ಡಿಕ್ಕಿ ಹೊಡೆದಿದ್ದಾನೆ. ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಬೈಕ್ ಸವಾರನನ್ನು ಬಂಧಿಸಿ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಪೀಣ್ಯ ಸಂಚಾರ ಠಾಣೆ ಪೊಲೀಸರು ದೂರುದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಗರದ ಮಡಿವಾಳ ಮತ್ತು ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ನಡೆದ ಪ್ರತ್ಯೇಕ ಘಟನೆಗಳಲ್ಲಿ ದುಷ್ಕರ್ಮಿಗಳು ಮೂರು ಮಂದಿ ಮಹಿಳೆಯರ ಚಿನ್ನದ ಸರ ದೋಚಿ ಪರಾರಿಯಾಗಿದ್ದಾರೆ.<br /> <br /> ಜ್ಞಾನಭಾರತಿಯ ಅಂಬೇಡ್ಕರ್ ಕಾಲೇಜಿನ ಸಮೀಪ ನಡೆದು ಹೋಗುತ್ತಿದ್ದ ಶಶಿಕಲಾ ಎಂಬುವರನ್ನು ದುಷ್ಕರ್ಮಿಗಳು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿ ಬಂದು ಅವರ ಸರ ಕಿತ್ತುಕೊಂಡು ಪರಾರಿಯಾದ ಘಟನೆ ಹಾಡಹಗಲೇ ನಡೆದಿದೆ. ದುಷ್ಕರ್ಮಿಗಳು ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಈ ೃತ್ಯ ಎಸಗಿದ್ದಾರೆ. ಸರ 40 ಗ್ರಾಂ ತೂಕದ್ದು ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಇದೇ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಯಾಣನಗರದಲ್ಲಿ ಮಧ್ಯಾಹ್ನ ಹನ್ನೆರಡು ಗಂಟೆ ಸುಮಾರಿಗೆ ವನಜಾ ಎಂಬುವರ ಸರವನ್ನು ದೋಚಲಾಗಿದೆ. ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಸರ ಕಿತ್ತುಕೊಂಡು ಹೋಗಿದ್ದಾರೆ. ಸರ 90 ಗ್ರಾಂ ತೂಕದ್ದು ಎಂದು ಪೊಲೀಸರು ಹೇಳಿದ್ದಾರೆ.<br /> <br /> ಎರಡೂ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಜ್ಞಾನಭಾರತಿ ಪೊಲೀಸರು ಮಾಹಿತಿ ನೀಡಿದ್ದಾರೆ.<br /> <br /> <strong>ಮತ್ತೊಂದು ಪ್ರಕರಣ:</strong> ವೃದ್ಧೆಯ ಗಮನ ಬೇರೆಡೆ ಸೆಳೆದು 72 ಗ್ರಾಂ ತೂಕದ ಚಿನ್ನದ ಸರ ದೋಚಿರುವ ಘಟನೆ ಎಚ್ಎಸ್ಆರ್ ಲೇಔಟ್ನ ಏಳನೇ ಸೆಕ್ಟರ್ನಲ್ಲಿ ನಡೆದಿದೆ.ಎಚ್ಎಸ್ಆರ್ ಲೇಔಟ್ ನಿವಾಸಿ ಮೋಹನ ಸುಂದರಿ ಸರ ಕಳೆದುಕೊಂಡವರು.<br /> <br /> ಅವರು ಬೆಳಿಗ್ಗೆ ಎಂಟು ಗಂಟೆ ಸುಮಾರಿಗೆ ವಾಯುವಿಹಾರ ಮಾಡುತ್ತಿದ್ದ ವೇಳೆ ಇಬ್ಬರು ಅಪರಿಚಿತರು ಪೊಲೀಸರೆಂದು ಪರಿಚಯಿಸಿಕೊಂಡು `ಸರಗಳ್ಳರ ಹಾವಳಿ ಹೆಚ್ಚಾಗಿದೆ ಸರ ಬಿಚ್ಚಿಟ್ಟುಕೊಳ್ಳಿ~ ಎಂದಿದ್ದಾರೆ. ಅವರು ಸರ ಬಿಚ್ಚಿದಾಗ ಕಿಡಿಗೇಡಿಗಳು ಅದನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಡಿವಾಳ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.<br /> <br /> <strong>ಕಳವು: </strong>ಮನೆಯ ಬಾಗಿಲು ಮುರಿದು ಒಳ ನುಗ್ಗಿದ ದುಷ್ಕರ್ಮಿಗಳು ಚಿನ್ನಾಭರಣ, ನಗದು ಮತ್ತು ಲ್ಯಾಪ್ಟಾಪ್ ಕಳವು ಮಾಡಿರುವ ಘಟನೆ ಬಸವನಗುಡಿಯ ಚರ್ಚ್ ರಸ್ತೆಯಲ್ಲಿ ಮಂಗಳವಾರ ನಡೆದಿದೆ.ಮನೆಯ ಮಾಲೀಕ ಸುಹೇಲ್ ಸಮೀವುಲ್ಲಾ ಎಂಬುವರು ಈ ಸಂಬಂಧ ದೂರು ನೀಡಿದ್ದಾರೆ. ಆಸ್ಪತ್ರೆಗೆ ದಾಖಲಾಗಿದ್ದ ಸಂಬಂಧಿಕರನ್ನು ನೋಡಿಕೊಂಡು ಬರಲು ಅವರು ಆಸ್ಪತ್ರೆಗೆ ಹೋಗಿದ್ದಾಗ ದುಷ್ಕರ್ಮಿಗಳು ಬಾಗಿಲು ಒಡೆದು ಒಳ ನುಗ್ಗಿದ ಅಲ್ಮೇರಾದಲ್ಲಿದ್ದ ಆಭರಣ, 1,500 ರೂಪಾಯಿ ಹಣ ಮತ್ತು ಲ್ಯಾಪ್ಟಾಪ್ ಕಳವು ಮಾಡಿದ್ದಾರೆ. <br /> <br /> ಸುಹೇಲ್ ಅವರು ರಾತ್ರಿ ಮನೆಗೆ ವಾಪಸ್ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಆಭರಣಗಳ ಮೌಲ್ಯ ಸುಮಾರು 24 ಸಾವಿರ ರೂಪಾಯಿ ಎಂದು ಪೊಲೀಸರು ತಿಳಿಸಿದ್ದಾರೆ. ಬಸನವಗುಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.<br /> <br /> <strong>ಅಪಘಾತ- ಸಾವು: </strong>ಬೈಕ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಹೆಸರುಘಟ್ಟ ರಸ್ತೆಯ ಬೋನ್ಮಿಲ್ ಸಮೀಪ ಮಂಗಳವಾರ ರಾತ್ರಿ ನಡೆದಿದೆ.ಚಂದ್ರಪ್ಪ (52) ಮೃತಪಟ್ಟವರು. ತಳ್ಳು ಗಾಡಿಯಲ್ಲಿ ಚಹಾ ಮಾಡುತ್ತಿದ್ದ ಅವರು ಬೋನ್ಮಿಲ್ ಸಮೀಪವೇ ಬಾಡಿಗೆ ಮನೆಯಲ್ಲಿ ವಾಸವಿದ್ದರು. <br /> <br /> ರಾತ್ರಿ ವ್ಯಾಪಾರ ಮುಗಿಸಿ ಗಾಡಿ ತಳ್ಳಿಕೊಂಡು ಮನೆಗೆ ಹೋಗುತ್ತಿದ್ದ ವೇಳೆ ವೇಗವಾಗಿ ಬಂದ ಬೈಕ್ ಚಾಲಕ ಹಿಂದಿನಿಂದ ಅವರಿಗೆ ಡಿಕ್ಕಿ ಹೊಡೆದಿದ್ದಾನೆ. ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಬೈಕ್ ಸವಾರನನ್ನು ಬಂಧಿಸಿ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಪೀಣ್ಯ ಸಂಚಾರ ಠಾಣೆ ಪೊಲೀಸರು ದೂರುದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>