<p><strong>ಸಂಡೂರು:</strong> ರೈತರ ಹಾಗೂ ಸಾಮಾನ್ಯ ಜನರ ಬದುಕು ದುಃಸ್ಥಿತಿಗೆ ಬರಲು ವಿಶ್ವ ಬಂಡವಾಳ ಹೂಡಿಕೆಯೇ ಕಾರಣ ಎಂದು ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜಶೇಖರ ಗೌಡ ಆರೋಪಿಸಿದರು.<br /> <br /> ವಿಶ್ವ ಬಂಡವಾಳ ಹೂಡಿಕೆ ಸಮಾವೇಶ ವಿರೋಧಿಸಿ ಮತ್ತು ಇ್ಲ್ಲಲಿನ ರೈತರನ್ನು ಅರಣ್ಯ ಇಲಾಖೆಯವರು ಒಕ್ಕಲೆಬ್ಬಿಸುತ್ತಿರುವುದನ್ನು ಖಂಡಿಸಿ ಗುರುವಾರ ರೈತ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.<br /> <br /> ಆರ್ಥಿಕ ಉದಾರೀಕರಣದ ನೀತಿಯಿಂದಾಗಿ ಬಂಡವಾಳ ಶಾಹಿಗಳು, ರಾಜಕಾರಣಿಗಳು ಉದ್ಧಾರರಾದರೇ ಹೊರತು ಜನರ ಜೀವನ ಮಟ್ಟದಲ್ಲಿ ಸುಧಾರಣೆ ಕಾಣಲಿಲ್ಲ. ಈಗ ರಾಜ್ಯ ಬಿಜೆಪಿ ಸರ್ಕಾರವು ವಿಶ್ವ ಬಂಡವಾಳ ಹೂಡಿಕೆ ಸಮಾವೇಶದ ಮೂಲಕ ಜನರಿಗೆ ಮೋಸ ಮಾಡುತ್ತಿದೆ ಎಂದರು.<br /> <br /> ಹಲವಾರು ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ಸಂಡೂರು, ಹೊಸಪೇಟೆ, ಕೂಡ್ಲಿಗಿ ತಾಲ್ಲೂಕುಗಳ ರೈತರ ಅರಣ್ಯ ಮತ್ತು ಕಂದಾಯ ಭೂಮಿಗಳನ್ನು ಅರಣ್ಯ ಇಲಾಖೆಯವರು ಒಕ್ಕಲೆಬ್ಬಿಸುತ್ತಿರುವುದನ್ನು ನಿಲ್ಲಿಸಬೇಕೆಂದು ಆಗ್ರಹಿಸಿದರು. <br /> <br /> ಬರಪೀಡಿತ ಪ್ರದೇಶವೆಂದು ಘೋಷಣೆಯಾಗಿರುವ ಜಿಲ್ಲೆಯ ರೈತರಿಗೆ ಯಾವುದೇ ಪರಿಹಾರ ಇದುವರೆಗೂ ಸಿಕ್ಕಿಲ್ಲ. ಕಾರಣ ರೈತರ ಎ್ಲ್ಲಲ ಸಾಲಗಳನ್ನು ಮನ್ನಾ ಮಾಡಬೇಕು, ಅನಾವೃಷ್ಟಿಯಿಂದ ಉಂಟಾಗಿರುವ ಬೆಳೆಹಾನಿಗೆ ಕೂಡಲೇ ಪರಿಹಾರ ನೀಡಬೇಕೆಂದು ಅವರು ಸರ್ಕಾರಕ್ಕೆ ಆಗ್ರಹಿಸಿದರು. <br /> <br /> ತಾಲ್ಲೂಕು ರೈತ ಸಂಘದ ಅಧ್ಯಕ್ಷ ವಿ.ಜೆ.ಶ್ರೀಪಾದ, ಪ್ರಧಾನ ಕಾರ್ಯದರ್ಶಿ ಧರ್ಮ ನಾಯ್ಕ, ಬಿ.ರಸೂಲ್ ಸಾಬ್, ಇಮಾಮ್ ಸಾಬ್, ಸಿ.ಉಷಾ, ಗೌರಮ್ಮ, ಟಿ.ಕೆಂಚಪ್ಪ ಹಾಗೂ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಡೂರು:</strong> ರೈತರ ಹಾಗೂ ಸಾಮಾನ್ಯ ಜನರ ಬದುಕು ದುಃಸ್ಥಿತಿಗೆ ಬರಲು ವಿಶ್ವ ಬಂಡವಾಳ ಹೂಡಿಕೆಯೇ ಕಾರಣ ಎಂದು ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜಶೇಖರ ಗೌಡ ಆರೋಪಿಸಿದರು.<br /> <br /> ವಿಶ್ವ ಬಂಡವಾಳ ಹೂಡಿಕೆ ಸಮಾವೇಶ ವಿರೋಧಿಸಿ ಮತ್ತು ಇ್ಲ್ಲಲಿನ ರೈತರನ್ನು ಅರಣ್ಯ ಇಲಾಖೆಯವರು ಒಕ್ಕಲೆಬ್ಬಿಸುತ್ತಿರುವುದನ್ನು ಖಂಡಿಸಿ ಗುರುವಾರ ರೈತ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.<br /> <br /> ಆರ್ಥಿಕ ಉದಾರೀಕರಣದ ನೀತಿಯಿಂದಾಗಿ ಬಂಡವಾಳ ಶಾಹಿಗಳು, ರಾಜಕಾರಣಿಗಳು ಉದ್ಧಾರರಾದರೇ ಹೊರತು ಜನರ ಜೀವನ ಮಟ್ಟದಲ್ಲಿ ಸುಧಾರಣೆ ಕಾಣಲಿಲ್ಲ. ಈಗ ರಾಜ್ಯ ಬಿಜೆಪಿ ಸರ್ಕಾರವು ವಿಶ್ವ ಬಂಡವಾಳ ಹೂಡಿಕೆ ಸಮಾವೇಶದ ಮೂಲಕ ಜನರಿಗೆ ಮೋಸ ಮಾಡುತ್ತಿದೆ ಎಂದರು.<br /> <br /> ಹಲವಾರು ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ಸಂಡೂರು, ಹೊಸಪೇಟೆ, ಕೂಡ್ಲಿಗಿ ತಾಲ್ಲೂಕುಗಳ ರೈತರ ಅರಣ್ಯ ಮತ್ತು ಕಂದಾಯ ಭೂಮಿಗಳನ್ನು ಅರಣ್ಯ ಇಲಾಖೆಯವರು ಒಕ್ಕಲೆಬ್ಬಿಸುತ್ತಿರುವುದನ್ನು ನಿಲ್ಲಿಸಬೇಕೆಂದು ಆಗ್ರಹಿಸಿದರು. <br /> <br /> ಬರಪೀಡಿತ ಪ್ರದೇಶವೆಂದು ಘೋಷಣೆಯಾಗಿರುವ ಜಿಲ್ಲೆಯ ರೈತರಿಗೆ ಯಾವುದೇ ಪರಿಹಾರ ಇದುವರೆಗೂ ಸಿಕ್ಕಿಲ್ಲ. ಕಾರಣ ರೈತರ ಎ್ಲ್ಲಲ ಸಾಲಗಳನ್ನು ಮನ್ನಾ ಮಾಡಬೇಕು, ಅನಾವೃಷ್ಟಿಯಿಂದ ಉಂಟಾಗಿರುವ ಬೆಳೆಹಾನಿಗೆ ಕೂಡಲೇ ಪರಿಹಾರ ನೀಡಬೇಕೆಂದು ಅವರು ಸರ್ಕಾರಕ್ಕೆ ಆಗ್ರಹಿಸಿದರು. <br /> <br /> ತಾಲ್ಲೂಕು ರೈತ ಸಂಘದ ಅಧ್ಯಕ್ಷ ವಿ.ಜೆ.ಶ್ರೀಪಾದ, ಪ್ರಧಾನ ಕಾರ್ಯದರ್ಶಿ ಧರ್ಮ ನಾಯ್ಕ, ಬಿ.ರಸೂಲ್ ಸಾಬ್, ಇಮಾಮ್ ಸಾಬ್, ಸಿ.ಉಷಾ, ಗೌರಮ್ಮ, ಟಿ.ಕೆಂಚಪ್ಪ ಹಾಗೂ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>