<p><strong>ಬೇಲೂರು:</strong> ದೇಶದಲ್ಲಿ ಭ್ರಷ್ಟಾಚಾರ ತಡೆಗಟ್ಟಲು ಲೋಕಪಾಲ ಮಸೂದೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ಮಂಗಳವಾರ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದವು.<br /> <br /> ವಿವೇಕಾನಂದ್ ಯೂತ್ ಮೂವ್ಮೆಂಟ್, ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಜಯಕರ್ನಾಟಕ ಸಂಘಟನೆಯ ನೇತೃತ್ವದಲ್ಲಿ ಚೆನ್ನಕೇಶವ ದೇವಾಲಯದ ಬಳಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಲೋಕಪಾಲ ಮಸೂದೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಘೋಷಣೆ ಕೂಗಿದರು.<br /> <br /> ದೇಶಾದ್ಯಂತ ಎಲ್ಲ ಕ್ಷೇತ್ರಗಳಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇದನ್ನು ತಡೆಗಟ್ಟಲು ಜನ್ ಲೋಕಪಾಲ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸ ಬೇಕೆಂದು ಹಲವಾರು ದಿನಗಳಿಂದ ಒತ್ತಾಯಿಸುತ್ತಿದ್ದರೂ, ಭ್ರಷ್ಟ ರಾಜಕಾರಣಿಗಳು ಮಸೂದೆ ಮಂಡನೆಯಾಗಲು ಬಿಡುತ್ತಿಲ್ಲ. ಇದರ ವಿರುದ್ಧ ದೇಶದ 130 ನಗರಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. <br /> <br /> ಹಾಸನ ಜಿಲ್ಲೆಯ ಏಳು ತಾಲ್ಲೂಕು ಕೇಂದ್ರಗಳಲ್ಲಿಯೂ ಪ್ರತಿಭಟನೆ ಮಾಡಲಾಗುತ್ತಿದೆ. ಇದರ ಜೊತೆಗೆ ಜನರ ಸಹಿ ಸಂಗ್ರಹಿಸಿ ಪ್ರಧಾನ ಮಂತ್ರಿಗಳಿಗೆ ಕಳುಹಿಸಲಾಗುವುದು ಎಂದು ವಿವೇಕಾನಂದ ಯೂತ್ ಮೂವ್ಮೆಂಟ್ನ ರಾಜೇಶ್ ಅವರು ತಿಳಿಸಿದರು.ಪ್ರತಿಭಟನೆಯಲ್ಲಿ ಸಿದ್ದರಾಮಪ್ಪ, ಅರುಣ್ಕುಮಾರ್, ಚಂದ್ರಶೇಖರ್, ಜಾಕಿರ್ ಹಾಗೂ ಇತರರು ಭಾಗವಹಿಸಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇಲೂರು:</strong> ದೇಶದಲ್ಲಿ ಭ್ರಷ್ಟಾಚಾರ ತಡೆಗಟ್ಟಲು ಲೋಕಪಾಲ ಮಸೂದೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ಮಂಗಳವಾರ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದವು.<br /> <br /> ವಿವೇಕಾನಂದ್ ಯೂತ್ ಮೂವ್ಮೆಂಟ್, ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಜಯಕರ್ನಾಟಕ ಸಂಘಟನೆಯ ನೇತೃತ್ವದಲ್ಲಿ ಚೆನ್ನಕೇಶವ ದೇವಾಲಯದ ಬಳಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಲೋಕಪಾಲ ಮಸೂದೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಘೋಷಣೆ ಕೂಗಿದರು.<br /> <br /> ದೇಶಾದ್ಯಂತ ಎಲ್ಲ ಕ್ಷೇತ್ರಗಳಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇದನ್ನು ತಡೆಗಟ್ಟಲು ಜನ್ ಲೋಕಪಾಲ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸ ಬೇಕೆಂದು ಹಲವಾರು ದಿನಗಳಿಂದ ಒತ್ತಾಯಿಸುತ್ತಿದ್ದರೂ, ಭ್ರಷ್ಟ ರಾಜಕಾರಣಿಗಳು ಮಸೂದೆ ಮಂಡನೆಯಾಗಲು ಬಿಡುತ್ತಿಲ್ಲ. ಇದರ ವಿರುದ್ಧ ದೇಶದ 130 ನಗರಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. <br /> <br /> ಹಾಸನ ಜಿಲ್ಲೆಯ ಏಳು ತಾಲ್ಲೂಕು ಕೇಂದ್ರಗಳಲ್ಲಿಯೂ ಪ್ರತಿಭಟನೆ ಮಾಡಲಾಗುತ್ತಿದೆ. ಇದರ ಜೊತೆಗೆ ಜನರ ಸಹಿ ಸಂಗ್ರಹಿಸಿ ಪ್ರಧಾನ ಮಂತ್ರಿಗಳಿಗೆ ಕಳುಹಿಸಲಾಗುವುದು ಎಂದು ವಿವೇಕಾನಂದ ಯೂತ್ ಮೂವ್ಮೆಂಟ್ನ ರಾಜೇಶ್ ಅವರು ತಿಳಿಸಿದರು.ಪ್ರತಿಭಟನೆಯಲ್ಲಿ ಸಿದ್ದರಾಮಪ್ಪ, ಅರುಣ್ಕುಮಾರ್, ಚಂದ್ರಶೇಖರ್, ಜಾಕಿರ್ ಹಾಗೂ ಇತರರು ಭಾಗವಹಿಸಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>