<p><strong>ತುಮಕೂರು: </strong>ತುಮಕೂರು ವಿಶ್ವವಿದ್ಯಾನಿಯವು ಲಾಂಛನ ಬದಲಾವಣೆ ಮಾಡಿರುವುದನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.<br /> <br /> ವಿ.ವಿ ಎದುರು ಧರಣಿ ನಡೆಸಿದ ಬಳಿಕ ಡಾ.ಶಿವಕುಮಾರ ಸ್ವಾಮೀಜಿ ವೃತ್ತದಲ್ಲಿ ಕುಲಪತಿ ಪ್ರತಿಕೃತಿ ದಹಿಸಿದರು. ನಂತರ ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆಯಲ್ಲಿ ಸಾಗಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಕುಲಪತಿ ಪ್ರತಿಕೃತಿ ದಹಿಸಲು ಮುಂದಾದಾಗ ಪೊಲೀಸರು ತಡೆದರು.<br /> <br /> ಪ್ರೊ.ಎಸ್.ಸಿ.ಶರ್ಮಾ ಕುಲಪತಿಯಾಗಿ ನೇಮಕ ಆದಾಗಿನಿಂದಲೂ ಒಂದಲ್ಲ ಒಂದು ಸಾಂಸ್ಕೃತಿಕ ದೌರ್ಜನ್ಯವನ್ನು ಜಿಲ್ಲೆಯ ಜನತೆ ಮೇಲೆ ಹೇರುತ್ತಾ ಬಂದಿದ್ದಾರೆ. ಜಿಲ್ಲೆಯ ಐತಿಹಾಸಿಕ ಸಿರಿವಂತಿಕೆ ಪ್ರತಿಬಿಂಬಿಸುತ್ತಿದ್ದ ಲಾಂಛನ ಬದಲಾವಣೆ ಮಾಡಿರುವುದು ಜಿಲ್ಲೆಯ ಜನತೆಗೆ ಮಾಡಿದ ದ್ರೋಹ ಎಂದು ಕಿಡಿಕಾರಿದರು. <br /> <br /> ಹೊಸ ಲಾಂಛನಕ್ಕೆ ಅವಕಾಶ ಕೊಡದೆ ಹಳೆ ಲಾಂಛನವನ್ನೇ ಮುಂದುವರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಆರ್.ಕೆ.ರಾಜು ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆ ನೇತೃತ್ವವನ್ನು ದಸಂಸ ಜಿಲ್ಲಾ ಸಂಚಾಲಕ ಎಂ.ಡಿ.ದೊಡ್ಡೇಗೌಡ, ವಿಭಾಗೀಯ ಸಂಚಾಲಕ ಗಾಂಧಿರಾಜು, ಮುಖಂಡರಾದ ಕೇಬಲ್ ರಘು, ಮರಳೂರು ಕೃಷ್ಣಮೂರ್ತಿ, ನಿಟ್ಟೂರು ರಂಗಸ್ವಾಮಿ ಇತರರು ಇದ್ದರು.<br /> <br /> ಖಂಡನೆ: ಲಾಂಛನವನ್ನು ದಿಢೀರ್ ಬದಲಾಯಿಸಿರುವುದು ಸರಿಯಲ್ಲ ಎಂದು ಚಿಂತನ ಬಳಗ ಆಕ್ಷೇಪ ವ್ಯಕ್ತಪಡಿಸಿದೆ. ವಾಸ್ತುತಜ್ಞರ ಮಾತಿಗೆ ಕುಲಪತಿ ಮಣಿದಿರುವಂತೆ ತೋರುತ್ತದೆ ಎಂದು ಬಳಗದ ಅಧ್ಯಕ್ಷ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ತುಮಕೂರು ವಿಶ್ವವಿದ್ಯಾನಿಯವು ಲಾಂಛನ ಬದಲಾವಣೆ ಮಾಡಿರುವುದನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.<br /> <br /> ವಿ.ವಿ ಎದುರು ಧರಣಿ ನಡೆಸಿದ ಬಳಿಕ ಡಾ.ಶಿವಕುಮಾರ ಸ್ವಾಮೀಜಿ ವೃತ್ತದಲ್ಲಿ ಕುಲಪತಿ ಪ್ರತಿಕೃತಿ ದಹಿಸಿದರು. ನಂತರ ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆಯಲ್ಲಿ ಸಾಗಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಕುಲಪತಿ ಪ್ರತಿಕೃತಿ ದಹಿಸಲು ಮುಂದಾದಾಗ ಪೊಲೀಸರು ತಡೆದರು.<br /> <br /> ಪ್ರೊ.ಎಸ್.ಸಿ.ಶರ್ಮಾ ಕುಲಪತಿಯಾಗಿ ನೇಮಕ ಆದಾಗಿನಿಂದಲೂ ಒಂದಲ್ಲ ಒಂದು ಸಾಂಸ್ಕೃತಿಕ ದೌರ್ಜನ್ಯವನ್ನು ಜಿಲ್ಲೆಯ ಜನತೆ ಮೇಲೆ ಹೇರುತ್ತಾ ಬಂದಿದ್ದಾರೆ. ಜಿಲ್ಲೆಯ ಐತಿಹಾಸಿಕ ಸಿರಿವಂತಿಕೆ ಪ್ರತಿಬಿಂಬಿಸುತ್ತಿದ್ದ ಲಾಂಛನ ಬದಲಾವಣೆ ಮಾಡಿರುವುದು ಜಿಲ್ಲೆಯ ಜನತೆಗೆ ಮಾಡಿದ ದ್ರೋಹ ಎಂದು ಕಿಡಿಕಾರಿದರು. <br /> <br /> ಹೊಸ ಲಾಂಛನಕ್ಕೆ ಅವಕಾಶ ಕೊಡದೆ ಹಳೆ ಲಾಂಛನವನ್ನೇ ಮುಂದುವರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಆರ್.ಕೆ.ರಾಜು ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆ ನೇತೃತ್ವವನ್ನು ದಸಂಸ ಜಿಲ್ಲಾ ಸಂಚಾಲಕ ಎಂ.ಡಿ.ದೊಡ್ಡೇಗೌಡ, ವಿಭಾಗೀಯ ಸಂಚಾಲಕ ಗಾಂಧಿರಾಜು, ಮುಖಂಡರಾದ ಕೇಬಲ್ ರಘು, ಮರಳೂರು ಕೃಷ್ಣಮೂರ್ತಿ, ನಿಟ್ಟೂರು ರಂಗಸ್ವಾಮಿ ಇತರರು ಇದ್ದರು.<br /> <br /> ಖಂಡನೆ: ಲಾಂಛನವನ್ನು ದಿಢೀರ್ ಬದಲಾಯಿಸಿರುವುದು ಸರಿಯಲ್ಲ ಎಂದು ಚಿಂತನ ಬಳಗ ಆಕ್ಷೇಪ ವ್ಯಕ್ತಪಡಿಸಿದೆ. ವಾಸ್ತುತಜ್ಞರ ಮಾತಿಗೆ ಕುಲಪತಿ ಮಣಿದಿರುವಂತೆ ತೋರುತ್ತದೆ ಎಂದು ಬಳಗದ ಅಧ್ಯಕ್ಷ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>