<p><strong>ಸುವರ್ಣ ಸೌಧ (ಬೆಳಗಾವಿ):</strong> ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಮಾಫಿಯಾಗಳು ಪ್ರಭಾವಶಾಲಿಯಾಗಿ ಬೆಳೆದಿದ್ದು ಇದನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ವಿಧಾನಪರಿಷತ್ತಿನಲ್ಲಿ ಆಗ್ರಹಿಸಿದ ವಿರೋಧ ಪಕ್ಷದ ನಾಯಕ ಡಿ.ವಿ. ಸದಾನಂದಗೌಡ, ಬೆಂಗಳೂರಿನ ಎರಡು ಕಾಲೇಜುಗಳಲ್ಲಿ ಬೆಳಕಿಗೆ ಬಂದ ಅಂಕಪಟ್ಟಿ ಹಗರಣಗಳನ್ನು ಲೋಕಾಯುಕ್ತಕ್ಕೆ ವಹಿಸಬೇಕು ಎಂದು ಒತ್ತಾಯಿಸಿದರು.<br /> <br /> ರಾಜೀವ ಗಾಂಧಿ ಆರೋಗ್ಯ ವಿವಿ ತಿದ್ದುಪಡಿ ಮಸೂದೆ ಕುರಿತು ಮಾತನಾಡಿದ ಅವರು, ಬೆಂಗಳೂರಿನ ಭೂ ಮಾಫಿಯಾದಂತೆ ವಿವಿಗಳಲ್ಲಿ ಅಂಕಪಟ್ಟಿ ಮಾಫಿಯಾ ಬೆಳೆದು ನಿಂತಿದೆ, ಆರೋಗ್ಯ ವಿವಿಗೆ ಸಂಬಂಧಿಸಿ ಬೆಂಗಳೂರಿನ ಎರಡು ಕಾಲೇಜುಗಳಲ್ಲಿ ಫೇಲಾದ ವಿದ್ಯಾರ್ಥಿನಿಯರನ್ನು ಪಾಸ್ ಮಾಡಿರುವುದು ಬೆಳಕಿಗೆ ಬಂದಿದೆ.</p>.<p>ಧಾರವಾಡದ ಕರ್ನಾಟಕ ವಿವಿಯಲ್ಲಿ ಹಣಕಾಸಿನ ಅವ್ಯವಹಾರ ನಡೆದಿರುವುದು ಲೆಕ್ಕ ಪರಿಶೋಧನಾ ಸಮಿತಿಯ ವರದಿಯಲ್ಲಿ ಬಹಿರಂಗವಾಗಿದೆ ಎಂದು ಹೇಳಿದರು. ಅಂಕಪಟ್ಟಿ ಹಗರಣಗಳಿಗೆ ಕುಲಪತಿಗಳು ಮತ್ತು ಕುಲಸಚಿವರನ್ನು ನೇರ ಹೊಣೆ ಮಾಡಬೇಕು, ಅವರನ್ನು ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುವರ್ಣ ಸೌಧ (ಬೆಳಗಾವಿ):</strong> ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಮಾಫಿಯಾಗಳು ಪ್ರಭಾವಶಾಲಿಯಾಗಿ ಬೆಳೆದಿದ್ದು ಇದನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ವಿಧಾನಪರಿಷತ್ತಿನಲ್ಲಿ ಆಗ್ರಹಿಸಿದ ವಿರೋಧ ಪಕ್ಷದ ನಾಯಕ ಡಿ.ವಿ. ಸದಾನಂದಗೌಡ, ಬೆಂಗಳೂರಿನ ಎರಡು ಕಾಲೇಜುಗಳಲ್ಲಿ ಬೆಳಕಿಗೆ ಬಂದ ಅಂಕಪಟ್ಟಿ ಹಗರಣಗಳನ್ನು ಲೋಕಾಯುಕ್ತಕ್ಕೆ ವಹಿಸಬೇಕು ಎಂದು ಒತ್ತಾಯಿಸಿದರು.<br /> <br /> ರಾಜೀವ ಗಾಂಧಿ ಆರೋಗ್ಯ ವಿವಿ ತಿದ್ದುಪಡಿ ಮಸೂದೆ ಕುರಿತು ಮಾತನಾಡಿದ ಅವರು, ಬೆಂಗಳೂರಿನ ಭೂ ಮಾಫಿಯಾದಂತೆ ವಿವಿಗಳಲ್ಲಿ ಅಂಕಪಟ್ಟಿ ಮಾಫಿಯಾ ಬೆಳೆದು ನಿಂತಿದೆ, ಆರೋಗ್ಯ ವಿವಿಗೆ ಸಂಬಂಧಿಸಿ ಬೆಂಗಳೂರಿನ ಎರಡು ಕಾಲೇಜುಗಳಲ್ಲಿ ಫೇಲಾದ ವಿದ್ಯಾರ್ಥಿನಿಯರನ್ನು ಪಾಸ್ ಮಾಡಿರುವುದು ಬೆಳಕಿಗೆ ಬಂದಿದೆ.</p>.<p>ಧಾರವಾಡದ ಕರ್ನಾಟಕ ವಿವಿಯಲ್ಲಿ ಹಣಕಾಸಿನ ಅವ್ಯವಹಾರ ನಡೆದಿರುವುದು ಲೆಕ್ಕ ಪರಿಶೋಧನಾ ಸಮಿತಿಯ ವರದಿಯಲ್ಲಿ ಬಹಿರಂಗವಾಗಿದೆ ಎಂದು ಹೇಳಿದರು. ಅಂಕಪಟ್ಟಿ ಹಗರಣಗಳಿಗೆ ಕುಲಪತಿಗಳು ಮತ್ತು ಕುಲಸಚಿವರನ್ನು ನೇರ ಹೊಣೆ ಮಾಡಬೇಕು, ಅವರನ್ನು ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>