<p>ಯಳಂದೂರು: `ವಿಶೇಷ ಅಗತ್ಯವುಳ್ಳ ಮಕ್ಕಳಿಗೂ ಎಲ್ಲರಂತೆ ಬದುಕನ್ನು ಕಟ್ಟಿಕೊಳ್ಳಲು ಪೋಷಕರು ಸಹಕಾರ ಹಾಗೂ ಸಮರ್ಥ ಆರೈಕೆ ಮಾಡಬೇಕು~ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಉಮಾವತಿ ಸಿದ್ಧರಾಜು ತಿಳಿಸಿದರು.<br /> <br /> ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದ ವಿಶೇಷ ಅಗತ್ಯವುಳ್ಳ ಮಕ್ಕಳ ವೈದ್ಯಕೀಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.<br /> <br /> ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ವಿಜಯಲಕ್ಷ್ಮಿನಂಜುಂಡ ಮಾತನಾಡಿ, ದೈಹಿಕ ಹಾಗೂ ಮಾನಸಿಕ ನ್ಯೂನತೆ ಇರುವ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಸರ್ಕಾರ ಅನೇಕ ಸವಲತ್ತು ಒದಗಿಸಿದೆ. ಇದನ್ನು ಬಳಸಿಕೊಳ್ಳುವಲ್ಲಿ ಪೋಷಕರು ಹೆಚ್ಚು ಗಮನ ಹರಿಸಬೇಕಾದ ಅನಿವಾರ್ಯತೆ ಇದೆ ಎಂದರು.<br /> <br /> ಶಿಕ್ಷಣಕ್ಕೆ ಬೇಕಾಗುವ ಎಲ್ಲಾ ಪರಿಕರ ನೀಡುವುದರ ಜೊತೆಗೆ ಉಚಿತ ವೈದ್ಯಕೀಯ ಸೌಲಭ್ಯ ಹಾಗೂ ಸರ್ಕಾರಿ ನೌಕರಿಯಲ್ಲಿ ಮೀಸಲಾತಿ ಸೌಲಭ್ಯವನ್ನು ನೀಡಿರುವುದರಿಂದ ಇದರ ಸದು ಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು.<br /> <br /> ತಾಲ್ಲೂಕಿನಲ್ಲಿ 194 ವಿದ್ಯಾರ್ಥಿಗಳನ್ನು ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿಗಳೆಂದು ಗುರುತಿಸಲಾಗಿದೆ. ಇದರಲ್ಲಿ 6 ರಿಂದ 14 ವರ್ಷ ವಯೋಮಿತಿಯ ಎಲ್ಲಾ ವಿದ್ಯಾರ್ಥಿಗಳಿದ್ದಾರೆ. ಈ ಶಿಬಿರದಲ್ಲಿ ಆಯ್ಕೆಯಾದ ನ್ಯೂನತೆಯುಳ್ಳ ಮಕ್ಕಳಿಗೆ ತಮಿಳುನಾಡಿನ ಆಲಿಮ್ಕೋ ಸಂಸ್ಥೆಯ ಮೂಲಕ ಪರಿಕರಗಳನ್ನು ವಿತರಿಸಲಾಗುವುದು ಎಂದು ಮಾಹಿತಿ ನೀಡಿದರು.<br /> <br /> ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಚಿನ್ನಮ್ಮಮರಯ್ಯ, ತಾಲ್ಲೂಕು ಅಂಗವಿಕಲರ ಸಂಘದ ಅಧ್ಯಕ್ಷ ಬಸವಣ್ಣ, ಎಸ್ಡಿಎಂಸಿ ಅಧ್ಯಕ್ಷೆ ರೂಪ, ಬಿಆರ್ಸಿ ರಾಜಪ್ಪ, ಶಿಕ್ಷಣ ಸಂಯೋಜಕ ವೀರಭದ್ರಸ್ವಾಮಿ, ಮುಖ್ಯ ಶಿಕ್ಷಕಿ ಎಂ.ಕೆ. ಮಂಜುಳಾ ತಾಲ್ಲೂಕಿನ ಬಿಆರ್ಪಿ ಹಾಗೂ ಸಿಆರ್ಪಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಳಂದೂರು: `ವಿಶೇಷ ಅಗತ್ಯವುಳ್ಳ ಮಕ್ಕಳಿಗೂ ಎಲ್ಲರಂತೆ ಬದುಕನ್ನು ಕಟ್ಟಿಕೊಳ್ಳಲು ಪೋಷಕರು ಸಹಕಾರ ಹಾಗೂ ಸಮರ್ಥ ಆರೈಕೆ ಮಾಡಬೇಕು~ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಉಮಾವತಿ ಸಿದ್ಧರಾಜು ತಿಳಿಸಿದರು.<br /> <br /> ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದ ವಿಶೇಷ ಅಗತ್ಯವುಳ್ಳ ಮಕ್ಕಳ ವೈದ್ಯಕೀಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.<br /> <br /> ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ವಿಜಯಲಕ್ಷ್ಮಿನಂಜುಂಡ ಮಾತನಾಡಿ, ದೈಹಿಕ ಹಾಗೂ ಮಾನಸಿಕ ನ್ಯೂನತೆ ಇರುವ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಸರ್ಕಾರ ಅನೇಕ ಸವಲತ್ತು ಒದಗಿಸಿದೆ. ಇದನ್ನು ಬಳಸಿಕೊಳ್ಳುವಲ್ಲಿ ಪೋಷಕರು ಹೆಚ್ಚು ಗಮನ ಹರಿಸಬೇಕಾದ ಅನಿವಾರ್ಯತೆ ಇದೆ ಎಂದರು.<br /> <br /> ಶಿಕ್ಷಣಕ್ಕೆ ಬೇಕಾಗುವ ಎಲ್ಲಾ ಪರಿಕರ ನೀಡುವುದರ ಜೊತೆಗೆ ಉಚಿತ ವೈದ್ಯಕೀಯ ಸೌಲಭ್ಯ ಹಾಗೂ ಸರ್ಕಾರಿ ನೌಕರಿಯಲ್ಲಿ ಮೀಸಲಾತಿ ಸೌಲಭ್ಯವನ್ನು ನೀಡಿರುವುದರಿಂದ ಇದರ ಸದು ಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು.<br /> <br /> ತಾಲ್ಲೂಕಿನಲ್ಲಿ 194 ವಿದ್ಯಾರ್ಥಿಗಳನ್ನು ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿಗಳೆಂದು ಗುರುತಿಸಲಾಗಿದೆ. ಇದರಲ್ಲಿ 6 ರಿಂದ 14 ವರ್ಷ ವಯೋಮಿತಿಯ ಎಲ್ಲಾ ವಿದ್ಯಾರ್ಥಿಗಳಿದ್ದಾರೆ. ಈ ಶಿಬಿರದಲ್ಲಿ ಆಯ್ಕೆಯಾದ ನ್ಯೂನತೆಯುಳ್ಳ ಮಕ್ಕಳಿಗೆ ತಮಿಳುನಾಡಿನ ಆಲಿಮ್ಕೋ ಸಂಸ್ಥೆಯ ಮೂಲಕ ಪರಿಕರಗಳನ್ನು ವಿತರಿಸಲಾಗುವುದು ಎಂದು ಮಾಹಿತಿ ನೀಡಿದರು.<br /> <br /> ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಚಿನ್ನಮ್ಮಮರಯ್ಯ, ತಾಲ್ಲೂಕು ಅಂಗವಿಕಲರ ಸಂಘದ ಅಧ್ಯಕ್ಷ ಬಸವಣ್ಣ, ಎಸ್ಡಿಎಂಸಿ ಅಧ್ಯಕ್ಷೆ ರೂಪ, ಬಿಆರ್ಸಿ ರಾಜಪ್ಪ, ಶಿಕ್ಷಣ ಸಂಯೋಜಕ ವೀರಭದ್ರಸ್ವಾಮಿ, ಮುಖ್ಯ ಶಿಕ್ಷಕಿ ಎಂ.ಕೆ. ಮಂಜುಳಾ ತಾಲ್ಲೂಕಿನ ಬಿಆರ್ಪಿ ಹಾಗೂ ಸಿಆರ್ಪಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>