<p><strong>ಮಂಗಳೂರು: </strong>‘ಮಂಗಳೂರು ವಿಶೇಷ ಆರ್ಥಿಕ ವಲಯ ಎರಡನೇ ಹಂತದ ವಿಸ್ತರಣೆಗೆ ನನ್ನ ಪ್ರಬಲ ವಿರೋಧವಿದೆ. ನಮ್ಮ ಪಕ್ಷವೂ ವಿರೋಧ ವ್ಯಕ್ತಪಡಿಸಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಡಿನೋಟಿಫೈ ಮಾಡುವ ಭರವಸೆಯನ್ನೂ ನೀಡಿದ್ದಾರೆ’ ಎಂದು ಸಂಸದ ನಳಿನ್ ಕುಮಾರ್ ಕಟೀಲು ಸ್ಪಷ್ಟಪಡಿಸಿದರು.</p>.<p>ನಗರದ ಪತ್ರಕರ್ತರ ಅಧ್ಯಯನ ಕೇಂದ್ರ ಗುರುವಾರ ಏರ್ಪಡಿಸಿದ್ದ ‘ಎಂಎಸ್ಇಝೆಡ್: ಜನಪ್ರತಿನಿಧಿಗಳೊಡನೆ ಸಂವಾದ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. </p>.<p>ಮೊದಲ ಹಂತದ ಭೂಸ್ವಾಧೀನ ಸಂದರ್ಭದಲ್ಲಿ ನೀಡಿದ ಭರವಸೆಗಳು ಎಂಎಸ್ಇಝೆಡ್ ಕಡೆಯಿಂದ ಈಡೇರಿಯೇ ಇಲ್ಲ. ಜತೆಗೆ ಮೊದಲ ಹಂತದಲ್ಲಿ ನಿರೀಕ್ಷಿಸಿದಷ್ಟು ಕಂಪೆನಿಗಳೂ ಅಲ್ಲಿಗೆ ಬಂದಿಲ್ಲ. ಈ ಬೃಹತ್ ಯೋಜನೆಯಿಂದಾಗಿ ಭೂಮಿ ಕಳೆದುಕೊಂಡು ಸಂತ್ರಸ್ತರಾದ ಕುಟುಂಬಗಳ ನಿರುದ್ಯೋಗಿಗಳಿಗೆ ಮೊದಲು ಭರವಸೆ ನೀಡಿದಂತೆ ಉದ್ಯೋಗವನ್ನೂ ನೀಡಲಾಗಿಲ್ಲ. ಹೀಗಾಗಿ ಎರಡನೇ ಹಂತದ ವಿಸ್ತರಣೆಯನ್ನು ನಾನು ಬಲವಾಗಿ ವಿರೋಧಿಸುವೆ ಎಂದರು.</p>.<p>ಎಂಎಸ್ಇಝೆಡ್ ಪ್ರದೇಶ ವ್ಯಾಪ್ತಿಗೆ ಸೇರಿದ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಅಭಯಚಂದ್ರ ಮಾತನಾಡಿ, ಹೊಸ ಉದ್ಯಮಗಳು ನೆಲೆಗೊಳ್ಳುವಾಗಿ ಭೂಸ್ವಾಧೀನ ಸಹಜ. ಆದರೆ, ಈಗಿನ ಎಲ್ಲ ಗೊಂದಲಗಳಿಗೆ ತೆರೆ ಎಳೆಯಲು ಜಿಲ್ಲಾಡಳಿತ ಸಭೆ ಕರೆದು ಚರ್ಚಿಸಿ ಕ್ರಮಕೈಗೊಳ್ಳುವುದು ಸೂಕ್ತ ಎಂದು ಸಲಹೆ ನೀಡಿದರು.</p>.<p>ಕುಡುಬಿ ಜನಾಂಗದ ಪ್ರತಿನಿಧಿಗಳು, ಜಿಲ್ಲಾ ಪಂಚಾಯಿತಿ ಬಜ್ಪೆ ಕ್ಷೇತ್ರ ಸದಸ್ಯ ರಿತೇಶ್ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಸದಸ್ಯ ಯೋಗೀಶ್ ಕೋಟ್ಯಾನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>‘ಮಂಗಳೂರು ವಿಶೇಷ ಆರ್ಥಿಕ ವಲಯ ಎರಡನೇ ಹಂತದ ವಿಸ್ತರಣೆಗೆ ನನ್ನ ಪ್ರಬಲ ವಿರೋಧವಿದೆ. ನಮ್ಮ ಪಕ್ಷವೂ ವಿರೋಧ ವ್ಯಕ್ತಪಡಿಸಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಡಿನೋಟಿಫೈ ಮಾಡುವ ಭರವಸೆಯನ್ನೂ ನೀಡಿದ್ದಾರೆ’ ಎಂದು ಸಂಸದ ನಳಿನ್ ಕುಮಾರ್ ಕಟೀಲು ಸ್ಪಷ್ಟಪಡಿಸಿದರು.</p>.<p>ನಗರದ ಪತ್ರಕರ್ತರ ಅಧ್ಯಯನ ಕೇಂದ್ರ ಗುರುವಾರ ಏರ್ಪಡಿಸಿದ್ದ ‘ಎಂಎಸ್ಇಝೆಡ್: ಜನಪ್ರತಿನಿಧಿಗಳೊಡನೆ ಸಂವಾದ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. </p>.<p>ಮೊದಲ ಹಂತದ ಭೂಸ್ವಾಧೀನ ಸಂದರ್ಭದಲ್ಲಿ ನೀಡಿದ ಭರವಸೆಗಳು ಎಂಎಸ್ಇಝೆಡ್ ಕಡೆಯಿಂದ ಈಡೇರಿಯೇ ಇಲ್ಲ. ಜತೆಗೆ ಮೊದಲ ಹಂತದಲ್ಲಿ ನಿರೀಕ್ಷಿಸಿದಷ್ಟು ಕಂಪೆನಿಗಳೂ ಅಲ್ಲಿಗೆ ಬಂದಿಲ್ಲ. ಈ ಬೃಹತ್ ಯೋಜನೆಯಿಂದಾಗಿ ಭೂಮಿ ಕಳೆದುಕೊಂಡು ಸಂತ್ರಸ್ತರಾದ ಕುಟುಂಬಗಳ ನಿರುದ್ಯೋಗಿಗಳಿಗೆ ಮೊದಲು ಭರವಸೆ ನೀಡಿದಂತೆ ಉದ್ಯೋಗವನ್ನೂ ನೀಡಲಾಗಿಲ್ಲ. ಹೀಗಾಗಿ ಎರಡನೇ ಹಂತದ ವಿಸ್ತರಣೆಯನ್ನು ನಾನು ಬಲವಾಗಿ ವಿರೋಧಿಸುವೆ ಎಂದರು.</p>.<p>ಎಂಎಸ್ಇಝೆಡ್ ಪ್ರದೇಶ ವ್ಯಾಪ್ತಿಗೆ ಸೇರಿದ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಅಭಯಚಂದ್ರ ಮಾತನಾಡಿ, ಹೊಸ ಉದ್ಯಮಗಳು ನೆಲೆಗೊಳ್ಳುವಾಗಿ ಭೂಸ್ವಾಧೀನ ಸಹಜ. ಆದರೆ, ಈಗಿನ ಎಲ್ಲ ಗೊಂದಲಗಳಿಗೆ ತೆರೆ ಎಳೆಯಲು ಜಿಲ್ಲಾಡಳಿತ ಸಭೆ ಕರೆದು ಚರ್ಚಿಸಿ ಕ್ರಮಕೈಗೊಳ್ಳುವುದು ಸೂಕ್ತ ಎಂದು ಸಲಹೆ ನೀಡಿದರು.</p>.<p>ಕುಡುಬಿ ಜನಾಂಗದ ಪ್ರತಿನಿಧಿಗಳು, ಜಿಲ್ಲಾ ಪಂಚಾಯಿತಿ ಬಜ್ಪೆ ಕ್ಷೇತ್ರ ಸದಸ್ಯ ರಿತೇಶ್ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಸದಸ್ಯ ಯೋಗೀಶ್ ಕೋಟ್ಯಾನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>