<p><strong>ಬೆಂಗಳೂರು: </strong>`ದಕ್ಷಿಣ ಬಯಲು ಸೀಮೆಯ ಆರು ಜಿಲ್ಲೆಗಳ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ `ಪಿನಾಕಿನಿ- ಪಾಲಾರ್ ನದಿ' ಕಣಿವೆ ನೀರಾವರಿ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರ ಇದೇ ಬುಧವಾರ (ಜೂನ್ 5) `ವಿಶೇಷ ನೀರಾವರಿ ಅಧಿವೇಶನ' ಕರೆಯಬೇಕು' ಎಂದು ಪಿನಾಕಿನಿ- ಪಾಲಾರ್ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಸಂಚಾಲಕ ಚೌಡಪ್ಪ ಒತ್ತಾಯಿಸಿದರು.<br /> <br /> ಸೋಮವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿನಾಕಿನಿ- ಪಾಲಾರ್ ನೀರಾವರಿ ಯೋಜನೆ ಜಾರಿಯಾದರೆ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ನೀರು ಒದಗಿಸಬಹುದು ಎಂದರು.<br /> <br /> ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಈ ಜಿಲ್ಲೆಗಳಲ್ಲಿ ಸಾವಿರ ಅಡಿ ಬೋರ್ವೆಲ್ ಕೊರೆದರೂ ನೀರು ಸಿಗುತ್ತಿಲ್ಲ. ಲಭ್ಯವಾಗುವ ನೀರು ಪ್ಲೋರೈಡ್ಯುಕ್ತವಾಗಿದ್ದು ಬಳಕೆಗೆ ಯೋಗ್ಯವಾಗಿಲ್ಲ. ಆದ್ದರಿಂದ ಈ ಭಾಗದ ನೀರಿನ ಸಮಸ್ಯೆ ಪರಿಹರಿಸಲು ಈ ಯೋಜನೆ ಜಾರಿಯ ಅಗತ್ಯವಿದೆ ಎಂದು ಹೇಳಿದರು.<br /> <br /> ಯೋಜನೆ ಜಾರಿಯಾದರೆ 334.578 ಟಿ.ಎಂ.ಸಿ. ನೀರು ಲಭ್ಯವಾಗಲಿದೆ. ಆರು ಜಿಲ್ಲೆಗಳ 7,824 ಗ್ರಾಮಗಳ 26,76,674 ಎಕರೆ ಕೃಷಿ ಭೂಮಿಗೆ ನೀರು ಒದಗಿಸಬಹುದು. ಬರದಿಂದ ನೀರಿಲ್ಲದೆ ಬರಿದಾಗಿರುವ ಆರು ಜಿಲ್ಲೆಗಳ 8,299 ಕೆರೆಗಳು ಮತ್ತು ಮರಳು ಗಣಿಗಾರಿಕೆಯಿಂದ ಬರಡಾಗಿರುವ ಈ ಭಾಗದ 18 ನದಿಗಳು ಪುನಶ್ಚೇನಗೊಳ್ಳಲಿವೆ ಎಂದರು.<br /> <br /> ಅಲ್ಲದೆ ಮಂಡ್ಯ, ಹಾಸನ ಜಿಲ್ಲೆಗಳಿಗೂ ನೀರು ಒದಗಿಸಬಹುದು. ಆದ್ದರಿಂದ `ಪಿನಾಕಿನಿ- ಪಾಲಾರ್ ನದಿ' ಕಣಿವೆ ನೀರಾವರಿ ಯೋಜನೆಯನ್ನು ಜಾರಿಗೊಳಿಸಲು ಪರಮಶಿವಯ್ಯನವರು ನೀಡಿರುವ ವರದಿಯ ಜಾರಿ ಕುರಿತು ಚರ್ಚಿಸಲು `ವಿಶೇಷ ನೀರಾವರಿ ಅಧಿವೇಶನ' ಕರೆಯಬೇಕು. 12ನೇ ಪಂಚವಾರ್ಷಿಕ ಯೋಜನೆಯಲ್ಲಿ ರಾಷ್ಟ್ರೀಯ ನೀರಾವರಿ ಯೋಜನೆಯನ್ನಾಗಿ ಜಾರಿಗೋಳಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಬೇಕು ಎಂದು ಮನವಿ ಮಾಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>`ದಕ್ಷಿಣ ಬಯಲು ಸೀಮೆಯ ಆರು ಜಿಲ್ಲೆಗಳ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ `ಪಿನಾಕಿನಿ- ಪಾಲಾರ್ ನದಿ' ಕಣಿವೆ ನೀರಾವರಿ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರ ಇದೇ ಬುಧವಾರ (ಜೂನ್ 5) `ವಿಶೇಷ ನೀರಾವರಿ ಅಧಿವೇಶನ' ಕರೆಯಬೇಕು' ಎಂದು ಪಿನಾಕಿನಿ- ಪಾಲಾರ್ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಸಂಚಾಲಕ ಚೌಡಪ್ಪ ಒತ್ತಾಯಿಸಿದರು.<br /> <br /> ಸೋಮವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿನಾಕಿನಿ- ಪಾಲಾರ್ ನೀರಾವರಿ ಯೋಜನೆ ಜಾರಿಯಾದರೆ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ನೀರು ಒದಗಿಸಬಹುದು ಎಂದರು.<br /> <br /> ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಈ ಜಿಲ್ಲೆಗಳಲ್ಲಿ ಸಾವಿರ ಅಡಿ ಬೋರ್ವೆಲ್ ಕೊರೆದರೂ ನೀರು ಸಿಗುತ್ತಿಲ್ಲ. ಲಭ್ಯವಾಗುವ ನೀರು ಪ್ಲೋರೈಡ್ಯುಕ್ತವಾಗಿದ್ದು ಬಳಕೆಗೆ ಯೋಗ್ಯವಾಗಿಲ್ಲ. ಆದ್ದರಿಂದ ಈ ಭಾಗದ ನೀರಿನ ಸಮಸ್ಯೆ ಪರಿಹರಿಸಲು ಈ ಯೋಜನೆ ಜಾರಿಯ ಅಗತ್ಯವಿದೆ ಎಂದು ಹೇಳಿದರು.<br /> <br /> ಯೋಜನೆ ಜಾರಿಯಾದರೆ 334.578 ಟಿ.ಎಂ.ಸಿ. ನೀರು ಲಭ್ಯವಾಗಲಿದೆ. ಆರು ಜಿಲ್ಲೆಗಳ 7,824 ಗ್ರಾಮಗಳ 26,76,674 ಎಕರೆ ಕೃಷಿ ಭೂಮಿಗೆ ನೀರು ಒದಗಿಸಬಹುದು. ಬರದಿಂದ ನೀರಿಲ್ಲದೆ ಬರಿದಾಗಿರುವ ಆರು ಜಿಲ್ಲೆಗಳ 8,299 ಕೆರೆಗಳು ಮತ್ತು ಮರಳು ಗಣಿಗಾರಿಕೆಯಿಂದ ಬರಡಾಗಿರುವ ಈ ಭಾಗದ 18 ನದಿಗಳು ಪುನಶ್ಚೇನಗೊಳ್ಳಲಿವೆ ಎಂದರು.<br /> <br /> ಅಲ್ಲದೆ ಮಂಡ್ಯ, ಹಾಸನ ಜಿಲ್ಲೆಗಳಿಗೂ ನೀರು ಒದಗಿಸಬಹುದು. ಆದ್ದರಿಂದ `ಪಿನಾಕಿನಿ- ಪಾಲಾರ್ ನದಿ' ಕಣಿವೆ ನೀರಾವರಿ ಯೋಜನೆಯನ್ನು ಜಾರಿಗೊಳಿಸಲು ಪರಮಶಿವಯ್ಯನವರು ನೀಡಿರುವ ವರದಿಯ ಜಾರಿ ಕುರಿತು ಚರ್ಚಿಸಲು `ವಿಶೇಷ ನೀರಾವರಿ ಅಧಿವೇಶನ' ಕರೆಯಬೇಕು. 12ನೇ ಪಂಚವಾರ್ಷಿಕ ಯೋಜನೆಯಲ್ಲಿ ರಾಷ್ಟ್ರೀಯ ನೀರಾವರಿ ಯೋಜನೆಯನ್ನಾಗಿ ಜಾರಿಗೋಳಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಬೇಕು ಎಂದು ಮನವಿ ಮಾಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>