<p><strong>ಕನಕಪುರ: </strong>ಸಮಾಜಕ್ಕೆ ಅಡಿಗಲ್ಲು ಇಟ್ಟು, ತನ್ನದೆ ಆದ ಸ್ಥಾನಮಾನ ನೀಡಿರುವ ವಿಶ್ವಕರ್ಮ ಸಮಾಜ ಬಹಳ ಪವಿತ್ರವಾದುದು. ಸಮುದಾಯದ ಪ್ರತಿಯೊಬ್ಬರು ಆ ಧರ್ಮವನ್ನು ಉಳಿಸಿ ಬೆಳೆಸುವ ಕೆಲಸ ಮಾಡಬೇಕು ಎಂದು ಶಾಸಕ ಡಿ.ಕೆ.ಶಿವಕುಮಾರ್ ಸಲಹೆ ನೀಡಿದರು.<br /> <br /> ಪಟ್ಟಣದಲ್ಲಿ ತಾಲ್ಲೂಕು ವಿಶ್ವಕರ್ಮ ಮಹಾ ಮಂಡಲದವತಿಯಿಂದ ಆಯೋಜಿಸಿದ್ದ ಪ್ರಥಮ ವಾರ್ಷಿಕೋತ್ಸವ ಮತ್ತು ವಿಶ್ವಕರ್ಮ ಜನಜಾಗೃತಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ವಿಶ್ವಕರ್ಮ ಸಂಘಟನೆ ಎರಡು ಭಾಗಗಳಾಗಿವೆ. ಇದರಿಂದ ಆ ಜನಾಂಗವು ಅಭಿವೃದ್ದಿ ಹೊಂದಲು ಸಾಧ್ಯವಾಗುತ್ತಿಲ್ಲ. ಜನಾಂಗದ ಗುರುಗಳು ಎರಡು ಸಂಘಟನೆಗಳನ್ನು ಒಗ್ಗೂಡಿಸಲು ಪ್ರಯತ್ನಿಸಬೇಕೆಂದು ಸಲಹೆ ನೀಡಿದರು. <br /> <br /> ವಿಶ್ವಕರ್ಮ ಮಹಾ ಮಂಡಲದ ರಾಜ್ಯ ಘಟಕದ ಅಧ್ಯಕ್ಷ ಎಲ್.ನಾಗರಾಜಾಚಾರ್ ಮಾತನಾಡಿ ವಿಶ್ವಕರ್ಮ ಜನಾಂಗವು ಹಿಂದೆ ಉಳಿದಿದೆ. ನಮ್ಮ ಸಮಾಜವನ್ನು ಅಭಿವೃದ್ದಿ ಪಡಿಸುವುದರ ಜೊತೆಗೆ ಉನ್ನತ ವ್ಯಾಸಂಗ ಮಾಡುವ ಬಡ ವಿದ್ಯಾರ್ಥಿಗಳಿಗೆ ಪ್ರತಿವರ್ಷ ಸಹಾಯ ಧನ ನೀಡಿ ಪ್ರೋತ್ಸಾಹಿಸಲಾಗುತ್ತಿದೆ ಎಂದರು.<br /> `ನಾವು ರಾಜಕೀಯ ಪ್ರಾತಿನಿಧ್ಯದಿಂದ ವಂಚಿತರಾಗಿದ್ದೆೀವೆ. <br /> <br /> ಕಸುಬುಗಳಲ್ಲೆ ನಿರತರಾಗಿರುವ ವಿಶ್ವಕರ್ಮ ಜನಾಂಗದ ಕುಂದು ಕೊರತೆಯನ್ನು ನಿವಾರಿಸಲು ಸರ್ಕಾರದ ಗಮನ ಸೆಳೆಯಲು ಗ್ರಾಮ ಪಂಚಾಯಿತಿ ಜಿಲ್ಲಾ ಪಂಚಾಯಿತಿಗಳ ಮುಖಾಂತರ ಕಾನೂನಿನ ಚೌಕಟ್ಟಿನಲ್ಲಿ ಸಿಗಬೇಕಾದ ಮೂಲ ಭೂತ ಸೌಲಭ್ಯಗಳನ್ನು ಪಡೆಯಲು ತಾಲ್ಲೂಕು ಮಟ್ಟದಲ್ಲಿ ಜನಜಾಗೃತಿ ಸಮಾವೇಶ ನಡೆಸಲಾಗುತ್ತಿದೆ~ ಎಂದು ವಿವರಿಸಿದರು. <br /> <br /> ವಿಶ್ವಕರ್ಮ ಜಗದ್ಗುರು ಸುಜ್ಞಾನ ಪ್ರಭು ಪೀಠದ ಗುರುಶಿವಾ ಸುಜ್ಞಾನ ಮೂರ್ತಿ ಮಹಾಸ್ವಾಮಿ ಆಶೀರ್ವಚನ ನೀಡಿದರು. ಹುಲಿಯೂರು ದುರ್ಗ ಕಾಳಿಕಾಂಬ ದೇವಾಲಯದ ಪೀಠಾಧ್ಯಕ್ಷ ಕರುಣಾಕರ ಮಹಾಸ್ವಾಮಿ, ಚಿಕ್ಕಲೂರು ಕ್ಷೇತ್ರದ ಸಿದ್ದಪ್ಪಾಜಿ ಮಠದ ಸಿದ್ದನಾಗಲಿಂಗ ಮಹಾಸ್ವಾಮೀಜಿ, ಮರಳೇಗವಿ ಮಠದ ಶಿವರುದ್ರ ಮಹಾಸ್ವಾಮೀಜಿ ಆಶೀರ್ವಚನ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ: </strong>ಸಮಾಜಕ್ಕೆ ಅಡಿಗಲ್ಲು ಇಟ್ಟು, ತನ್ನದೆ ಆದ ಸ್ಥಾನಮಾನ ನೀಡಿರುವ ವಿಶ್ವಕರ್ಮ ಸಮಾಜ ಬಹಳ ಪವಿತ್ರವಾದುದು. ಸಮುದಾಯದ ಪ್ರತಿಯೊಬ್ಬರು ಆ ಧರ್ಮವನ್ನು ಉಳಿಸಿ ಬೆಳೆಸುವ ಕೆಲಸ ಮಾಡಬೇಕು ಎಂದು ಶಾಸಕ ಡಿ.ಕೆ.ಶಿವಕುಮಾರ್ ಸಲಹೆ ನೀಡಿದರು.<br /> <br /> ಪಟ್ಟಣದಲ್ಲಿ ತಾಲ್ಲೂಕು ವಿಶ್ವಕರ್ಮ ಮಹಾ ಮಂಡಲದವತಿಯಿಂದ ಆಯೋಜಿಸಿದ್ದ ಪ್ರಥಮ ವಾರ್ಷಿಕೋತ್ಸವ ಮತ್ತು ವಿಶ್ವಕರ್ಮ ಜನಜಾಗೃತಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ವಿಶ್ವಕರ್ಮ ಸಂಘಟನೆ ಎರಡು ಭಾಗಗಳಾಗಿವೆ. ಇದರಿಂದ ಆ ಜನಾಂಗವು ಅಭಿವೃದ್ದಿ ಹೊಂದಲು ಸಾಧ್ಯವಾಗುತ್ತಿಲ್ಲ. ಜನಾಂಗದ ಗುರುಗಳು ಎರಡು ಸಂಘಟನೆಗಳನ್ನು ಒಗ್ಗೂಡಿಸಲು ಪ್ರಯತ್ನಿಸಬೇಕೆಂದು ಸಲಹೆ ನೀಡಿದರು. <br /> <br /> ವಿಶ್ವಕರ್ಮ ಮಹಾ ಮಂಡಲದ ರಾಜ್ಯ ಘಟಕದ ಅಧ್ಯಕ್ಷ ಎಲ್.ನಾಗರಾಜಾಚಾರ್ ಮಾತನಾಡಿ ವಿಶ್ವಕರ್ಮ ಜನಾಂಗವು ಹಿಂದೆ ಉಳಿದಿದೆ. ನಮ್ಮ ಸಮಾಜವನ್ನು ಅಭಿವೃದ್ದಿ ಪಡಿಸುವುದರ ಜೊತೆಗೆ ಉನ್ನತ ವ್ಯಾಸಂಗ ಮಾಡುವ ಬಡ ವಿದ್ಯಾರ್ಥಿಗಳಿಗೆ ಪ್ರತಿವರ್ಷ ಸಹಾಯ ಧನ ನೀಡಿ ಪ್ರೋತ್ಸಾಹಿಸಲಾಗುತ್ತಿದೆ ಎಂದರು.<br /> `ನಾವು ರಾಜಕೀಯ ಪ್ರಾತಿನಿಧ್ಯದಿಂದ ವಂಚಿತರಾಗಿದ್ದೆೀವೆ. <br /> <br /> ಕಸುಬುಗಳಲ್ಲೆ ನಿರತರಾಗಿರುವ ವಿಶ್ವಕರ್ಮ ಜನಾಂಗದ ಕುಂದು ಕೊರತೆಯನ್ನು ನಿವಾರಿಸಲು ಸರ್ಕಾರದ ಗಮನ ಸೆಳೆಯಲು ಗ್ರಾಮ ಪಂಚಾಯಿತಿ ಜಿಲ್ಲಾ ಪಂಚಾಯಿತಿಗಳ ಮುಖಾಂತರ ಕಾನೂನಿನ ಚೌಕಟ್ಟಿನಲ್ಲಿ ಸಿಗಬೇಕಾದ ಮೂಲ ಭೂತ ಸೌಲಭ್ಯಗಳನ್ನು ಪಡೆಯಲು ತಾಲ್ಲೂಕು ಮಟ್ಟದಲ್ಲಿ ಜನಜಾಗೃತಿ ಸಮಾವೇಶ ನಡೆಸಲಾಗುತ್ತಿದೆ~ ಎಂದು ವಿವರಿಸಿದರು. <br /> <br /> ವಿಶ್ವಕರ್ಮ ಜಗದ್ಗುರು ಸುಜ್ಞಾನ ಪ್ರಭು ಪೀಠದ ಗುರುಶಿವಾ ಸುಜ್ಞಾನ ಮೂರ್ತಿ ಮಹಾಸ್ವಾಮಿ ಆಶೀರ್ವಚನ ನೀಡಿದರು. ಹುಲಿಯೂರು ದುರ್ಗ ಕಾಳಿಕಾಂಬ ದೇವಾಲಯದ ಪೀಠಾಧ್ಯಕ್ಷ ಕರುಣಾಕರ ಮಹಾಸ್ವಾಮಿ, ಚಿಕ್ಕಲೂರು ಕ್ಷೇತ್ರದ ಸಿದ್ದಪ್ಪಾಜಿ ಮಠದ ಸಿದ್ದನಾಗಲಿಂಗ ಮಹಾಸ್ವಾಮೀಜಿ, ಮರಳೇಗವಿ ಮಠದ ಶಿವರುದ್ರ ಮಹಾಸ್ವಾಮೀಜಿ ಆಶೀರ್ವಚನ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>