<p><strong>ಬೇಲೂರು: </strong>`ರಾಜ್ಯದ ಪ್ರಮುಖ ಪ್ರವಾಸಿ ಕೇಂದ್ರಗಳಾಗಿರುವ ಬೇಲೂರು-ಹಳೇಬೀಡು-ಶ್ರವಣಬೆಳಗೊಳಗಳನ್ನು ವಿಶ್ವ ಪರಂಪರೆ ಪಟ್ಟಿಗೆ ಸೇರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಗತ್ಯ ಕ್ರಮ ಕೈಗೊಳ್ಳಬೇಕು~ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ರೇವಣ್ಣ ಹೇಳಿದರು.<br /> <br /> ಇಲ್ಲಿನ ಪುರಸಭೆ ವತಿಯಿಂದ ಸೋಮವಾರ ಏರ್ಪಡಿಸಿದ್ದ ಸುಮಾರು 2 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಬೇಲೂರು, ಹಳೇಬೀಡು ಮತ್ತು ಶ್ರವಣಬೆಳಗೊಳಗಳನ್ನು ವಿಶ್ವ ಪರಂಪರೆ ಪಟ್ಟಿಗೆ ಸೇರ್ಪಡೆ ಮಾಡುವ ಸಂಬಂಧ ತಾವು ಸಚಿವರಾಗಿದ್ದ ಅವಧಿಯಲ್ಲಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. <br /> <br /> ಆ ನಂತರ ಬಂದವರು ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ವಿಶ್ವ ಪರಂಪರೆ ಪಟ್ಟಿಗೆ ಸೇರಿಸಲು ದೇವೇಗೌಡರ ಮೂಲಕ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು~ ಎಂದರು.<br /> <br /> ಶಾಸಕ ವೈ.ಎನ್. ರುದ್ರೇಶ್ಗೌಡ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಎಚ್.ಕೆ.ಕುಮಾರಸ್ವಾಮಿ, ಪಟೇಲ್ ಶಿವರಾಂ, ಜಿ.ಪಂ. ಅಧ್ಯಕ್ಷ ಬಿ.ಡಿ.ಚಂದ್ರೇಗೌಡ, ಮಾಜಿ ಸಂಸದ ಎಚ್.ಕೆ.ಜವರೇಗೌಡ, ಪುರಸಭಾಧ್ಯಕ್ಷ ಎಚ್.ಎಂ.ದಯಾನಂದ್, ತಾ.ಪಂ. ಅಧ್ಯಕ್ಷೆ ಕಮಲ ಚನ್ನಪ್ಪ, ಜಿ.ಪಂ. ಸದಸ್ಯರಾದ ಎಂ.ವಿ.ಹೇಮಾವತಿ, ಜಿ.ಟಿ.ಇಂದಿರಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇಲೂರು: </strong>`ರಾಜ್ಯದ ಪ್ರಮುಖ ಪ್ರವಾಸಿ ಕೇಂದ್ರಗಳಾಗಿರುವ ಬೇಲೂರು-ಹಳೇಬೀಡು-ಶ್ರವಣಬೆಳಗೊಳಗಳನ್ನು ವಿಶ್ವ ಪರಂಪರೆ ಪಟ್ಟಿಗೆ ಸೇರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಗತ್ಯ ಕ್ರಮ ಕೈಗೊಳ್ಳಬೇಕು~ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ರೇವಣ್ಣ ಹೇಳಿದರು.<br /> <br /> ಇಲ್ಲಿನ ಪುರಸಭೆ ವತಿಯಿಂದ ಸೋಮವಾರ ಏರ್ಪಡಿಸಿದ್ದ ಸುಮಾರು 2 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಬೇಲೂರು, ಹಳೇಬೀಡು ಮತ್ತು ಶ್ರವಣಬೆಳಗೊಳಗಳನ್ನು ವಿಶ್ವ ಪರಂಪರೆ ಪಟ್ಟಿಗೆ ಸೇರ್ಪಡೆ ಮಾಡುವ ಸಂಬಂಧ ತಾವು ಸಚಿವರಾಗಿದ್ದ ಅವಧಿಯಲ್ಲಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. <br /> <br /> ಆ ನಂತರ ಬಂದವರು ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ವಿಶ್ವ ಪರಂಪರೆ ಪಟ್ಟಿಗೆ ಸೇರಿಸಲು ದೇವೇಗೌಡರ ಮೂಲಕ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು~ ಎಂದರು.<br /> <br /> ಶಾಸಕ ವೈ.ಎನ್. ರುದ್ರೇಶ್ಗೌಡ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಎಚ್.ಕೆ.ಕುಮಾರಸ್ವಾಮಿ, ಪಟೇಲ್ ಶಿವರಾಂ, ಜಿ.ಪಂ. ಅಧ್ಯಕ್ಷ ಬಿ.ಡಿ.ಚಂದ್ರೇಗೌಡ, ಮಾಜಿ ಸಂಸದ ಎಚ್.ಕೆ.ಜವರೇಗೌಡ, ಪುರಸಭಾಧ್ಯಕ್ಷ ಎಚ್.ಎಂ.ದಯಾನಂದ್, ತಾ.ಪಂ. ಅಧ್ಯಕ್ಷೆ ಕಮಲ ಚನ್ನಪ್ಪ, ಜಿ.ಪಂ. ಸದಸ್ಯರಾದ ಎಂ.ವಿ.ಹೇಮಾವತಿ, ಜಿ.ಟಿ.ಇಂದಿರಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>