<p><strong>ವಾಷಿಂಗ್ಟನ್ (ಪಿಟಿಐ):</strong> ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಗಳನ್ನು ದೊಡ್ಡ ಪ್ರಮಾಣದಲ್ಲಿ ವಿಸ್ತರಿಸಲು ಪ್ರವರ್ಧಮಾನಕ್ಕೆ ಬರುತ್ತಿರುವ ದೇಶಗಳಿಗೆ ವಿಶ್ವಬ್ಯಾಂಕ್ ಹೆಚ್ಚುವರಿ ಆರ್ಥಿಕ ನೆರವು ಒದಗಿಸಬೇಕು ಎಂದು ಭಾರತ ಆಗ್ರಹಿಸಿದೆ. <br /> <br /> ವಿಶ್ವಬ್ಯಾಂಕ್ ಹೆಚ್ಚಿನ ನೆರವು ನೀಡುವುದರಿಂದ ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳ (ಆರ್ಡಿಬಿಎಸ್) ಮೂಲಕ ಮೂಲ ಸೌಕರ್ಯ ಯೋಜನೆಗಳನ್ನು ವಿಸ್ತರಿಸಬಹುದು. ಅಭಿವೃದ್ಧಿ ಹೊಂದುತ್ತಿರುವ ದೇಶಗಳಿಗೆ ಹೆಚ್ಚುವರಿ ನೆರವಿನ ತುರ್ತು ಅಗತ್ಯವಿದೆ ಎಂದು ಹಣಕಾಸು ಸಚಿವ ಪ್ರಣವ್ ಮುಖರ್ಜಿ ಹೇಳಿದ್ದಾರೆ.<br /> <br /> ಸಮತೋಲಿತ ಆರ್ಥಿಕ ಪುನಶ್ಚೇತನಕ್ಕೆ ಹೆಚ್ಚಿನ ನೆರವು ನೀಡುವ ಅಗತ್ಯ ಇದೆ. ಸದ್ಯ `ಎಂಡಿಬಿಎಸ್~ಗೆ ಸೀಮಿತ ಪ್ರಮಾಣದ ಧನ ಸಹಾಯ ಮಾತ್ರ ಲಭಿಸುತ್ತಿದೆ. ಇದರಿಂದ ಪ್ರವರ್ಧಮಾನಕ್ಕೆ ಬರುತ್ತಿರುವ ಮತ್ತು ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ (ಇಎಂಡಿಸಿಎಸ್) ಮೂಲ ಸೌಕರ್ಯ ಯೋಜನೆಗಳನ್ನು ನಿಗದಿತ ಮಟ್ಟದಲ್ಲಿ ವಿಸ್ತರಿಸಲು ಸಾಧ್ಯವಾಗುತ್ತಿಲ್ಲ. ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿ ಯೋಜನೆಗಳೂ ಹಿನ್ನಡೆ ಅನುಭವಿಸಿವೆ ಎಂದು ಹೇಳಿದ್ದಾರೆ.<br /> <br /> `ಸಿಯೋಲ್ ಅಭಿವೃದ್ಧಿ ಕಾರ್ಯಸೂಚಿ~ ಪ್ರಕಾರ ಭಾರತವು ಪ್ರವರ್ಧಮಾನಕ್ಕೆ ಬರುತ್ತಿರುವ ದೇಶಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಹಣಕಾಸಿನ ನೆರವು ಒದಗಿಸುತ್ತಿದೆ. ಈ ಕಾರ್ಯಸೂಚಿ ಪ್ರಕಾರ `ಜಿ-20~ ರಾಷ್ಟ್ರಗಳು ಅಭಿವೃದ್ಧಿ ಹೊಂದುತ್ತಿರುವ ದೇಶಗಳ ಆರ್ಥಿಕ ಪ್ರಗತಿಗೆ ನೆರವು ನೀಡಬೇಕಾಗಿದೆ. ವಿಶೇಷವಾಗಿ ಮೂಲಸೌಕರ್ಯ, ಆಹಾರ ಭದ್ರತೆ, ಉದ್ಯೋಗ, ಹೂಡಿಕೆ ಮತ್ತು ವ್ಯಾಪಾರ ಕ್ಷೇತ್ರದಲ್ಲಿ ಪರಸ್ಪರ ಸಹಾಯ ಮಾಡುವ ಒಪ್ಪಂದಕ್ಕೆ ಬರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಷಿಂಗ್ಟನ್ (ಪಿಟಿಐ):</strong> ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಗಳನ್ನು ದೊಡ್ಡ ಪ್ರಮಾಣದಲ್ಲಿ ವಿಸ್ತರಿಸಲು ಪ್ರವರ್ಧಮಾನಕ್ಕೆ ಬರುತ್ತಿರುವ ದೇಶಗಳಿಗೆ ವಿಶ್ವಬ್ಯಾಂಕ್ ಹೆಚ್ಚುವರಿ ಆರ್ಥಿಕ ನೆರವು ಒದಗಿಸಬೇಕು ಎಂದು ಭಾರತ ಆಗ್ರಹಿಸಿದೆ. <br /> <br /> ವಿಶ್ವಬ್ಯಾಂಕ್ ಹೆಚ್ಚಿನ ನೆರವು ನೀಡುವುದರಿಂದ ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳ (ಆರ್ಡಿಬಿಎಸ್) ಮೂಲಕ ಮೂಲ ಸೌಕರ್ಯ ಯೋಜನೆಗಳನ್ನು ವಿಸ್ತರಿಸಬಹುದು. ಅಭಿವೃದ್ಧಿ ಹೊಂದುತ್ತಿರುವ ದೇಶಗಳಿಗೆ ಹೆಚ್ಚುವರಿ ನೆರವಿನ ತುರ್ತು ಅಗತ್ಯವಿದೆ ಎಂದು ಹಣಕಾಸು ಸಚಿವ ಪ್ರಣವ್ ಮುಖರ್ಜಿ ಹೇಳಿದ್ದಾರೆ.<br /> <br /> ಸಮತೋಲಿತ ಆರ್ಥಿಕ ಪುನಶ್ಚೇತನಕ್ಕೆ ಹೆಚ್ಚಿನ ನೆರವು ನೀಡುವ ಅಗತ್ಯ ಇದೆ. ಸದ್ಯ `ಎಂಡಿಬಿಎಸ್~ಗೆ ಸೀಮಿತ ಪ್ರಮಾಣದ ಧನ ಸಹಾಯ ಮಾತ್ರ ಲಭಿಸುತ್ತಿದೆ. ಇದರಿಂದ ಪ್ರವರ್ಧಮಾನಕ್ಕೆ ಬರುತ್ತಿರುವ ಮತ್ತು ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ (ಇಎಂಡಿಸಿಎಸ್) ಮೂಲ ಸೌಕರ್ಯ ಯೋಜನೆಗಳನ್ನು ನಿಗದಿತ ಮಟ್ಟದಲ್ಲಿ ವಿಸ್ತರಿಸಲು ಸಾಧ್ಯವಾಗುತ್ತಿಲ್ಲ. ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿ ಯೋಜನೆಗಳೂ ಹಿನ್ನಡೆ ಅನುಭವಿಸಿವೆ ಎಂದು ಹೇಳಿದ್ದಾರೆ.<br /> <br /> `ಸಿಯೋಲ್ ಅಭಿವೃದ್ಧಿ ಕಾರ್ಯಸೂಚಿ~ ಪ್ರಕಾರ ಭಾರತವು ಪ್ರವರ್ಧಮಾನಕ್ಕೆ ಬರುತ್ತಿರುವ ದೇಶಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಹಣಕಾಸಿನ ನೆರವು ಒದಗಿಸುತ್ತಿದೆ. ಈ ಕಾರ್ಯಸೂಚಿ ಪ್ರಕಾರ `ಜಿ-20~ ರಾಷ್ಟ್ರಗಳು ಅಭಿವೃದ್ಧಿ ಹೊಂದುತ್ತಿರುವ ದೇಶಗಳ ಆರ್ಥಿಕ ಪ್ರಗತಿಗೆ ನೆರವು ನೀಡಬೇಕಾಗಿದೆ. ವಿಶೇಷವಾಗಿ ಮೂಲಸೌಕರ್ಯ, ಆಹಾರ ಭದ್ರತೆ, ಉದ್ಯೋಗ, ಹೂಡಿಕೆ ಮತ್ತು ವ್ಯಾಪಾರ ಕ್ಷೇತ್ರದಲ್ಲಿ ಪರಸ್ಪರ ಸಹಾಯ ಮಾಡುವ ಒಪ್ಪಂದಕ್ಕೆ ಬರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>