<p><strong>ಬೆಂಗಳೂರು:</strong> `ಗ್ಲಾಕೊಮಾದಂತಹ ಗಂಭೀರ ಕಾಯಿಲೆಯ ಕುರಿತು ಸಾಮಾನ್ಯ ಜನರಲ್ಲಿ ತೀವ್ರತರದ ಜಾಗೃತಿ ಮೂಡಿಸಬೇಕಿದ್ದು, ಈ ನಿಟ್ಟಿನಲ್ಲಿ ಎಲ್ಲಾ ವೈದ್ಯರು ಚಿಂತನೆ ನಡೆಸಬೇಕು~ ಎಂದು ಪೊಲೀಸ್ ಆಯುಕ್ತ ಜ್ಯೋತಿಪ್ರಕಾಶ್ ಮಿರ್ಜಿ ಅಭಿಪ್ರಾಯಪಟ್ಟರು. <br /> <br /> ಗ್ಲಾಕೊಮಾ ಸೊಸೈಟಿ ಆಫ್ ಇಂಡಿಯಾ ಸಂಸ್ಥೆಯು ವಿಶ್ವ ಗ್ಲಾಕೊಮಾ ಸಪ್ತಾಹದ ಅಂಗವಾಗಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಭಾನುವಾರ ಆಯೋಜಿಸಿದ್ದ ಜಾಥಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ವೈದ್ಯರು ಗ್ರಾಮೀಣ ಭಾಗದಲ್ಲಿ ಗ್ಲಾಕೊಮಾ ಕಾಯಿಲೆಯ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು. ಮೊದಲ ಹಂತದಲ್ಲಿ ಗುರುತಿಸಲ್ಪಟ್ಟಾಗ ಮಾತ್ರ ಈ ಕಾಯಿಲೆಯನ್ನು ಗುಣಪಡಿಸಲು ಸಾಧ್ಯವಾಗುವುದರಿಂದ ಇದರ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ~ ಎಂದು ಹೇಳಿದರು. <br /> <br /> ನಟ ಶಿವರಾಜ್ಕುಮಾರ್, `40 ವರ್ಷ ಮೇಲ್ಪಟ್ಟವರು ಅಗತ್ಯವಾಗಿ ನೇತ್ರ ತಪಾಸಣೆ ಮಾಡಿಸಿಕೊಳ್ಳಬೇಕು. ಗ್ಲಾಕೊಮಾದಿಂದ ದೃಷ್ಟಿದೋಷ ಉಂಟಾಗುವುದರಿಂದ ಮಧ್ಯವಯಸ್ಸಿನವರು ಈ ಬಗ್ಗೆ ಹೆಚ್ಚಿನ ಗಮನ ನೀಡಬೇಕು~ ಎಂದು ಸಲಹೆ ನೀಡಿದರು. <br /> <br /> ಬೆಂಗಳೂರು ಅಪ್ತಾಲ್ಮಿಕ್ ಸೊಸೈಟಿಯ ಅಧ್ಯಕ್ಷ ಡಾ. ಭುಜಂಗ ಶೆಟ್ಟಿ, ` ಈ ಒಂದು ವಾರವನ್ನು ಗ್ಲಾಕೊಮಾ ಕುರಿತು ಜಾಗೃತಿ ಮೂಡಿಸುವ ಸಲುವಾಗಿಯೇ ಮೀಸಲಿಡಲಾಗಿದ್ದು, ಈ ಬಗ್ಗೆ ತಿಳಿದುಕೊಳ್ಳಲು ಸಾಮಾನ್ಯ ಜನರು ಆಸಕ್ತಿ ವಹಿಸಬೇಕು~ ಎಂದರು. <br /> <br /> ನಟಿ ರಾಗಿಣಿ ದ್ವಿವೇದಿ ಇತರರು ಉಪಸ್ಥಿತರಿದ್ದರು. ಸ್ವಾತಂತ್ರ್ಯ ಉದ್ಯಾನದಿಂದ ಕಬ್ಬನ್ ಉದ್ಯಾನದವರೆಗೆ ನಡೆದ ಜಾಥಾದಲ್ಲಿ ನಟ ನಟಿಯರು, ವಿದ್ಯಾರ್ಥಿಗಳು, ವೈದ್ಯರು ಸೇರಿದಂತೆ ನೂರಾರು ಮಂದಿ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ಗ್ಲಾಕೊಮಾದಂತಹ ಗಂಭೀರ ಕಾಯಿಲೆಯ ಕುರಿತು ಸಾಮಾನ್ಯ ಜನರಲ್ಲಿ ತೀವ್ರತರದ ಜಾಗೃತಿ ಮೂಡಿಸಬೇಕಿದ್ದು, ಈ ನಿಟ್ಟಿನಲ್ಲಿ ಎಲ್ಲಾ ವೈದ್ಯರು ಚಿಂತನೆ ನಡೆಸಬೇಕು~ ಎಂದು ಪೊಲೀಸ್ ಆಯುಕ್ತ ಜ್ಯೋತಿಪ್ರಕಾಶ್ ಮಿರ್ಜಿ ಅಭಿಪ್ರಾಯಪಟ್ಟರು. <br /> <br /> ಗ್ಲಾಕೊಮಾ ಸೊಸೈಟಿ ಆಫ್ ಇಂಡಿಯಾ ಸಂಸ್ಥೆಯು ವಿಶ್ವ ಗ್ಲಾಕೊಮಾ ಸಪ್ತಾಹದ ಅಂಗವಾಗಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಭಾನುವಾರ ಆಯೋಜಿಸಿದ್ದ ಜಾಥಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ವೈದ್ಯರು ಗ್ರಾಮೀಣ ಭಾಗದಲ್ಲಿ ಗ್ಲಾಕೊಮಾ ಕಾಯಿಲೆಯ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು. ಮೊದಲ ಹಂತದಲ್ಲಿ ಗುರುತಿಸಲ್ಪಟ್ಟಾಗ ಮಾತ್ರ ಈ ಕಾಯಿಲೆಯನ್ನು ಗುಣಪಡಿಸಲು ಸಾಧ್ಯವಾಗುವುದರಿಂದ ಇದರ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ~ ಎಂದು ಹೇಳಿದರು. <br /> <br /> ನಟ ಶಿವರಾಜ್ಕುಮಾರ್, `40 ವರ್ಷ ಮೇಲ್ಪಟ್ಟವರು ಅಗತ್ಯವಾಗಿ ನೇತ್ರ ತಪಾಸಣೆ ಮಾಡಿಸಿಕೊಳ್ಳಬೇಕು. ಗ್ಲಾಕೊಮಾದಿಂದ ದೃಷ್ಟಿದೋಷ ಉಂಟಾಗುವುದರಿಂದ ಮಧ್ಯವಯಸ್ಸಿನವರು ಈ ಬಗ್ಗೆ ಹೆಚ್ಚಿನ ಗಮನ ನೀಡಬೇಕು~ ಎಂದು ಸಲಹೆ ನೀಡಿದರು. <br /> <br /> ಬೆಂಗಳೂರು ಅಪ್ತಾಲ್ಮಿಕ್ ಸೊಸೈಟಿಯ ಅಧ್ಯಕ್ಷ ಡಾ. ಭುಜಂಗ ಶೆಟ್ಟಿ, ` ಈ ಒಂದು ವಾರವನ್ನು ಗ್ಲಾಕೊಮಾ ಕುರಿತು ಜಾಗೃತಿ ಮೂಡಿಸುವ ಸಲುವಾಗಿಯೇ ಮೀಸಲಿಡಲಾಗಿದ್ದು, ಈ ಬಗ್ಗೆ ತಿಳಿದುಕೊಳ್ಳಲು ಸಾಮಾನ್ಯ ಜನರು ಆಸಕ್ತಿ ವಹಿಸಬೇಕು~ ಎಂದರು. <br /> <br /> ನಟಿ ರಾಗಿಣಿ ದ್ವಿವೇದಿ ಇತರರು ಉಪಸ್ಥಿತರಿದ್ದರು. ಸ್ವಾತಂತ್ರ್ಯ ಉದ್ಯಾನದಿಂದ ಕಬ್ಬನ್ ಉದ್ಯಾನದವರೆಗೆ ನಡೆದ ಜಾಥಾದಲ್ಲಿ ನಟ ನಟಿಯರು, ವಿದ್ಯಾರ್ಥಿಗಳು, ವೈದ್ಯರು ಸೇರಿದಂತೆ ನೂರಾರು ಮಂದಿ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>