<p><strong>ವಿಶ್ವಸಂಸ್ಥೆ (ಪಿಟಿಐ):</strong> ಇನ್ನು ಐದು ದಿನಗಳಲ್ಲಿ ವಸುಂಧರೆಯ ಒಡಲು ಏಳು ನೂರು ಕೋಟಿ ಜನರಿಂದ ತುಂಬಿಲಿದೆ ಎಂದು ವಿಶ್ವಸಂಸ್ಥೆ ಹೇಳಿದೆ. ಒಂದೆಡೆ ಮನುಷ್ಯನ ಜೀವತಾವಧಿ ದಿನೇ ದಿನೇ ಹೆಚ್ಚುತ್ತಿದ್ದರೆ, ಮತ್ತೊಂದೆಡೆ ಆಧುನಿಕ ಆರೋಗ್ಯ ಸೇವೆಗಳು ಪರಿಪೂರ್ಣವಾಗಿ ಎಲ್ಲರನ್ನು ತಲುಪಲು ವಿಫಲವಾಗಿವೆ. <br /> <br /> ಆದರೆ, ಭವಿಷ್ಯದಲ್ಲಿ ಯುವಕರ ಪಾತ್ರ ಮಹತ್ತರವಾಗುವುದರಿಂದ ಜಾಗತಿಕ ಸಮುದಾಯವು ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ವಿಶ್ವಸಂಸ್ಥೆ ಮನವಿ ಮಾಡಿಕೊಂಡಿದೆ.<br /> <br /> ಈಗ ನಾವು ತೆಗೆದುಕೊಂಡ ತೀರ್ಮಾನಗಳೇ ಮುಂದೆ ನಮ್ಮ ಸುಸ್ಥಿರ, ಸಮೃದ್ಧ, ಆರೋಗ್ಯಪೂರ್ಣ, ಪರಿಸರ ಸಂರಕ್ಷಣೆ ಮತ್ತು ಆರ್ಥಿಕ ಹಿನ್ನಡೆ ವಿಚಾರದ ಭವಿಷ್ಯವನ್ನು ನಿರ್ಧರಿಸುತ್ತವೆ. ಆದ್ದರಿಂದ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ವಿಶ್ವಸಂಸ್ಥೆಯ ವರದಿ ಹೇಳಿದೆ.<br /> <br /> `ಭವಿಷ್ಯದಲ್ಲಿ ಆರ್ಥಿಕ ಅಭಿವೃದ್ಧಿ ಸಾಧಿಸಬೇಕಿದ್ದರೆ ಜಾಗತಿಕ ಸಮುದಾಯವು ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಿಗೆ ಹೆಚ್ಚಿನ ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ಅವಕಾಶಗಳ ಸದ್ಬಳಕೆಗೆ ಆದ್ಯತೆ ಕೊಡಬೇಕು. ಇಲ್ಲದಿದ್ದರೆ ಸರ್ಕಾರಗಳು ತಮ್ಮ ದೇಶವಾಸಿಗಳಿಗೆ ಕನಿಷ್ಠ ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಲಾಗದೆ ಯಾವತ್ತೂ ವಿಷಾದ ವ್ಯಕ್ತಪಡಿಸುವ ಸ್ಥಿತಿಯಲ್ಲೇ ಇರಬೇಕಾಗುತ್ತದೆ. ಅದರಲ್ಲೂ ಅಭಿವೃದ್ಧಿಶೀಲ ರಾಷ್ಟ್ರಗಳು ಈ ದಿಸೆಯಲ್ಲಿ ಹೆಚ್ಚು ಚಿಂತಿಸುವ ಅಗತ್ಯವಿದೆ~ ಎಂದು ವಿಶ್ವಸಂಸ್ಥೆಯ ಜನಸಂಖ್ಯೆ ನಿಧಿ (ಯುಎನ್ಎಫ್ಪಿಎ) ಕಾರ್ಯನಿರ್ವಾಹಕ ನಿರ್ದೇಶಕ ಬಬಾತುಂಡೆ ಒಸೊತಿಮೆಹಿನ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶ್ವಸಂಸ್ಥೆ (ಪಿಟಿಐ):</strong> ಇನ್ನು ಐದು ದಿನಗಳಲ್ಲಿ ವಸುಂಧರೆಯ ಒಡಲು ಏಳು ನೂರು ಕೋಟಿ ಜನರಿಂದ ತುಂಬಿಲಿದೆ ಎಂದು ವಿಶ್ವಸಂಸ್ಥೆ ಹೇಳಿದೆ. ಒಂದೆಡೆ ಮನುಷ್ಯನ ಜೀವತಾವಧಿ ದಿನೇ ದಿನೇ ಹೆಚ್ಚುತ್ತಿದ್ದರೆ, ಮತ್ತೊಂದೆಡೆ ಆಧುನಿಕ ಆರೋಗ್ಯ ಸೇವೆಗಳು ಪರಿಪೂರ್ಣವಾಗಿ ಎಲ್ಲರನ್ನು ತಲುಪಲು ವಿಫಲವಾಗಿವೆ. <br /> <br /> ಆದರೆ, ಭವಿಷ್ಯದಲ್ಲಿ ಯುವಕರ ಪಾತ್ರ ಮಹತ್ತರವಾಗುವುದರಿಂದ ಜಾಗತಿಕ ಸಮುದಾಯವು ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ವಿಶ್ವಸಂಸ್ಥೆ ಮನವಿ ಮಾಡಿಕೊಂಡಿದೆ.<br /> <br /> ಈಗ ನಾವು ತೆಗೆದುಕೊಂಡ ತೀರ್ಮಾನಗಳೇ ಮುಂದೆ ನಮ್ಮ ಸುಸ್ಥಿರ, ಸಮೃದ್ಧ, ಆರೋಗ್ಯಪೂರ್ಣ, ಪರಿಸರ ಸಂರಕ್ಷಣೆ ಮತ್ತು ಆರ್ಥಿಕ ಹಿನ್ನಡೆ ವಿಚಾರದ ಭವಿಷ್ಯವನ್ನು ನಿರ್ಧರಿಸುತ್ತವೆ. ಆದ್ದರಿಂದ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ವಿಶ್ವಸಂಸ್ಥೆಯ ವರದಿ ಹೇಳಿದೆ.<br /> <br /> `ಭವಿಷ್ಯದಲ್ಲಿ ಆರ್ಥಿಕ ಅಭಿವೃದ್ಧಿ ಸಾಧಿಸಬೇಕಿದ್ದರೆ ಜಾಗತಿಕ ಸಮುದಾಯವು ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಿಗೆ ಹೆಚ್ಚಿನ ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ಅವಕಾಶಗಳ ಸದ್ಬಳಕೆಗೆ ಆದ್ಯತೆ ಕೊಡಬೇಕು. ಇಲ್ಲದಿದ್ದರೆ ಸರ್ಕಾರಗಳು ತಮ್ಮ ದೇಶವಾಸಿಗಳಿಗೆ ಕನಿಷ್ಠ ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಲಾಗದೆ ಯಾವತ್ತೂ ವಿಷಾದ ವ್ಯಕ್ತಪಡಿಸುವ ಸ್ಥಿತಿಯಲ್ಲೇ ಇರಬೇಕಾಗುತ್ತದೆ. ಅದರಲ್ಲೂ ಅಭಿವೃದ್ಧಿಶೀಲ ರಾಷ್ಟ್ರಗಳು ಈ ದಿಸೆಯಲ್ಲಿ ಹೆಚ್ಚು ಚಿಂತಿಸುವ ಅಗತ್ಯವಿದೆ~ ಎಂದು ವಿಶ್ವಸಂಸ್ಥೆಯ ಜನಸಂಖ್ಯೆ ನಿಧಿ (ಯುಎನ್ಎಫ್ಪಿಎ) ಕಾರ್ಯನಿರ್ವಾಹಕ ನಿರ್ದೇಶಕ ಬಬಾತುಂಡೆ ಒಸೊತಿಮೆಹಿನ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>