<p>ಬೆಂಗಳೂರು: `ಫೆಬ್ರುವರಿ 1 ರಿಂದ 3 ರ ವರೆಗೆ ನಗರದಲ್ಲಿ ನಡೆಯಲಿರುವ ವಿಶ್ವ ನೀರಿನ ಅಧಿವೇಶನವನ್ನು ಸರ್ಕಾರ ಈ ಕೂಡಲೇ ನಿಷೇಧಿಸಬೇಕು~ ಎಂದು ಸಮತಾ ಸೈನಿಕ ದಳದ ಅಧ್ಯಕ್ಷ ಎಂ.ವೆಂಕಟಸ್ವಾಮಿ ಒತ್ತಾಯಿಸಿದರು.<br /> <br /> ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಈ ಅಧಿವೇಶನದ ಉದ್ದೇಶ ನೀರನ್ನು ಖಾಸಗಿ ಕಂಪೆನಿಗಳಿಗೆ ಒಪ್ಪಿಸುವುದಾಗಿದೆ. ನಿವೃತ್ತ ಐಎಎಸ್ ಅಧಿಕಾರಿಯಾದ ಡಾ. ಎ. ರವೀಂದ್ರ ಮತ್ತು ಅವರ ನೇತೃತ್ವದ ಎನ್ಜಿಓ ಕೇಂದ್ರದಿಂದ ಸರ್ಕಾರದ ಸಹಭಾಗಿತ್ವದೊಂದಿಗೆ ಈ ಅಧಿವೇಶನ ನಡೆಯುತ್ತಿದೆ. ಈ ಅಧಿವೇಶನದಿಂದ ನೀರಿನ ಸ್ವಾಮ್ಯವೆಲ್ಲ ಖಾಸಗಿ ಕಂಪೆನಿಗಳ ಪಾಲಾಗಲಿದೆ. ಅವರು ವೈಯಕ್ತಿಕವಾಗಿ ಅಧಿವೇಶನ ಮಾಡಿಕೊಳ್ಳಲಿ ಇದಕ್ಕೆ ನಮ್ಮ ವಿರೋಧವಿಲ್ಲ~ ಎಂದರು.<br /> <br /> `ಜಾಗತಿಕ ವ್ಯವಹಾರಗಳ ಹೆಸರಿನಲ್ಲಿ ಭೂಮಿಯನ್ನು ಪಡೆದದ್ದಾಯಿತು. ಈಗ ನೀರನ್ನು ಖಾಸಗಿಯವರಿಗೆ ಒಪ್ಪಿಸಲು ಸರ್ಕಾರ ಮುಂದಾಗುತ್ತಿದೆ. ಸರ್ಕಾರ ಈ ಅಧಿವೇಶನದಲ್ಲಿ ಯಾವುದೇ ರೀತಿಯಲ್ಲೂ ಪಾಲ್ಗೊಳ್ಳಬಾರದು~ ಎಂದು ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹಿಸಿದರು.<br /> <br /> `ನಮ್ಮ ನೀರಿನ ಸಂಪೂರ್ಣ ಅಧಿಕಾರವನ್ನು ಖಾಸಗಿ ಕಂಪೆನಿಗಳಿಗೆ ನೀಡಿದರೆ, ಪ್ರಜಾಪ್ರಭುತ್ವ ವ್ಯವಸ್ಥೆಗೆ ಸ್ಥಾನ ಎಲ್ಲಿರುತ್ತದೆ. ಜನರ ಅಭಿಪ್ರಾಯಗಳಿಗೆ ಯಾವುದೇ ಮಾನ್ಯತೆಯಿಲ್ಲದೆ, ಖಾಸಗೀಕರಣವನ್ನು ಮುಕ್ತವಾಗಿ ಸ್ವಾಗತಿಸಲಾಗುತ್ತಿದೆ~ ಎಂದರು.<br /> <br /> `ಸರ್ಕಾರ ಅಧಿವೇಶನದಲ್ಲಿ ಪಾಲ್ಗೊಂಡರೆ, ಫೆಬ್ರುವರಿ ಮೊದಲ ವಾರದಿಂದ ನೀರಿನ ಹಕ್ಕಿಗಾಗಿ ಜನಾಂದೋಲನ ಕಾರ್ಯಕ್ರಮವನ್ನು ಕೈಗೊಳ್ಳಲಾಗುವುದು~ ಎಂದು ಹೇಳಿದರು.<br /> <br /> ಗೋಷ್ಠಿಯಲ್ಲಿ ನೀರಿನ ಹಕ್ಕಿಗಾಗಿ ಜನಾಂದೋಲನದ ಸಂಯೋಜಕ ಪ್ರಭಾಕರ್ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: `ಫೆಬ್ರುವರಿ 1 ರಿಂದ 3 ರ ವರೆಗೆ ನಗರದಲ್ಲಿ ನಡೆಯಲಿರುವ ವಿಶ್ವ ನೀರಿನ ಅಧಿವೇಶನವನ್ನು ಸರ್ಕಾರ ಈ ಕೂಡಲೇ ನಿಷೇಧಿಸಬೇಕು~ ಎಂದು ಸಮತಾ ಸೈನಿಕ ದಳದ ಅಧ್ಯಕ್ಷ ಎಂ.ವೆಂಕಟಸ್ವಾಮಿ ಒತ್ತಾಯಿಸಿದರು.<br /> <br /> ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಈ ಅಧಿವೇಶನದ ಉದ್ದೇಶ ನೀರನ್ನು ಖಾಸಗಿ ಕಂಪೆನಿಗಳಿಗೆ ಒಪ್ಪಿಸುವುದಾಗಿದೆ. ನಿವೃತ್ತ ಐಎಎಸ್ ಅಧಿಕಾರಿಯಾದ ಡಾ. ಎ. ರವೀಂದ್ರ ಮತ್ತು ಅವರ ನೇತೃತ್ವದ ಎನ್ಜಿಓ ಕೇಂದ್ರದಿಂದ ಸರ್ಕಾರದ ಸಹಭಾಗಿತ್ವದೊಂದಿಗೆ ಈ ಅಧಿವೇಶನ ನಡೆಯುತ್ತಿದೆ. ಈ ಅಧಿವೇಶನದಿಂದ ನೀರಿನ ಸ್ವಾಮ್ಯವೆಲ್ಲ ಖಾಸಗಿ ಕಂಪೆನಿಗಳ ಪಾಲಾಗಲಿದೆ. ಅವರು ವೈಯಕ್ತಿಕವಾಗಿ ಅಧಿವೇಶನ ಮಾಡಿಕೊಳ್ಳಲಿ ಇದಕ್ಕೆ ನಮ್ಮ ವಿರೋಧವಿಲ್ಲ~ ಎಂದರು.<br /> <br /> `ಜಾಗತಿಕ ವ್ಯವಹಾರಗಳ ಹೆಸರಿನಲ್ಲಿ ಭೂಮಿಯನ್ನು ಪಡೆದದ್ದಾಯಿತು. ಈಗ ನೀರನ್ನು ಖಾಸಗಿಯವರಿಗೆ ಒಪ್ಪಿಸಲು ಸರ್ಕಾರ ಮುಂದಾಗುತ್ತಿದೆ. ಸರ್ಕಾರ ಈ ಅಧಿವೇಶನದಲ್ಲಿ ಯಾವುದೇ ರೀತಿಯಲ್ಲೂ ಪಾಲ್ಗೊಳ್ಳಬಾರದು~ ಎಂದು ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹಿಸಿದರು.<br /> <br /> `ನಮ್ಮ ನೀರಿನ ಸಂಪೂರ್ಣ ಅಧಿಕಾರವನ್ನು ಖಾಸಗಿ ಕಂಪೆನಿಗಳಿಗೆ ನೀಡಿದರೆ, ಪ್ರಜಾಪ್ರಭುತ್ವ ವ್ಯವಸ್ಥೆಗೆ ಸ್ಥಾನ ಎಲ್ಲಿರುತ್ತದೆ. ಜನರ ಅಭಿಪ್ರಾಯಗಳಿಗೆ ಯಾವುದೇ ಮಾನ್ಯತೆಯಿಲ್ಲದೆ, ಖಾಸಗೀಕರಣವನ್ನು ಮುಕ್ತವಾಗಿ ಸ್ವಾಗತಿಸಲಾಗುತ್ತಿದೆ~ ಎಂದರು.<br /> <br /> `ಸರ್ಕಾರ ಅಧಿವೇಶನದಲ್ಲಿ ಪಾಲ್ಗೊಂಡರೆ, ಫೆಬ್ರುವರಿ ಮೊದಲ ವಾರದಿಂದ ನೀರಿನ ಹಕ್ಕಿಗಾಗಿ ಜನಾಂದೋಲನ ಕಾರ್ಯಕ್ರಮವನ್ನು ಕೈಗೊಳ್ಳಲಾಗುವುದು~ ಎಂದು ಹೇಳಿದರು.<br /> <br /> ಗೋಷ್ಠಿಯಲ್ಲಿ ನೀರಿನ ಹಕ್ಕಿಗಾಗಿ ಜನಾಂದೋಲನದ ಸಂಯೋಜಕ ಪ್ರಭಾಕರ್ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>