<p><strong>ಬೆಂಗಳೂರು: </strong>ರಾಜ್ಯದ ಪಶ್ಚಿಮ ಘಟ್ಟಗಳ ಸಾಲಿನಲ್ಲಿರುವ 10 ಪ್ರದೇಶಗಳನ್ನು ವಿಶ್ವ ಪರಂಪರೆಯ ತಾಣಗಳ ಪಟ್ಟಿಗೆ ಸೇರಿಸುವ `ಯುನೆಸ್ಕೊ~ (ವಿಶ್ವ ಸಂಸ್ಥೆಯ ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಘ) ನಿರ್ಧಾರವನ್ನು ವಿರೋಧಿಸುವುದಾಗಿ ರಾಜ್ಯ ಸರ್ಕಾರ ಪ್ರಕಟಿಸಿದೆ.<br /> <br /> ಶುಕ್ರವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಬಗ್ಗೆ ಚರ್ಚೆ ನಡೆಸಿ, ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ನೇತೃತ್ವದಲ್ಲಿ ಬುಧವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. 10 ಪ್ರದೇಶಗಳನ್ನು ವಿಶ್ವ ಪರಂಪರೆಯ ಪಟ್ಟಿಗೆ ಸೇರ್ಪಡೆಗೊಳಿಸುವ ಒಪ್ಪಂದಕ್ಕೆ ರಾಜ್ಯ ಸಹಿ ಮಾಡಬಾರದು ಎಂಬ ತೀರ್ಮಾನವನ್ನೂ ತೆಗೆದುಕೊಳ್ಳಲಾಗಿದೆ.<br /> <br /> ಮುಖ್ಯಮಂತ್ರಿಗಳ ಗೃಹ ಕಚೇರಿ `ಕೃಷ್ಣಾ~ದಲ್ಲಿ ನಡೆದ ಸಭೆಯ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅರಣ್ಯ ಸಚಿವ ಸಿ.ಪಿ. ಯೋಗೇಶ್ವರ್, `ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರ ಹೊಸದಲ್ಲ. ವಿಶ್ವ ಪರಂಪರೆಯ ಪಟ್ಟಿಗೆ ಪಶ್ಚಿಮ ಘಟ್ಟ ಸಾಲಿನ ಕೆಲವು ಪ್ರದೇಶಗಳ ಸೇರ್ಪಡೆಗೆ ಸರ್ಕಾರ ಹಿಂದೆಯೂ ವಿರೋಧ ವ್ಯಕ್ತಪಡಿಸಿತ್ತು. ಇಂದಿಗೂ ಅದೇ ನಿಲುವಿಗೆ ಬದ್ಧವಾಗಿದೆ~ ಎಂದು ಸ್ಪಷ್ಟಪಡಿಸಿದರು.<br /> <br /> `ಅಭಿವೃದ್ಧಿಗೆ ಅಡಚಣೆ~: ಇದೇ ವಿಷಯದ ಕುರಿತು ವಿಧಾನಸೌಧದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯೋಗೇಶ್ವರ್, `ಯುನೆಸ್ಕೊದ ಈ ಕ್ರಮದಿಂದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲು ಸಾಧ್ಯವಾಗುವುದಿಲ್ಲ. <br /> <br /> ಹಾಗಾಗಿ, ವಿಶ್ವ ಪರಂಪರೆಯ ಪಟ್ಟಿಗೆ ಈ ಪ್ರದೇಶಗಳನ್ನು ಸೇರಿಸಲು ಸಮ್ಮತಿ ಇಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಈ ಹಿಂದೆಯೇ ತಿಳಿಸಲಾಗಿತ್ತು. ಆದರೂ ಕೇಂದ್ರ, ರಾಜ್ಯದ ವಾದವನ್ನು ಮಾನ್ಯ ಮಾಡಿಲ್ಲ~ ಎಂದು ದೂರಿದರು.<br /> <br /> ಈಗಾಗಲೇ ಜಾರಿಯಲ್ಲಿರುವ ನಿಯಮಗಳ ಕಾರಣ, ಪಶ್ಚಿಮ ಘಟ್ಟದ ಕೆಲವು ಪ್ರದೇಶಗಳಲ್ಲಿ ರಸ್ತೆ ವಿಸ್ತರಣೆ, ವಿದ್ಯುತ್ ಸಂಪರ್ಕದಂತಹ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲು ಹಲವು ಅಡಚಣೆಗಳು ಎದುರಾಗುತ್ತಿವೆ. ಈ ಪ್ರದೇಶಗಳಲ್ಲಿ ಅಭಿವೃದ್ಧಿ ಕಾರ್ಯಗಳು ಆಗದ ಕಾರಣ ನಕ್ಸಲೀಯರ ಪಿಡುಗು ಸಹ ವ್ಯಾಪಿಸಿದೆ. ಈಗ ಇವುಗಳನ್ನು ವಿಶ್ವ ಪರಂಪರೆಯ ಪಟ್ಟಿಗೆ ಸೇರಿಸಿದರೆ, ಅಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲು ಸಾಧ್ಯವಾಗದ ಸ್ಥಿತಿ ನಿರ್ಮಾಣ ಆಗುತ್ತದೆ ಎಂದು ಹೇಳಿದರು.<br /> <br /> ಪಶ್ಚಿಮ ಘಟ್ಟದ ಅರಣ್ಯ, ವನ್ಯಜೀವಿಗಳ ಸಂರಕ್ಷಣೆಗೆ ಅಗತ್ಯ ಕಾನೂನು ಈಗಾಗಲೇ ಇದೆ. ಅಲ್ಲಿನ ಅನೇಕ ಪ್ರದೇಶಗಳನ್ನು ವನ್ಯಜೀವಿ ಅಭಯಾರಣ್ಯ, ರಾಷ್ಟ್ರೀಯ ಜೈವಿಕ ಉದ್ಯಾನವನ, ಹುಲಿ ಅಭಯಾರಣ್ಯ ಎಂದು ಘೋಷಿಸಲಾಗಿದೆ. ಈ ಪ್ರದೇಶಗಳಿಗೆ ಅನ್ವಯ ಆಗುವಂತೆ ಪ್ರತ್ಯೇಕ ಕಾನೂನು ಇದೆ. ಈಗ ಈ ಪ್ರದೇಶಗಳನ್ನು ವಿಶ್ವ ಪರಂಪರೆಯ ಪಟ್ಟಿಗೆ ಸೇರಿಸಿದರೆ, ಅಲ್ಲಿ ಹೊಸ ನಿಯಮಗಳು ಜಾರಿಯಾಗುತ್ತವೆ ಎಂದು ವಿವರಿಸಿದರು.<br /> <br /> ಪಶ್ಚಿಮ ಘಟ್ಟದಲ್ಲಿ ಬರುವ ಯಾವುದಾದರೂ ಒಂದು ಪ್ರದೇಶ ಅಥವಾ ಸ್ಮಾರಕವನ್ನು ವಿಶ್ವ ಪರಂಪರೆಯ ಪಟ್ಟಿಗೆ ಸೇರಿಸಿದರೆ ವಿರೋಧಿಸುತ್ತಿರಲಿಲ್ಲ. ಆದರೆ ವಿಸ್ತಾರವಾದ ಪ್ರದೇಶವೊಂದನ್ನು ಈ ಪಟ್ಟಿಗೆ ಸೇರಿಸಲಾಗಿದೆ. ಆ ಪ್ರದೇಶದಲ್ಲಿ ವಾಸಿಸುತ್ತಿರುವ ಜನರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಬಗ್ಗೆ ಕೇಂದ್ರ ಸರ್ಕಾರ ಚಿಂತಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ ಹಾಗೂ ತಮಿಳುನಾಡು ರಾಜ್ಯಗಳನ್ನು ಪಶ್ಚಿಮ ಘಟ್ಟ ವ್ಯಾಪಿಸಿದೆ. ಇವುಗಳ ಪೈಕಿ ಕೇರಳ ಸಹ ಯುನೆಸ್ಕೊ ಕ್ರಮವನ್ನು ವಿರೋಧಿಸಿದೆ. ಗುಜರಾತ್ ಹಾಗೂ ಗೋವಾ ರಾಜ್ಯಗಳು ಮಾತ್ರ ಯುನೆಸ್ಕೊ ಕ್ರಮವನ್ನು ಸ್ವಾಗತ ಮಾಡಿವೆ ಎಂದು ಸಚಿವರು ತಿಳಿಸಿದರು.<br /> <br /> ಪಶ್ಚಿಮ ಘಟ್ಟಗಳ ಹೆಸರನ್ನು ಯುನೆಸ್ಕೊಗೆ ಶಿಫಾರಸು ಮಾಡುವ ಮೊದಲು ಕೇಂದ್ರ ಸರ್ಕಾರ ಈ ಭಾಗದ ಜನಪ್ರತಿನಿಧಿಗಳ ಜೊತೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ಶೃಂಗೇರಿ ಶಾಸಕ ಡಿ.ಎನ್. ಜೀವರಾಜ್ ಹೇಳಿದರು.<br /> <br /> <strong>`ರಕ್ಷಣೆಗೆ ನಮ್ಮಲ್ಲೇ ಕಾನೂನು~</strong><br /> `ವಿಶ್ವ ಪರಂಪರೆ ಪಟ್ಟಿಗೆ ಪಶ್ಚಿಮ ಘಟ್ಟಗಳನ್ನು ಸೇರಿಸುವುದನ್ನು ವಿರೋಧಿಸಲು ಮೇಲ್ನೋಟಕ್ಕೆ ಕಾರಣಗಳಿಲ್ಲ. ಯುನೆಸ್ಕೊ ಈ ಪ್ರದೇಶಗಳಿಗೆ ಯಾವ ನಿಯಮಾವಳಿಗಳನ್ನು ರೂಪಿಸುತ್ತದೆ ಎಂಬುದನ್ನು ಇನ್ನಷ್ಟೇ ತಿಳಿದುಕೊಳ್ಳಬೇಕು, ಅಲ್ಲಿಯವರೆಗೆ ಖಚಿತವಾಗಿ ಏನನ್ನೂ ಹೇಳಲು ಸಾಧ್ಯವಿಲ್ಲ. ಆದರೆ ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಈ ಪಟ್ಟಿಯಲ್ಲಿ ಸೇರ್ಪಡೆಗೊಳ್ಳುವುದೊಂದೇ ಮಾರ್ಗ ಎಂಬುದು ಸುಳ್ಳು. ರಕ್ಷಣೆಗೆ ಸಾಕಷ್ಟು ಕಾನೂನುಗಳು ನಮ್ಮಲ್ಲೇ ಇವೆ~ <br /> <strong>- ಅನಂತ ಹೆಗಡೆ ಆಶೀಸರ, ಪಶ್ಚಿಮ ಘಟ್ಟ ಕಾರ್ಯಪಡೆ ಅಧ್ಯಕ್ಷ </strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯದ ಪಶ್ಚಿಮ ಘಟ್ಟಗಳ ಸಾಲಿನಲ್ಲಿರುವ 10 ಪ್ರದೇಶಗಳನ್ನು ವಿಶ್ವ ಪರಂಪರೆಯ ತಾಣಗಳ ಪಟ್ಟಿಗೆ ಸೇರಿಸುವ `ಯುನೆಸ್ಕೊ~ (ವಿಶ್ವ ಸಂಸ್ಥೆಯ ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಘ) ನಿರ್ಧಾರವನ್ನು ವಿರೋಧಿಸುವುದಾಗಿ ರಾಜ್ಯ ಸರ್ಕಾರ ಪ್ರಕಟಿಸಿದೆ.<br /> <br /> ಶುಕ್ರವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಬಗ್ಗೆ ಚರ್ಚೆ ನಡೆಸಿ, ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ನೇತೃತ್ವದಲ್ಲಿ ಬುಧವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. 10 ಪ್ರದೇಶಗಳನ್ನು ವಿಶ್ವ ಪರಂಪರೆಯ ಪಟ್ಟಿಗೆ ಸೇರ್ಪಡೆಗೊಳಿಸುವ ಒಪ್ಪಂದಕ್ಕೆ ರಾಜ್ಯ ಸಹಿ ಮಾಡಬಾರದು ಎಂಬ ತೀರ್ಮಾನವನ್ನೂ ತೆಗೆದುಕೊಳ್ಳಲಾಗಿದೆ.<br /> <br /> ಮುಖ್ಯಮಂತ್ರಿಗಳ ಗೃಹ ಕಚೇರಿ `ಕೃಷ್ಣಾ~ದಲ್ಲಿ ನಡೆದ ಸಭೆಯ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅರಣ್ಯ ಸಚಿವ ಸಿ.ಪಿ. ಯೋಗೇಶ್ವರ್, `ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರ ಹೊಸದಲ್ಲ. ವಿಶ್ವ ಪರಂಪರೆಯ ಪಟ್ಟಿಗೆ ಪಶ್ಚಿಮ ಘಟ್ಟ ಸಾಲಿನ ಕೆಲವು ಪ್ರದೇಶಗಳ ಸೇರ್ಪಡೆಗೆ ಸರ್ಕಾರ ಹಿಂದೆಯೂ ವಿರೋಧ ವ್ಯಕ್ತಪಡಿಸಿತ್ತು. ಇಂದಿಗೂ ಅದೇ ನಿಲುವಿಗೆ ಬದ್ಧವಾಗಿದೆ~ ಎಂದು ಸ್ಪಷ್ಟಪಡಿಸಿದರು.<br /> <br /> `ಅಭಿವೃದ್ಧಿಗೆ ಅಡಚಣೆ~: ಇದೇ ವಿಷಯದ ಕುರಿತು ವಿಧಾನಸೌಧದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯೋಗೇಶ್ವರ್, `ಯುನೆಸ್ಕೊದ ಈ ಕ್ರಮದಿಂದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲು ಸಾಧ್ಯವಾಗುವುದಿಲ್ಲ. <br /> <br /> ಹಾಗಾಗಿ, ವಿಶ್ವ ಪರಂಪರೆಯ ಪಟ್ಟಿಗೆ ಈ ಪ್ರದೇಶಗಳನ್ನು ಸೇರಿಸಲು ಸಮ್ಮತಿ ಇಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಈ ಹಿಂದೆಯೇ ತಿಳಿಸಲಾಗಿತ್ತು. ಆದರೂ ಕೇಂದ್ರ, ರಾಜ್ಯದ ವಾದವನ್ನು ಮಾನ್ಯ ಮಾಡಿಲ್ಲ~ ಎಂದು ದೂರಿದರು.<br /> <br /> ಈಗಾಗಲೇ ಜಾರಿಯಲ್ಲಿರುವ ನಿಯಮಗಳ ಕಾರಣ, ಪಶ್ಚಿಮ ಘಟ್ಟದ ಕೆಲವು ಪ್ರದೇಶಗಳಲ್ಲಿ ರಸ್ತೆ ವಿಸ್ತರಣೆ, ವಿದ್ಯುತ್ ಸಂಪರ್ಕದಂತಹ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲು ಹಲವು ಅಡಚಣೆಗಳು ಎದುರಾಗುತ್ತಿವೆ. ಈ ಪ್ರದೇಶಗಳಲ್ಲಿ ಅಭಿವೃದ್ಧಿ ಕಾರ್ಯಗಳು ಆಗದ ಕಾರಣ ನಕ್ಸಲೀಯರ ಪಿಡುಗು ಸಹ ವ್ಯಾಪಿಸಿದೆ. ಈಗ ಇವುಗಳನ್ನು ವಿಶ್ವ ಪರಂಪರೆಯ ಪಟ್ಟಿಗೆ ಸೇರಿಸಿದರೆ, ಅಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲು ಸಾಧ್ಯವಾಗದ ಸ್ಥಿತಿ ನಿರ್ಮಾಣ ಆಗುತ್ತದೆ ಎಂದು ಹೇಳಿದರು.<br /> <br /> ಪಶ್ಚಿಮ ಘಟ್ಟದ ಅರಣ್ಯ, ವನ್ಯಜೀವಿಗಳ ಸಂರಕ್ಷಣೆಗೆ ಅಗತ್ಯ ಕಾನೂನು ಈಗಾಗಲೇ ಇದೆ. ಅಲ್ಲಿನ ಅನೇಕ ಪ್ರದೇಶಗಳನ್ನು ವನ್ಯಜೀವಿ ಅಭಯಾರಣ್ಯ, ರಾಷ್ಟ್ರೀಯ ಜೈವಿಕ ಉದ್ಯಾನವನ, ಹುಲಿ ಅಭಯಾರಣ್ಯ ಎಂದು ಘೋಷಿಸಲಾಗಿದೆ. ಈ ಪ್ರದೇಶಗಳಿಗೆ ಅನ್ವಯ ಆಗುವಂತೆ ಪ್ರತ್ಯೇಕ ಕಾನೂನು ಇದೆ. ಈಗ ಈ ಪ್ರದೇಶಗಳನ್ನು ವಿಶ್ವ ಪರಂಪರೆಯ ಪಟ್ಟಿಗೆ ಸೇರಿಸಿದರೆ, ಅಲ್ಲಿ ಹೊಸ ನಿಯಮಗಳು ಜಾರಿಯಾಗುತ್ತವೆ ಎಂದು ವಿವರಿಸಿದರು.<br /> <br /> ಪಶ್ಚಿಮ ಘಟ್ಟದಲ್ಲಿ ಬರುವ ಯಾವುದಾದರೂ ಒಂದು ಪ್ರದೇಶ ಅಥವಾ ಸ್ಮಾರಕವನ್ನು ವಿಶ್ವ ಪರಂಪರೆಯ ಪಟ್ಟಿಗೆ ಸೇರಿಸಿದರೆ ವಿರೋಧಿಸುತ್ತಿರಲಿಲ್ಲ. ಆದರೆ ವಿಸ್ತಾರವಾದ ಪ್ರದೇಶವೊಂದನ್ನು ಈ ಪಟ್ಟಿಗೆ ಸೇರಿಸಲಾಗಿದೆ. ಆ ಪ್ರದೇಶದಲ್ಲಿ ವಾಸಿಸುತ್ತಿರುವ ಜನರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಬಗ್ಗೆ ಕೇಂದ್ರ ಸರ್ಕಾರ ಚಿಂತಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ ಹಾಗೂ ತಮಿಳುನಾಡು ರಾಜ್ಯಗಳನ್ನು ಪಶ್ಚಿಮ ಘಟ್ಟ ವ್ಯಾಪಿಸಿದೆ. ಇವುಗಳ ಪೈಕಿ ಕೇರಳ ಸಹ ಯುನೆಸ್ಕೊ ಕ್ರಮವನ್ನು ವಿರೋಧಿಸಿದೆ. ಗುಜರಾತ್ ಹಾಗೂ ಗೋವಾ ರಾಜ್ಯಗಳು ಮಾತ್ರ ಯುನೆಸ್ಕೊ ಕ್ರಮವನ್ನು ಸ್ವಾಗತ ಮಾಡಿವೆ ಎಂದು ಸಚಿವರು ತಿಳಿಸಿದರು.<br /> <br /> ಪಶ್ಚಿಮ ಘಟ್ಟಗಳ ಹೆಸರನ್ನು ಯುನೆಸ್ಕೊಗೆ ಶಿಫಾರಸು ಮಾಡುವ ಮೊದಲು ಕೇಂದ್ರ ಸರ್ಕಾರ ಈ ಭಾಗದ ಜನಪ್ರತಿನಿಧಿಗಳ ಜೊತೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ಶೃಂಗೇರಿ ಶಾಸಕ ಡಿ.ಎನ್. ಜೀವರಾಜ್ ಹೇಳಿದರು.<br /> <br /> <strong>`ರಕ್ಷಣೆಗೆ ನಮ್ಮಲ್ಲೇ ಕಾನೂನು~</strong><br /> `ವಿಶ್ವ ಪರಂಪರೆ ಪಟ್ಟಿಗೆ ಪಶ್ಚಿಮ ಘಟ್ಟಗಳನ್ನು ಸೇರಿಸುವುದನ್ನು ವಿರೋಧಿಸಲು ಮೇಲ್ನೋಟಕ್ಕೆ ಕಾರಣಗಳಿಲ್ಲ. ಯುನೆಸ್ಕೊ ಈ ಪ್ರದೇಶಗಳಿಗೆ ಯಾವ ನಿಯಮಾವಳಿಗಳನ್ನು ರೂಪಿಸುತ್ತದೆ ಎಂಬುದನ್ನು ಇನ್ನಷ್ಟೇ ತಿಳಿದುಕೊಳ್ಳಬೇಕು, ಅಲ್ಲಿಯವರೆಗೆ ಖಚಿತವಾಗಿ ಏನನ್ನೂ ಹೇಳಲು ಸಾಧ್ಯವಿಲ್ಲ. ಆದರೆ ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಈ ಪಟ್ಟಿಯಲ್ಲಿ ಸೇರ್ಪಡೆಗೊಳ್ಳುವುದೊಂದೇ ಮಾರ್ಗ ಎಂಬುದು ಸುಳ್ಳು. ರಕ್ಷಣೆಗೆ ಸಾಕಷ್ಟು ಕಾನೂನುಗಳು ನಮ್ಮಲ್ಲೇ ಇವೆ~ <br /> <strong>- ಅನಂತ ಹೆಗಡೆ ಆಶೀಸರ, ಪಶ್ಚಿಮ ಘಟ್ಟ ಕಾರ್ಯಪಡೆ ಅಧ್ಯಕ್ಷ </strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>