<p>ಮಡಿಕೇರಿ: ಕೊಡಗಿನ ಅರಣ್ಯ ಭೂಮಿಯನ್ನು ವಿಶ್ವಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸುವುದನ್ನು ತಮ್ಮ ಪಕ್ಷ ವಿರೋಧಿಸುವುದಾಗಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಬಿ.ಟಿ. ಪ್ರದೀಪ್ ತಿಳಿಸಿದರು.<br /> <br /> ನಗರದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೋ ಪ್ರದೇಶದಲ್ಲಿ ಕುಳಿತು ಪರಿಸರವಾದಿಗಳು ಇಲ್ಲಿನ ಸ್ಥಳೀಯ ನಿವಾಸಿಗಳ ಜೀವಾನವಶ್ಯಕ ಅಂಶಗಳ ಬಗ್ಗೆ ಅರಿವಿಲ್ಲದೆ ವಿಶ್ವಪಾರಂಪರಿಕ ತಾಣವಾಗಿಸಲು ಹೊರಟ್ಟಿದ್ದಾರೆ ಎಂದು ಆರೋಪಿಸಿದರು.<br /> <br /> ಜಿಲ್ಲೆಯ ಅರಣ್ಯ ಭೂಮಿಯನ್ನು ವಿಶ್ವಪಾರಂಪರಿಕ ತಾಣವಾಗಿಸಿದ್ದರೆ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯು ವಂತಿಲ್ಲ ಎಂದು ಆತಂಕ ವ್ಯಕ್ತ ಪಡಿಸಿದರು. ಈ ನಿಟ್ಟಿನಲ್ಲಿ ಯಾವುದೇ ಕಾರಣಕ್ಕೂ ಜಿಲ್ಲೆಯ ಅರಣ್ಯಭೂಮಿಯನ್ನು ಯುನೆಸ್ಕೋಗೆ ಬಿಟ್ಟು ಕೊಡುವುದಿಲ್ಲ. ಜನತೆಯ ಪರವಾಗಿ ಪಕ್ಷ ಹೊರಾಟ ನಡೆಸುವುದಾಗಿ ಅವರು ತಿಳಿಸಿದರು.<br /> <br /> ಈ ಹಿನ್ನೆಲೆಯಲ್ಲಿ ಜುಲೈ 12 ರಂದು ಬಿಜೆಪಿ ಪಕ್ಷವು ಕೊಡಗು ಬಂದ್ಗೆ ಕರೆ ನೀಡಿದೆ. ಈ ಸಂಬಂಧ ಯಾವುದೇ ರಾಜಕೀಯ ಪಕ್ಷಗಳೊಂದಿಗೆ ಚರ್ಚಿಸಿ ತೀರ್ಮಾನಿಸಿಲ್ಲ, ಇದು ಕೇವಲ ರಾಜಕೀಯ ಮೇಲಾಟವಾಗಿದೆ ಎಂದು ಆರೋಪಿಸಿದರು.<br /> <br /> ಕೊಡಗು ಬಂದ್ಗೆ ಪಕ್ಷವು ಜನತೆಯ ನಿರ್ಧಾರಕ್ಕೆ ಬದ್ಧವಿರುವುದಾಗಿ ಅವರು ತಿಳಿಸಿದರು.<br /> ಮಾಜಿ ಶಾಸಕ ಎಂ.ಎಂ. ನಾಣಯ್ಯ ಅವರು ಮಾತನಾಡಿ, ವಿಶ್ವಪಾರಂಪರಿಕ ತಾಣಗಳ ಪಟ್ಟಿಗೆ ಜಿಲ್ಲೆಯನ್ನು ಸೇರಿಸಿದರೆ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ್ದ ಜಿಲ್ಲೆಯ ಶಾಸಕರು ಈಗ ತಮ್ಮ ಮಾತಿನಂತೆ ನಡೆದು ತೋರಿಸಲಿ ಎಂದು ಅವರು ಸವಾಲು ಹಾಕಿದರು.<br /> <br /> ಮಾಜಿ ಸಚಿವೆ ಸುಮಾ ವಸಂತ್ ಅವರು ಮಾತನಾಡಿ, ಜಿಲ್ಲೆಯ ಅರಣ್ಯ ಭೂಮಿಯನ್ನು ವಿಶ್ವಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಿದರೆ ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಜನಾಂಗದವರನ್ನು ಒಕ್ಕಲೆಬ್ಬಿಸುವ ಹುನ್ನಾರವಾಗಿದ್ದು, ಇದನ್ನು ಪಕ್ಷವು ವಿರೋಧಿಸುವುದಾಗಿ ಅವರು ತಿಳಿಸಿದರು.<br /> <br /> <strong>ಬಂದ್ ಬೆಂಬಲಿಸಲು ಕರೆ</strong><br /> ಮಡಿಕೇರಿ: ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಜನತೆಯ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಕೊಡಗಿನ ಅರಣ್ಯ ಪ್ರದೇಶವನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸುತ್ತಿರುವು ದನ್ನು ಕೊಡಗು ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಎಂ.ಬಿ.ದೇವಯ್ಯ ಖಂಡಿಸಿದರು.<br /> <br /> ನಗರದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಜನ ಪ್ರತಿನಿಧಿಗಳು ಹಾಗೂ ಸ್ಥಳೀಯ ನಿವಾಸಿಗಳ ವಿರೋಧದ ನಡುವೆ ಏಕ ಪಕ್ಷೀಯವಾಗಿ ಕೇಂದ್ರ ಸರ್ಕಾರ ಈ ತೀರ್ಮಾನ ಕೈಗೊಂಡಿದ್ದು, ಯಾವುದೇ ಕಾರಣಕ್ಕೂ ಜಿಲ್ಲೆಯ ಅರಣ್ಯ ಭೂಮಿಯನ್ನು ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿಸಲು ಬಿಡುವುದಿಲ್ಲ ಎಂದರು.<br /> <br /> ಜಿಲ್ಲೆಯ ಅರಣ್ಯ ಭೂಮಿಯನ್ನು ವಿಶ್ವಪಾರಂಪರಿಕ ಪಟ್ಟಿಗೆ ಸೇರಿಸುವ ಕುರಿತು ರಚಿಸಿರುವ ಆಯೋಗದ ವರದಿಯು ಜಿಲ್ಲೆಯಲ್ಲಿಯ ಕಾಫಿ ಸೇರಿದಂತೆ ವಾಣಿಜ್ಯ ಬೆಳೆಯ ವಿರುದ್ಧವಾಗಿದ್ದು, ಇದರ ಅನ್ವಯ ಜಿಲ್ಲೆಯ ಸಾವಿರಾರು ಕೃಷಿಕರು ಹಾಗೂ ಕಾರ್ಮಿಕ ವರ್ಗದವರು ಸಂಕಷ್ಟ ಎದುರಿಸುವಂತಾಗುವುದು ಎಂದರು.<br /> <br /> ಜಿಲ್ಲೆಯ ಅರಣ್ಯ ಭೂಮಿಯನ್ನು ಯುನೆಸ್ಕೋಗೆ ನೀಡುವ ಮೂಲಕ ಜಿಲ್ಲೆಯ ಜನತೆಯನ್ನು ನಿರಾಶ್ರಿತರಾಗಿ ಮಾಡುವ ಕೇಂದ್ರ ಸರ್ಕಾರದ ಈ ನೀತಿಯ ವಿರುದ್ಧ ಜಿಲ್ಲೆಯ ಎಲ್ಲಾ ರಾಜಕೀಯ ಪಕ್ಷಗಳು ಒಕ್ಕೊರಲಿನಿಂದ ಹೋರಾಟ ನಡೆಸಬೇಕಿದೆ ಎಂದರು.<br /> <br /> ಈ ನಿಟ್ಟಿನಲ್ಲಿ ಜುಲೈ 12 ರಂದು ಕೊಡಗು ಬಂದ್ಗೆ ಬಿಜೆಪಿ ಪಕ್ಷವು ಕರೆ ನೀಡಿದ್ದು, ಎಲ್ಲರೂ ಈ ಬಂದ್ಗೆ ಬೆಂಬಲ ನೀಡಬೇಕೆಂದು ಕೋರಿದರು.<br /> <br /> ಪತ್ರಿಕಾಗೋಷ್ಠಿಯಲ್ಲಿ ಕೊಡಗು ಕಾಫಿ ಬೆಳೆಗಾರರ ಸಂಘದ ಪದಾಧಿಕಾರಿಗಳಾದ ಕೆ.ಕೆ. ಗಣೇಶ್, ಎನ್.ಕೆ. ಐಯಣ್ಣ, ಬಿ.ಸಿ. ಕಾವೇರಪ್ಪ, ಲೀಲಾ ಮೇದಪ್ಪ ಉಪಸ್ಥಿತರಿದ್ದರು.<br /> <br /> <strong>ಪಾರಂಪರಿಕ ತಾಣಕ್ಕೆ ವಿರೋಧ</strong><br /> ವಿರಾಜಪೇಟೆ: ಯುನೆಸ್ಕೊ ವಿಶ್ವ ಪಾರಂಪರಿಕ ತಾಣಕ್ಕೆ ಪಶ್ಚಿಮ ಘಟ್ಟವನ್ನು ಸೇರ್ಪಡೆಗೊಳಿಸುವ ನಿರ್ಧಾರಕ್ಕೆ ಜಯ ಕರ್ನಾಟಕ ಸಂಘಟನೆ ವಿರೋಧಿಸುವುದಾಗಿ ನಗರ ಸಮಿತಿ ಅಧ್ಯಕ್ಷ ಮಂಡೇಟಿರ ಅನಿಲ್ ಅಯ್ಯಪ್ಪ ತಿಳಿಸಿದ್ದಾರೆ.<br /> <br /> ರಾಜ್ಯ ಸರ್ಕಾರ, ಜನ ಪ್ರತಿನಿಧಿಗಳು, ವಿವಿಧ ರಾಜಕೀಯ ಪಕ್ಷಗಳ ನಾಯಕರು ಇದನ್ನು ಒಮ್ಮತವಾಗಿ ವಿರೋಧಿಸಬೇಕು. ಪಶ್ಚಿಮ ಘಟ್ಟ ಯಥಾಸ್ಥಿತಿಯಲ್ಲಿ ಮುಂದುವರಿಯಬೇಕು. ಇದಕ್ಕಾಗಿ ಗುರುವಾರ(ತಾ.12) ವಿವಿಧ ಸಂಘಟನೆಗಳು ಕೈಗೊಂಡಿರುವ ಕೊಡಗು ಬಂದ್ಗೆ ಪೂರ್ಣ ಬೆಂಬಲ ನೀಡುವುದಾಗಿ ಅವರು ಹೇಳಿದ್ದಾರೆ.<br /> <br /> <strong>ಬಂದ್: ಚೇಂಬರ್ ಆಫ್ ಕಾಮರ್ಸ್ ಬೆಂಬಲ </strong> <br /> ವಿರಾಜಪೇಟೆ: ಪಶ್ಚಿಮ ಘಟ್ಟವನ್ನು ವಿಶ್ವ ಪಾರಂಪರಿಕ ತಾಣಕ್ಕೆ ಸೇರಿಸುವುದನ್ನು ವಿರೋಧಿಸಿ ಜಿಲ್ಲೆಯ ಸಂಘಟನೆಗಳು ನಿರ್ಧರಿಸಿರುವ ಗುರುವಾರದ (12) ಕೊಡಗು ಬಂದ್ಗೆ ವಿರಾಜಪೇಟೆಯ ಚೇಂಬರ್ ಆಫ್ ಕಾಮರ್ಸ್ನ ಸ್ಥಾನೀಯ ಸಮಿತಿ ಬೆಂಬಲ ಸೂಚಿಸಿರುವುದಾಗಿ ಅಧ್ಯಕ್ಷ ಎಂ.ಪಿ.ಕಾಶಿ ಕಾವೇರಪ್ಪ<br /> ತಿಳಿಸಿದ್ದಾರೆ. ವಿರಾಜಪೇಟೆಯ ಪಟ್ಟಣದ ವರ್ತಕರು ಅಂದು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದ್ಗೆ ಸಹಕರಿಸುವಂತೆ ವಿನಂತಿಸಲಾಗಿದೆ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ಕೊಡಗಿನ ಅರಣ್ಯ ಭೂಮಿಯನ್ನು ವಿಶ್ವಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸುವುದನ್ನು ತಮ್ಮ ಪಕ್ಷ ವಿರೋಧಿಸುವುದಾಗಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಬಿ.ಟಿ. ಪ್ರದೀಪ್ ತಿಳಿಸಿದರು.<br /> <br /> ನಗರದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೋ ಪ್ರದೇಶದಲ್ಲಿ ಕುಳಿತು ಪರಿಸರವಾದಿಗಳು ಇಲ್ಲಿನ ಸ್ಥಳೀಯ ನಿವಾಸಿಗಳ ಜೀವಾನವಶ್ಯಕ ಅಂಶಗಳ ಬಗ್ಗೆ ಅರಿವಿಲ್ಲದೆ ವಿಶ್ವಪಾರಂಪರಿಕ ತಾಣವಾಗಿಸಲು ಹೊರಟ್ಟಿದ್ದಾರೆ ಎಂದು ಆರೋಪಿಸಿದರು.<br /> <br /> ಜಿಲ್ಲೆಯ ಅರಣ್ಯ ಭೂಮಿಯನ್ನು ವಿಶ್ವಪಾರಂಪರಿಕ ತಾಣವಾಗಿಸಿದ್ದರೆ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯು ವಂತಿಲ್ಲ ಎಂದು ಆತಂಕ ವ್ಯಕ್ತ ಪಡಿಸಿದರು. ಈ ನಿಟ್ಟಿನಲ್ಲಿ ಯಾವುದೇ ಕಾರಣಕ್ಕೂ ಜಿಲ್ಲೆಯ ಅರಣ್ಯಭೂಮಿಯನ್ನು ಯುನೆಸ್ಕೋಗೆ ಬಿಟ್ಟು ಕೊಡುವುದಿಲ್ಲ. ಜನತೆಯ ಪರವಾಗಿ ಪಕ್ಷ ಹೊರಾಟ ನಡೆಸುವುದಾಗಿ ಅವರು ತಿಳಿಸಿದರು.<br /> <br /> ಈ ಹಿನ್ನೆಲೆಯಲ್ಲಿ ಜುಲೈ 12 ರಂದು ಬಿಜೆಪಿ ಪಕ್ಷವು ಕೊಡಗು ಬಂದ್ಗೆ ಕರೆ ನೀಡಿದೆ. ಈ ಸಂಬಂಧ ಯಾವುದೇ ರಾಜಕೀಯ ಪಕ್ಷಗಳೊಂದಿಗೆ ಚರ್ಚಿಸಿ ತೀರ್ಮಾನಿಸಿಲ್ಲ, ಇದು ಕೇವಲ ರಾಜಕೀಯ ಮೇಲಾಟವಾಗಿದೆ ಎಂದು ಆರೋಪಿಸಿದರು.<br /> <br /> ಕೊಡಗು ಬಂದ್ಗೆ ಪಕ್ಷವು ಜನತೆಯ ನಿರ್ಧಾರಕ್ಕೆ ಬದ್ಧವಿರುವುದಾಗಿ ಅವರು ತಿಳಿಸಿದರು.<br /> ಮಾಜಿ ಶಾಸಕ ಎಂ.ಎಂ. ನಾಣಯ್ಯ ಅವರು ಮಾತನಾಡಿ, ವಿಶ್ವಪಾರಂಪರಿಕ ತಾಣಗಳ ಪಟ್ಟಿಗೆ ಜಿಲ್ಲೆಯನ್ನು ಸೇರಿಸಿದರೆ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ್ದ ಜಿಲ್ಲೆಯ ಶಾಸಕರು ಈಗ ತಮ್ಮ ಮಾತಿನಂತೆ ನಡೆದು ತೋರಿಸಲಿ ಎಂದು ಅವರು ಸವಾಲು ಹಾಕಿದರು.<br /> <br /> ಮಾಜಿ ಸಚಿವೆ ಸುಮಾ ವಸಂತ್ ಅವರು ಮಾತನಾಡಿ, ಜಿಲ್ಲೆಯ ಅರಣ್ಯ ಭೂಮಿಯನ್ನು ವಿಶ್ವಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಿದರೆ ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಜನಾಂಗದವರನ್ನು ಒಕ್ಕಲೆಬ್ಬಿಸುವ ಹುನ್ನಾರವಾಗಿದ್ದು, ಇದನ್ನು ಪಕ್ಷವು ವಿರೋಧಿಸುವುದಾಗಿ ಅವರು ತಿಳಿಸಿದರು.<br /> <br /> <strong>ಬಂದ್ ಬೆಂಬಲಿಸಲು ಕರೆ</strong><br /> ಮಡಿಕೇರಿ: ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಜನತೆಯ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಕೊಡಗಿನ ಅರಣ್ಯ ಪ್ರದೇಶವನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸುತ್ತಿರುವು ದನ್ನು ಕೊಡಗು ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಎಂ.ಬಿ.ದೇವಯ್ಯ ಖಂಡಿಸಿದರು.<br /> <br /> ನಗರದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಜನ ಪ್ರತಿನಿಧಿಗಳು ಹಾಗೂ ಸ್ಥಳೀಯ ನಿವಾಸಿಗಳ ವಿರೋಧದ ನಡುವೆ ಏಕ ಪಕ್ಷೀಯವಾಗಿ ಕೇಂದ್ರ ಸರ್ಕಾರ ಈ ತೀರ್ಮಾನ ಕೈಗೊಂಡಿದ್ದು, ಯಾವುದೇ ಕಾರಣಕ್ಕೂ ಜಿಲ್ಲೆಯ ಅರಣ್ಯ ಭೂಮಿಯನ್ನು ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿಸಲು ಬಿಡುವುದಿಲ್ಲ ಎಂದರು.<br /> <br /> ಜಿಲ್ಲೆಯ ಅರಣ್ಯ ಭೂಮಿಯನ್ನು ವಿಶ್ವಪಾರಂಪರಿಕ ಪಟ್ಟಿಗೆ ಸೇರಿಸುವ ಕುರಿತು ರಚಿಸಿರುವ ಆಯೋಗದ ವರದಿಯು ಜಿಲ್ಲೆಯಲ್ಲಿಯ ಕಾಫಿ ಸೇರಿದಂತೆ ವಾಣಿಜ್ಯ ಬೆಳೆಯ ವಿರುದ್ಧವಾಗಿದ್ದು, ಇದರ ಅನ್ವಯ ಜಿಲ್ಲೆಯ ಸಾವಿರಾರು ಕೃಷಿಕರು ಹಾಗೂ ಕಾರ್ಮಿಕ ವರ್ಗದವರು ಸಂಕಷ್ಟ ಎದುರಿಸುವಂತಾಗುವುದು ಎಂದರು.<br /> <br /> ಜಿಲ್ಲೆಯ ಅರಣ್ಯ ಭೂಮಿಯನ್ನು ಯುನೆಸ್ಕೋಗೆ ನೀಡುವ ಮೂಲಕ ಜಿಲ್ಲೆಯ ಜನತೆಯನ್ನು ನಿರಾಶ್ರಿತರಾಗಿ ಮಾಡುವ ಕೇಂದ್ರ ಸರ್ಕಾರದ ಈ ನೀತಿಯ ವಿರುದ್ಧ ಜಿಲ್ಲೆಯ ಎಲ್ಲಾ ರಾಜಕೀಯ ಪಕ್ಷಗಳು ಒಕ್ಕೊರಲಿನಿಂದ ಹೋರಾಟ ನಡೆಸಬೇಕಿದೆ ಎಂದರು.<br /> <br /> ಈ ನಿಟ್ಟಿನಲ್ಲಿ ಜುಲೈ 12 ರಂದು ಕೊಡಗು ಬಂದ್ಗೆ ಬಿಜೆಪಿ ಪಕ್ಷವು ಕರೆ ನೀಡಿದ್ದು, ಎಲ್ಲರೂ ಈ ಬಂದ್ಗೆ ಬೆಂಬಲ ನೀಡಬೇಕೆಂದು ಕೋರಿದರು.<br /> <br /> ಪತ್ರಿಕಾಗೋಷ್ಠಿಯಲ್ಲಿ ಕೊಡಗು ಕಾಫಿ ಬೆಳೆಗಾರರ ಸಂಘದ ಪದಾಧಿಕಾರಿಗಳಾದ ಕೆ.ಕೆ. ಗಣೇಶ್, ಎನ್.ಕೆ. ಐಯಣ್ಣ, ಬಿ.ಸಿ. ಕಾವೇರಪ್ಪ, ಲೀಲಾ ಮೇದಪ್ಪ ಉಪಸ್ಥಿತರಿದ್ದರು.<br /> <br /> <strong>ಪಾರಂಪರಿಕ ತಾಣಕ್ಕೆ ವಿರೋಧ</strong><br /> ವಿರಾಜಪೇಟೆ: ಯುನೆಸ್ಕೊ ವಿಶ್ವ ಪಾರಂಪರಿಕ ತಾಣಕ್ಕೆ ಪಶ್ಚಿಮ ಘಟ್ಟವನ್ನು ಸೇರ್ಪಡೆಗೊಳಿಸುವ ನಿರ್ಧಾರಕ್ಕೆ ಜಯ ಕರ್ನಾಟಕ ಸಂಘಟನೆ ವಿರೋಧಿಸುವುದಾಗಿ ನಗರ ಸಮಿತಿ ಅಧ್ಯಕ್ಷ ಮಂಡೇಟಿರ ಅನಿಲ್ ಅಯ್ಯಪ್ಪ ತಿಳಿಸಿದ್ದಾರೆ.<br /> <br /> ರಾಜ್ಯ ಸರ್ಕಾರ, ಜನ ಪ್ರತಿನಿಧಿಗಳು, ವಿವಿಧ ರಾಜಕೀಯ ಪಕ್ಷಗಳ ನಾಯಕರು ಇದನ್ನು ಒಮ್ಮತವಾಗಿ ವಿರೋಧಿಸಬೇಕು. ಪಶ್ಚಿಮ ಘಟ್ಟ ಯಥಾಸ್ಥಿತಿಯಲ್ಲಿ ಮುಂದುವರಿಯಬೇಕು. ಇದಕ್ಕಾಗಿ ಗುರುವಾರ(ತಾ.12) ವಿವಿಧ ಸಂಘಟನೆಗಳು ಕೈಗೊಂಡಿರುವ ಕೊಡಗು ಬಂದ್ಗೆ ಪೂರ್ಣ ಬೆಂಬಲ ನೀಡುವುದಾಗಿ ಅವರು ಹೇಳಿದ್ದಾರೆ.<br /> <br /> <strong>ಬಂದ್: ಚೇಂಬರ್ ಆಫ್ ಕಾಮರ್ಸ್ ಬೆಂಬಲ </strong> <br /> ವಿರಾಜಪೇಟೆ: ಪಶ್ಚಿಮ ಘಟ್ಟವನ್ನು ವಿಶ್ವ ಪಾರಂಪರಿಕ ತಾಣಕ್ಕೆ ಸೇರಿಸುವುದನ್ನು ವಿರೋಧಿಸಿ ಜಿಲ್ಲೆಯ ಸಂಘಟನೆಗಳು ನಿರ್ಧರಿಸಿರುವ ಗುರುವಾರದ (12) ಕೊಡಗು ಬಂದ್ಗೆ ವಿರಾಜಪೇಟೆಯ ಚೇಂಬರ್ ಆಫ್ ಕಾಮರ್ಸ್ನ ಸ್ಥಾನೀಯ ಸಮಿತಿ ಬೆಂಬಲ ಸೂಚಿಸಿರುವುದಾಗಿ ಅಧ್ಯಕ್ಷ ಎಂ.ಪಿ.ಕಾಶಿ ಕಾವೇರಪ್ಪ<br /> ತಿಳಿಸಿದ್ದಾರೆ. ವಿರಾಜಪೇಟೆಯ ಪಟ್ಟಣದ ವರ್ತಕರು ಅಂದು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದ್ಗೆ ಸಹಕರಿಸುವಂತೆ ವಿನಂತಿಸಲಾಗಿದೆ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>