<p><strong>ಬೆಂಗಳೂರು: </strong>ಚಿತ್ರನಟ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕಾಗಿ ಅಭಿಮಾನ್ ಸ್ಟುಡಿಯೊ ಆವರಣದಲ್ಲಿನ ಅವರ ಸಮಾಧಿಗೆ ಹೊಂದಿಕೊಂಡಂತಿರುವ ಎರಡು ಎಕರೆ ಜಮೀನನ್ನು ವಿಷ್ಣುವರ್ಧನ್ ಸ್ಮಾರಕ ಟ್ರಸ್ಟ್ಗೆ ರಾಜ್ಯ ಸರ್ಕಾರ ಬುಧವಾರ ಹಸ್ತಾಂತರಿಸಿದೆ.<br /> <br /> ವಿಷ್ಣುವರ್ಧನ್ ಅವರ ಸಮಾಧಿ ಇರುವ ಸ್ಥಳದಲ್ಲೇ ಸ್ಮಾರಕ ನಿರ್ಮಾಣ ಕಾಮಗಾರಿ ಆರಂಭಿಸಲು ಟ್ರಸ್ಟ್ ಯೋಚಿಸಿತ್ತು. ಆದರೆ, ಚಿತ್ರನಟ ಬಾಲಕೃಷ್ಣ ಅವರ ಮಕ್ಕಳ ಒಡೆತನದಲ್ಲಿರುವ ಅಭಿಮಾನ್ ಸ್ಟುಡಿಯೊ ಆವರಣದಲ್ಲಿ ವಿಷ್ಣುವರ್ಧನ್ ಸ್ಮಾರಕ ಇದೆ.<br /> <br /> ಈ ಜಮೀನಿನ ಒಡೆತನಕ್ಕೆ ಸಂಬಂಧಿಸಿದ ಪ್ರಕರಣ ನ್ಯಾಯಾಲಯದಲ್ಲಿದೆ. ಇದರಿಂದಾಗಿ ಆ ಜಮೀನನ್ನು ಸ್ವಾಧೀನಕ್ಕೆ ಪಡೆದು, ಟ್ರಸ್ಟ್ ವಶಕ್ಕೆ ನೀಡಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ.<br /> <br /> ಸಮಾಧಿಗೆ ಹೊಂದಿಕೊಂಡಿರುವ ಇತರೆ ಎರಡು ಎಕರೆ ಜಮೀನನ್ನು ಸ್ವಾಧೀನಪಡಿಸಿಕೊಂಡು, ಟ್ರಸ್ಟ್ಗೆ ಹಸ್ತಾಂತರ ಮಾಡಲಾಗಿದೆ. ಮುಖ್ಯಮಂತ್ರಿಯವರ ಗೃಹ ಕಚೇರಿ `ಕೃಷ್ಣಾ'ದಲ್ಲಿ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾರತಿ ವಿಷ್ಣುವರ್ಧನ್ ಅವರಿಗೆ ಜಮೀನು ಹಸ್ತಾಂತರದ ಆದೇಶದ ಪ್ರತಿಯನ್ನು ನೀಡಿದರು.<br /> <br /> ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ, `ಸಮಾಧಿ ಇರುವ ಜಮೀನನ್ನೇ ನೀಡುವಂತೆ ಭಾರತಿ ವಿಷ್ಣುವರ್ಧನ್ ಮನವಿ ಮಾಡಿದ್ದರು. ಆದರೆ, ಆ ಜಮೀನಿನ ಒಡೆತನಕ್ಕೆ ಸಂಬಂಧಿಸಿದ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ. ವಿವಾದ ಬಗೆಹರಿದರೆ ಆ ಜಮೀನನ್ನೂ ನೀಡಲಾಗುವುದು. ಈಗ ಅದಕ್ಕೆ ಹೊಂದಿಕೊಂಡಿರುವ ಜಮೀನನ್ನು ನೀಡಿದ್ದೇವೆ' ಎಂದರು.<br /> <br /> `ಸಮಾಧಿ ನಿರ್ಮಾಣಕ್ಕಾಗಿ ಸರ್ಕಾರ ನೀಡಿರುವ ಐದು ಕೋಟಿ ರೂಪಾಯಿ ಟ್ರಸ್ಟ್ ಬಳಿ ಇದೆ. ಶೀಘ್ರದಲ್ಲಿ ಕಾಮಗಾರಿ ಆರಂಭವಾಗಲಿದೆ. ಇದಕ್ಕೆ ಬೇಕಿರುವ ಎಲ್ಲಾ ರೀತಿಯ ಸಹಕಾರವನ್ನು ಸರ್ಕಾರ ನೀಡಲಿದೆ' ಎಂದು ಭರವಸೆ ನೀಡಿದರು.<br /> <br /> ವಿಷ್ಣುವರ್ಧನ್ ಅವರ ಅಳಿಯ ಅನಿರುದ್ಧ, ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಿ.ವಿಜಯಕುಮಾರ್, ಹಿರಿಯ ನಟ ಶಿವರಾಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಬಸವರಾಜ್ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಚಿತ್ರನಟ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕಾಗಿ ಅಭಿಮಾನ್ ಸ್ಟುಡಿಯೊ ಆವರಣದಲ್ಲಿನ ಅವರ ಸಮಾಧಿಗೆ ಹೊಂದಿಕೊಂಡಂತಿರುವ ಎರಡು ಎಕರೆ ಜಮೀನನ್ನು ವಿಷ್ಣುವರ್ಧನ್ ಸ್ಮಾರಕ ಟ್ರಸ್ಟ್ಗೆ ರಾಜ್ಯ ಸರ್ಕಾರ ಬುಧವಾರ ಹಸ್ತಾಂತರಿಸಿದೆ.<br /> <br /> ವಿಷ್ಣುವರ್ಧನ್ ಅವರ ಸಮಾಧಿ ಇರುವ ಸ್ಥಳದಲ್ಲೇ ಸ್ಮಾರಕ ನಿರ್ಮಾಣ ಕಾಮಗಾರಿ ಆರಂಭಿಸಲು ಟ್ರಸ್ಟ್ ಯೋಚಿಸಿತ್ತು. ಆದರೆ, ಚಿತ್ರನಟ ಬಾಲಕೃಷ್ಣ ಅವರ ಮಕ್ಕಳ ಒಡೆತನದಲ್ಲಿರುವ ಅಭಿಮಾನ್ ಸ್ಟುಡಿಯೊ ಆವರಣದಲ್ಲಿ ವಿಷ್ಣುವರ್ಧನ್ ಸ್ಮಾರಕ ಇದೆ.<br /> <br /> ಈ ಜಮೀನಿನ ಒಡೆತನಕ್ಕೆ ಸಂಬಂಧಿಸಿದ ಪ್ರಕರಣ ನ್ಯಾಯಾಲಯದಲ್ಲಿದೆ. ಇದರಿಂದಾಗಿ ಆ ಜಮೀನನ್ನು ಸ್ವಾಧೀನಕ್ಕೆ ಪಡೆದು, ಟ್ರಸ್ಟ್ ವಶಕ್ಕೆ ನೀಡಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ.<br /> <br /> ಸಮಾಧಿಗೆ ಹೊಂದಿಕೊಂಡಿರುವ ಇತರೆ ಎರಡು ಎಕರೆ ಜಮೀನನ್ನು ಸ್ವಾಧೀನಪಡಿಸಿಕೊಂಡು, ಟ್ರಸ್ಟ್ಗೆ ಹಸ್ತಾಂತರ ಮಾಡಲಾಗಿದೆ. ಮುಖ್ಯಮಂತ್ರಿಯವರ ಗೃಹ ಕಚೇರಿ `ಕೃಷ್ಣಾ'ದಲ್ಲಿ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾರತಿ ವಿಷ್ಣುವರ್ಧನ್ ಅವರಿಗೆ ಜಮೀನು ಹಸ್ತಾಂತರದ ಆದೇಶದ ಪ್ರತಿಯನ್ನು ನೀಡಿದರು.<br /> <br /> ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ, `ಸಮಾಧಿ ಇರುವ ಜಮೀನನ್ನೇ ನೀಡುವಂತೆ ಭಾರತಿ ವಿಷ್ಣುವರ್ಧನ್ ಮನವಿ ಮಾಡಿದ್ದರು. ಆದರೆ, ಆ ಜಮೀನಿನ ಒಡೆತನಕ್ಕೆ ಸಂಬಂಧಿಸಿದ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ. ವಿವಾದ ಬಗೆಹರಿದರೆ ಆ ಜಮೀನನ್ನೂ ನೀಡಲಾಗುವುದು. ಈಗ ಅದಕ್ಕೆ ಹೊಂದಿಕೊಂಡಿರುವ ಜಮೀನನ್ನು ನೀಡಿದ್ದೇವೆ' ಎಂದರು.<br /> <br /> `ಸಮಾಧಿ ನಿರ್ಮಾಣಕ್ಕಾಗಿ ಸರ್ಕಾರ ನೀಡಿರುವ ಐದು ಕೋಟಿ ರೂಪಾಯಿ ಟ್ರಸ್ಟ್ ಬಳಿ ಇದೆ. ಶೀಘ್ರದಲ್ಲಿ ಕಾಮಗಾರಿ ಆರಂಭವಾಗಲಿದೆ. ಇದಕ್ಕೆ ಬೇಕಿರುವ ಎಲ್ಲಾ ರೀತಿಯ ಸಹಕಾರವನ್ನು ಸರ್ಕಾರ ನೀಡಲಿದೆ' ಎಂದು ಭರವಸೆ ನೀಡಿದರು.<br /> <br /> ವಿಷ್ಣುವರ್ಧನ್ ಅವರ ಅಳಿಯ ಅನಿರುದ್ಧ, ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಿ.ವಿಜಯಕುಮಾರ್, ಹಿರಿಯ ನಟ ಶಿವರಾಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಬಸವರಾಜ್ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>