<p><strong>ಕೃಷ್ಣರಾಜಪುರ:</strong> `ಈಗ ರಾಜಕಾರಣ ಮೌಲ್ಯ ಕಳೆದುಕೊಂಡಿದ್ದು ಬಹಳಷ್ಟು ವೀರಶೈವ ಜನ ಪ್ರತಿನಿಧಿಗಳು ರಾಜಕೀಯವಾಗಿ ಅಪರಾಧಿ ಸ್ಥಾನದಲ್ಲಿದ್ದಾರೆ~ ಎಂದು ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.<br /> <br /> ವೀರಶೈವ ಯುವಕ, ಮಹಿಳಾ ಸಂಘದ ಕ್ಷೇತ್ರ ಘಟಕದ ವತಿಯಿಂದ ಸರ್ಕಾರಿ ಕಾಲೇಜು ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ಸಂಘದ 18ನೇ ವಾರ್ಷಿಕೋತ್ಸವ ಮತ್ತು ಬಸವ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. <br /> <br /> `ರಾಜ್ಯದ ಉದ್ದಗಲಕ್ಕೂ ವೀರಶೈವರು ಅಧಿಕ ಸಂಖ್ಯೆಯಲ್ಲಿ ಇದ್ದಾರೆ. ಆದರೆ ಇಂದು ವೀರಶೈವರು ರಾಜಕೀಯ ಶಕ್ತಿಯಾಗಿ ಬೆಳೆದಿಲ್ಲ ಎಂದರು. <br /> <br /> ಸಾನಿಧ್ಯ ವಹಿಸಿದ್ದ ವಿಭೂತಿಪುರ ಮಠದ ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, `ಶರೀರ ಮತ್ತು ಮನಸ್ಸನ್ನು ಆರೋಗ್ಯಕರವಾಗಿ ಇಡುವ ನಿಟ್ಟಿನಲ್ಲಿ ದಾರ್ಶನಿಕರ ಚಿಂತನೆ ಮತ್ತು ಮಾರ್ಗದರ್ಶನ ಅನನ್ಯವಾದುದು~ ಎಂದರು. <br /> ಶಾಸಕ ಎನ್.ಎಸ್.ನಂದೀಶ ರೆಡ್ಡಿ, ಸಂಸದ ಸುರೇಶ್ ಅಂಗಡಿ, ಪಾಲಿಕೆ ಸದಸ್ಯೆ ಕೆ.ಪೂರ್ಣಿಮಾ, ಆರ್. ಪೂರ್ಣಿಮಾ, ಎನ್.ವೀರಣ್ಣ, ಸಂಘದ ಅಧ್ಯಕ್ಷ ಸಿದ್ದಲಿಂಗಯ್ಯ, ಕಾರ್ಯದರ್ಶಿ ಚಂದ್ರಯ್ಯ, ಜಗದೀಶ್, ಈಶ್ವರ ವಾಲಿ, ಸುಶೀಲಮ್ಮ ಉಪಸ್ಥಿತರಿದ್ದರು. <br /> <br /> ಬಸವೇಶವರ ದೇವಸ್ಥಾನ ಜೀರ್ಣೋದ್ಧಾರಕ್ಕೆ ನೆರವು ನೀಡಿದ ಪಾಲಿಕೆ ಸದಸ್ಯ ಬೈರತಿ ಎ.ಬಸವರಾಜ್, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೃಷ್ಣರಾಜಪುರ:</strong> `ಈಗ ರಾಜಕಾರಣ ಮೌಲ್ಯ ಕಳೆದುಕೊಂಡಿದ್ದು ಬಹಳಷ್ಟು ವೀರಶೈವ ಜನ ಪ್ರತಿನಿಧಿಗಳು ರಾಜಕೀಯವಾಗಿ ಅಪರಾಧಿ ಸ್ಥಾನದಲ್ಲಿದ್ದಾರೆ~ ಎಂದು ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.<br /> <br /> ವೀರಶೈವ ಯುವಕ, ಮಹಿಳಾ ಸಂಘದ ಕ್ಷೇತ್ರ ಘಟಕದ ವತಿಯಿಂದ ಸರ್ಕಾರಿ ಕಾಲೇಜು ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ಸಂಘದ 18ನೇ ವಾರ್ಷಿಕೋತ್ಸವ ಮತ್ತು ಬಸವ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. <br /> <br /> `ರಾಜ್ಯದ ಉದ್ದಗಲಕ್ಕೂ ವೀರಶೈವರು ಅಧಿಕ ಸಂಖ್ಯೆಯಲ್ಲಿ ಇದ್ದಾರೆ. ಆದರೆ ಇಂದು ವೀರಶೈವರು ರಾಜಕೀಯ ಶಕ್ತಿಯಾಗಿ ಬೆಳೆದಿಲ್ಲ ಎಂದರು. <br /> <br /> ಸಾನಿಧ್ಯ ವಹಿಸಿದ್ದ ವಿಭೂತಿಪುರ ಮಠದ ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, `ಶರೀರ ಮತ್ತು ಮನಸ್ಸನ್ನು ಆರೋಗ್ಯಕರವಾಗಿ ಇಡುವ ನಿಟ್ಟಿನಲ್ಲಿ ದಾರ್ಶನಿಕರ ಚಿಂತನೆ ಮತ್ತು ಮಾರ್ಗದರ್ಶನ ಅನನ್ಯವಾದುದು~ ಎಂದರು. <br /> ಶಾಸಕ ಎನ್.ಎಸ್.ನಂದೀಶ ರೆಡ್ಡಿ, ಸಂಸದ ಸುರೇಶ್ ಅಂಗಡಿ, ಪಾಲಿಕೆ ಸದಸ್ಯೆ ಕೆ.ಪೂರ್ಣಿಮಾ, ಆರ್. ಪೂರ್ಣಿಮಾ, ಎನ್.ವೀರಣ್ಣ, ಸಂಘದ ಅಧ್ಯಕ್ಷ ಸಿದ್ದಲಿಂಗಯ್ಯ, ಕಾರ್ಯದರ್ಶಿ ಚಂದ್ರಯ್ಯ, ಜಗದೀಶ್, ಈಶ್ವರ ವಾಲಿ, ಸುಶೀಲಮ್ಮ ಉಪಸ್ಥಿತರಿದ್ದರು. <br /> <br /> ಬಸವೇಶವರ ದೇವಸ್ಥಾನ ಜೀರ್ಣೋದ್ಧಾರಕ್ಕೆ ನೆರವು ನೀಡಿದ ಪಾಲಿಕೆ ಸದಸ್ಯ ಬೈರತಿ ಎ.ಬಸವರಾಜ್, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>