<p>ಬೆಂಗಳೂರು: `ಅಖಿಲ ಭಾರತ ವೀರಶೈವ ಮಹಾಸಭೆ ಅಧ್ಯಕ್ಷ ಭೀಮಣ್ಣ ಖಂಡ್ರೆ ಮಹಾಸಭಾದಲ್ಲಿ ಬಹಳಷ್ಟು ಅವ್ಯವಹಾರಗಳನ್ನು ನಡೆಸಿದ್ದಾರೆ~ ಎಂದು ಶಾಸಕ ಚಂದ್ರಕಾಂತ ಬೆಲ್ಲದ್ ಆರೋಪಿಸಿದರು.<br /> <br /> ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಖಂಡ್ರೆ ತಮ್ಮ ಸೇವಾವಧಿ ಮುಗಿದಿದ್ದರೂ ಇನ್ನೂ ಅಧಿಕಾರಾ ವಧಿಯಿದೆ ಎಂದು ಸಾಧಿಸುತ್ತಿದ್ದಾರೆ. ಅಧಿಕಾರವಧಿ ಪೂರ್ಣಗೊಳ್ಳುವುದಕ್ಕಿಂತ 30 ದಿನಗಳು ಮೊದಲು ಚುನಾವಣೆ ಮಾಡಬೇಕಿತ್ತು. ಆದರೆ ಚುನಾವಣೆ ಕೈಗೊಳ್ಳದೆ, ಸಾರ್ವಭೌಮರಾಗಿ ವರ್ತಿಸುತಿದ್ದಾರೆ. ತಮ್ಮ ಪರವಾಗಿರುವವರನ್ನು ಮಾತ್ರ ಆಯಕಟ್ಟಿನ ಸ್ಥಾನದಲ್ಲಿ ಕೂರಿಸಿದ್ದಾರೆ~ ಎಂದು ಆಪಾದಿಸಿದರು.<br /> <br /> `ಖಂಡ್ರೆ ಸದಸ್ಯತ್ವ ಶುಲ್ಕ ಪಾವತಿಸಿರುವ ಸುಮಾರು ನಾಲ್ಕು ಸಾವಿರ ಜನರಿಗೆ ಸದಸ್ಯತ್ವ ನೀಡದೆ, ತಮ್ಮ ಬೆಂಬಲಿಗರನ್ನು ಮಾತ್ರ ಸದಸ್ಯರನ್ನಾಗಿ ನೇಮಿಸಿಕೊಂಡಿದ್ದಾರೆ. ಇದರಿಂದ ಮಹಾಸಭೆಯನ್ನು ಅವರ ಸ್ವಾರ್ಥ ಸಾಧನೆಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ~ ಎಂದು ದೂರಿದರು.<br /> <br /> `ಈ ಕ್ರಮವನ್ನು ಪರಿಶೀಲಿಸಿ, ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು~ ಎಂದು ಒತ್ತಾಯಿಸಿದರು.<br /> ಗೋಷ್ಠಿಯಲ್ಲಿ ಮಹಾಸಭೆಯ ಮಾಜಿ ಪದಾಧಿಕಾರಿಗಳಾದ ಬಿ.ಎಸ್. ಪರಮಶಿವಯ್ಯ, ಎಚ್.ಎಸ್. ಸಿದ್ದಲಿಂಗಯ್ಯ, ಗಂಗಮ್ಮ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: `ಅಖಿಲ ಭಾರತ ವೀರಶೈವ ಮಹಾಸಭೆ ಅಧ್ಯಕ್ಷ ಭೀಮಣ್ಣ ಖಂಡ್ರೆ ಮಹಾಸಭಾದಲ್ಲಿ ಬಹಳಷ್ಟು ಅವ್ಯವಹಾರಗಳನ್ನು ನಡೆಸಿದ್ದಾರೆ~ ಎಂದು ಶಾಸಕ ಚಂದ್ರಕಾಂತ ಬೆಲ್ಲದ್ ಆರೋಪಿಸಿದರು.<br /> <br /> ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಖಂಡ್ರೆ ತಮ್ಮ ಸೇವಾವಧಿ ಮುಗಿದಿದ್ದರೂ ಇನ್ನೂ ಅಧಿಕಾರಾ ವಧಿಯಿದೆ ಎಂದು ಸಾಧಿಸುತ್ತಿದ್ದಾರೆ. ಅಧಿಕಾರವಧಿ ಪೂರ್ಣಗೊಳ್ಳುವುದಕ್ಕಿಂತ 30 ದಿನಗಳು ಮೊದಲು ಚುನಾವಣೆ ಮಾಡಬೇಕಿತ್ತು. ಆದರೆ ಚುನಾವಣೆ ಕೈಗೊಳ್ಳದೆ, ಸಾರ್ವಭೌಮರಾಗಿ ವರ್ತಿಸುತಿದ್ದಾರೆ. ತಮ್ಮ ಪರವಾಗಿರುವವರನ್ನು ಮಾತ್ರ ಆಯಕಟ್ಟಿನ ಸ್ಥಾನದಲ್ಲಿ ಕೂರಿಸಿದ್ದಾರೆ~ ಎಂದು ಆಪಾದಿಸಿದರು.<br /> <br /> `ಖಂಡ್ರೆ ಸದಸ್ಯತ್ವ ಶುಲ್ಕ ಪಾವತಿಸಿರುವ ಸುಮಾರು ನಾಲ್ಕು ಸಾವಿರ ಜನರಿಗೆ ಸದಸ್ಯತ್ವ ನೀಡದೆ, ತಮ್ಮ ಬೆಂಬಲಿಗರನ್ನು ಮಾತ್ರ ಸದಸ್ಯರನ್ನಾಗಿ ನೇಮಿಸಿಕೊಂಡಿದ್ದಾರೆ. ಇದರಿಂದ ಮಹಾಸಭೆಯನ್ನು ಅವರ ಸ್ವಾರ್ಥ ಸಾಧನೆಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ~ ಎಂದು ದೂರಿದರು.<br /> <br /> `ಈ ಕ್ರಮವನ್ನು ಪರಿಶೀಲಿಸಿ, ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು~ ಎಂದು ಒತ್ತಾಯಿಸಿದರು.<br /> ಗೋಷ್ಠಿಯಲ್ಲಿ ಮಹಾಸಭೆಯ ಮಾಜಿ ಪದಾಧಿಕಾರಿಗಳಾದ ಬಿ.ಎಸ್. ಪರಮಶಿವಯ್ಯ, ಎಚ್.ಎಸ್. ಸಿದ್ದಲಿಂಗಯ್ಯ, ಗಂಗಮ್ಮ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>