<p><strong>ಚಿತ್ರದುರ್ಗ: </strong>ಮುಂಬರುವ ಜನಗಣತಿಯ ಧರ್ಮದ ಕಾಲಂನಲ್ಲಿ ಸಮಾಜ ಬಾಂಧವರು ವೀರಶೈವ-ಲಿಂಗಾಯತ ಎಂದೇ ನಮೂದಿಸಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭೆ ಕರೆ ನೀಡಿದೆ.<br /> <br /> ರಾಷ್ಟ್ರದಲ್ಲಿ ವೀರಶೈವರು 3 ಕೋಟಿಗೂ ಹೆಚ್ಚು ಜನಸಂಖ್ಯೆ ಹೊಂದಿದ್ದರೂ ಅಲ್ಪಸಂಖ್ಯಾತರಿಗೆ ದೊರೆಯುವ ಸೌಲಭ್ಯಗಳು ದೊರೆಯುತ್ತಿಲ್ಲ. ಸರ್ಕಾರದ ಸೌಲಭ್ಯಗಳಿಂದ ಸಮಾಜ ವಂಚಿತವಾಗಿದೆ. ಸಮಾಜ ಬಾಂಧವರು ಜನಗಣತಿ ಸಂದರ್ಭದಲ್ಲಿ ವೀರಶೈವ -ಲಿಂಗಾಯತ ಎಂದು ನಮೂದಿಸಬೇಕು. ಎಲ್ಲ ಮಠಾಧೀಶರು ಇದಕ್ಕೆ ಬೆಂಬಲ ನೀಡಿದ್ದಾರೆ ಎಂದು ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಬಿ.ಎಸ್. ವಾಗೀಶಪ್ರಸಾದ್ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.<br /> <br /> ಆದರೆ, ಜನಗಣತಿ ಅಧಿಕಾರಿಗಳು ವೀರಶೈವ ಲಿಂಗಾಯತ ಎಂದು ಹೆಸರು ಹೇಳಿದ್ದರೂ ಹಿಂದೂ ಲಿಂಗಾಯತ ಎಂದು ನಮೂದಿಸುತ್ತಿರುವುದು ಕಂಡು ಬಂದಿದೆ ಎಂದು ಅವರು ದೂರಿದರು.<br /> <br /> ಈಗಾಗಲೇ ಮಹಾಸಭೆ ವತಿಯಿಂದ ಖಚಿತ ಜನಸಂಖ್ಯೆ ತಿಳಿದುಕೊಳ್ಳಲು ಪರ್ಯಾಯ ಜನಗಣತಿ ಕೈಗೊಳ್ಳಲಾಗಿದೆ. ಸಮಾಜದಲ್ಲಿ ಕೃಷಿಕರು, ಬಡವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.ನಾವು ಯಾವುದೇ ಸಮಾಜವನ್ನು ವಿರೋಧಿಸುವುದಿಲ್ಲ. ಎಲ್ಲರನ್ನೂ ಸಮಾಜ ಪ್ರೀತಿಸುತ್ತ ಬಂದಿದೆ. ಆದರೆ, ಇತ್ತೀಚೆಗೆ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿಯಿಂದ ಸಮಾಜದ ಜನಪ್ರತಿನಿಧಿಗಳಿಗೆ ಅನ್ಯಾಯವಾಗುತ್ತಿದೆ ಎಂದರು.<br /> <br /> ಮಾಜಿ ಮುಖ್ಯಮಂತ್ರಿ ದಿವಂಗತ ನಿಜಲಿಂಗಪ್ಪ ಅವರ ಹೆಸರಿನಲ್ಲಿ ಅಂತರ್ರಾಷ್ಟ್ರೀಯ ಪ್ರಶಸ್ತಿ ಸ್ಥಾಪಿಸಬೇಕು ಮತ್ತು ಚಿತ್ರದುರ್ಗ ಜಿಲ್ಲೆಗೆ ನಿಜಲಿಂಗಪ್ಪ ಎಂದು ನಾಮಕರಣ ಮಾಡಬೇಕು ಎಂದು ಅವರು ಈ ಸಂದರ್ಭದಲ್ಲಿ ಒತ್ತಾಯಿಸಿದರು.<br /> <br /> ಮಾರ್ಚ್ 5 ಮತ್ತು 6ರಂದು ಹರಳಯ್ಯ ಮಾದರಸರ ಹುತಾತ್ಮರ ದಿನಾಚರಣೆಯನ್ನು ಬಸವ ಕಲ್ಯಾಣದಲ್ಲಿ ಆಯೋಜಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.ಮುಖಂಡರಾದ ಕೆ.ಎಂ. ಚಂದ್ರಶೇಖರಪ್ಪ, ಪಿ.ಕೆ. ಕುಮಾರಸ್ವಾಮಿ, ಷಣ್ಮುಖಪ್ಪ ಹಾಜರಿದ್ದರು.<br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಮುಂಬರುವ ಜನಗಣತಿಯ ಧರ್ಮದ ಕಾಲಂನಲ್ಲಿ ಸಮಾಜ ಬಾಂಧವರು ವೀರಶೈವ-ಲಿಂಗಾಯತ ಎಂದೇ ನಮೂದಿಸಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭೆ ಕರೆ ನೀಡಿದೆ.<br /> <br /> ರಾಷ್ಟ್ರದಲ್ಲಿ ವೀರಶೈವರು 3 ಕೋಟಿಗೂ ಹೆಚ್ಚು ಜನಸಂಖ್ಯೆ ಹೊಂದಿದ್ದರೂ ಅಲ್ಪಸಂಖ್ಯಾತರಿಗೆ ದೊರೆಯುವ ಸೌಲಭ್ಯಗಳು ದೊರೆಯುತ್ತಿಲ್ಲ. ಸರ್ಕಾರದ ಸೌಲಭ್ಯಗಳಿಂದ ಸಮಾಜ ವಂಚಿತವಾಗಿದೆ. ಸಮಾಜ ಬಾಂಧವರು ಜನಗಣತಿ ಸಂದರ್ಭದಲ್ಲಿ ವೀರಶೈವ -ಲಿಂಗಾಯತ ಎಂದು ನಮೂದಿಸಬೇಕು. ಎಲ್ಲ ಮಠಾಧೀಶರು ಇದಕ್ಕೆ ಬೆಂಬಲ ನೀಡಿದ್ದಾರೆ ಎಂದು ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಬಿ.ಎಸ್. ವಾಗೀಶಪ್ರಸಾದ್ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.<br /> <br /> ಆದರೆ, ಜನಗಣತಿ ಅಧಿಕಾರಿಗಳು ವೀರಶೈವ ಲಿಂಗಾಯತ ಎಂದು ಹೆಸರು ಹೇಳಿದ್ದರೂ ಹಿಂದೂ ಲಿಂಗಾಯತ ಎಂದು ನಮೂದಿಸುತ್ತಿರುವುದು ಕಂಡು ಬಂದಿದೆ ಎಂದು ಅವರು ದೂರಿದರು.<br /> <br /> ಈಗಾಗಲೇ ಮಹಾಸಭೆ ವತಿಯಿಂದ ಖಚಿತ ಜನಸಂಖ್ಯೆ ತಿಳಿದುಕೊಳ್ಳಲು ಪರ್ಯಾಯ ಜನಗಣತಿ ಕೈಗೊಳ್ಳಲಾಗಿದೆ. ಸಮಾಜದಲ್ಲಿ ಕೃಷಿಕರು, ಬಡವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.ನಾವು ಯಾವುದೇ ಸಮಾಜವನ್ನು ವಿರೋಧಿಸುವುದಿಲ್ಲ. ಎಲ್ಲರನ್ನೂ ಸಮಾಜ ಪ್ರೀತಿಸುತ್ತ ಬಂದಿದೆ. ಆದರೆ, ಇತ್ತೀಚೆಗೆ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿಯಿಂದ ಸಮಾಜದ ಜನಪ್ರತಿನಿಧಿಗಳಿಗೆ ಅನ್ಯಾಯವಾಗುತ್ತಿದೆ ಎಂದರು.<br /> <br /> ಮಾಜಿ ಮುಖ್ಯಮಂತ್ರಿ ದಿವಂಗತ ನಿಜಲಿಂಗಪ್ಪ ಅವರ ಹೆಸರಿನಲ್ಲಿ ಅಂತರ್ರಾಷ್ಟ್ರೀಯ ಪ್ರಶಸ್ತಿ ಸ್ಥಾಪಿಸಬೇಕು ಮತ್ತು ಚಿತ್ರದುರ್ಗ ಜಿಲ್ಲೆಗೆ ನಿಜಲಿಂಗಪ್ಪ ಎಂದು ನಾಮಕರಣ ಮಾಡಬೇಕು ಎಂದು ಅವರು ಈ ಸಂದರ್ಭದಲ್ಲಿ ಒತ್ತಾಯಿಸಿದರು.<br /> <br /> ಮಾರ್ಚ್ 5 ಮತ್ತು 6ರಂದು ಹರಳಯ್ಯ ಮಾದರಸರ ಹುತಾತ್ಮರ ದಿನಾಚರಣೆಯನ್ನು ಬಸವ ಕಲ್ಯಾಣದಲ್ಲಿ ಆಯೋಜಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.ಮುಖಂಡರಾದ ಕೆ.ಎಂ. ಚಂದ್ರಶೇಖರಪ್ಪ, ಪಿ.ಕೆ. ಕುಮಾರಸ್ವಾಮಿ, ಷಣ್ಮುಖಪ್ಪ ಹಾಜರಿದ್ದರು.<br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>