ವೀರಶೈವ ಸಮುದಾಯ ಹತ್ತಿಕ್ಕಲು ಪರಮೇಶ್ವರ ಯತ್ನ: ಬಿ.ಸಿ.ಪಾಟೀಲ
ಹಾವೇರಿ: `ವೀರಶೈವರ ಎದುರು ದಲಿತರನ್ನು ಎತ್ತಿ ಕಟ್ಟುವ ಮೂಲಕ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ ಅವರು ವೀರಶೈವ ಸಮುದಾಯವನ್ನು ಹತ್ತಿಕ್ಕುವ ಪ್ರಯತ್ನ ನಡೆಸಿದ್ದಾರೆ~ ಎಂದು ಹಿರೇಕೆರೂರು ಕಾಂಗ್ರೆಸ್ ಶಾಸಕ ಬಿ.ಸಿ.ಪಾಟೀಲ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.
ಲಿಂಗಾಯತರು ಬಂಡೆದ್ದರೆ ದಲಿತರೂ ಸಂಘರ್ಷಕ್ಕಿಳಿಯಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ ಹೇಳಿಕೆ ನೀಡಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ವೀರಶೈವರು ಹೇಡಿಗಳಲ್ಲ ಎಂಬುದನ್ನು ಪರಮೇಶ್ವರ ಅರ್ಥ ಮಾಡಿಕೊಳ್ಳಬೇಕುಎಂದರು.
ಪರಮೇಶ್ವರ ಅವರ ಹೇಳಿಕೆ ವೀರಶೈವ ಸಮುದಾಯವನ್ನು ಅವಮಾನ ಮಾಡುವುದರ ಜತೆಗೆ ಒಂದು ಸಮುದಾಯವನ್ನು ಇನ್ನೊಂದು ಸಮುದಾಯದೊಂದಿಗೆ ಎತ್ತಿಕಟ್ಟುವ ದುರುದ್ದೇಶ ಹೊಂದಿದಂತಿದೆ. ಇಂತಹ ಹೇಳಿಕೆ ಪಕ್ಷದ ಬೆಳವಣಿಗೆಗೆ ಮಾರಕವಾಗಲಿದೆ. ಆದಕಾರಣ ಹೇಳಿಕೆಯನ್ನು ವಾಪಸ್ಸು ಪಡೆದು, ವೀರಶೈವ ಸಮುದಾಯದ ಕ್ಷಮೆ ಕೇಳಬೇಕೆಂದು ಪಾಟೀಲ ಒತ್ತಾಯಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.