<p>ಹಾವೇರಿ: `ವೀರಶೈವರ ಎದುರು ದಲಿತರನ್ನು ಎತ್ತಿ ಕಟ್ಟುವ ಮೂಲಕ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ ಅವರು ವೀರಶೈವ ಸಮುದಾಯವನ್ನು ಹತ್ತಿಕ್ಕುವ ಪ್ರಯತ್ನ ನಡೆಸಿದ್ದಾರೆ~ ಎಂದು ಹಿರೇಕೆರೂರು ಕಾಂಗ್ರೆಸ್ ಶಾಸಕ ಬಿ.ಸಿ.ಪಾಟೀಲ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.<br /> <br /> ಲಿಂಗಾಯತರು ಬಂಡೆದ್ದರೆ ದಲಿತರೂ ಸಂಘರ್ಷಕ್ಕಿಳಿಯಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ ಹೇಳಿಕೆ ನೀಡಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ವೀರಶೈವರು ಹೇಡಿಗಳಲ್ಲ ಎಂಬುದನ್ನು ಪರಮೇಶ್ವರ ಅರ್ಥ ಮಾಡಿಕೊಳ್ಳಬೇಕುಎಂದರು.<br /> <br /> ಪರಮೇಶ್ವರ ಅವರ ಹೇಳಿಕೆ ವೀರಶೈವ ಸಮುದಾಯವನ್ನು ಅವಮಾನ ಮಾಡುವುದರ ಜತೆಗೆ ಒಂದು ಸಮುದಾಯವನ್ನು ಇನ್ನೊಂದು ಸಮುದಾಯದೊಂದಿಗೆ ಎತ್ತಿಕಟ್ಟುವ ದುರುದ್ದೇಶ ಹೊಂದಿದಂತಿದೆ. ಇಂತಹ ಹೇಳಿಕೆ ಪಕ್ಷದ ಬೆಳವಣಿಗೆಗೆ ಮಾರಕವಾಗಲಿದೆ. ಆದಕಾರಣ ಹೇಳಿಕೆಯನ್ನು ವಾಪಸ್ಸು ಪಡೆದು, ವೀರಶೈವ ಸಮುದಾಯದ ಕ್ಷಮೆ ಕೇಳಬೇಕೆಂದು ಪಾಟೀಲ ಒತ್ತಾಯಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾವೇರಿ: `ವೀರಶೈವರ ಎದುರು ದಲಿತರನ್ನು ಎತ್ತಿ ಕಟ್ಟುವ ಮೂಲಕ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ ಅವರು ವೀರಶೈವ ಸಮುದಾಯವನ್ನು ಹತ್ತಿಕ್ಕುವ ಪ್ರಯತ್ನ ನಡೆಸಿದ್ದಾರೆ~ ಎಂದು ಹಿರೇಕೆರೂರು ಕಾಂಗ್ರೆಸ್ ಶಾಸಕ ಬಿ.ಸಿ.ಪಾಟೀಲ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.<br /> <br /> ಲಿಂಗಾಯತರು ಬಂಡೆದ್ದರೆ ದಲಿತರೂ ಸಂಘರ್ಷಕ್ಕಿಳಿಯಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ ಹೇಳಿಕೆ ನೀಡಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ವೀರಶೈವರು ಹೇಡಿಗಳಲ್ಲ ಎಂಬುದನ್ನು ಪರಮೇಶ್ವರ ಅರ್ಥ ಮಾಡಿಕೊಳ್ಳಬೇಕುಎಂದರು.<br /> <br /> ಪರಮೇಶ್ವರ ಅವರ ಹೇಳಿಕೆ ವೀರಶೈವ ಸಮುದಾಯವನ್ನು ಅವಮಾನ ಮಾಡುವುದರ ಜತೆಗೆ ಒಂದು ಸಮುದಾಯವನ್ನು ಇನ್ನೊಂದು ಸಮುದಾಯದೊಂದಿಗೆ ಎತ್ತಿಕಟ್ಟುವ ದುರುದ್ದೇಶ ಹೊಂದಿದಂತಿದೆ. ಇಂತಹ ಹೇಳಿಕೆ ಪಕ್ಷದ ಬೆಳವಣಿಗೆಗೆ ಮಾರಕವಾಗಲಿದೆ. ಆದಕಾರಣ ಹೇಳಿಕೆಯನ್ನು ವಾಪಸ್ಸು ಪಡೆದು, ವೀರಶೈವ ಸಮುದಾಯದ ಕ್ಷಮೆ ಕೇಳಬೇಕೆಂದು ಪಾಟೀಲ ಒತ್ತಾಯಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>