<p>ಚಿಂತಾಮಣಿ: ನಗರದ ಹೊರವಲಯದ ಕನಂಪಲ್ಲಿ ಪಂಚಮುಖಿ ವೀರಾಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ ಸೋಮವಾರ ಶ್ರದ್ಧಾ ಭಕ್ತಿಯಿಂದ ನಡೆಯಿತು.<br /> <br /> ರಥೋತ್ಸವದ ಅಂಗವಾಗಿ ವೀರಾಂಜನೇಯ ಸ್ವಾಮಿಗೆ ವಿಶೇಷ ಪೂಜೆ ಅಲಂಕಾರ ಹಾಗೂ ವಿವಿಧ ಅಭಿಷೇಕಗಳು ನಡೆದವು. ಬೆಳಿಗ್ಗೆಯಿಂದಲೇ ಜನರು ದೇವಾಲಯದಲ್ಲಿ ಸಾಲುಗಟ್ಟಿ ನಿಂತು ಪೂಜೆ ಮಾಡಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಉತ್ಸವದುದ್ದಕ್ಕೂ ವೀರಾಂಜನೇಯ ಸ್ವಾಮಿ ಕುರಿತು ಕೇಳಿಬಂದ ಸ್ತೋತ್ರಗಳು ಹಾಗೂ ಹಾಡುಗಳು ಭಕ್ತರನ್ನು ಭಾವಪರವಶಗೊಳಿಸಿದವು.<br /> <br /> ಮಧ್ಯಾಹ್ನ ವಿಶೇಷ ಪೂಜೆ ನಂತರ ಅಲಂಕರಿಸಿದ್ದ ರಥದಲ್ಲಿ ವೀರಾಂಜನೇಯ ಸ್ವಾಮಿಯ ಉತ್ಸವ ಮೂರ್ತಿ ಇಟ್ಟು ವಿಶೇಷ ಪೂಜೆ ನೆರವೇರಿಸಿದ ನಂತರ ನೂರಾರು ಜನರ ಸಮ್ಮುಖದಲ್ಲಿ ರಥವನ್ನು ಎಳೆಯಲಾಯಿತು.<br /> <br /> ದೇವಾಲಯದ ಸುತ್ತಲೂ ರಥದ ಪ್ರದಕ್ಷಿಣೆ ನಡೆಯಿತು. ನಗರ ಹಾಗೂ ಸುತ್ತಮುತ್ತಲ ಊರುಗಳಿಂದ ಆಗಮಿಸಿದ್ದ ಭಕ್ತರು ಬಾಳೆಹಣ್ಣು, ದವನವನ್ನು ರಥಕ್ಕೆ ಅರ್ಪಿಸಿದರು. ಭಕ್ತಾದಿಗಳಿಗೆ ದೇಗುಲದ ವತಿಯಿಂದ ಅನ್ನಸಂತರ್ಪಣೆ ನಡೆಯಿತು.<br /> <br /> ದೇಗುಲದ ಮುಂಭಾಗದಲ್ಲಿ ವಿವಿಧ ಬಗೆಯ ತಿಂಡಿ ತಿನಿಸುಗಳು, ಆಟಿಕೆ ಸಾಮಾನುಗಳು, ಅಲಂಕಾರಿಕ ವಸ್ತುಗಳ ಮಾರಾಟ ಭರ್ಜರಿಯಾಗಿ ನಡೆಯಿತು. ದೇಗುಲವು ರಾತ್ರಿಯಿಡೀ ವಿದ್ಯುತ್ ದೀಪಗಳಿಂದ ಕಂಗೊಳಿಸಿತ್ತು.<br /> ಮಾಜಿ ಸಚಿವ ಚೌಡರೆಡ್ಡಿ, ತಹಶೀಲ್ದಾರ್ ಕೃಷ್ಣಮೂರ್ತಿ ಮತ್ತಿತರರು ಭಾಗವಹಿಸಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಂತಾಮಣಿ: ನಗರದ ಹೊರವಲಯದ ಕನಂಪಲ್ಲಿ ಪಂಚಮುಖಿ ವೀರಾಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ ಸೋಮವಾರ ಶ್ರದ್ಧಾ ಭಕ್ತಿಯಿಂದ ನಡೆಯಿತು.<br /> <br /> ರಥೋತ್ಸವದ ಅಂಗವಾಗಿ ವೀರಾಂಜನೇಯ ಸ್ವಾಮಿಗೆ ವಿಶೇಷ ಪೂಜೆ ಅಲಂಕಾರ ಹಾಗೂ ವಿವಿಧ ಅಭಿಷೇಕಗಳು ನಡೆದವು. ಬೆಳಿಗ್ಗೆಯಿಂದಲೇ ಜನರು ದೇವಾಲಯದಲ್ಲಿ ಸಾಲುಗಟ್ಟಿ ನಿಂತು ಪೂಜೆ ಮಾಡಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಉತ್ಸವದುದ್ದಕ್ಕೂ ವೀರಾಂಜನೇಯ ಸ್ವಾಮಿ ಕುರಿತು ಕೇಳಿಬಂದ ಸ್ತೋತ್ರಗಳು ಹಾಗೂ ಹಾಡುಗಳು ಭಕ್ತರನ್ನು ಭಾವಪರವಶಗೊಳಿಸಿದವು.<br /> <br /> ಮಧ್ಯಾಹ್ನ ವಿಶೇಷ ಪೂಜೆ ನಂತರ ಅಲಂಕರಿಸಿದ್ದ ರಥದಲ್ಲಿ ವೀರಾಂಜನೇಯ ಸ್ವಾಮಿಯ ಉತ್ಸವ ಮೂರ್ತಿ ಇಟ್ಟು ವಿಶೇಷ ಪೂಜೆ ನೆರವೇರಿಸಿದ ನಂತರ ನೂರಾರು ಜನರ ಸಮ್ಮುಖದಲ್ಲಿ ರಥವನ್ನು ಎಳೆಯಲಾಯಿತು.<br /> <br /> ದೇವಾಲಯದ ಸುತ್ತಲೂ ರಥದ ಪ್ರದಕ್ಷಿಣೆ ನಡೆಯಿತು. ನಗರ ಹಾಗೂ ಸುತ್ತಮುತ್ತಲ ಊರುಗಳಿಂದ ಆಗಮಿಸಿದ್ದ ಭಕ್ತರು ಬಾಳೆಹಣ್ಣು, ದವನವನ್ನು ರಥಕ್ಕೆ ಅರ್ಪಿಸಿದರು. ಭಕ್ತಾದಿಗಳಿಗೆ ದೇಗುಲದ ವತಿಯಿಂದ ಅನ್ನಸಂತರ್ಪಣೆ ನಡೆಯಿತು.<br /> <br /> ದೇಗುಲದ ಮುಂಭಾಗದಲ್ಲಿ ವಿವಿಧ ಬಗೆಯ ತಿಂಡಿ ತಿನಿಸುಗಳು, ಆಟಿಕೆ ಸಾಮಾನುಗಳು, ಅಲಂಕಾರಿಕ ವಸ್ತುಗಳ ಮಾರಾಟ ಭರ್ಜರಿಯಾಗಿ ನಡೆಯಿತು. ದೇಗುಲವು ರಾತ್ರಿಯಿಡೀ ವಿದ್ಯುತ್ ದೀಪಗಳಿಂದ ಕಂಗೊಳಿಸಿತ್ತು.<br /> ಮಾಜಿ ಸಚಿವ ಚೌಡರೆಡ್ಡಿ, ತಹಶೀಲ್ದಾರ್ ಕೃಷ್ಣಮೂರ್ತಿ ಮತ್ತಿತರರು ಭಾಗವಹಿಸಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>