<p><strong>ನೆಲಮಂಗಲ:</strong> `ರಾಜಕಾರಣ ವೃತ್ತಿಯಾಗಿ ಪರಿವರ್ತನೆ ಹೊಂದಿದೆ. ರಾಜಕಾರಣಿಗಳಿಗೆ ತಮ್ಮ ಕರ್ತವ್ಯ ಅರಿತು ಕೆಲಸ ಮಾಡುವಂತೆ ಮತದಾರರು ಸೂಚಿಸಬೇಕು. ಕರ್ತವ್ಯ ಲೋಪ ಎಸಗಿದ ಜನಪ್ರತಿನಿಧಿಗಳನ್ನು ವಾಪಸ್ ಕರೆಸಿಕೊಳ್ಳಬೇಕು' ಎಂದು ಮಾಜಿ ಲೋಕಾಯುಕ್ತ ಎನ್. ಸಂತೋಷ್ ಹೆಗ್ಡೆ ತಿಳಿಸಿದರು.<br /> <br /> ಪಟ್ಟಣದ ಸೇಂಟ್ ಆನ್ಸ್ ಶಾಲೆಯಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಹಳೆ ವಿದ್ಯಾರ್ಥಿಗಳ ಸಭೆಯಲ್ಲಿ ಅವರು ಮಾತನಾಡಿದರು.<br /> `ಭ್ರಷ್ಟಾಚಾರ ಹಿಂದಿನಿಂದಲೂ ಇದೆ. ಈಗಿನ ಒಂದೊಂದು ಹಗರಣಗಳು ರಾಜ್ಯದ ಬಜೆಟ್ನಷ್ಟು ದೊಡ್ಡವು. ಭ್ರಷ್ಟಾಚಾರ ನಿರ್ಮೂಲನೆ ಸಾಧ್ಯವಿಲ್ಲ. ಆದರೆ, ಅದನ್ನು ಬೆಳೆಯಲು ಬಿಡ ಬಾರದು' ಎಂದರು.<br /> <br /> `ಹೆಣ್ಣುಮಕ್ಕಳ ಶೋಷಣೆ ತಡೆಗೆ ವ್ಯವಸ್ಥೆಯ ಬದಲಾವಣೆ ಆಗಬೇಕು. ಹೆಣ್ಣನ್ನು ಗೌರವದಿಂದ ಕಾಣುವ ಪರಿಪಾಠ ಪ್ರತಿ ಮನೆಯಲ್ಲೂ ಬೆಳೆಯ ಬೇಕಿದೆ. ನಮ್ಮ ಸಂಸ್ಕೃತಿಯನ್ನು ಅರಿತು ನಡೆದರೆ ಶೋಷಣೆ ಕಡಿಮೆಯಾಗ ಬಹುದು' ಎಂದು ಅವರು ಅಭಿಪ್ರಾಯಪಟ್ಟರು.<br /> <br /> ಇದೇ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಪಡೆದ ಗೌರವ್, ಹಿಮಾಂಶು, ರಾಹುಲ್ ಮತ್ತು ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲಮಂಗಲ:</strong> `ರಾಜಕಾರಣ ವೃತ್ತಿಯಾಗಿ ಪರಿವರ್ತನೆ ಹೊಂದಿದೆ. ರಾಜಕಾರಣಿಗಳಿಗೆ ತಮ್ಮ ಕರ್ತವ್ಯ ಅರಿತು ಕೆಲಸ ಮಾಡುವಂತೆ ಮತದಾರರು ಸೂಚಿಸಬೇಕು. ಕರ್ತವ್ಯ ಲೋಪ ಎಸಗಿದ ಜನಪ್ರತಿನಿಧಿಗಳನ್ನು ವಾಪಸ್ ಕರೆಸಿಕೊಳ್ಳಬೇಕು' ಎಂದು ಮಾಜಿ ಲೋಕಾಯುಕ್ತ ಎನ್. ಸಂತೋಷ್ ಹೆಗ್ಡೆ ತಿಳಿಸಿದರು.<br /> <br /> ಪಟ್ಟಣದ ಸೇಂಟ್ ಆನ್ಸ್ ಶಾಲೆಯಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಹಳೆ ವಿದ್ಯಾರ್ಥಿಗಳ ಸಭೆಯಲ್ಲಿ ಅವರು ಮಾತನಾಡಿದರು.<br /> `ಭ್ರಷ್ಟಾಚಾರ ಹಿಂದಿನಿಂದಲೂ ಇದೆ. ಈಗಿನ ಒಂದೊಂದು ಹಗರಣಗಳು ರಾಜ್ಯದ ಬಜೆಟ್ನಷ್ಟು ದೊಡ್ಡವು. ಭ್ರಷ್ಟಾಚಾರ ನಿರ್ಮೂಲನೆ ಸಾಧ್ಯವಿಲ್ಲ. ಆದರೆ, ಅದನ್ನು ಬೆಳೆಯಲು ಬಿಡ ಬಾರದು' ಎಂದರು.<br /> <br /> `ಹೆಣ್ಣುಮಕ್ಕಳ ಶೋಷಣೆ ತಡೆಗೆ ವ್ಯವಸ್ಥೆಯ ಬದಲಾವಣೆ ಆಗಬೇಕು. ಹೆಣ್ಣನ್ನು ಗೌರವದಿಂದ ಕಾಣುವ ಪರಿಪಾಠ ಪ್ರತಿ ಮನೆಯಲ್ಲೂ ಬೆಳೆಯ ಬೇಕಿದೆ. ನಮ್ಮ ಸಂಸ್ಕೃತಿಯನ್ನು ಅರಿತು ನಡೆದರೆ ಶೋಷಣೆ ಕಡಿಮೆಯಾಗ ಬಹುದು' ಎಂದು ಅವರು ಅಭಿಪ್ರಾಯಪಟ್ಟರು.<br /> <br /> ಇದೇ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಪಡೆದ ಗೌರವ್, ಹಿಮಾಂಶು, ರಾಹುಲ್ ಮತ್ತು ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>