<p>ಬೆಂಗಳೂರು: ಕರ್ನಾಟಕ ವೃತ್ತಿಶಿಕ್ಷಣ ಸಂಸ್ಥೆಗಳ (ಪ್ರವೇಶ ನಿಯಂತ್ರಣ ಮತ್ತು ಶುಲ್ಕ ನಿಗದಿ) ಕಾಯ್ದೆಯನ್ನು ಅನುಷ್ಠಾನಕ್ಕೆ ತರಬಾರದೆಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಸಂಘಟನೆಯ (ಎಸ್ಎಫ್ಐ) ಸದಸ್ಯರು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.<br /> <br /> ಸರ್ಕಾರ ಕಾಯ್ದೆ ಅನುಷ್ಠಾನಕ್ಕೆ ತರುವ ಮೂಲಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕುತ್ತು ತರಲು ಮುಂದಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ಪ್ರತಿಕೃತಿ ದಹಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.<br /> <br /> ಪ್ರತಿಭಟನೆಯಲ್ಲಿ ಮಾತನಾಡಿದ ಎಸ್ಎಫ್ಐ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಎನ್. ಅನಂತ ನಾಯ್ಕ, ‘ಕಾಯ್ದೆಯ ಹೆಸರಿನಲ್ಲಿ ವೃತ್ತಿ ಶಿಕ್ಷಣವನ್ನು ಮಾರಾಟದ ಸರಕನ್ನಾಗಿಸಲು ಸರ್ಕಾರ ಮುಂದಾಗಿದೆ. ಕಾಯ್ದೆಯಿಂದ ವೃತ್ತಿಶಿಕ್ಷಣದ ಕನಸು ಹೊತ್ತ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೊಡಲಿ ಪೆಟ್ಟು ಬೀಳಲಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> ‘ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಕೋರ್ಸ್ಗಳಿಗೆ ಶುಲ್ಕ ಹೆಚ್ಚಳದ ಜತೆಗೆ ಮೆರಿಟ್ ಕೋಟಾ ರದ್ದುಗೊಳಿಸಿ ಸೀಟುಗಳ ಭರ್ತಿಯ ಅಧಿಕಾರವನ್ನು ಸಂಪೂರ್ಣವಾಗಿ ಖಾಸಗಿ ಕಾಲೇಜುಗಳ ನಿರ್ಧಾರಕ್ಕೇ ಬಿಡಲು ಸರ್ಕಾರ ಮುಂದಾಗಿದೆ. ಇದರಿಂದ ವೃತ್ತಿಶಿಕ್ಷಣವನ್ನು ಮಾರುಕಟ್ಟೆಯಲ್ಲಿ ಹರಾಜಿಗಿಟ್ಟಂತಾಗುತ್ತದೆ’ ಎಂದು ಅವರು ದೂರಿದರು.<br /> <br /> ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.<br /> <br /> ಪ್ರತಿಭಟನೆಗೆ ಎಪಿವಿಪಿ ಕರೆ: ಕರ್ನಾಟಕ ವೃತ್ತಿಶಿಕ್ಷಣ ಸಂಸ್ಥೆಗಳ ಕಾಯ್ದೆ ಅನುಷ್ಠಾನಗೊಳಿಸದಂತೆ ಒತ್ತಾಯಿಸಿ ಬುಧವಾರ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕರೆ ನೀಡಿದೆ.<br /> <br /> ಸರ್ಕಾರ ಈ ಕಾಯ್ದೆಯ ಮೂಲಕ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಲು ಮುಂದಾಗಿದ್ದು, ಸರ್ಕಾರದ ಈ ನಡೆಯನ್ನು ಎಲ್ಲರೂ ವಿರೋಧಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಕರ್ನಾಟಕ ವೃತ್ತಿಶಿಕ್ಷಣ ಸಂಸ್ಥೆಗಳ (ಪ್ರವೇಶ ನಿಯಂತ್ರಣ ಮತ್ತು ಶುಲ್ಕ ನಿಗದಿ) ಕಾಯ್ದೆಯನ್ನು ಅನುಷ್ಠಾನಕ್ಕೆ ತರಬಾರದೆಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಸಂಘಟನೆಯ (ಎಸ್ಎಫ್ಐ) ಸದಸ್ಯರು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.<br /> <br /> ಸರ್ಕಾರ ಕಾಯ್ದೆ ಅನುಷ್ಠಾನಕ್ಕೆ ತರುವ ಮೂಲಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕುತ್ತು ತರಲು ಮುಂದಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ಪ್ರತಿಕೃತಿ ದಹಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.<br /> <br /> ಪ್ರತಿಭಟನೆಯಲ್ಲಿ ಮಾತನಾಡಿದ ಎಸ್ಎಫ್ಐ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಎನ್. ಅನಂತ ನಾಯ್ಕ, ‘ಕಾಯ್ದೆಯ ಹೆಸರಿನಲ್ಲಿ ವೃತ್ತಿ ಶಿಕ್ಷಣವನ್ನು ಮಾರಾಟದ ಸರಕನ್ನಾಗಿಸಲು ಸರ್ಕಾರ ಮುಂದಾಗಿದೆ. ಕಾಯ್ದೆಯಿಂದ ವೃತ್ತಿಶಿಕ್ಷಣದ ಕನಸು ಹೊತ್ತ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೊಡಲಿ ಪೆಟ್ಟು ಬೀಳಲಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> ‘ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಕೋರ್ಸ್ಗಳಿಗೆ ಶುಲ್ಕ ಹೆಚ್ಚಳದ ಜತೆಗೆ ಮೆರಿಟ್ ಕೋಟಾ ರದ್ದುಗೊಳಿಸಿ ಸೀಟುಗಳ ಭರ್ತಿಯ ಅಧಿಕಾರವನ್ನು ಸಂಪೂರ್ಣವಾಗಿ ಖಾಸಗಿ ಕಾಲೇಜುಗಳ ನಿರ್ಧಾರಕ್ಕೇ ಬಿಡಲು ಸರ್ಕಾರ ಮುಂದಾಗಿದೆ. ಇದರಿಂದ ವೃತ್ತಿಶಿಕ್ಷಣವನ್ನು ಮಾರುಕಟ್ಟೆಯಲ್ಲಿ ಹರಾಜಿಗಿಟ್ಟಂತಾಗುತ್ತದೆ’ ಎಂದು ಅವರು ದೂರಿದರು.<br /> <br /> ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.<br /> <br /> ಪ್ರತಿಭಟನೆಗೆ ಎಪಿವಿಪಿ ಕರೆ: ಕರ್ನಾಟಕ ವೃತ್ತಿಶಿಕ್ಷಣ ಸಂಸ್ಥೆಗಳ ಕಾಯ್ದೆ ಅನುಷ್ಠಾನಗೊಳಿಸದಂತೆ ಒತ್ತಾಯಿಸಿ ಬುಧವಾರ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕರೆ ನೀಡಿದೆ.<br /> <br /> ಸರ್ಕಾರ ಈ ಕಾಯ್ದೆಯ ಮೂಲಕ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಲು ಮುಂದಾಗಿದ್ದು, ಸರ್ಕಾರದ ಈ ನಡೆಯನ್ನು ಎಲ್ಲರೂ ವಿರೋಧಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>