<p>ಬೆಂಗಳೂರು: ವೃದ್ಧ ದಂಪತಿಯನ್ನು ಅಪಹರಿಸಿದ ದುಷ್ಕರ್ಮಿಗಳು ಕೆಲವೇ ಗಂಟೆಗಳಲ್ಲಿ ಅವರನ್ನು ಬಿಟ್ಟು ಪರಾರಿಯಾಗಿರುವ ಘಟನೆ ಸೋಮವಾರ ನಡೆದಿದೆ. ಟಿ.ಬೇಗೂರು ಬಳಿಯ ಅಲಾಳಸಂದ್ರದ ಉಗ್ರನರಸಿಂಹಯ್ಯ (72) ಮತ್ತು ಅನಸೂಯ (68) ಅಪಹರಣಕ್ಕೊಳಗಾಗಿದ್ದ ದಂಪತಿ. <br /> <br /> ಅಲಾಳಸಂದ್ರದ ತೋಟದ ಮನೆಯಲ್ಲಿ ದಂಪತಿ ವಾಸವಿದ್ದರು. ಸೋಮವಾರ ರಾತ್ರಿ 7 ಗಂಟೆಯ ಸುಮಾರಿಗೆ ಅವರನ್ನು ಅಪಹರಿಸಲಾಗಿದೆ. ಉಗ್ರನರಸಿಂಹಯ್ಯ ಅವರು ಇತ್ತೀಚೆಗೆ ಜಮೀನು ಮಾರಿದ್ದರು. ಈ ಬಗ್ಗೆ ತಿಳಿದವರೇ ಹಣದ ಆಸೆಗಾಗಿ ದಂಪತಿಯನ್ನು ಅಪಹರಣ ಮಾಡಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> `ವಿಷಯ ತಿಳಿಯುತ್ತಿದ್ದಂತೇ ತುಮಕೂರು ರಸ್ತೆ, ಕುಣಿಗಲ್, ರಾಮನಗರ ಮುಖ್ಯರಸ್ತೆ ಸೇರಿದಂತೆ ಹಲವು ಕಡೆಗಳಲ್ಲಿ ಪೊಲೀಸ್ ನಾಕಾಬಂದಿ ಹಾಕಲಾಯಿತು. ಈ ವಿಷಯ ತಿಳಿದು, ಪೊಲೀಸರಿಗೆ ಸಿಕ್ಕಿ ಬೀಳುವ ಭಯದಿಂದ ದುಷ್ಕರ್ಮಿಗಳು ದಂಪತಿಯನ್ನು ಕುಣಿಗಲ್ ಬಳಿಯ ಡಾಬಾವೊಂದರ ಬಳಿ ಬಿಟ್ಟು, ಅವರ ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾರೆ. ದುಷ್ಕರ್ಮಿಗಳ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ~ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್ಪಿ ಡಿ.ಪ್ರಕಾಶ್ ತಿಳಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ವೃದ್ಧ ದಂಪತಿಯನ್ನು ಅಪಹರಿಸಿದ ದುಷ್ಕರ್ಮಿಗಳು ಕೆಲವೇ ಗಂಟೆಗಳಲ್ಲಿ ಅವರನ್ನು ಬಿಟ್ಟು ಪರಾರಿಯಾಗಿರುವ ಘಟನೆ ಸೋಮವಾರ ನಡೆದಿದೆ. ಟಿ.ಬೇಗೂರು ಬಳಿಯ ಅಲಾಳಸಂದ್ರದ ಉಗ್ರನರಸಿಂಹಯ್ಯ (72) ಮತ್ತು ಅನಸೂಯ (68) ಅಪಹರಣಕ್ಕೊಳಗಾಗಿದ್ದ ದಂಪತಿ. <br /> <br /> ಅಲಾಳಸಂದ್ರದ ತೋಟದ ಮನೆಯಲ್ಲಿ ದಂಪತಿ ವಾಸವಿದ್ದರು. ಸೋಮವಾರ ರಾತ್ರಿ 7 ಗಂಟೆಯ ಸುಮಾರಿಗೆ ಅವರನ್ನು ಅಪಹರಿಸಲಾಗಿದೆ. ಉಗ್ರನರಸಿಂಹಯ್ಯ ಅವರು ಇತ್ತೀಚೆಗೆ ಜಮೀನು ಮಾರಿದ್ದರು. ಈ ಬಗ್ಗೆ ತಿಳಿದವರೇ ಹಣದ ಆಸೆಗಾಗಿ ದಂಪತಿಯನ್ನು ಅಪಹರಣ ಮಾಡಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> `ವಿಷಯ ತಿಳಿಯುತ್ತಿದ್ದಂತೇ ತುಮಕೂರು ರಸ್ತೆ, ಕುಣಿಗಲ್, ರಾಮನಗರ ಮುಖ್ಯರಸ್ತೆ ಸೇರಿದಂತೆ ಹಲವು ಕಡೆಗಳಲ್ಲಿ ಪೊಲೀಸ್ ನಾಕಾಬಂದಿ ಹಾಕಲಾಯಿತು. ಈ ವಿಷಯ ತಿಳಿದು, ಪೊಲೀಸರಿಗೆ ಸಿಕ್ಕಿ ಬೀಳುವ ಭಯದಿಂದ ದುಷ್ಕರ್ಮಿಗಳು ದಂಪತಿಯನ್ನು ಕುಣಿಗಲ್ ಬಳಿಯ ಡಾಬಾವೊಂದರ ಬಳಿ ಬಿಟ್ಟು, ಅವರ ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾರೆ. ದುಷ್ಕರ್ಮಿಗಳ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ~ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್ಪಿ ಡಿ.ಪ್ರಕಾಶ್ ತಿಳಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>