<p><strong>ಬೆಂಗಳೂರು:</strong> `ಬೆಂಗಳೂರು ವಿಶ್ವದಲ್ಲಿಯೇ ಅತ್ಯಂತ ಸುರಕ್ಷಿತ ಹಾಗೂ ಸುಂದರ ನಗರಗಳಲ್ಲೊಂದು. ಇದು ನಮ್ಮೆಲ್ಲರ ನಗರ. ಪೊಲೀಸ್ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳು ಜನರ ಸುರಕ್ಷತೆ ಬಗ್ಗೆ ಸೂಕ್ತ ಕ್ರಮ ಕೈಗೊಂಡಿವೆ~<br /> <br /> - ಅಸ್ಸಾಂ ಗಲಭೆ ನಂತರ ಸಾಮಾಜಿಕ ಸಂಪರ್ಕ ಜಾಲಗಳಲ್ಲಿ ಹರಿದಾಡಿದ ಹಲ್ಲೆ ಬೆದರಿಕೆ ವದಂತಿಗಳ ಹಿನ್ನೆಲೆಯಲ್ಲಿ ಈಶಾನ್ಯ ರಾಜ್ಯಗಳ ಜನತೆ ಬೆಂಗಳೂರು ತೊರೆದಿರುವ ಬಗ್ಗೆ ಪ್ರಶ್ನಿಸಿದಾಗ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಪ್ರತಿಕ್ರಿಯಿಸಿದ್ದು ಹೀಗೆ.<br /> <br /> ಖಾಸಗಿ ಹೋಟೆಲೊಂದರಲ್ಲಿ ನಡೆದ ಸಮಾರಂಭದಲ್ಲಿ `ಇಂಡಿಯಾ ಫಾರ್ವರ್ಡ್~ ಟ್ರಸ್ಟ್ನ ವೆಬ್ಸೈಟ್ಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ವಿಚಾರದಲ್ಲಿ ನಮ್ಮ ಪೊಲೀಸ್ ಅಧಿಕಾರಿಗಳು ಉತ್ತಮ ಕೆಲಸ ನಿರ್ವಹಿಸುತ್ತಿದ್ದಾರೆ. ಇನ್ನು ಮುಂದೆಯೂ ಅದೇ ರೀತಿ ಕರ್ತವ್ಯ ನಿರ್ವಹಿಸಲಿದ್ದಾರೆಂಬ ಆಶಯ ನನ್ನದು~ ಎಂದರು.<br /> <br /> ಬಿಎಂಎಂ ಸಿಮೆಂಟ್ಸ್ ಪ್ರಾಯೋಜಕತ್ವದಲ್ಲಿ ನಗರದ ಮಲ್ಯ ಅದಿತಿ ಇಂಟರ್ ನ್ಯಾಷನಲ್ ಸ್ಕೂಲ್ನ ವಿದ್ಯಾರ್ಥಿ ಅರ್ಜುನ್ ಬೀರ್ `ಭಾರತದ ಮುನ್ನಡೆ~ ಪರಿಕಲ್ಪನೆಯೊಂದಿಗೆ ರೂಪಿಸಿರುವ ವೆಬ್ಸೈಟ್ ಅನ್ನು ದ್ರಾವಿಡ್ ಉದ್ಘಾಟಿಸಿದರು.<br /> <br /> ಆರ್ಥಿಕವಾಗಿ ಉತ್ತಮ ಸಾಮರ್ಥ್ಯ ಹೊಂದಿರುವ ಶಾಲೆಗಳು ಸಂಪನ್ಮೂಲಗಳ ಕೊರತೆಯಿರುವ ಸಮೀಪದ ಶಾಲೆಗಳಿಗೆ ನೆರವಾಗುವುದು, ಅಮೆರಿಕದ `ಮೆಡ್ರಿಕ್ಸ್~ ಸ್ವಯಂಸೇವಾ ಸಂಸ್ಥೆಯ ನೆರವಿನೊಂದಿಗೆ ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಸಂಬಂಧ ತಂತ್ರಜ್ಞಾನ ಅಭಿವೃದ್ಧಿಪಡಿಸುವುದೂ ಸೇರಿದಂತೆ ಹಲವು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅರ್ಜುನ್ ತಿಳಿಸಿದರು.<br /> <br /> ಕ್ರಿಕೆಟ್ ವೀಕ್ಷಣೆ ವಿವರಣೆಗಾರ ಚಾರು ಶರ್ಮ ಕಾರ್ಯಕ್ರಮ ನಿರೂಪಿಸಿದರು. ಇಂಡಿಯಾ ಫಾರ್ವರ್ಡ್ ಟ್ರಸ್ಟ್ನ ವೆಬ್ <a href="http://www.indiaforward.co.in">www.indiaforward.co.in</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ಬೆಂಗಳೂರು ವಿಶ್ವದಲ್ಲಿಯೇ ಅತ್ಯಂತ ಸುರಕ್ಷಿತ ಹಾಗೂ ಸುಂದರ ನಗರಗಳಲ್ಲೊಂದು. ಇದು ನಮ್ಮೆಲ್ಲರ ನಗರ. ಪೊಲೀಸ್ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳು ಜನರ ಸುರಕ್ಷತೆ ಬಗ್ಗೆ ಸೂಕ್ತ ಕ್ರಮ ಕೈಗೊಂಡಿವೆ~<br /> <br /> - ಅಸ್ಸಾಂ ಗಲಭೆ ನಂತರ ಸಾಮಾಜಿಕ ಸಂಪರ್ಕ ಜಾಲಗಳಲ್ಲಿ ಹರಿದಾಡಿದ ಹಲ್ಲೆ ಬೆದರಿಕೆ ವದಂತಿಗಳ ಹಿನ್ನೆಲೆಯಲ್ಲಿ ಈಶಾನ್ಯ ರಾಜ್ಯಗಳ ಜನತೆ ಬೆಂಗಳೂರು ತೊರೆದಿರುವ ಬಗ್ಗೆ ಪ್ರಶ್ನಿಸಿದಾಗ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಪ್ರತಿಕ್ರಿಯಿಸಿದ್ದು ಹೀಗೆ.<br /> <br /> ಖಾಸಗಿ ಹೋಟೆಲೊಂದರಲ್ಲಿ ನಡೆದ ಸಮಾರಂಭದಲ್ಲಿ `ಇಂಡಿಯಾ ಫಾರ್ವರ್ಡ್~ ಟ್ರಸ್ಟ್ನ ವೆಬ್ಸೈಟ್ಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ವಿಚಾರದಲ್ಲಿ ನಮ್ಮ ಪೊಲೀಸ್ ಅಧಿಕಾರಿಗಳು ಉತ್ತಮ ಕೆಲಸ ನಿರ್ವಹಿಸುತ್ತಿದ್ದಾರೆ. ಇನ್ನು ಮುಂದೆಯೂ ಅದೇ ರೀತಿ ಕರ್ತವ್ಯ ನಿರ್ವಹಿಸಲಿದ್ದಾರೆಂಬ ಆಶಯ ನನ್ನದು~ ಎಂದರು.<br /> <br /> ಬಿಎಂಎಂ ಸಿಮೆಂಟ್ಸ್ ಪ್ರಾಯೋಜಕತ್ವದಲ್ಲಿ ನಗರದ ಮಲ್ಯ ಅದಿತಿ ಇಂಟರ್ ನ್ಯಾಷನಲ್ ಸ್ಕೂಲ್ನ ವಿದ್ಯಾರ್ಥಿ ಅರ್ಜುನ್ ಬೀರ್ `ಭಾರತದ ಮುನ್ನಡೆ~ ಪರಿಕಲ್ಪನೆಯೊಂದಿಗೆ ರೂಪಿಸಿರುವ ವೆಬ್ಸೈಟ್ ಅನ್ನು ದ್ರಾವಿಡ್ ಉದ್ಘಾಟಿಸಿದರು.<br /> <br /> ಆರ್ಥಿಕವಾಗಿ ಉತ್ತಮ ಸಾಮರ್ಥ್ಯ ಹೊಂದಿರುವ ಶಾಲೆಗಳು ಸಂಪನ್ಮೂಲಗಳ ಕೊರತೆಯಿರುವ ಸಮೀಪದ ಶಾಲೆಗಳಿಗೆ ನೆರವಾಗುವುದು, ಅಮೆರಿಕದ `ಮೆಡ್ರಿಕ್ಸ್~ ಸ್ವಯಂಸೇವಾ ಸಂಸ್ಥೆಯ ನೆರವಿನೊಂದಿಗೆ ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಸಂಬಂಧ ತಂತ್ರಜ್ಞಾನ ಅಭಿವೃದ್ಧಿಪಡಿಸುವುದೂ ಸೇರಿದಂತೆ ಹಲವು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅರ್ಜುನ್ ತಿಳಿಸಿದರು.<br /> <br /> ಕ್ರಿಕೆಟ್ ವೀಕ್ಷಣೆ ವಿವರಣೆಗಾರ ಚಾರು ಶರ್ಮ ಕಾರ್ಯಕ್ರಮ ನಿರೂಪಿಸಿದರು. ಇಂಡಿಯಾ ಫಾರ್ವರ್ಡ್ ಟ್ರಸ್ಟ್ನ ವೆಬ್ <a href="http://www.indiaforward.co.in">www.indiaforward.co.in</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>