<p>ಬೆಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ, ಚಂದ್ರಗುತ್ತಿಯ ರೇಣುಕಾಂಬ ದೇವಸ್ಥಾನ, ಗಾಣಗಾಪುರದ ದತ್ತಾತ್ರೇಯಸ್ವಾಮಿ ದೇವಸ್ಥಾನ ಸೇರಿದಂತೆ ರಾಜ್ಯದ ಮುಜರಾಯಿ ಇಲಾಖೆಯ ಅಧೀನಕ್ಕೆ ಒಳಪಟ್ಟಿರುವ ಒಟ್ಟು 110 ದೇವಸ್ಥಾನಗಳ ಮಾಹಿತಿ ಈಗ ವೆಬ್ಸೈಟ್ನಲ್ಲಿ ಲಭ್ಯ.<br /> <br /> ದೇವಸ್ಥಾನಗಳಲ್ಲಿ ಸಲ್ಲಿಸಲು ಅವಕಾಶ ಇರುವ ವಿವಿಧ ಪೂಜೆಗಳು, ದೇವಸ್ಥಾನದ ಇತಿಹಾಸ, ಹತ್ತಿರದ ವಸತಿ ಗೃಹಗಳು, ಬ್ಯಾಂಕ್ ಶಾಖೆಗಳ ಮಾಹಿತಿ ಕೂಡ ಲಭ್ಯ. ವಿವಿಧ ದೇವಸ್ಥಾನಗಳ ಮಾಹಿತಿ ಒಳಗೊಂಡ ವೆಬ್ಸೈಟ್ಗೆ ((<a href="http://www.http://karnatakatemples.kar.nic.in">www.http://karnatakatemples.kar.nic.in</a>) ) ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ಗೃಹ ಕಚೇರಿ `ಕೃಷ್ಣಾ~ದಲ್ಲಿ ಬುಧವಾರ ಚಾಲನೆ ನೀಡಿದರು.<br /> <br /> ಈ ಸಂದರ್ಭದಲ್ಲಿ ಮಾತನಾಡಿದ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತ ಬಿ.ಜಿ. ನಂದಕುಮಾರ್, `ಮಲೆ ಮಹದೇಶ್ವರ ಸ್ವಾಮಿ ದೇವಸ್ಥಾನ ಮತ್ತು ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಐಎಸ್ಒ ಪ್ರಮಾಣಪತ್ರ ದೊರೆತಿದೆ~ ಎಂದು ಪ್ರಕಟಿಸಿದರು.<br /> <br /> ಇಲಾಖೆ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಿಗೆ ದೇಣಿಗೆ ನೀಡಲು, ವಿವಿಧ ಸೇವೆಗಳಿಗೆ ಹಣ ಸಂದಾಯ ಮಾಡುವ ಸೌಲಭ್ಯವನ್ನು ಇಲಾಖೆಯ ಪ್ರಧಾನ ಕಚೇರಿಯಲ್ಲಿ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲ ದೇವಸ್ಥಾನಗಳ ಮಾಹಿತಿ ಒಳಗೊಂಡ ಪುಸ್ತಕವನ್ನು ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು. <br /> <br /> ಸಚಿವ ವರ್ತೂರು ಪ್ರಕಾಶ್, ಶಾಸಕ ಕೃಷ್ಣಯ್ಯ ಶೆಟ್ಟಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ, ಚಂದ್ರಗುತ್ತಿಯ ರೇಣುಕಾಂಬ ದೇವಸ್ಥಾನ, ಗಾಣಗಾಪುರದ ದತ್ತಾತ್ರೇಯಸ್ವಾಮಿ ದೇವಸ್ಥಾನ ಸೇರಿದಂತೆ ರಾಜ್ಯದ ಮುಜರಾಯಿ ಇಲಾಖೆಯ ಅಧೀನಕ್ಕೆ ಒಳಪಟ್ಟಿರುವ ಒಟ್ಟು 110 ದೇವಸ್ಥಾನಗಳ ಮಾಹಿತಿ ಈಗ ವೆಬ್ಸೈಟ್ನಲ್ಲಿ ಲಭ್ಯ.<br /> <br /> ದೇವಸ್ಥಾನಗಳಲ್ಲಿ ಸಲ್ಲಿಸಲು ಅವಕಾಶ ಇರುವ ವಿವಿಧ ಪೂಜೆಗಳು, ದೇವಸ್ಥಾನದ ಇತಿಹಾಸ, ಹತ್ತಿರದ ವಸತಿ ಗೃಹಗಳು, ಬ್ಯಾಂಕ್ ಶಾಖೆಗಳ ಮಾಹಿತಿ ಕೂಡ ಲಭ್ಯ. ವಿವಿಧ ದೇವಸ್ಥಾನಗಳ ಮಾಹಿತಿ ಒಳಗೊಂಡ ವೆಬ್ಸೈಟ್ಗೆ ((<a href="http://www.http://karnatakatemples.kar.nic.in">www.http://karnatakatemples.kar.nic.in</a>) ) ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ಗೃಹ ಕಚೇರಿ `ಕೃಷ್ಣಾ~ದಲ್ಲಿ ಬುಧವಾರ ಚಾಲನೆ ನೀಡಿದರು.<br /> <br /> ಈ ಸಂದರ್ಭದಲ್ಲಿ ಮಾತನಾಡಿದ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತ ಬಿ.ಜಿ. ನಂದಕುಮಾರ್, `ಮಲೆ ಮಹದೇಶ್ವರ ಸ್ವಾಮಿ ದೇವಸ್ಥಾನ ಮತ್ತು ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಐಎಸ್ಒ ಪ್ರಮಾಣಪತ್ರ ದೊರೆತಿದೆ~ ಎಂದು ಪ್ರಕಟಿಸಿದರು.<br /> <br /> ಇಲಾಖೆ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಿಗೆ ದೇಣಿಗೆ ನೀಡಲು, ವಿವಿಧ ಸೇವೆಗಳಿಗೆ ಹಣ ಸಂದಾಯ ಮಾಡುವ ಸೌಲಭ್ಯವನ್ನು ಇಲಾಖೆಯ ಪ್ರಧಾನ ಕಚೇರಿಯಲ್ಲಿ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲ ದೇವಸ್ಥಾನಗಳ ಮಾಹಿತಿ ಒಳಗೊಂಡ ಪುಸ್ತಕವನ್ನು ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು. <br /> <br /> ಸಚಿವ ವರ್ತೂರು ಪ್ರಕಾಶ್, ಶಾಸಕ ಕೃಷ್ಣಯ್ಯ ಶೆಟ್ಟಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>