<p>ಉಡುಪಿ: ಎಂ.ಜಿ.ಎಂ ಕಾಲೇಜು ಬಳಿಯಿಂದ ಕಡಿಯಾಳಿವರೆಗೆ ನಿತ್ಯ ಅಪಘಾತಗಳು ಹೆಚ್ಚುತ್ತಿದ್ದು, ಪಾದಚಾರಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಇಲ್ಲಿ ವೇಗ ನಿಯಂತ್ರಕ ಅಳವಡಿಸಬೇಕು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳದ ಸಂಚಾಲಕರು ಪೊಲೀಸ್ ವರಿಷ್ಠರಿಗೆ ಮನವಿ ಸಲ್ಲಿಸಿದ್ದಾರೆ.<br /> ಇಲ್ಲಿ ಆಗಾಗ್ಗೆ ಅಪಘಾತ ಸಂಭವಿಸುತ್ತಿರುವುದರಿಂದಾಗಿ ಜನಸಾಮಾನ್ಯರು ರಸ್ತೆಗಿಳಿಯಲು ಹೆದರುತ್ತಿದ್ದಾರೆ. <br /> <br /> ವಾಹನಗಳು ಶರವೇಗದಲ್ಲಿ ಧಾವಿಸುತ್ತಿದ್ದು ಅವುಗಳ ವೇಗ ನಿಯಂತ್ರಣ ಮಾಡಲೇಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಮನವಿಯಲ್ಲಿ ವಿಶ್ವ ಹಿಂದೂ ಪರಿಷತ್ನ ನಗರ ಘಟಕದ ಅಧ್ಯಕ್ಷ ಬಾಬುರಾವ್ ಆಚಾರ್, ಬಜರಂಗ ದಳದ ಸಂಚಾಲಕ ಹರೀಶ್ ಬೆಳ್ಳಂಪಳ್ಳಿ, ಸಹ ಸಂಚಾಲಕ ಮಧು ಕಡಿಯಾಳಿ ಆಗ್ರಹಿಸಿದ್ದಾರೆ.<br /> <br /> ರಸ್ತೆ ಹೊಂಡ ಮುಚ್ಚಲು ಆಗ್ರಹ: ಕೆಲ ತಿಂಗಳಿನ ಹಿಂದಷ್ಟೇ ಡಾಂಬರೀಕರಣಗೊಂಡಿರುವ ಕಲ್ಸಂಕ ಗುಂಡಿಬೈಲ್ ರಸ್ತೆ ಹೊಂಡ ಗುಂಡಿಗಳಿಂದ ಕೂಡಿದೆ. ಇಲ್ಲಿ ದಿನವೂ ಅನಾಹುತವುಂಟಾಗುತ್ತಿದೆ. ಈ ರಸ್ತೆ ಬಳಸುತ್ತಿರುವ ಗುಂಡಿಬೈಲು, ತಾಂಗದಗಡಿ, ದೊಡ್ಡಣಗುಡ್ಡೆ, ಪೆರಂಪಳ್ಳಿ ನಿವಾಸಿಗಳು ತೊಂದರೆ ಅನುಭವಿಸುತ್ತಿದ್ದಾರೆ.<br /> <br /> ಈ ರಸ್ತೆಯಲ್ಲಿ ಶಾಲಾ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ, ದಿನನಿತ್ಯ ಕೆಲಸಕ್ಕೆ ಹೋಗುವವರಿಗೂ ಸಂಚಾರ ಕಷ್ಟಕರವಾಗಿದೆ. ಹೀಗಾಗಿ ಕೂಡಲೇ ಸರಿಪಡಿಸಬೇಕು ಎಂದು ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷ ಜನಾರ್ದನ ಭಂಡಾರ್ಕರ್ ಆಗ್ರಹಿಸಿದ್ದಾರೆ.<br /> <br /> ರಸ್ತೆಯ ಇಕ್ಕೆಲಗಳಲ್ಲಿ ಮಳೆ ನೀರು ಹರಿದುಹೋಗಲು ಸೂಕ್ತವಾದ ಚರಂಡಿ ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಡುಪಿ: ಎಂ.ಜಿ.ಎಂ ಕಾಲೇಜು ಬಳಿಯಿಂದ ಕಡಿಯಾಳಿವರೆಗೆ ನಿತ್ಯ ಅಪಘಾತಗಳು ಹೆಚ್ಚುತ್ತಿದ್ದು, ಪಾದಚಾರಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಇಲ್ಲಿ ವೇಗ ನಿಯಂತ್ರಕ ಅಳವಡಿಸಬೇಕು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳದ ಸಂಚಾಲಕರು ಪೊಲೀಸ್ ವರಿಷ್ಠರಿಗೆ ಮನವಿ ಸಲ್ಲಿಸಿದ್ದಾರೆ.<br /> ಇಲ್ಲಿ ಆಗಾಗ್ಗೆ ಅಪಘಾತ ಸಂಭವಿಸುತ್ತಿರುವುದರಿಂದಾಗಿ ಜನಸಾಮಾನ್ಯರು ರಸ್ತೆಗಿಳಿಯಲು ಹೆದರುತ್ತಿದ್ದಾರೆ. <br /> <br /> ವಾಹನಗಳು ಶರವೇಗದಲ್ಲಿ ಧಾವಿಸುತ್ತಿದ್ದು ಅವುಗಳ ವೇಗ ನಿಯಂತ್ರಣ ಮಾಡಲೇಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಮನವಿಯಲ್ಲಿ ವಿಶ್ವ ಹಿಂದೂ ಪರಿಷತ್ನ ನಗರ ಘಟಕದ ಅಧ್ಯಕ್ಷ ಬಾಬುರಾವ್ ಆಚಾರ್, ಬಜರಂಗ ದಳದ ಸಂಚಾಲಕ ಹರೀಶ್ ಬೆಳ್ಳಂಪಳ್ಳಿ, ಸಹ ಸಂಚಾಲಕ ಮಧು ಕಡಿಯಾಳಿ ಆಗ್ರಹಿಸಿದ್ದಾರೆ.<br /> <br /> ರಸ್ತೆ ಹೊಂಡ ಮುಚ್ಚಲು ಆಗ್ರಹ: ಕೆಲ ತಿಂಗಳಿನ ಹಿಂದಷ್ಟೇ ಡಾಂಬರೀಕರಣಗೊಂಡಿರುವ ಕಲ್ಸಂಕ ಗುಂಡಿಬೈಲ್ ರಸ್ತೆ ಹೊಂಡ ಗುಂಡಿಗಳಿಂದ ಕೂಡಿದೆ. ಇಲ್ಲಿ ದಿನವೂ ಅನಾಹುತವುಂಟಾಗುತ್ತಿದೆ. ಈ ರಸ್ತೆ ಬಳಸುತ್ತಿರುವ ಗುಂಡಿಬೈಲು, ತಾಂಗದಗಡಿ, ದೊಡ್ಡಣಗುಡ್ಡೆ, ಪೆರಂಪಳ್ಳಿ ನಿವಾಸಿಗಳು ತೊಂದರೆ ಅನುಭವಿಸುತ್ತಿದ್ದಾರೆ.<br /> <br /> ಈ ರಸ್ತೆಯಲ್ಲಿ ಶಾಲಾ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ, ದಿನನಿತ್ಯ ಕೆಲಸಕ್ಕೆ ಹೋಗುವವರಿಗೂ ಸಂಚಾರ ಕಷ್ಟಕರವಾಗಿದೆ. ಹೀಗಾಗಿ ಕೂಡಲೇ ಸರಿಪಡಿಸಬೇಕು ಎಂದು ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷ ಜನಾರ್ದನ ಭಂಡಾರ್ಕರ್ ಆಗ್ರಹಿಸಿದ್ದಾರೆ.<br /> <br /> ರಸ್ತೆಯ ಇಕ್ಕೆಲಗಳಲ್ಲಿ ಮಳೆ ನೀರು ಹರಿದುಹೋಗಲು ಸೂಕ್ತವಾದ ಚರಂಡಿ ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>