<p><strong>ಮುಂಬೈ (ಪಿಟಿಐ</strong>): ಬಾಕಿ ವೇತನ ಪಾವತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಕಿಂಗ್ಫಿಶರ್ ಏರ್ಲೈನ್ಸ್ ಸಿಬ್ಬಂದಿಗೆ ಕೊಡಲು ತಮ್ಮ ಬಳಿ ಹಣ ಇಲ್ಲ ಎಂದು ಕಂಪೆನಿಯ ಮಾಲೀಕ ವಿಜಯ ಮಲ್ಯ ಕೈಚೆಲ್ಲಿದ್ದಾರೆ.<br /> <br /> `ಡಿಯಾಜಿಯೊ ಕಂಪೆನಿ ಜತೆ ಯುನೈಟೆಡ್ ಸ್ಪಿರಿಟ್ಸ್ ಒಪ್ಪಂದ ಮಾಡಿಕೊಂಡಿದೆ. ಆದರೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ಅನ್ವಯ ಆ ಸಂಸ್ಥೆಯ ಹಣವನ್ನು ವೇತನಕ್ಕೆ ಬಳಸಲು ಸಾಧ್ಯವಿಲ್ಲ. ಈಗ ಸಂಬಳ ಕೊಡಲು ನನ್ನಲ್ಲಿ ಹಣ ಇಲ್ಲ' ಎಂದು ಧರಣಿನಿರತ ಸಿಬ್ಬಂದಿಗೆ ಅವರು ಹೇಳಿದ್ದಾಗಿ ತಿಳಿದುಬಂದಿದೆ.<br /> <br /> ಏರ್ಲೈನ್ಸ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಂಜಯ್ ಅಗರವಾಲ್ ಅವರು ಧರಣಿನಿರತ ಸಿಬ್ಬಂದಿ ಜತೆ ಮಾತುಕತೆ ನಡೆಸಲಿದ್ದಾರೆ ಎಂದು ಮಲ್ಯ ತಿಳಿಸಿದ್ದಾರೆ. ಆದರೆ, ಈ ಮೊದಲು ಮಲ್ಯ ಜತೆ ನಡೆಸಿದ್ದ ಮಾತುಕತೆಯಿಂದ ಯಾವುದೇ ಪ್ರಯೋಜನವಾಗಿಲ್ಲ ಎಂದು ಸಿಬ್ಬಂದಿ ದೂರಿದ್ದು, ಉಪವಾಸ ಮುಂದುವರಿಸುವುದಾಗಿ ಸ್ಪಷ್ಟಪಡಿಸಿದ್ದಾರೆ. ಕಳೆದ ಆಗಸ್ಟ್ನಿಂದಲೂ ವೇತನ ಪಾವತಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿ, ಇಲ್ಲಿನ ಕಿಂಗ್ಫಿಶರ್ ಹೌಸ್ ಎದುರು 70 ಉದ್ಯೋಗಿಗಳು ಗುರುವಾರದಿಂದ ಉಪವಾಸ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ (ಪಿಟಿಐ</strong>): ಬಾಕಿ ವೇತನ ಪಾವತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಕಿಂಗ್ಫಿಶರ್ ಏರ್ಲೈನ್ಸ್ ಸಿಬ್ಬಂದಿಗೆ ಕೊಡಲು ತಮ್ಮ ಬಳಿ ಹಣ ಇಲ್ಲ ಎಂದು ಕಂಪೆನಿಯ ಮಾಲೀಕ ವಿಜಯ ಮಲ್ಯ ಕೈಚೆಲ್ಲಿದ್ದಾರೆ.<br /> <br /> `ಡಿಯಾಜಿಯೊ ಕಂಪೆನಿ ಜತೆ ಯುನೈಟೆಡ್ ಸ್ಪಿರಿಟ್ಸ್ ಒಪ್ಪಂದ ಮಾಡಿಕೊಂಡಿದೆ. ಆದರೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ಅನ್ವಯ ಆ ಸಂಸ್ಥೆಯ ಹಣವನ್ನು ವೇತನಕ್ಕೆ ಬಳಸಲು ಸಾಧ್ಯವಿಲ್ಲ. ಈಗ ಸಂಬಳ ಕೊಡಲು ನನ್ನಲ್ಲಿ ಹಣ ಇಲ್ಲ' ಎಂದು ಧರಣಿನಿರತ ಸಿಬ್ಬಂದಿಗೆ ಅವರು ಹೇಳಿದ್ದಾಗಿ ತಿಳಿದುಬಂದಿದೆ.<br /> <br /> ಏರ್ಲೈನ್ಸ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಂಜಯ್ ಅಗರವಾಲ್ ಅವರು ಧರಣಿನಿರತ ಸಿಬ್ಬಂದಿ ಜತೆ ಮಾತುಕತೆ ನಡೆಸಲಿದ್ದಾರೆ ಎಂದು ಮಲ್ಯ ತಿಳಿಸಿದ್ದಾರೆ. ಆದರೆ, ಈ ಮೊದಲು ಮಲ್ಯ ಜತೆ ನಡೆಸಿದ್ದ ಮಾತುಕತೆಯಿಂದ ಯಾವುದೇ ಪ್ರಯೋಜನವಾಗಿಲ್ಲ ಎಂದು ಸಿಬ್ಬಂದಿ ದೂರಿದ್ದು, ಉಪವಾಸ ಮುಂದುವರಿಸುವುದಾಗಿ ಸ್ಪಷ್ಟಪಡಿಸಿದ್ದಾರೆ. ಕಳೆದ ಆಗಸ್ಟ್ನಿಂದಲೂ ವೇತನ ಪಾವತಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿ, ಇಲ್ಲಿನ ಕಿಂಗ್ಫಿಶರ್ ಹೌಸ್ ಎದುರು 70 ಉದ್ಯೋಗಿಗಳು ಗುರುವಾರದಿಂದ ಉಪವಾಸ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>