<p>ಶಿವಮೊಗ್ಗ: ಗ್ರಾಮೀಣ ಕೃಪಾಂಕ ಆಧಾರಿತ ನೇಮಕಾತಿ ಹೊಂದಿದ ಶಿಕ್ಷಕರು ಮತ್ತು ನೌಕರರ ಸೇವೆಗೆ ಅನುಗುಣವಾಗಿ ನೀಡಿರುವ ವೇತನ ಹೆಚ್ಚಳವನ್ನು ಕಡಿತಗೊಳಿಸುವ ಕ್ರಮವನ್ನು ಖಂಡಿಸಿ ಜಿಲ್ಲಾ ಗ್ರಾಮೀಣ ಕೃಪಾಂಕ ಶಿಕ್ಷಕರ ಮತ್ತು ನೌಕರರ ವೇದಿಕೆ ಸದಸ್ಯರು ಮಂಗಳವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. <br /> <br /> ಗ್ರಾಮೀಣ ಕೃಪಾಂಕ ಸೌಲಭ್ಯದ ಅಡಿ ಸಾವಿರಾರು ಶಿಕ್ಷಕರು ನೇಮಕಗೊಂಡಿದ್ದಾರೆ. ಅವರೆಲ್ಲರಿಗೂ 1998ರಲ್ಲಿನ ನೇಮಕಾತಿ ದಿನಾಂಕದಿಂದ ವೇತನ ನಿಗದಿಗೊಳಿಸಿದೆ. ಆದರೆ, ಈಗ ಆ ವೇತನಕ್ಕೆ ತಾವು ಅರ್ಹರಲ್ಲ ಎಂದು , ನೀಡಲಾಗಿರುವ ಹೆಚ್ಚಳದ ವೇತನ ಕಡಿತಗೊಳಿಸಲು ಸರ್ಕಾರ ಮುಂದಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. <br /> <br /> ಆಡಳಿತ ಸುಧಾರಣೆ ಮತ್ತು ಸಿಬ್ಬಂದಿ ಇಲಾಖೆಯಲ್ಲಿ ವಿಶೇಷ ನೇಮಕಾತಿ ನಿಯಮಾವಳಿ 2003ಕ್ಕೆ ತಿದ್ದುಪಡಿ ಮಾಡುವ ಮೂಲಕ ಗ್ರಾಮೀಣ ಕೃಪಾಂಕ ಆಧಾರಿತ ನೌಕರರ ಸಮಸ್ಯೆಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು. <br /> <br /> ಪದಾಧಿಕಾರಿಗಳಾದ ಶಿವಕುಮಾರಸ್ವಾಮಿ, ರಾಘವೇಂದ್ರ, ಶಿವನಗೌಡ, ರಮೇಶ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ಗ್ರಾಮೀಣ ಕೃಪಾಂಕ ಆಧಾರಿತ ನೇಮಕಾತಿ ಹೊಂದಿದ ಶಿಕ್ಷಕರು ಮತ್ತು ನೌಕರರ ಸೇವೆಗೆ ಅನುಗುಣವಾಗಿ ನೀಡಿರುವ ವೇತನ ಹೆಚ್ಚಳವನ್ನು ಕಡಿತಗೊಳಿಸುವ ಕ್ರಮವನ್ನು ಖಂಡಿಸಿ ಜಿಲ್ಲಾ ಗ್ರಾಮೀಣ ಕೃಪಾಂಕ ಶಿಕ್ಷಕರ ಮತ್ತು ನೌಕರರ ವೇದಿಕೆ ಸದಸ್ಯರು ಮಂಗಳವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. <br /> <br /> ಗ್ರಾಮೀಣ ಕೃಪಾಂಕ ಸೌಲಭ್ಯದ ಅಡಿ ಸಾವಿರಾರು ಶಿಕ್ಷಕರು ನೇಮಕಗೊಂಡಿದ್ದಾರೆ. ಅವರೆಲ್ಲರಿಗೂ 1998ರಲ್ಲಿನ ನೇಮಕಾತಿ ದಿನಾಂಕದಿಂದ ವೇತನ ನಿಗದಿಗೊಳಿಸಿದೆ. ಆದರೆ, ಈಗ ಆ ವೇತನಕ್ಕೆ ತಾವು ಅರ್ಹರಲ್ಲ ಎಂದು , ನೀಡಲಾಗಿರುವ ಹೆಚ್ಚಳದ ವೇತನ ಕಡಿತಗೊಳಿಸಲು ಸರ್ಕಾರ ಮುಂದಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. <br /> <br /> ಆಡಳಿತ ಸುಧಾರಣೆ ಮತ್ತು ಸಿಬ್ಬಂದಿ ಇಲಾಖೆಯಲ್ಲಿ ವಿಶೇಷ ನೇಮಕಾತಿ ನಿಯಮಾವಳಿ 2003ಕ್ಕೆ ತಿದ್ದುಪಡಿ ಮಾಡುವ ಮೂಲಕ ಗ್ರಾಮೀಣ ಕೃಪಾಂಕ ಆಧಾರಿತ ನೌಕರರ ಸಮಸ್ಯೆಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು. <br /> <br /> ಪದಾಧಿಕಾರಿಗಳಾದ ಶಿವಕುಮಾರಸ್ವಾಮಿ, ರಾಘವೇಂದ್ರ, ಶಿವನಗೌಡ, ರಮೇಶ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>