<p><strong>ಚಾಮರಾಜನಗರ: </strong>ವೇತನ ತಾರತಮ್ಯ ಸರಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಗರದ ಜಿಲ್ಲಾಡಳಿತ ಭವನದ ಮುಂಭಾಗ ಸೋಮವಾರ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾ ಘಟಕದಿಂದ ಶಿಕ್ಷಕರ ದಿನಾಚರಣೆಯನ್ನು ಕರಾಳ ದಿನವನ್ನಾಗಿ ಆಚರಿಸಲಾಯಿತು. <br /> <br /> 4 ಮತ್ತು 5ನೇ ವೇತನ ಆಯೋಗದಲ್ಲಿ ಆಗಿರುವ ತಾರತಮ್ಯ ಸರಿಪಡಿಸಲು ರಾಜ್ಯ ಸರ್ಕಾರ ಮುಂದಾಗಿಲ್ಲ. 1998ರಿಂದಲೂ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಹೋರಾಟ ಮಾಡುತ್ತಿದ್ದಾರೆ. ಆದರೆ, ಯಾವುದೇ ಫಲಶ್ರುತಿ ಸಿಕ್ಕಿಲ್ಲ. ಕಳೆದ ಏಪ್ರಿಲ್ನಲ್ಲಿ ದ್ವಿತೀಯ ಪಿಯು ಮೌಲ್ಯಮಾಪನ ಬಹಿಷ್ಕರಿಸಲಾಯಿತು. ಆ ವೇಳೆ ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ತಾರತಮ್ಯ ಸರಿಪಡಿಸಲಾಗುವುದೆಂದು ಭರವಸೆ ನೀಡಿದ್ದರು. ಇಂದಿಗೂ ಪರಿಹಾರ ಸಿಕ್ಕಿಲ್ಲ ಎಂದು ದೂರಿದರು. <br /> <br /> ವೇತನ ತಾರತಮ್ಯ ಅಧ್ಯಯನ ಸಮಿತಿಯ ವರದಿ ಆಧರಿಸಿ ಸಮಸ್ಯೆ ಬಗೆಹರಿಸುವುದಾಗಿ ಸರ್ಕಾರ ಭರವಸೆ ನೀಡಿತ್ತು. ಪ್ರಸ್ತುತ ಸಮಿತಿಯಿಂದ ವರದಿ ಸಲ್ಲಿಸಲಾಗಿದೆ. 2 ತಿಂಗಳು ಕಳೆದರೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿದರು. <br /> <br /> ಶೀಘ್ರವೇ, 2005ರ ಜು. 1ರಿಂದ ಪೂರ್ವಾನ್ವಯವಾಗುವಂತೆ 7,400 ರೂ ಮೂಲವೇತನ ಶ್ರೇಣಿಗೆ ಸಮಾನಾಂತರವಾಗಿ ಪ್ರಾಂಶುಪಾಲರಿಗೆ 14,050 ರೂ ಹಾಗೂ ಉಪನ್ಯಾಸಕರಿಗೆ 18,050 ರೂ ನಿಗದಿಪಡಿಸಬೇಕು. ಉಪನ್ಯಾಸಕರಿಗೆ ಪದವಿ ಕಾಲೇಜುಗಳಿಗೆ ಬಡ್ತಿ ನೀಡುವ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು. <br /> <br /> ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡು 1991ರಲ್ಲಿ ಸಕ್ರಮಗೊಂಡಿರುವ ಉಪನ್ಯಾಸಕರ ಕಾಲ್ಪನಿಕ ವೇತನ ಬಡ್ತಿ ಹಿಂದಕ್ಕೆ ಪಡೆಯುವುದಾಗಿ ಸರ್ಕಾರ ಹೇಳಿದೆ. ಇದು ಅಕ್ಷಮ್ಯವಾದುದು. ಕೂಡಲೇ, ಈ ಆದೇಶವನ್ನು ರದ್ದುಪಡಿಸಬೇಕು. ಜತೆಗೆ, ಅನುದಾನಿತ ಪಿಯು ಕಾಲೇಜುಗಳಲ್ಲಿ ಸೇವೆ ಸಲ್ಲಿಸಿರುವ ಸಾಕಷ್ಟು ಉಪನ್ಯಾಸಕರಿದ್ದಾರೆ. ಪ್ರಸ್ತುತ ಅಂಥ ಕಾಲೇಜುಗಳು ಅನುದಾನಕ್ಕೆ ಒಳಪಟ್ಟಿವೆ. ಹೀಗಾಗಿ, ಆ ಉಪನ್ಯಾಸಕರಿಗೆ ಸೇವೆಗೆ ಸೇರಿದ ಅವಧಿಯಿಂದ ಕಾಲ್ಪನಿಕ ವೇತನ ಬಡ್ತಿ ನೀಡಬೇಕು ಎಂದರು.<br /> <br /> ಅರೆಕಾಲಿಕ ಉಪನ್ಯಾಸಕರಿಗೆ ಅವರ ಹಿಂದಿನ ಸೇವೆ ಪರಿಗಣಿಸಿ ಪಿಂಚಣಿ ಸೌಲಭ್ಯ ಕಲ್ಪಿಸಬೇಕು. ಸರ್ಕಾರ ಬೇಡಿಕೆ ಈಡೇರಿಸಲು ಹಿಂದೇಟು ಹಾಕಿದರೆ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು. <br /> <br /> ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಂಗಾರನಾಯಕ, ಮಾಣಿಕ್ಯಂ, ಬಿ.ಜಿ. ಮಹೇಶ್ ಇತರರು ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು. ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾ ಘಟಕದಿಂದಲೂ ಹೋರಾಟಕ್ಕೆ ಬೆಂಬಲ ವ್ಯಕ್ತವಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ವೇತನ ತಾರತಮ್ಯ ಸರಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಗರದ ಜಿಲ್ಲಾಡಳಿತ ಭವನದ ಮುಂಭಾಗ ಸೋಮವಾರ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾ ಘಟಕದಿಂದ ಶಿಕ್ಷಕರ ದಿನಾಚರಣೆಯನ್ನು ಕರಾಳ ದಿನವನ್ನಾಗಿ ಆಚರಿಸಲಾಯಿತು. <br /> <br /> 4 ಮತ್ತು 5ನೇ ವೇತನ ಆಯೋಗದಲ್ಲಿ ಆಗಿರುವ ತಾರತಮ್ಯ ಸರಿಪಡಿಸಲು ರಾಜ್ಯ ಸರ್ಕಾರ ಮುಂದಾಗಿಲ್ಲ. 1998ರಿಂದಲೂ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಹೋರಾಟ ಮಾಡುತ್ತಿದ್ದಾರೆ. ಆದರೆ, ಯಾವುದೇ ಫಲಶ್ರುತಿ ಸಿಕ್ಕಿಲ್ಲ. ಕಳೆದ ಏಪ್ರಿಲ್ನಲ್ಲಿ ದ್ವಿತೀಯ ಪಿಯು ಮೌಲ್ಯಮಾಪನ ಬಹಿಷ್ಕರಿಸಲಾಯಿತು. ಆ ವೇಳೆ ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ತಾರತಮ್ಯ ಸರಿಪಡಿಸಲಾಗುವುದೆಂದು ಭರವಸೆ ನೀಡಿದ್ದರು. ಇಂದಿಗೂ ಪರಿಹಾರ ಸಿಕ್ಕಿಲ್ಲ ಎಂದು ದೂರಿದರು. <br /> <br /> ವೇತನ ತಾರತಮ್ಯ ಅಧ್ಯಯನ ಸಮಿತಿಯ ವರದಿ ಆಧರಿಸಿ ಸಮಸ್ಯೆ ಬಗೆಹರಿಸುವುದಾಗಿ ಸರ್ಕಾರ ಭರವಸೆ ನೀಡಿತ್ತು. ಪ್ರಸ್ತುತ ಸಮಿತಿಯಿಂದ ವರದಿ ಸಲ್ಲಿಸಲಾಗಿದೆ. 2 ತಿಂಗಳು ಕಳೆದರೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿದರು. <br /> <br /> ಶೀಘ್ರವೇ, 2005ರ ಜು. 1ರಿಂದ ಪೂರ್ವಾನ್ವಯವಾಗುವಂತೆ 7,400 ರೂ ಮೂಲವೇತನ ಶ್ರೇಣಿಗೆ ಸಮಾನಾಂತರವಾಗಿ ಪ್ರಾಂಶುಪಾಲರಿಗೆ 14,050 ರೂ ಹಾಗೂ ಉಪನ್ಯಾಸಕರಿಗೆ 18,050 ರೂ ನಿಗದಿಪಡಿಸಬೇಕು. ಉಪನ್ಯಾಸಕರಿಗೆ ಪದವಿ ಕಾಲೇಜುಗಳಿಗೆ ಬಡ್ತಿ ನೀಡುವ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು. <br /> <br /> ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡು 1991ರಲ್ಲಿ ಸಕ್ರಮಗೊಂಡಿರುವ ಉಪನ್ಯಾಸಕರ ಕಾಲ್ಪನಿಕ ವೇತನ ಬಡ್ತಿ ಹಿಂದಕ್ಕೆ ಪಡೆಯುವುದಾಗಿ ಸರ್ಕಾರ ಹೇಳಿದೆ. ಇದು ಅಕ್ಷಮ್ಯವಾದುದು. ಕೂಡಲೇ, ಈ ಆದೇಶವನ್ನು ರದ್ದುಪಡಿಸಬೇಕು. ಜತೆಗೆ, ಅನುದಾನಿತ ಪಿಯು ಕಾಲೇಜುಗಳಲ್ಲಿ ಸೇವೆ ಸಲ್ಲಿಸಿರುವ ಸಾಕಷ್ಟು ಉಪನ್ಯಾಸಕರಿದ್ದಾರೆ. ಪ್ರಸ್ತುತ ಅಂಥ ಕಾಲೇಜುಗಳು ಅನುದಾನಕ್ಕೆ ಒಳಪಟ್ಟಿವೆ. ಹೀಗಾಗಿ, ಆ ಉಪನ್ಯಾಸಕರಿಗೆ ಸೇವೆಗೆ ಸೇರಿದ ಅವಧಿಯಿಂದ ಕಾಲ್ಪನಿಕ ವೇತನ ಬಡ್ತಿ ನೀಡಬೇಕು ಎಂದರು.<br /> <br /> ಅರೆಕಾಲಿಕ ಉಪನ್ಯಾಸಕರಿಗೆ ಅವರ ಹಿಂದಿನ ಸೇವೆ ಪರಿಗಣಿಸಿ ಪಿಂಚಣಿ ಸೌಲಭ್ಯ ಕಲ್ಪಿಸಬೇಕು. ಸರ್ಕಾರ ಬೇಡಿಕೆ ಈಡೇರಿಸಲು ಹಿಂದೇಟು ಹಾಕಿದರೆ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು. <br /> <br /> ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಂಗಾರನಾಯಕ, ಮಾಣಿಕ್ಯಂ, ಬಿ.ಜಿ. ಮಹೇಶ್ ಇತರರು ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು. ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾ ಘಟಕದಿಂದಲೂ ಹೋರಾಟಕ್ಕೆ ಬೆಂಬಲ ವ್ಯಕ್ತವಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>