<p><strong>ಬೆಂಗಳೂರು:</strong> `ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಳೆದ ಮೂರು ತಿಂಗಳಿನಿಂದ ತಡೆಹಿಡಿದಿರುವ ಪೌರಕಾರ್ಮಿಕರ ವೇತನವನ್ನು ಕೂಡಲೇ ಪಾವತಿಸಬೇಕು~ ಎಂದು ಬಿಬಿಎಂಪಿ ಗುತ್ತಿಗೆ ಪೌರಕಾರ್ಮಿಕರ ಸಂಘಟನೆ ಅಧ್ಯಕ್ಷ ಎಸ್. ಬಾಲನ್ ಒತ್ತಾಯಿಸಿದರು.<br /> <br /> ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವೇತನ ನೀಡದ ಕಾರಣ ನಗರದ ಕೆಲವು ಪ್ರದೇಶಗಳಲ್ಲಿ ಕೆಲಸವನ್ನು ಸ್ಥಗಿತಗೊಳಿಸಲಾಗಿದೆ~ ಎಂದ ಅವರು, `ಬಿಬಿಎಂಪಿಯಲ್ಲಿ ಸುಮಾರು 17 ಸಾವಿರ ಪೌರಕಾರ್ಮಿಕರು ಸೇವೆ ಸಲ್ಲಿಸುತ್ತಿದ್ದು, ಅವರ ಜೀವನದ ಚೆಲ್ಲಾಟ ಆಡುವುದು ಸಲ್ಲ~ ಎಂದರು.<br /> <br /> `ಗುತ್ತಿಗೆದಾರರನ್ನು ಕೇಳಿದರೆ ಬಿಬಿಎಂಪಿ ಹಣ ನೀಡಿಲ್ಲ ಎನ್ನುತ್ತಿದ್ದು, ಬಿಬಿಎಂಪಿ ಅಧಿಕಾರಿಗಳನ್ನು ವಿಚಾರಿಸಿದರೆ ಹಣವನ್ನು ಗುತ್ತಿಗೆದಾರರಿಗೆ ಪಾವತಿಸಲಾಗಿದೆ ಎನ್ನುತ್ತಿದ್ದಾರೆ. ಇಬ್ಬರೂ ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ~ ಎಂದು ಆರೋಪಿಸಿದರು.<br /> <br /> `ಕಾರ್ಮಿಕ ಕಾಯಿದೆಯ ಪ್ರಕಾರ ಕನಿಷ್ಠ ವೇತನ ನೀಡಬೇಕು ಎಂಬುದು ಸಂವಿಧಾನ ಬದ್ಧ ಹಕ್ಕಾಗಿದ್ದು, ಆ ಹಕ್ಕನ್ನು ಪಡೆಯಲು ಆಯಾ ವಾರ್ಡ್ಗಳ ಬಿಬಿಎಂಪಿ ಕಚೇರಿ ಎದುರು ಹೋರಾಟ ಮಾಡಿದರೂ ಪ್ರಯೋಜನವಾಗಿಲ್ಲ~ ಎಂದರು.<br /> <br /> `ಪ್ರತಿ ತಿಂಗಳು 7ರೊಳಗೆ ವೇತನ, ಎಲ್ಲಾ ಗುತ್ತಿಗೆ ಪೌರಕಾರ್ಮಿಕರಿಗೆ ಇ.ಎಸ್.ಐ, ಪಿ.ಎಫ್, ಗುರುತಿನ ಕಾರ್ಡ್ ಸೌಲಭ್ಯ ನೀಡಬೇಕು. ಕಾರ್ಮಿಕ ಕಾನೂನನ್ನು ಪಾಲಿಸದ ಗುತ್ತಿಗೆದಾರರ ಲೈಸನ್ಸ್ ರದ್ದು ಮಾಡಬೇಕು. ಇಲ್ಲವಾದಲ್ಲಿ ಪ್ರತಿಭಟನೆ ನಡೆಸಲಾಗುವುದು~ ಎಂದು ತಿಳಿಸಿದರು. ಬಿಬಿಎಂಪಿ ಗುತ್ತಿಗೆ ಪೌರಕಾರ್ಮಿಕರ ಸಂಘಟನೆ ಸಂಘಟನಾ ಕಾರ್ಯದರ್ಶಿ ಗೌರಿ, ಪ್ರಜಾತಾಂತ್ರಿಕ ಜನರ ವೇದಿಕೆ ಸಂಚಾಲಕ ರಮೇಶ್ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಳೆದ ಮೂರು ತಿಂಗಳಿನಿಂದ ತಡೆಹಿಡಿದಿರುವ ಪೌರಕಾರ್ಮಿಕರ ವೇತನವನ್ನು ಕೂಡಲೇ ಪಾವತಿಸಬೇಕು~ ಎಂದು ಬಿಬಿಎಂಪಿ ಗುತ್ತಿಗೆ ಪೌರಕಾರ್ಮಿಕರ ಸಂಘಟನೆ ಅಧ್ಯಕ್ಷ ಎಸ್. ಬಾಲನ್ ಒತ್ತಾಯಿಸಿದರು.<br /> <br /> ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವೇತನ ನೀಡದ ಕಾರಣ ನಗರದ ಕೆಲವು ಪ್ರದೇಶಗಳಲ್ಲಿ ಕೆಲಸವನ್ನು ಸ್ಥಗಿತಗೊಳಿಸಲಾಗಿದೆ~ ಎಂದ ಅವರು, `ಬಿಬಿಎಂಪಿಯಲ್ಲಿ ಸುಮಾರು 17 ಸಾವಿರ ಪೌರಕಾರ್ಮಿಕರು ಸೇವೆ ಸಲ್ಲಿಸುತ್ತಿದ್ದು, ಅವರ ಜೀವನದ ಚೆಲ್ಲಾಟ ಆಡುವುದು ಸಲ್ಲ~ ಎಂದರು.<br /> <br /> `ಗುತ್ತಿಗೆದಾರರನ್ನು ಕೇಳಿದರೆ ಬಿಬಿಎಂಪಿ ಹಣ ನೀಡಿಲ್ಲ ಎನ್ನುತ್ತಿದ್ದು, ಬಿಬಿಎಂಪಿ ಅಧಿಕಾರಿಗಳನ್ನು ವಿಚಾರಿಸಿದರೆ ಹಣವನ್ನು ಗುತ್ತಿಗೆದಾರರಿಗೆ ಪಾವತಿಸಲಾಗಿದೆ ಎನ್ನುತ್ತಿದ್ದಾರೆ. ಇಬ್ಬರೂ ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ~ ಎಂದು ಆರೋಪಿಸಿದರು.<br /> <br /> `ಕಾರ್ಮಿಕ ಕಾಯಿದೆಯ ಪ್ರಕಾರ ಕನಿಷ್ಠ ವೇತನ ನೀಡಬೇಕು ಎಂಬುದು ಸಂವಿಧಾನ ಬದ್ಧ ಹಕ್ಕಾಗಿದ್ದು, ಆ ಹಕ್ಕನ್ನು ಪಡೆಯಲು ಆಯಾ ವಾರ್ಡ್ಗಳ ಬಿಬಿಎಂಪಿ ಕಚೇರಿ ಎದುರು ಹೋರಾಟ ಮಾಡಿದರೂ ಪ್ರಯೋಜನವಾಗಿಲ್ಲ~ ಎಂದರು.<br /> <br /> `ಪ್ರತಿ ತಿಂಗಳು 7ರೊಳಗೆ ವೇತನ, ಎಲ್ಲಾ ಗುತ್ತಿಗೆ ಪೌರಕಾರ್ಮಿಕರಿಗೆ ಇ.ಎಸ್.ಐ, ಪಿ.ಎಫ್, ಗುರುತಿನ ಕಾರ್ಡ್ ಸೌಲಭ್ಯ ನೀಡಬೇಕು. ಕಾರ್ಮಿಕ ಕಾನೂನನ್ನು ಪಾಲಿಸದ ಗುತ್ತಿಗೆದಾರರ ಲೈಸನ್ಸ್ ರದ್ದು ಮಾಡಬೇಕು. ಇಲ್ಲವಾದಲ್ಲಿ ಪ್ರತಿಭಟನೆ ನಡೆಸಲಾಗುವುದು~ ಎಂದು ತಿಳಿಸಿದರು. ಬಿಬಿಎಂಪಿ ಗುತ್ತಿಗೆ ಪೌರಕಾರ್ಮಿಕರ ಸಂಘಟನೆ ಸಂಘಟನಾ ಕಾರ್ಯದರ್ಶಿ ಗೌರಿ, ಪ್ರಜಾತಾಂತ್ರಿಕ ಜನರ ವೇದಿಕೆ ಸಂಚಾಲಕ ರಮೇಶ್ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>