<p><strong>ಬೆಂಗಳೂರು: </strong>ವೇತನ ಹೆಚ್ಚಿಸಿದ್ದರಿಂದ ಸಂಭ್ರಮಗೊಂಡಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗುತ್ತಿಗೆ ಪೌರ ಕಾರ್ಮಿಕರು ಹಾಗೂ ಮೇಸ್ತ್ರಿಗಳು ಬುಧವಾರ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.<br /> <br /> ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಜಮಾಯಿಸಿದ್ದ ಸುಮಾರು 1,500 ಕಾರ್ಮಿಕರು, ವೇತನವನ್ನು ಹೆಚ್ಚಿಸಿದ ರಾಜ್ಯ ಸರ್ಕಾರಕ್ಕೆ ಹಾಗೂ ಈ ನಿಟ್ಟಿನಲ್ಲಿ ಹೋರಾಡಿದ ಚನ್ನಮಲ್ಲ ವೀರಭದ್ರ ನಿಡುಮಾಮಿಡಿ ಸ್ವಾಮೀಜಿಗೆ ಕೃತಜ್ಞತೆ ತಿಳಿಸಿದರು.<br /> <br /> ವಿಜಯೋತ್ಸವದ ಬಳಿಕ, ದಿವಂಗತ ರಾಕೇಶ್ ಸಿದ್ದರಾಮಯ್ಯ ನೆನಪಿನ ಕಾಣಿಕೆಯಾಗಿ ರಾಜ್ಯದಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಪೌರ ಕಾರ್ಮಿಕರರಿಗೆ ಉಚಿತ ಬಸ್ ಪಾಸ್ ನೀಡುವುದು ಸೇರಿದಂತೆ ಆರು ಅಂಶಗಳ ಬೇಡಿಕೆಯುಳ್ಳ ಮನವಿ ಪತ್ರವನ್ನು ಮೇಯರ್ ಮಂಜುನಾಥ್ ರೆಡ್ಡಿ ಅವರಿಗೆ ನೀಡಿದರು.<br /> <br /> ಇತ್ತೀಚೆಗೆ ರಾಜ್ಯ ಸರ್ಕಾರವು ಪೌರ ಕಾರ್ಮಿಕರ ವೇತನವನ್ನು ₹14,040ಗೆ ಹೆಚ್ಚಿಸಿ ಆದೇಶ ಹೊರಡಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ವೇತನ ಹೆಚ್ಚಿಸಿದ್ದರಿಂದ ಸಂಭ್ರಮಗೊಂಡಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗುತ್ತಿಗೆ ಪೌರ ಕಾರ್ಮಿಕರು ಹಾಗೂ ಮೇಸ್ತ್ರಿಗಳು ಬುಧವಾರ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.<br /> <br /> ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಜಮಾಯಿಸಿದ್ದ ಸುಮಾರು 1,500 ಕಾರ್ಮಿಕರು, ವೇತನವನ್ನು ಹೆಚ್ಚಿಸಿದ ರಾಜ್ಯ ಸರ್ಕಾರಕ್ಕೆ ಹಾಗೂ ಈ ನಿಟ್ಟಿನಲ್ಲಿ ಹೋರಾಡಿದ ಚನ್ನಮಲ್ಲ ವೀರಭದ್ರ ನಿಡುಮಾಮಿಡಿ ಸ್ವಾಮೀಜಿಗೆ ಕೃತಜ್ಞತೆ ತಿಳಿಸಿದರು.<br /> <br /> ವಿಜಯೋತ್ಸವದ ಬಳಿಕ, ದಿವಂಗತ ರಾಕೇಶ್ ಸಿದ್ದರಾಮಯ್ಯ ನೆನಪಿನ ಕಾಣಿಕೆಯಾಗಿ ರಾಜ್ಯದಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಪೌರ ಕಾರ್ಮಿಕರರಿಗೆ ಉಚಿತ ಬಸ್ ಪಾಸ್ ನೀಡುವುದು ಸೇರಿದಂತೆ ಆರು ಅಂಶಗಳ ಬೇಡಿಕೆಯುಳ್ಳ ಮನವಿ ಪತ್ರವನ್ನು ಮೇಯರ್ ಮಂಜುನಾಥ್ ರೆಡ್ಡಿ ಅವರಿಗೆ ನೀಡಿದರು.<br /> <br /> ಇತ್ತೀಚೆಗೆ ರಾಜ್ಯ ಸರ್ಕಾರವು ಪೌರ ಕಾರ್ಮಿಕರ ವೇತನವನ್ನು ₹14,040ಗೆ ಹೆಚ್ಚಿಸಿ ಆದೇಶ ಹೊರಡಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>