<p><strong>ಬೆಂಗಳೂರು: </strong>ಅಧಿಕಾರಿಗಳ ವೇತನ ಸಮಿತಿ ವರದಿಯ ಶಿಫಾರಸಿನ ಪ್ರಕಾರ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. <br /> ವೇತನ ಪರಿಷ್ಕರಣೆ ಹಿನ್ನೆಲೆಯಲ್ಲಿ ಕರ್ನಾಟಕ ನಾಗರಿಕ ಸೇವಾ ನಿಯಮಗಳಿಗೆ ತಿದ್ದುಪಡಿಗಳೊಂದಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.<br /> <br /> ಮೂಲವೇತನ, ಭತ್ಯೆಗಳ ನಿಗದಿ, ಬಡ್ತಿ ಮತ್ತಿತರ ವಿಷಯಗಳಿಗೆ ಸಂಬಂಧಿಸಿದ ಪೂರ್ಣ ವಿವರಗಳನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ. ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಅಧಿಕಾರಿಗಳ ವೇತನ ಸಮಿತಿ ನೀಡಿದ್ದ ವರದಿಯ ಬಹುತೇಕ ಶಿಫಾರಸುಗಳು ಅಧಿಸೂಚನೆಯಲ್ಲಿವೆ. ವೇತನ ಪರಿಷ್ಕರಣೆ ಅನುಷ್ಠಾನ ಕುರಿತ ವಿವರಗಳೂ ಆದೇಶದಲ್ಲಿವೆ.<br /> <br /> 25 ಸಾವಿರ ಮತ್ತು ಅದಕ್ಕಿಂತ ಕಡಿಮೆ ಜನಸಂಖ್ಯೆ ಇರುವ ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸುವ ಸರ್ಕಾರಿ ನೌಕರರಿಗೆ ನೀಡುತ್ತಿದ್ದ ಗ್ರಾಮೀಣ ಭತ್ಯೆ ಕಡಿತ ಮಾಡಲಾಗಿದೆ. ಈವರೆಗೂ 100 ರೂಪಾಯಿ ಗ್ರಾಮೀಣ ಭತ್ಯೆ ನೀಡಲಾಗುತ್ತಿತ್ತು. ಪರಿಷ್ಕೃತ ವೇತನ ಶ್ರೇಣಿ ಜಾರಿಗೆ ಬಂದ ಹಿನ್ನೆಲೆಯಲ್ಲಿ ಈ ಭತ್ಯೆ ಕಡಿತ ಮಾಡಲಾಗಿದೆ.<br /> <br /> ಹೆರಿಗೆ ರಜೆಯ ಅವಧಿ ಹೆಚ್ಚಳ ಸೇರಿದಂತೆ ಕೆಲ ವಿಷಯಗಳ ಬಗ್ಗೆ ಆದೇಶದಲ್ಲಿ ಪ್ರಸ್ತಾಪಿಸಿಲ್ಲ. ಬಾಕಿ ಉಳಿದಿರುವ ಎಲ್ಲ ವಿಚಾರಗಳ ಕುರಿತು ಪ್ರತ್ಯೇಕ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಅಧಿಕಾರಿಗಳ ವೇತನ ಸಮಿತಿ ವರದಿಯ ಶಿಫಾರಸಿನ ಪ್ರಕಾರ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. <br /> ವೇತನ ಪರಿಷ್ಕರಣೆ ಹಿನ್ನೆಲೆಯಲ್ಲಿ ಕರ್ನಾಟಕ ನಾಗರಿಕ ಸೇವಾ ನಿಯಮಗಳಿಗೆ ತಿದ್ದುಪಡಿಗಳೊಂದಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.<br /> <br /> ಮೂಲವೇತನ, ಭತ್ಯೆಗಳ ನಿಗದಿ, ಬಡ್ತಿ ಮತ್ತಿತರ ವಿಷಯಗಳಿಗೆ ಸಂಬಂಧಿಸಿದ ಪೂರ್ಣ ವಿವರಗಳನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ. ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಅಧಿಕಾರಿಗಳ ವೇತನ ಸಮಿತಿ ನೀಡಿದ್ದ ವರದಿಯ ಬಹುತೇಕ ಶಿಫಾರಸುಗಳು ಅಧಿಸೂಚನೆಯಲ್ಲಿವೆ. ವೇತನ ಪರಿಷ್ಕರಣೆ ಅನುಷ್ಠಾನ ಕುರಿತ ವಿವರಗಳೂ ಆದೇಶದಲ್ಲಿವೆ.<br /> <br /> 25 ಸಾವಿರ ಮತ್ತು ಅದಕ್ಕಿಂತ ಕಡಿಮೆ ಜನಸಂಖ್ಯೆ ಇರುವ ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸುವ ಸರ್ಕಾರಿ ನೌಕರರಿಗೆ ನೀಡುತ್ತಿದ್ದ ಗ್ರಾಮೀಣ ಭತ್ಯೆ ಕಡಿತ ಮಾಡಲಾಗಿದೆ. ಈವರೆಗೂ 100 ರೂಪಾಯಿ ಗ್ರಾಮೀಣ ಭತ್ಯೆ ನೀಡಲಾಗುತ್ತಿತ್ತು. ಪರಿಷ್ಕೃತ ವೇತನ ಶ್ರೇಣಿ ಜಾರಿಗೆ ಬಂದ ಹಿನ್ನೆಲೆಯಲ್ಲಿ ಈ ಭತ್ಯೆ ಕಡಿತ ಮಾಡಲಾಗಿದೆ.<br /> <br /> ಹೆರಿಗೆ ರಜೆಯ ಅವಧಿ ಹೆಚ್ಚಳ ಸೇರಿದಂತೆ ಕೆಲ ವಿಷಯಗಳ ಬಗ್ಗೆ ಆದೇಶದಲ್ಲಿ ಪ್ರಸ್ತಾಪಿಸಿಲ್ಲ. ಬಾಕಿ ಉಳಿದಿರುವ ಎಲ್ಲ ವಿಚಾರಗಳ ಕುರಿತು ಪ್ರತ್ಯೇಕ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>