<p><strong>ಯಲಹಂಕ: </strong> `ವೇಮನ ಮಹರ್ಷಿಗಳು ಕೇವಲ ರೆಡ್ಡಿ ಜನಾಂಗಕ್ಕೆ ಮಾತ್ರ ಸೇರಿದ ವ್ಯಕ್ತಿಯಲ್ಲ. ಅವರು ಎಲ್ಲ ಜನಾಂಗದವರಿಗೂ ಬೇಕಾಗಿರುವ ಮಹಾನ್ ಪುರುಷ~ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿದರು.<br /> <br /> ರೆಡ್ಡಿ ಜನಸಂಘ ಬೆಂಗಳೂರು ಉತ್ತರ ವಲಯ ಹಾಗೂ ರೆಡ್ಡಿ ಜನಸಂಘ ಯುವಘಟಕದ ಆಶ್ರಯದಲ್ಲಿ ಶೇಷಾದ್ರಿಪುರ ಪ್ರಥಮದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಮಹಾಯೋಗಿ ವೇಮನ ಜಯಂತ್ಯುತ್ಸವ ಸಮಾರಂಭ ವನ್ನುಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಸಮಾಜಸೇವಾ ಹಾಗೂ ಧರ್ಮ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಇತರರಿಗಾಗಿ ಸರ್ವವನ್ನೂ ತ್ಯಾಗ ಮಾಡಿದ ಮಹಾನ್ಪುರುಷನ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.<br /> <br /> <strong>ಭರವಸೆ</strong>: ಕ್ಷೇತ್ರ ವ್ಯಾಪ್ತಿಯ ಸಿಂಗನಾಯಕನಹಳ್ಳಿ ಅಥವಾ ಹೊನ್ನೇನಹಳ್ಳಿ ಗ್ರಾಮದಲ್ಲಿ ರೆಡ್ಡಿ ಜನಾಂಗದವರಿಗಾಗಿ ಶಾಲೆ ತೆರೆಯಲು ನಾಲ್ಕು ಎಕರೆ ಜಾಗವನ್ನು ಮಂಜೂರು ಮಾಡುವಂತೆ ಸರ್ಕಾರಕ್ಕೆ ಶೀಘ್ರದಲ್ಲೆ ಪ್ರಸ್ತಾವನೆ ಸಲ್ಲಿಸಿ, ಜಾಗದ ಮಂಜೂರಾತಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.<br /> ಸಂಘದ ಅಧ್ಯಕ್ಷ ಎಂ.ಎನ್.ರೆಡ್ಡಿ ಅವರು ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಸಂಘದ ವತಿಯಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆಗೊ ಳಿಸಲಾಯಿತು. ಸಮುದಾಯದ 12 ಮಂದಿ ಹಿರಿಯರನ್ನು ಸನ್ಮಾನಿಸಲಾಯಿತು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ: </strong> `ವೇಮನ ಮಹರ್ಷಿಗಳು ಕೇವಲ ರೆಡ್ಡಿ ಜನಾಂಗಕ್ಕೆ ಮಾತ್ರ ಸೇರಿದ ವ್ಯಕ್ತಿಯಲ್ಲ. ಅವರು ಎಲ್ಲ ಜನಾಂಗದವರಿಗೂ ಬೇಕಾಗಿರುವ ಮಹಾನ್ ಪುರುಷ~ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿದರು.<br /> <br /> ರೆಡ್ಡಿ ಜನಸಂಘ ಬೆಂಗಳೂರು ಉತ್ತರ ವಲಯ ಹಾಗೂ ರೆಡ್ಡಿ ಜನಸಂಘ ಯುವಘಟಕದ ಆಶ್ರಯದಲ್ಲಿ ಶೇಷಾದ್ರಿಪುರ ಪ್ರಥಮದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಮಹಾಯೋಗಿ ವೇಮನ ಜಯಂತ್ಯುತ್ಸವ ಸಮಾರಂಭ ವನ್ನುಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಸಮಾಜಸೇವಾ ಹಾಗೂ ಧರ್ಮ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಇತರರಿಗಾಗಿ ಸರ್ವವನ್ನೂ ತ್ಯಾಗ ಮಾಡಿದ ಮಹಾನ್ಪುರುಷನ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.<br /> <br /> <strong>ಭರವಸೆ</strong>: ಕ್ಷೇತ್ರ ವ್ಯಾಪ್ತಿಯ ಸಿಂಗನಾಯಕನಹಳ್ಳಿ ಅಥವಾ ಹೊನ್ನೇನಹಳ್ಳಿ ಗ್ರಾಮದಲ್ಲಿ ರೆಡ್ಡಿ ಜನಾಂಗದವರಿಗಾಗಿ ಶಾಲೆ ತೆರೆಯಲು ನಾಲ್ಕು ಎಕರೆ ಜಾಗವನ್ನು ಮಂಜೂರು ಮಾಡುವಂತೆ ಸರ್ಕಾರಕ್ಕೆ ಶೀಘ್ರದಲ್ಲೆ ಪ್ರಸ್ತಾವನೆ ಸಲ್ಲಿಸಿ, ಜಾಗದ ಮಂಜೂರಾತಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.<br /> ಸಂಘದ ಅಧ್ಯಕ್ಷ ಎಂ.ಎನ್.ರೆಡ್ಡಿ ಅವರು ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಸಂಘದ ವತಿಯಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆಗೊ ಳಿಸಲಾಯಿತು. ಸಮುದಾಯದ 12 ಮಂದಿ ಹಿರಿಯರನ್ನು ಸನ್ಮಾನಿಸಲಾಯಿತು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>