<p><strong>ಬೆಂಗಳೂರು</strong>: ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕೆ ಬಳ್ಳಾರಿಯಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ ಜರುಗಿದ್ದು, ಇದಕ್ಕೆ ಸಂಬಂಧಿಸಿದಂತೆ ಆರೋಪ ಪಟ್ಟಿಯನ್ನು ಒಂದೆರಡು ದಿನದಲ್ಲಿ ಹೈಕೋರ್ಟ್ಗೆ ಸಿಐಡಿ ಪೊಲೀಸಲು ಸಲ್ಲಿಸಲಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಎಸ್.ಎ.ರಾಮದಾಸ್ ಹೇಳಿದರು.<br /> <br /> ಈ ಸಂಬಂಧದ ಆರೋಪ ಪಟ್ಟಿಯನ್ನು ಬಳ್ಳಾರಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಒಂದೆರಡು ದಿನದಲ್ಲಿ ಅದರ ಪ್ರತಿಯನ್ನು ಹೈಕೋರ್ಟ್ಗೂ ಸಲ್ಲಿಸಲಾಗುವುದು. ತಪ್ಪಿತಸ್ಥ 11 ಮಂದಿ ವೈದ್ಯರ ಎಂಬಿಬಿಎಸ್ ಪದವಿಯನ್ನೇ ರದ್ದು ಮಾಡುವಂತೆ ಹೈಕೋರ್ಟ್ಗೆ ಕೋರಲಾಗುವುದು ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.<br /> <br /> ಇದರ ಜತೆಗೆ ಇಲಾಖಾ ವಿಚಾರಣೆ ಕೂಡ ಆರಂಭಿಸಲಾಗುವುದು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.<br /> <br /> ಬೆಂಗಳೂರಿನಲ್ಲಿ ಪರೀಕ್ಷೆ: ಈ ವರ್ಷದ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ನಗರದಲ್ಲಿ ಮಾತ್ರ ನಡೆಸಲಾಗುವುದು. ಪರೀಕ್ಷೆ ಸಂದರ್ಭದಲ್ಲಿ ಅಕ್ರಮ ತಡೆಯಲು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಪರೀಕ್ಷಾ ಕೇಂದ್ರದಲ್ಲಿ ಸಿಸಿ ಟಿವಿ ಅಳವಡಿಕೆ; ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳ ಗುರುತನ್ನು ಬಯೊಮೆಟ್ರಿಕ್ ಮೂಲಕ ದಾಖಲಿಸಲಾಗುವುದು. ಒಟ್ಟಿನಲ್ಲಿ ಅಕ್ರಮ ನಡೆಯದಂತೆ ಗಮನ ನೀಡಲಾಗುವುದು. ಪರೀಕ್ಷೆ ಮುಗಿದ ದಿನವೇ ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್ ಮಾಡಲಾಗುವುದು ಎಂದರು.<br /> <br /> <strong>ನರ್ಸಿಂಗ್ ವಿ.ವಿ:</strong> ಪ್ಯಾರಾ ಮೆಡಿಕಲ್ ಮತ್ತು ನರ್ಸಿಂಗ್ ಕೋರ್ಸ್ಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ವಿಶ್ವವಿದ್ಯಾಲಯ ಸ್ಥಾಪಿಸಲು ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದ್ದು, ಆದಷ್ಟು ಬೇಗ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ತೀರ್ಮಾನಕ್ಕೆ ಬರಲಾಗುವುದು ಎಂದು ಹೇಳಿದರು.<br /> <br /> ಶೆಟ್ಟಿ ನೇತೃತ್ವದ ಸಮಿತಿ ಕೊಟ್ಟಿರುವ ವರದಿಯನ್ನು ಸರ್ಕಾರದ ಮತ್ತೊಂದು ಸಮಿತಿ ಪರಿಶೀಲಿಸಲಿದೆ. ಅದರ ನಂತರ ಸಂಪುಟದಲ್ಲಿ ಸೂಕ್ತ ತೀರ್ಮಾನಕ್ಕೆ ಬರಲಾಗುವುದು. 2012-13ನೇ ಸಾಲಿನಿಂದ ವಿಶ್ವವಿದ್ಯಾಲಯ ಅಸ್ತಿತ್ವಕ್ಕೆ ಬರಲಿದೆ ಎಂದರು. ನರ್ಸಿಂಗ್ ಶಾಲೆಗಳು 675 ಇವೆ. ನರ್ಸಿಂಗ್ ಕಾಲೇಜುಗಳು 241, ಪ್ಯಾರಾ ಮೆಡಿಕಲ್ ಕಾಲೇಜುಗಳು 251 ಇವೆ. ಇವೆಲ್ಲವೂ ಈ ಉದ್ದೇಶಿತ ವಿ.ವಿ. ವ್ಯಾಪ್ತಿಗೆ ಬರಲಿವೆ ಎಂದರು.<br /> <br /> `ಸೂಕ್ತ ಪಠ್ಯಕ್ರಮ ಇಲ್ಲ. ಹೀಗಾಗಿ ಎಲ್ಲವನ್ನೂ ಮೇಲ್ದರ್ಜೆಗೇರಿಸಿ ಹೊಸದಾಗಿ 40 ಕೋರ್ಸ್ಗಳನ್ನು ಆರಂಭಿಸಲಾಗುವುದು. ಕಲಾ ವಿಭಾಗದಲ್ಲಿ ಪಿಯುಸಿ ಮಾಡಿದ ವಿದ್ಯಾರ್ಥಿಗಳಿಗೂ ನರ್ಸಿಂಗ್ ಕ್ಷೇತ್ರದಲ್ಲಿ ಉದ್ಯೋಗ ಲಭ್ಯವಾಗುವಂತೆ ಮಾಡುವ ಉದ್ದೇಶವೂ ಇದೆ~ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕೆ ಬಳ್ಳಾರಿಯಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ ಜರುಗಿದ್ದು, ಇದಕ್ಕೆ ಸಂಬಂಧಿಸಿದಂತೆ ಆರೋಪ ಪಟ್ಟಿಯನ್ನು ಒಂದೆರಡು ದಿನದಲ್ಲಿ ಹೈಕೋರ್ಟ್ಗೆ ಸಿಐಡಿ ಪೊಲೀಸಲು ಸಲ್ಲಿಸಲಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಎಸ್.ಎ.ರಾಮದಾಸ್ ಹೇಳಿದರು.<br /> <br /> ಈ ಸಂಬಂಧದ ಆರೋಪ ಪಟ್ಟಿಯನ್ನು ಬಳ್ಳಾರಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಒಂದೆರಡು ದಿನದಲ್ಲಿ ಅದರ ಪ್ರತಿಯನ್ನು ಹೈಕೋರ್ಟ್ಗೂ ಸಲ್ಲಿಸಲಾಗುವುದು. ತಪ್ಪಿತಸ್ಥ 11 ಮಂದಿ ವೈದ್ಯರ ಎಂಬಿಬಿಎಸ್ ಪದವಿಯನ್ನೇ ರದ್ದು ಮಾಡುವಂತೆ ಹೈಕೋರ್ಟ್ಗೆ ಕೋರಲಾಗುವುದು ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.<br /> <br /> ಇದರ ಜತೆಗೆ ಇಲಾಖಾ ವಿಚಾರಣೆ ಕೂಡ ಆರಂಭಿಸಲಾಗುವುದು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.<br /> <br /> ಬೆಂಗಳೂರಿನಲ್ಲಿ ಪರೀಕ್ಷೆ: ಈ ವರ್ಷದ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ನಗರದಲ್ಲಿ ಮಾತ್ರ ನಡೆಸಲಾಗುವುದು. ಪರೀಕ್ಷೆ ಸಂದರ್ಭದಲ್ಲಿ ಅಕ್ರಮ ತಡೆಯಲು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಪರೀಕ್ಷಾ ಕೇಂದ್ರದಲ್ಲಿ ಸಿಸಿ ಟಿವಿ ಅಳವಡಿಕೆ; ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳ ಗುರುತನ್ನು ಬಯೊಮೆಟ್ರಿಕ್ ಮೂಲಕ ದಾಖಲಿಸಲಾಗುವುದು. ಒಟ್ಟಿನಲ್ಲಿ ಅಕ್ರಮ ನಡೆಯದಂತೆ ಗಮನ ನೀಡಲಾಗುವುದು. ಪರೀಕ್ಷೆ ಮುಗಿದ ದಿನವೇ ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್ ಮಾಡಲಾಗುವುದು ಎಂದರು.<br /> <br /> <strong>ನರ್ಸಿಂಗ್ ವಿ.ವಿ:</strong> ಪ್ಯಾರಾ ಮೆಡಿಕಲ್ ಮತ್ತು ನರ್ಸಿಂಗ್ ಕೋರ್ಸ್ಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ವಿಶ್ವವಿದ್ಯಾಲಯ ಸ್ಥಾಪಿಸಲು ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದ್ದು, ಆದಷ್ಟು ಬೇಗ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ತೀರ್ಮಾನಕ್ಕೆ ಬರಲಾಗುವುದು ಎಂದು ಹೇಳಿದರು.<br /> <br /> ಶೆಟ್ಟಿ ನೇತೃತ್ವದ ಸಮಿತಿ ಕೊಟ್ಟಿರುವ ವರದಿಯನ್ನು ಸರ್ಕಾರದ ಮತ್ತೊಂದು ಸಮಿತಿ ಪರಿಶೀಲಿಸಲಿದೆ. ಅದರ ನಂತರ ಸಂಪುಟದಲ್ಲಿ ಸೂಕ್ತ ತೀರ್ಮಾನಕ್ಕೆ ಬರಲಾಗುವುದು. 2012-13ನೇ ಸಾಲಿನಿಂದ ವಿಶ್ವವಿದ್ಯಾಲಯ ಅಸ್ತಿತ್ವಕ್ಕೆ ಬರಲಿದೆ ಎಂದರು. ನರ್ಸಿಂಗ್ ಶಾಲೆಗಳು 675 ಇವೆ. ನರ್ಸಿಂಗ್ ಕಾಲೇಜುಗಳು 241, ಪ್ಯಾರಾ ಮೆಡಿಕಲ್ ಕಾಲೇಜುಗಳು 251 ಇವೆ. ಇವೆಲ್ಲವೂ ಈ ಉದ್ದೇಶಿತ ವಿ.ವಿ. ವ್ಯಾಪ್ತಿಗೆ ಬರಲಿವೆ ಎಂದರು.<br /> <br /> `ಸೂಕ್ತ ಪಠ್ಯಕ್ರಮ ಇಲ್ಲ. ಹೀಗಾಗಿ ಎಲ್ಲವನ್ನೂ ಮೇಲ್ದರ್ಜೆಗೇರಿಸಿ ಹೊಸದಾಗಿ 40 ಕೋರ್ಸ್ಗಳನ್ನು ಆರಂಭಿಸಲಾಗುವುದು. ಕಲಾ ವಿಭಾಗದಲ್ಲಿ ಪಿಯುಸಿ ಮಾಡಿದ ವಿದ್ಯಾರ್ಥಿಗಳಿಗೂ ನರ್ಸಿಂಗ್ ಕ್ಷೇತ್ರದಲ್ಲಿ ಉದ್ಯೋಗ ಲಭ್ಯವಾಗುವಂತೆ ಮಾಡುವ ಉದ್ದೇಶವೂ ಇದೆ~ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>