<p>ನೆಲಮಂಗಲ: ವೈದ್ಯ ವೃತ್ತಿಯ ಪಾವಿತ್ರ್ಯ ಹೆಚ್ಚಿಸಿಕೊಂಡು ರೋಗಿಗಳ ಸೇವೆ ಭಗವಂತನ ಸೇವೆ ಎಂದು ಭಾವಿಸಿದಾಗ ವಿವಾದಗಳಿಗೆ ಆಸ್ಪದವಿರುವುದಿಲ್ಲ ಎಂದು ರಾಜ್ಯ ವೈದ್ಯ ಸಂಘದ ಅಧ್ಯಕ್ಷ ಡಾ.ಎಚ್.ಎಲ್.ಕೃಷ್ಣೇಗೌಡ ಅಭಿಪ್ರಾಯಪಟ್ಟರು.<br /> <br /> ಸ್ಥಳೀಯ ಭಾರತೀಯ ವೈದ್ಯ ಸಂಘವು ಆಯೋಜಿಸಿದ್ದ ವೈದ್ಯಕೀಯ ವಿವಾದ ಕುರಿತ ವಿಚಾರಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, 2015ರ ವೇಳೆಗೆ ಗ್ರಾಮೀಣ ಪ್ರದೇಶದವರಿಗೂ ತಜ್ಞ ವೈದ್ಯಕೀಯ ಸೇವೆ ಲಭ್ಯವಾಗುವಂತಹ ಯೋಜನೆಯನ್ನು ಜಾರಿಗೆ ತರಲು ಸರ್ಕಾರಕ್ಕೆ ಸಂಘದ ವತಿಯಿಂದ ಪ್ರಸ್ತಾವ ಸಲ್ಲಿಸಲಾಗಿದೆ ಎಂದರು.<br /> <br /> ವೃತ್ತಿ ಸಂರಕ್ಷಣಾ ಯೋಜನೆಯ ಅಧ್ಯಕ್ಷ ಡಾ.ಡಿ.ಸೋಮಶೇಖರಯ್ಯ ಡಿವೈಎಸ್ಪಿ ಕೆ.ಎಂ.ಚಿನ್ನಸ್ವಾಮಿ, ಸಂಘದ ಮಾಜಿ ಅಧ್ಯಕ್ಷ ಡಾ.ಗೋವಿಂದರಾಜುಲು, ಪ್ರಾಧ್ಯಾಪಕ ಡಾ.ಜೆ.ಕಿರಣ್ ಮಾತನಾಡಿದರು. ಸಂಘದ ನೆಲಮಂಗಲ ಘಟಕದ ಅಧ್ಯಕ್ಷ ಡಾ.ಎಂ.ಜಯಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಡಾ.ಎಸ್.ರಾಜೇಂದ್ರಪ್ರಸಾದ್ ಸ್ವಾಗತಿಸಿದರು. ಖಜಾಂಚಿ ಡಾ.ವಸಂತಕುಮಾರ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನೆಲಮಂಗಲ: ವೈದ್ಯ ವೃತ್ತಿಯ ಪಾವಿತ್ರ್ಯ ಹೆಚ್ಚಿಸಿಕೊಂಡು ರೋಗಿಗಳ ಸೇವೆ ಭಗವಂತನ ಸೇವೆ ಎಂದು ಭಾವಿಸಿದಾಗ ವಿವಾದಗಳಿಗೆ ಆಸ್ಪದವಿರುವುದಿಲ್ಲ ಎಂದು ರಾಜ್ಯ ವೈದ್ಯ ಸಂಘದ ಅಧ್ಯಕ್ಷ ಡಾ.ಎಚ್.ಎಲ್.ಕೃಷ್ಣೇಗೌಡ ಅಭಿಪ್ರಾಯಪಟ್ಟರು.<br /> <br /> ಸ್ಥಳೀಯ ಭಾರತೀಯ ವೈದ್ಯ ಸಂಘವು ಆಯೋಜಿಸಿದ್ದ ವೈದ್ಯಕೀಯ ವಿವಾದ ಕುರಿತ ವಿಚಾರಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, 2015ರ ವೇಳೆಗೆ ಗ್ರಾಮೀಣ ಪ್ರದೇಶದವರಿಗೂ ತಜ್ಞ ವೈದ್ಯಕೀಯ ಸೇವೆ ಲಭ್ಯವಾಗುವಂತಹ ಯೋಜನೆಯನ್ನು ಜಾರಿಗೆ ತರಲು ಸರ್ಕಾರಕ್ಕೆ ಸಂಘದ ವತಿಯಿಂದ ಪ್ರಸ್ತಾವ ಸಲ್ಲಿಸಲಾಗಿದೆ ಎಂದರು.<br /> <br /> ವೃತ್ತಿ ಸಂರಕ್ಷಣಾ ಯೋಜನೆಯ ಅಧ್ಯಕ್ಷ ಡಾ.ಡಿ.ಸೋಮಶೇಖರಯ್ಯ ಡಿವೈಎಸ್ಪಿ ಕೆ.ಎಂ.ಚಿನ್ನಸ್ವಾಮಿ, ಸಂಘದ ಮಾಜಿ ಅಧ್ಯಕ್ಷ ಡಾ.ಗೋವಿಂದರಾಜುಲು, ಪ್ರಾಧ್ಯಾಪಕ ಡಾ.ಜೆ.ಕಿರಣ್ ಮಾತನಾಡಿದರು. ಸಂಘದ ನೆಲಮಂಗಲ ಘಟಕದ ಅಧ್ಯಕ್ಷ ಡಾ.ಎಂ.ಜಯಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಡಾ.ಎಸ್.ರಾಜೇಂದ್ರಪ್ರಸಾದ್ ಸ್ವಾಗತಿಸಿದರು. ಖಜಾಂಚಿ ಡಾ.ವಸಂತಕುಮಾರ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>